AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್ ವಾಯ್ಸ್ ಮೆಸೇಜ್​ನಲ್ಲಿ ಹೊಸ ಆಯ್ಕೆ: ಆ ಅಚ್ಚರಿಯ ಫೀಚರ್ ಏನು ಗೊತ್ತೇ?

WhatsApp Voice Message: ವಾಟ್ಸ್​ಆ್ಯಪ್​ನ ಈ ಹೊಸ ಅಪ್ಡೇಟ್​ನಲ್ಲಿ ನೀವು ವಾಯ್ಸ್ ಮೆಸೇಜ್ ಹೇಳಿ ಕಳುಹಿಸುವ ಮುನ್ನ ಕೇಳಲು ಅವಕಾಶ ಮಾಡಿಕೊಡುತ್ತದೆ. ಸದ್ಯದಲ್ಲೇ ಈ ಫೀಚರ್ ಬಳಕೆದಾರರಿಗೆ ಸಿಗಲಿದೆಯಂತೆ.

WhatsApp: ವಾಟ್ಸ್​ಆ್ಯಪ್ ವಾಯ್ಸ್ ಮೆಸೇಜ್​ನಲ್ಲಿ ಹೊಸ ಆಯ್ಕೆ: ಆ ಅಚ್ಚರಿಯ ಫೀಚರ್ ಏನು ಗೊತ್ತೇ?
WhatsApp Voice Message
TV9 Web
| Edited By: |

Updated on: Oct 22, 2021 | 3:27 PM

Share

ತನ್ನ ಬಳಕೆದಾರರಿಗೆ ಸದಾ ಒಂದಲ್ಲಾ ಒಂದು ಹೊಸ ಹೊಸ ಆಯ್ಕೆಗಳನ್ನು ಪರಿಚಯಿಸುತ್ತಿರುವ ಪ್ರಸಿದ್ಧ ಫೇಸ್​ಬುಕ್ (Facebook) ಒಡೆತನದ ವಾಟ್ಸ್​ಆ್ಯಪ್ (WhatsApp) ಮೆಸೇಜಿಂಗ್ ಅಪ್ಲಿಕೇಶನ್​ ಮುಂದಿನ ದಿನಗಳಲ್ಲಿ ಸಾಲು ಸಾಲು ಅಪ್ಡೇಟ್​ಗಳನ್ನು ನೀಡಲು ಸಜ್ಜಾಗಿದೆ. ಈಗಾಗಲೇ ವಾಟ್ಸ್​ಆ್ಯಪ್​ನಲ್ಲೇ ಫೋಟೋ ಎಡಿಟಿಂಗ್, ಲಾಗೌಟ್ ಫೀಚರ್, ಸ್ಟೇಟಸ್​ನಂತೆ ಪ್ರೊಫೈಲ್ ಪೋಟೋ ಕೂಡ ಕೆಲವರಿಗೆ ಮಾತ್ರ ಕಾಣಿಸುವಂತಹ ಆಯ್ಕೆ, ವಾಯ್ಸ್ ಮೆಸೇಜ್ ಕಳುಹಿಸುವ ಮುನ್ನ ಕೇಳುವ ಆಯ್ಕೆ  ಹೀಗೆ ಅನೇಕ ಹೊಸ ಹೊಸ ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಹೀಗಿರುವಾಗ ವಾಟ್ಸ್​ಆ್ಯಪ್ ತನ್ನ ಗ್ರಾಹಕರಿಗೆ ಮತ್ತೊಂದು ಹೊಸ ಆಯ್ಕೆ ನೀಡಲು ಮುಂದಾಗಿದೆ. ಅದುವೇ ವಾಟ್ಸ್​ಆ್ಯಪ್​ ವಾಯ್ಸ್ ಮೆಸೇಜ್ (WhatsApp Voice Message) ಅನ್ನು ಕಳಿಹಿಸುವ ಮುನ್ನ ಕೇಳುವ ಆಯ್ಕೆ.

ಹೌದು, ವಾಟ್ಸ್​ಆ್ಯಪ್​ನಲ್ಲಿ ಈಗೀಗ ವಾಯ್ಸ್ ನೋಟ್ ಕಳುಹಿಸುವವರ ಸಂಖ್ಯೆ ಹೆಚ್ಚಾಗುತ್ತಿದೆಯಂತೆ. ಇದನ್ನೇ ಗಮನದಲ್ಲಿಟ್ಟುಕೊಂಡು ವಾಟ್ಸ್​ಆ್ಯಪ್ ವಾಯ್ಸ್ ಮೆಸೇಜ್ ಪ್ರಿಯರಿಗಾಗಿ ಹೊಸ ಈ ಆಯ್ಕೆ ನೀಡುತ್ತಿದೆ. ಈ ಹೊಸ ಅಪ್ಡೇಟ್​ನಲ್ಲಿ ನೀವು ವಾಯ್ಸ್ ಮೆಸೇಜ್ ಹೇಳಿ ಕಳುಹಿಸುವ ಮುನ್ನ ಕೇಳಲು ಅವಕಾಶ ಮಾಡಿಕೊಡುತ್ತದೆ. ಸದ್ಯದಲ್ಲೇ ಈ ಫೀಚರ್ ಬಳಕೆದಾರರಿಗೆ ಸಿಗಲಿದೆಯಂತೆ.

ಇದರ ಜೊತೆಗೆ ನೀವು ವಾಯ್ಸ್ ಮೆಸೇಜ್ ಕಳುಹಿಸುವಾಗ ಪಾಜ಼್ (Pause) ಮಾಡುವ ಆಯ್ಕೆ ನೀಡುವ ಫೀಚರ್ ಬಗ್ಗೆಯೂ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುತ್ತಿದೆ. ಅಂದರೆ ನೀವು ವಾಯ್ಸ್ ರೆಕಾರ್ಡಿಂಗ್ ಬಟನ್ ಪ್ರೆಸ್ ಮಾಡಿ ಅರ್ಧದಲ್ಲಿ ವಿರಾಮ ಪಡೆದು ನಂತರ ಅದನ್ನು ಮುಂದುವರೆಸಿ ಕಳುಹಿಸಬಹುದು.

ಸದ್ಯ ಈ ಹೊಸ ಆಯ್ಕೆ ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಆಂಡ್ರಾಯ್ಡ್ ಮತ್ತು ಐಒಸ್ ಬಳಕೆದಾರರಿಗೆ ಲಭ್ಯವಾಗಲಿದೆಯಂತೆ. ಇದರ ಜೊತೆಗೆ ವಾಟ್ಸ್​ಆ್ಯಪ್ ಮತ್ತೊಂದು ಅಪ್ಡೇಟ್ ನೀಡಲು ಮುಂದಾಗಿದೆ. ಅದುವೇ ವಾಯ್ಸ್ ಟ್ರಾನ್ಸ್​​ಕ್ರಿಪ್ಶನ್ ಫೀಚರ್. ವಾಬೇಟಾ ಇನ್ಫೋ ವರದಿ ಪ್ರಕಾರ, ವಾಟ್ಸ್ಆ್ಯಪ್ ತನ್ನ ಪ್ಲಾಟ್​ಫಾರ್ಮ್​ನಲ್ಲಿ ಟ್ರಾನ್ಸ್​ಕ್ರಿಪ್ಶನ್ ಎಂಬ ಫೀಚರ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಹೊಸ ವೈಶಿಷ್ಟ್ಯವು ಹೊಸತನದಿಂದ ಕೂಡಿದೆ ಎಂದಿದೆ.

ವಾಟ್ಸ್ಆ್ಯಪ್ ಪರಿಚಯಿಸಲಿರುವ ಹೊಸ ವಾಯ್ಸ್ ಟ್ರಾನ್ಸ್​ಕ್ರಿಪ್ಶನ್ ಫೀಚರ್​ನಲ್ಲಿ ಬಳಕೆದಾರರಿಗೆ ಧ್ವನಿ ಸಂದೇಶದ ವಿಷಯವನ್ನು ಓದಬಲ್ಲ ರೂಪದಲ್ಲಿ ನೀಡುತ್ತದೆ. ಅಂದರೆ ಇದು ಇದು ಪಠ್ಯ ರೂಪದಲ್ಲಿ ಸಿಗಲಿದೆ. ಈ ಫೀಚರ್ ಅನ್ನು ಆಯ್ಕೆಯ ಆಧಾರ ಮೇಲೆ ನೀಡಲಾಗುತ್ತದೆ. ಅಂದರೆ ಈ ಫೀಚರ್ ಟ್ರಾನ್ಸ್​ಕ್ರಿಪ್ಶನ್ ಮಾಡಲು ಅನುಮತಿಸಿದಾಗ ಮಾತ್ರ ಸೇವೆ ಸಿಗಲಿದೆ. ವಾಟ್ಸ್ಆ್ಯಪ್ ಕ್ಯಾಮೆರಾ, ಮೈಕ್ರೋಫೋನ್​ಗೆ ಅನುಮತಿ ನೀಡಿದಂತೆ ಇದಕ್ಕೂ ಅನುಮತಿ ಕೇಳುತ್ತದೆ.

ಮಾಹಿತಿ ಪ್ರಕಾರ ವಾಟ್ಸ್ಆ್ಯಪ್ ಬಳಕೆದಾರರ ವಾಯ್ಸ್ ಟ್ರಾನ್ಸ್​ಕ್ರಿಪ್ಶನ್ ಅನ್ನು ಫೇಸ್​ಬುಕ್ ಸರ್ವರ್​ಗೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದೆ. ಕೇವಲ ಆ್ಯಂಡ್ರಾಯ್ಡ್ ಬಳಕೆದಾರರಿಗೆ ಮಾತ್ರವಲ್ಲದೆ ಐಫೊನ್ ಬಳಕೆದಾರರಿಗೂ ಈ ಸೇವೆ ಸಿಗಲಿದೆ. ಧ್ವನಿ ಸಂದೇಶ ಲಿಪ್ಯಾಂತರ ಮಾಡುವುದು, ಭಾಷಣವನ್ನು ಗುರುತಿಸುವ ಸೇವೆಯನ್ನು ಒದಗಿಸಲಿದೆ. ಇದು ಬಳಕೆದಾರರಿಗೆ ಹೆಚ್ಚು ಸಹಾಯಕವಾಗಲಿದೆ.

Xiaomi: ಭಾರತದಲ್ಲಿ ಮತ್ತೆ ಪರಾಕ್ರಮ ಮೆರೆದ ಶವೋಮಿ: ನಂಬರ್ ಒನ್ ಸ್ಮಾರ್ಟ್​ಫೋನ್ ಸ್ಥಾನ ಭದ್ರ

WhatsApp: ಇನ್ನು ಕೇವಲ 10 ದಿನ: ಈ ಸ್ಮಾರ್ಟ್​ಫೋನ್​ಗಳಲ್ಲಿ ಬಂದ್ ಆಗಲಿದೆ ವಾಟ್ಸ್​ಆ್ಯಪ್

(WhatsApp has added some new updates to the voice messages feature on the app)

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು