WhatsApp: ಹೊಸ ವರ್ಷಕ್ಕೆ ಮೆಟಾದಿಂದ ಬಿಗ್ ಶಾಕ್: ಈ ಆಂಡ್ರಾಯ್ಡ್-ಐಫೋ​ನ್​ನಲ್ಲಿ ವಾಟ್ಸ್​ಆ್ಯಪ್ ಬಂದ್

2023ರಿಂದ ವಾಟ್ಸ್​ಆ್ಯಪ್ ಹಳೆಯ ಸ್ಯಾಮ್​ಸಂಗ್ ಮತ್ತು ಆ್ಯಪಲ್​​ ಫೋನ್​ಗಳಿಗೆ ಕೆಲಸ ಮಾಡುವುದಿಲ್ಲ. ಹೊಸ ವರ್ಷದಲ್ಲಿ 49 ಕ್ಕೂ ಹೆಚ್ಚು ಸ್ಮಾರ್ಟ್​ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುವುದಿಲ್ಲ ಎಂದು ವರದಿ ಆಗಿದೆ.

WhatsApp: ಹೊಸ ವರ್ಷಕ್ಕೆ ಮೆಟಾದಿಂದ ಬಿಗ್ ಶಾಕ್: ಈ ಆಂಡ್ರಾಯ್ಡ್-ಐಫೋ​ನ್​ನಲ್ಲಿ ವಾಟ್ಸ್​ಆ್ಯಪ್ ಬಂದ್
WhatsApp
Follow us
| Updated By: Vinay Bhat

Updated on: Dec 30, 2022 | 6:55 AM

ವಿಶ್ವದಲ್ಲಿ ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಮೆಸೇಜಿಂಗ್ ಆ್ಯಪ್ ಎಂದರೆ ಅದು ವಾಟ್ಸ್​ಆ್ಯಪ್ (WhatsApp). ತಿಂಗಳಲ್ಲಿ 2 ಬಿಲಿಯನ್​ಗೂ ಅಧಿಕ ಸಕ್ರಿಯ ಬಳಕೆದಾರರನ್ನು ಹೊಂದಿದೆ. ಇದರಲ್ಲಿ 500 ಮಿಲಿಯನ್ ಅಕೌಂಟ್ ಭಾರತೀಯರದ್ದೇ ಆಗಿದೆ. ವಾಟ್ಸ್​ಆ್ಯಪ್ ಬಳಕೆದಾರರಿಗೆ ಇಷ್ಟೊಂದು ಹತ್ತಿರವಾಗಲು ಪ್ರಮುಖ ಕಾರಣ ಇದರಲ್ಲಿರುವ ಫೀಚರ್ಸ್. ಜನರ ಅನುಕೂತಕ್ಕೆ ತಕ್ಕಂತೆ ಒಂದರ ಹಿಂದೆ ಒಂದು ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​​ ಇದೀಗ ಶಾಕಿಂಗ್ ಸುದ್ದಿಯೊಂದು ನೀಡಿದೆ. ಹೊಸ ವರ್ಷದ (New Year) ಗುಂಗು ಶುರುವಾಗಿದ್ದು, ನೀವು ಫೋಟೋ, ವಿಡಿಯೋ, ಶುಭಾಶಯಗಳನ್ನು ವಾಟ್ಸ್​ಆ್ಯಪ್ ಮೂಲಕ ಕಳುಹಿಸುತ್ತೀರಿ. ಆದರೆ, ಕೆಲ ಐಫೋನ್ (iPhone) ಮತ್ತು ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಹೊಸ ವರ್ಷದಂದೇ ವಾಟ್ಸ್​ಆ್ಯಪ್ ತನ್ನ ಕೆಲಸವನ್ನು ನಿಲ್ಲಿಸಲಿದೆ.

2023ರಿಂದ ವಾಟ್ಸ್​ಆ್ಯಪ್ ಹಳೆಯ ಸ್ಯಾಮ್​ಸಂಗ್ ಮತ್ತು ಆ್ಯಪಲ್​​ ಫೋನ್​ಗಳಿಗೆ ಕೆಲಸ ಮಾಡುವುದಿಲ್ಲ. ಹೊಸ ವರ್ಷದಲ್ಲಿ 49 ಕ್ಕೂ ಹೆಚ್ಚು ಸ್ಮಾರ್ಟ್​ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುವುದಿಲ್ಲ ಎಂದು ವರದಿ ಆಗಿದೆ. ವಾಟ್ಸ್​ಆ್ಯಪ್ ಮುಂದಿನ ದಿನಗಳಲ್ಲಿ​ ಬಿಡುಗಡೆ ಮಾಡುವಂತಹ ಫೀಚರ್​ಗಳು ಬಹಳ ಗುಣಮಟ್ಟದ್ದಾಗಿರುತ್ತದೆ. ಆದರೆ ಈ ಫೀಚರ್ಸ್ ಮತ್ತು ಮೊಬೈಲ್​ನ ಕಾರ್ಯಚಟುವಟಿಕೆಗಳೊಂದಿಗೆ ಸಮಸ್ಯೆ ಉಂಟಾಗುವುದರಿಂದ ಇನ್ಮುಂದೆ ವಾಟ್ಸ್​ಆ್ಯಪ್​​ ಫೀಚರ್ಸ್ ಅನ್ನು ಬೆಂಬಲ ನೀಡದ ಸ್ಮಾರ್ಟ್​​ಫೋನ್​ಗಳಿಂದ ಹಂತ ಹಂತವಾಗಿ ಅಪ್ಲಿಕೇಶನ್ ಅನ್ನು ತೆಗೆದು ಹಾಕಲಾಗುವುದು ಎಂದು ಕಂಪನಿ ಹೇಳಿದೆ. ಇದಲ್ಲದೆ ವಾಟ್ಸಾಪ್ ಐಓಎಸ್​​ 12 ಮತ್ತು ಇನ್ನೂ ಹೆಚ್ಚಿನ ಡಿವೈಸ್​ಗಳೊಂದಿಗೆ ಹೊಂದಿಕೊಳ್ಳುತ್ತದೆ. ಆದರೆ ಆ್ಯಪಲ್​ನ ಆಪರೇಟಿಂಗ್​ ಸಿಸ್ಟಮ್​ನ ಇತ್ತೀಚಿನ ವರ್ಷನ್​ಗೆ ಅಪ್ಡೇಟ್​ ಮಾಡಲು ವಾಟ್ಸ್​ಆ್ಯಪ್​​ ಬಳಕೆದಾರರಿಗೆ ಸಲಹೆ ನೀಡುತ್ತಿದೆ.

Tech Tips: ವಾಟ್ಸ್​ಆ್ಯಪ್​ನಲ್ಲಿ ಹೆಚ್ಚುತ್ತಿದೆ ಸ್ಕ್ಯಾಮ್: ಫೇಕ್ ಮೆಸೇಜ್​ಗಳನ್ನು ಈಗ ನೀವೇ ಕಂಡುಹಿಡಿಯಿರಿ

ಇದನ್ನೂ ಓದಿ
Image
Reliance Jio 5G in Mysore: ಹೊಸ ವರ್ಷಕ್ಕೆ ಬಂಪರ್ ಕೊಡುಗೆ: ಮೈಸೂರು ಸೇರಿ 11 ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಪ್ರಾರಂಭ
Image
Elon Musk: ಸರಿಯಾಯಿತು ಕೆಟ್ಟು ಹೋಗಿದ್ದ ಟ್ವಿಟರ್: ಎಲಾನ್ ಮಸ್ಕ್ ನೀಡಿದ ಕಾರಣವೇನು ನೋಡಿ
Image
Google Pixel 6a: 38,899 ರೂ. ಡಿಸ್ಕೌಂಟ್: ಕೇವಲ 5,100 ರೂ. ಗೆ ಖರೀದಿಸಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್
Image
Twitter Down: ಭಾರತ ಸೇರಿದಂತೆ ವಿಶ್ವದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್: ಲಾಗಿನ್ ಮಾಡಲು ಜನರ ಪರದಾಟ

ವಾಟ್ಸ್​ಆ್ಯಪ್​​ 2011, 2012 ಮತ್ತು 2013 ರಲ್ಲಿ ಬಿಡುಗಡೆಯಾದ ಏಳು ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳಲ್ಲಿ ಕಾರ್ಯನಿರ್ವಹಿಸುದಿಲ್ಲ ಎನ್ನಲಾಗಿದೆ. ಇದರಲ್ಲಿ ಗ್ಯಾಲಕ್ಸಿ ಏಸ್‌ 2, ಗ್ಯಾಲಕ್ಸಿ ಕೋರ್‌, ಗ್ಯಾಲಕ್ಸಿ S2, ಗ್ಯಾಲಕ್ಸಿ S3 ಮಿನಿ, ಗ್ಯಾಲಕ್ಸಿ ಟ್ರೆಂಡ್‌ II, ಗ್ಯಾಲಕ್ಸಿ ಟ್ರೆಂಡ್‌ ಲೈಟ್‌ ಮತ್ತು ಗ್ಯಾಲಕ್ಸಿ ಎಕ್ಸ್‌ಕವರ್‌ 2 ಫೋನ್‌ಗಳು ಸೇರಿವೆ. ಈ ಎಲ್ಲಾ ಡಿವೈಸ್‌ಗಳನ್ನು ಆಂಡ್ರಾಯ್ಡ್‌ 4.x ಗೆ ಅಪ್‌ಗ್ರೇಡ್ ಮಾಡಲಾಗಿದೆ. ನಂತರದ ದಿನಗಳಲ್ಲಿ ಈ ಫೋನ್‌ಗಳು ಯಾವುದೇ ಆಪರೇಟಿಂಗ್‌ ಸಿಸ್ಟಂ ಪಡೆದಿಲ್ಲ.

ಸದ್ಯ ಹಳೆಯ ಡಿವೈಸ್‌ಗಳನ್ನು ಬಳಸುತ್ತರುವ ಬಳಕೆದಾರರಿಗೆ ವಾಟ್ಸ್​ಆ್ಯಪ್​​ ಈಗಾಗಲೇ ಹಲವು ಸಂದೇಶಗಳನ್ನು ಕಳುಹಿಸಿದೆ. ಎಚ್ಚರಿಕೆ ಸಂದೇಶಗಳನ್ನು ನೀಡುವ ಮೂಲಕ ಕೂಡಲೇ ಸ್ಮಾರ್ಟ್‌ಫೋನ್‌ಗಳನ್ನು ಅಪ್‌ಗ್ರೇಡ್‌ ಮಾಡಿಕೊಳ್ಳುವಂತೆ ಹೇಳಿದೆ. ಈ ರೀತಿಯ ಡಿವೈಸ್‌ಗಳಲ್ಲಿ ದುರುದ್ದೇಶಪೂರಿತ ಚಟುವಟಿಕೆಗಳಿಂದ ರಕ್ಷಿಸಲು ಅಗತ್ಯವಾದ ಸುರಕ್ಷತೆಗಾಗಿ ವಾಟ್ಸ್​ಆ್ಯಪ್​​ ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗಿದೆ.

2023ರಲ್ಲಿ ವಾಟ್ಸ್​ಆ್ಯಪ್​​ ಬೆಂಬಲಿಸದ ಫೋನ್‌ಗಳು:

ಐಫೋನ್ 5, ಐಫೋನ್ 5c, ಐಫೋನ್ SE (16GB), ಐಫೋನ್ SE (32GB), ಐಫೋನ್ 6S (64GB), ಐಫೋನ್6S ಪ್ಲಸ್‌ (128 GB), ಐಫೋನ್ 6S ಪ್ಲಸ್‌ (16GB), ಐಫೋನ್ 6S ಪ್ಲಸ್‌ (32GB), ಐಫೋನ್ 6S ಪ್ಲಸ್‌ (64GB), ಐಫೋನ್ SE (64GB), ಐಫೋನ್6S (128 GB), ಐಫೋನ್6s (16gb), ಐಫೋನ್ 6S (32GB), ಗ್ಯಾಲಕ್ಸಿ Ace 2, ಗ್ಯಾಲಕ್ಸಿ Core, ಗ್ಯಾಲಕ್ಸಿ S2, ಗ್ಯಾಲಕ್ಸಿ S3 ಮಿನಿ, ಗ್ಯಾಲಕ್ಸಿ ಟ್ರೆಂಡ್ 2, ಗ್ಯಾಲಕ್ಸಿ ಟ್ರೆಂಡ್ ಲೈಟ್, ಗ್ಯಾಲಕ್ಸಿ Xcover 2, ಹುವಾವೆ ಆರೋಹಣ D, ಹುವಾವೇ ಆರೋಹಣ D1, D2, G740, ಹುವಾವೆ ಆರೋಹಣ ಮೇಟ್, ಹುವಾವೇ ಆರೋಹಣ P1, ಕ್ವಾಡ್ XL, ಲೆನೊವೊ A820, LG ಕಾಯ್ದೆ, ಎಲ್ಜಿ ಲುಸಿಡ್ 2, LG ಆಪ್ಟಿಮಸ್ 4X HD, LG ಆಪ್ಟಿಮಸ್ F3, F3Q, F5, F6, F7.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ