AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಸ್ಫೋಟಕ ಮಾಹಿತಿ ಬಹಿರಂಗ

ಸಾಮಾನ್ಯವಾಗಿ ಹೊಸ ಬಳಕೆದಾರರು ವಾಟ್ಸ್​ಆ್ಯಪ್ ಖಾತೆ ತೆರೆಯುತ್ತಿದ್ದಂತೆ ನೀವು ಸಂಭಾಷಣೆ ನಡೆಸುವ ವ್ಯಕ್ತಿಯ ಹಾಗೂ ನಿಮ್ಮ ನಡುವೆ ವಿಲೇವಾರಿ ಆಗುವ ವಿಚಾರಗಳನ್ನು ಯಾರೂ ಓದುವುದಿಲ್ಲ ಎಂದು ಗೌಪ್ಯತೆಯ ಬಗ್ಗೆ ದೃಢೀಕರಣ ನೀಡಲಾಗುತ್ತದೆ. ಆದರೆ ಇದೆಲ್ಲಾ ಸುಳ್ಳು ಎಂದು ಪ್ರೋ ಪಬ್ಲಿಕಾ ವರದಿ ಮಾಡಿದೆ.

WhatsApp: ವಾಟ್ಸ್​ಆ್ಯಪ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಸ್ಫೋಟಕ ಮಾಹಿತಿ ಬಹಿರಂಗ
WhatsApp
TV9 Web
| Updated By: Vinay Bhat|

Updated on: Sep 09, 2021 | 3:46 PM

Share

ವಿಶ್ವದಲ್ಲಿ ಕೋಟ್ಯಾಂತರ ಮಂದಿ ಬಳಕೆದಾರರನ್ನು ಹೊಂದಿರುವ ಪ್ರಸಿದ್ಧ ಮೆಸೇಜಿಂಗ್ ಅಪ್ಲೆಕೇಶನ್ ವಾಟ್ಸ್​ಆ್ಯಪ್ (WhatsApp) ಇದೀಗ ತನ್ನ ಗೌಪ್ಯತೆ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದೆ. ವಾಟ್ಸ್​ಆ್ಯಪ್​​ ಯಾವುದೇ ಕಾರಣಕ್ಕೂ ಬಳಕೆದಾರರ ಖಾಸಗಿ ಸಂದೇಶಗಳನ್ನು ಓದಲು ಸಾಧ್ಯವೇ ಇಲ್ಲ ಎಂದು ಸಾರಿ ಸಾರಿ ಹೇಳುತ್ತಿದೆ. ಹೀಗಿರುವಾಗ ಪ್ರೋ ಪಬ್ಲಿಕಾ, ಎಂಡ್​​​ ಟು ಎಂಡ್​ ಎನ್​ಕ್ರಿಪ್ಟೆಡ್​ (End-to-End Encryption) ಎಂದು ವಾಟ್ಸ್​ಆ್ಯಪ್​ ಹೇಳಿದ್ದರೂ ಸಹ ಫೇಸ್​ ಬುಕ್​​ ಕಂಪನಿಯೂ 1000ಕ್ಕೂ ಅಧಿಕ ಗುತ್ತಿಗೆ ಕೆಲಸಗಾರರಿಗೆ ವಾಟ್ಸ್​ಆ್ಯಪ್​​​ನಲ್ಲಿ ಬಳಕೆದಾರರು ಮಾಡುವ ಖಾಸಗಿ ಸಂದೇಶಗಳನ್ನು ಓದಲೆಂದೇ ನೇಮಿಸಿದೆ ಎಂಬ ಶಾಕಿಂಗ್ ಸುದ್ದಿ ಪ್ರಕಟಿಸಿದೆ.

ಸಾಮಾನ್ಯವಾಗಿ ಹೊಸ ಬಳಕೆದಾರರು ವಾಟ್ಸ್​ಆ್ಯಪ್ ಖಾತೆ ತೆರೆಯುತ್ತಿದ್ದಂತೆ ನಿಮ್ಮ ಸಂದೇಶಗಳು ಹಾಗೂ ಕರೆಗಳು ಸುರಕ್ಷಿತವಾಗಿದೆ. ನೀವು ಸಂಭಾಷಣೆ ನಡೆಸುವ ವ್ಯಕ್ತಿಯ ಹಾಗೂ ನಿಮ್ಮ ನಡುವೆ ವಿಲೇವಾರಿ ಆಗುವ ವಿಚಾರಗಳನ್ನು ಯಾರೂ ಓದುವುದಿಲ್ಲ, ಕೇಳುವುದೂ ಇಲ್ಲ , ನಿಮ್ಮ ಮಧ್ಯೆ ಇಲ್ಲಿ ಇನ್ಯಾರೂ ಇರುವುದಿಲ್ಲ ಎಂದು ಗೌಪ್ಯತೆಯ ಬಗ್ಗೆ ದೃಢೀಕರಣ ನೀಡಲಾಗುತ್ತದೆ. ಆದರೆ ಈ ಎಲ್ಲಾ ದೃಢೀಕರಣವು ಸುಳ್ಳು ಎಂದು ಪ್ರೋ ಪಬ್ಲಿಕಾ ವರದಿ ಮಾಡಿದೆ.

“ಆಸ್ಟಿನ್​, ಟೆಕ್ಸಾಸ್​, ಡುಬ್ಲಿನ್​ ಹಾಗೂ ಸಿಂಗಾಪುರದಲ್ಲಿ ಬಳಕೆದಾರರ ಖಾಸಗಿ ಮೆಸೇಜ್​ಗಳನ್ನು ಓದುವವರಿಗಾಗಿಯೇ ಕಚೇರಿ ಸ್ಥಾಪನೆ ಮಾಡಲಾಗಿದೆ. ಈ ಕೆಲಸಕ್ಕಾಗಿ ವಾಟ್ಸ್ ಆಪ್ ಸಾವಿರಕ್ಕೂ ಹೆಚ್ಚು ಜನರನ್ನು ಕಾಂಟ್ರಾಕ್ಟ್ ಮೇಲೆ ನೇಮಿಸಿದ್ದು, ಅಲ್ಲಿಂದ ಈ ಜನರು ಲಕ್ಷಾಂತರ ಜನರ ಕಂಟೆಂಟ್ ಅನ್ನು ಪರಿಶೀಲಿಸುತ್ತಾರೆ. ಈ ಜನರು ಫೇಸ್​ಬುಕ್ ಸಾಫ್ಟ್​ವೇರ್ ಬಳಸಿ ಬಳಕೆದಾರರ ಖಾಸಗಿ ಸಂದೇಶಗಳು, ಭಾವಚಿತ್ರಗಳು ಹಾಗೂ ವಿಡಿಯೋಗಳನ್ನು ನೋಡಬಹುದು. ಇದಕ್ಕಾಗಿ ಕಂಪನಿ ಅವರಿಗೆ ವೇತನ ಕೂಡ ಪಾವತಿಸುತ್ತದೆ” ಎಂದು ಹೇಳಿದೆ.

ಇಷ್ಟು ಮಾತ್ರವಲ್ಲದೇ ಈ ಕಂಪನಿಯು ಬಳಕೆದಾರರ ಕೆಲ ಖಾಸಗಿ ಮಾಹಿತಿಗಳನ್ನು ಅಮೆರಿಕದ ಡಿಪಾರ್ಟ್​ಮೆಂಟ್​ ಆಫ್​ ಜಸ್ಟೀಸ್​ನಂತಹ ಸಾಕಷ್ಟು ಕಾನೂನು ಜಾರಿ ಸಂಸ್ಥೆಯೊಂದಿಗೆ ಹಂಚಿಕೊಂಡಿದೆ ಎನ್ನಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ಬಳಕೆದಾರರ ಖಾಸಗಿ ಸಂಭಾಷಣೆಯ ಮೇಲೆ ಕಣ್ಣಿಡಲು ಸಾಧ್ಯವಿಲ್ಲ ಎಂದು ಫೇಸ್​ಬುಕ್​ ಸ್ಥಾಪಕ ಜುಕರ್​ ಬರ್ಗ್​ ಹೇಳಿಕೆ ನೀಡಿದ್ದರು. ಆದರೆ ಇದೀಗ ಪ್ರೋ ಪಬ್ಲಿಕಾ ಈ ರೀತಿಯ ಸ್ಪೋಟಕ ಮಾಹಿತಿ ಪ್ರಕಟ ಮಾಡಿದೆ.

ಇನ್ನೂ ಈ ಕುರಿತು ಹೇಳಿಕೆ ನೀಡಿರುವ ಕಂಪನಿಯ ಡೈರೆಕ್ಟ್ ಆಫ್ ಕಮ್ಯೂನಿಕೇಶನ್ ಕಾರ್ಲ್ ವೂಗ್, ಕಂಪನಿಯ ಆಸ್ಟಿನ್ ಹಾಗೂ ಇತರ ಕಚೇರಿಗಳಲ್ಲಿ ಕಾಂಟ್ರಾಕ್ಟ್ ಮೇಲೆ ನೇಮಿಸಲಾಗಿರುವ ಜನರು ಸಂದೇಶಗಳನ್ನು ಪರಿಶೀಲಿಸಿ ದುರ್ವರ್ತನೆ ತೋರುವ ಜನರನ್ನು ಬ್ಲಾಕ್ ಮಾಡಲು ನೇಮಿಸಲಾಗಿದೆ ಎಂದಿದ್ದಾರೆ. ಕೇವಲ ಹಾನಿ ತಲುಪಿಸುವ ಸಂದೇಶಗಳನ್ನು ಮಾತ್ರ ಅವರು ರಿವ್ಯೂ ಮಾಡುತ್ತಾರೆ ಎಂಬುದು ಅವರ ಮಾತು.

ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ ಬಿಡುಗಡೆ

Facebook: ಹೊಸ ಸ್ಮಾರ್ಟ್​ ಗ್ಲಾಸ್ ಪರಿಚಯಿಸಲಿರುವ ಫೇಸ್​ಬುಕ್: ಏನಿದರ ವಿಶೇಷತೆ?

(WhatsApp Is Not As Private As You May Think Despite End-to-End Encryption here is the details)

ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ