AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Feature: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಹೊಸ ಬದಲಾವಣೆ: ನೀವು ಗಮನಿಸಿದ್ರಾ?

WhatsApp Disappearing Messages: ವಾಟ್ಸ್​ಆ್ಯಪ್​​ನಲ್ಲಿ ಕಳೆದ ವರ್ಷ ಡಿಸ್‌ಅಪಿಯರಿಂಗ್‌ ಮೆಸೇಜ್‌ ಫೀಚರ್ಸ್‌ ಅನ್ನು ಪರಿಚಯಿಸಿತ್ತು. ಈ ಮೊದಲು ಇದು ಏಳು ದಿನಗಳ ನಂತರ ಸ್ವಯಂಚಾಲಿತವಾಗಿ ಕಣ್ಮರೆಯಾಗುವ ಅವಕಾಶ ನೀಡಲಾಗಿತ್ತು. ಇದೀಗ ಡಿಸ್‌ಅಪಿಯರಿಂಗ್‌ ಮೆಸೇಜ್‌ ಟೈಂ ಅನ್ನು 90 ದಿನಗಳವರೆಗೆ ಹೆಚ್ಚಿಸಲಾಗಿದೆ.

WhatsApp Feature: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಹೊಸ ಬದಲಾವಣೆ: ನೀವು ಗಮನಿಸಿದ್ರಾ?
WhatsApp
TV9 Web
| Edited By: |

Updated on: Dec 07, 2021 | 12:50 PM

Share

ಬಳಕೆದಾರರಿಗೆ ಸದಾ ಒಂದಲ್ಲ ಒಂದು ಹೊಸ ಹೊಸ ಆಯ್ಕೆಗಳನ್ನು ನೀಡುತ್ತಿರುವ ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್ (WhatsApp)​ ಇಂದು ಜನಕ್ಕೆ ಮತ್ತಷ್ಟು ಹತ್ತಿರವಾಗಿದೆ. ವಿಶ್ವದಲ್ಲಿ ಕೋಟ್ಯಾಂತರ ಜನರು ಇದನ್ನು ಉಪಯೋಗಿಸುತ್ತಿದ್ದಾರೆ. ಇದೀಗ ವಾಟ್ಸ್​ಆ್ಯಪ್​ ಹೊಸ ಆಯ್ಕೆಯನ್ನು (WhatsApp New Feature) ನೀಡಿದೆ. ಈಗಾಗಲೆ ವಾಟ್ಸ್​ಆ್ಯಪ್​ನಲ್ಲಿರುವ ಡಿಸ್‌ಅಪಿಯರಿಂಗ್‌ ಆಯ್ಕೆ ನಿಮಗೆ ತಿಳಿದಿರಬಹುದು. ಈ ಫೀಚರ್ಸ್​ನಲ್ಲಿ ವಾಟ್ಸ್​ಆ್ಯಪ್​ ಮಹತ್ತರವಾದ ಬದಲಾವಣೆಯನ್ನು ಮಾಡಿದೆ. ಕಣ್ಮರೆಯಾಗುವ ಸಂದೇಶಗಳಿಗೆ ಕಂಪನಿಯು 24 ಗಂಟೆಗಳು ಮತ್ತು 90 ದಿನಗಳು ಎಂಬ ಎರಡು ಹೊಸ ಅವಧಿಗಳನ್ನು ಸೇರಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಾಟ್ಸ್​ಆ್ಯಪ್, ಚಾಟ್‌ಗಳಿಗೆ ಡೀಫಾಲ್ಟ್ ಆಗಿ ಕಣ್ಮರೆಯಾಗುವ ಸಂದೇಶಗಳನ್ನು ಆನ್ ಮಾಡುವ ಆಯ್ಕೆಯನ್ನು ಬಳಕೆದಾರರು ಹೊಂದಿರುತ್ತಾರೆ ಮತ್ತು ಆ ಸಂದೇಶಗಳು ಎಷ್ಟು ಸಮಯದವರೆಗೆ ಗೋಚರಿಸಬೇಕೆಂದು ಅವರು ಬಯಸುತ್ತಾರೂ ಅದನ್ನೂ ಕೂಡ ನಿಯಂತ್ರಿಸುವ ಫಿಚರ್ ಅನ್ನು ಹೊಂದಲಿದ್ದಾರೆ ಎಂದು ಸಂಸ್ಥೆ ಹೇಳಿದೆ.

ವಾಟ್ಸ್​ಆ್ಯಪ್​​ನಲ್ಲಿ ಕಳೆದ ವರ್ಷ ಡಿಸ್‌ಅಪಿಯರಿಂಗ್‌ ಮೆಸೇಜ್‌ ಫೀಚರ್ಸ್‌ ಅನ್ನು ಪರಿಚಯಿಸಿತ್ತು. ಪ್ರಾರಂಭದಲ್ಲಿ ಡಿಸ್‌ಅಪಿಯರಿಂಗ್‌ ಮೆಸೇಜ್‌ ಫೀಚರ್ಸ್‌ ಸಕ್ರಿಯಗೊಳಿಸಿದರೆ ವಾಟ್ಸ್​ಆ್ಯಪ್​​ನಲ್ಲಿ ಬರುವ ಹೊಸ ಸಂದೇಶಗಳು ಏಳು ದಿನಗಳ ನಂತರ ಸ್ವಯಂಚಾಲಿತವಾಗಿ ಕಣ್ಮರೆಯಾಗುವ ಅವಕಾಶ ನೀಡಲಾಗಿತ್ತು. ಇದೀಗ ಬಳಕೆದಾರರು ಡಿಸ್‌ಅಪಿಯರಿಂಗ್‌ ಮೆಸೇಜ್‌ ಟೈಂ ಅನ್ನು 90 ದಿನಗಳವರೆಗೆ ಹೆಚ್ಚಿಸಲು ಅನುಮತಿಸುತ್ತದೆ. ಇದಲ್ಲದೆ, ವಾಟ್ಸ್​ಆ್ಯಪ್​​ ಬಳಕೆದಾರರು ಎಲ್ಲಾ ಹೊಸ ಚಾಟ್‌ಗಳಿಗೆ ಡೀಫಾಲ್ಟ್ ಆಗಿ ಮೆಸೇಜ್‌ ಡಿಸ್‌ಅಪಿಯರಿಂಗ್ ಅನ್ನು ಆನ್ ಮಾಡುವ ಆಯ್ಕೆಯನ್ನು ಸಹ ನೀಡಲಾಗಿದೆ.

ಹಾಗೆಯೇ, ವಾಟ್ಸ್​ಆ್ಯಪ್​​ ಗ್ರೂಪ್‌ಗಳಿಗೂ ಕೂಡ ಕಣ್ಮರೆಯಾಗುವ ಸಂದೇಶಗಳನ್ನು ಮಾಡಲು ಅನುಮತಿಸಲಾಗಿದೆ. ಈ ಅಲ್ಪಕಾಲಿಕ ಚಾಟ್‌ಗಳನ್ನು ವಾಟ್ಸ್​ಆ್ಯಪ್​​\ ಸರ್ವರ್‌ಗಳಿಂದ ಅಳಿಸಲಾಗುತ್ತದೆ ಎಂದು ಕಂಪನಿ ತಿಳಿಸಿದೆ. ಇನ್ನು ಎಲ್ಲಾ ‘ಒನ್ ಟು ಒನ್’ ಚಾಟ್‌ಗಳಿಗಾಗಿ ನೀವು ಕಣ್ಮರೆಯಾಗುತ್ತಿರುವ ಮೆಸೇಜ್ ಗಳನ್ನು ಆನ್ ಮಾಡಿದಾಗ ನಿಮ್ಮ ಪ್ರಸ್ತುತ ಮೆಸೇಜ್ ಗಳು ಅಥವಾ ಚಾಟ್‌ಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಿಳಿದುಬಂದಿದೆ.

ನಿಮ್ಮ ಎಲ್ಲಾ ಹೊಸ ಚಾಟ್‌ಗಳಿಗೆ ಕಣ್ಮರೆಯಾಗುವ ಫಿಚರ್ ಅನ್ನು ಆನ್ ಮಾಡಿದ ನಂತರ ಈ ಬಗ್ಗೆ ಆನ್ ಮಾಡಲಾಗಿದೆ ಎಂಬ ಅಧಿಸೂಚನೆಯು ಚಾಟ್‌ನಲ್ಲಿ ಕಾಣಿಸಿಕೊಳ್ಳುತ್ತದೆ. ಕಣ್ಮರೆಯಾಗುವ ಮೆಸೇಜ್ ಗಳನ್ನು ಪೂರ್ವನಿಯೋಜಿತವಾಗಿ ಆನ್ ಮಾಡಲಾಗಿದೆ ಎಂದು ಅಧಿಸೂಚನೆಯು ತಿಳಿಸುತ್ತದೆ. ಆದ್ದರಿಂದ ನೀವು ನಿರ್ದಿಷ್ಟವಾಗಿ ಆ ಫೀಚರ್ ಅನ್ನು ಬಳಸಿದ್ದೀರಿ ಎಂದು ತಿಳಿಸಲಾಗುತ್ತದೆ.

ಡೀಫಾಲ್ಟ್ ಆಗಿ ಕಣ್ಮರೆಯಾಗುವ ಸಂದೇಶಗಳ ಫಿಚರ್ ಆನ್ ಮಾಡಲು ಬಯಸುವ ಜನರಿಗೆ, WhatsApp ಇತರ ವ್ಯಕ್ತಿಯು ಆಯ್ಕೆ ಮಾಡಿದ ಡೀಫಾಲ್ಟ್ ಎಂದು ಜನರಿಗೆ ಹೇಳುವ ಸಂದೇಶವನ್ನು ಅವರ ಚಾಟ್‌ಗಳಲ್ಲಿ ಪ್ರದರ್ಶಿಸುತ್ತದೆ. ಇದು WhatsApp ನಲ್ಲಿ ಪ್ರತಿಯೊಬ್ಬರೊಂದಿಗೂ ನೀವು ಹೇಗೆ ಸಂವಹನ ನಡೆಸಬೇಕು ಎಂಬುದರ ಕುರಿತು ನೀವು ಮಾಡಿದ ಆಯ್ಕೆಯಾಗಿರಲಿದೆ.

Fake Apps Scam: ಸ್ಮಾರ್ಟ್​ಫೋನ್ ಇರುವವರು ತಪ್ಪದೇ ಇಲ್ಲೊಮ್ಮೆ ಗಮನಿಸಿ: ನಿಮ್ಮಲ್ಲಿರಬಹುದು ನಕಲಿ ಆ್ಯಪ್

(WhatsApp is now adding a new functionality to its disappearing messages feature)

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ