AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಹಣ ಪಾವತಿ ಮಾಡಿ ಹಣ ಗಳಿಸಿ: ಬಂಪರ್ ಆಫರ್ ಪರಿಚಯಿಸಲಿದೆ ವಾಟ್ಸ್​ಆ್ಯಪ್: ಹೇಗೆ ಗೊತ್ತಾ?

Wabetainfo ಬಹಿರಂಗಪಡಿಸಿರುವ ಮಾಹಿತಿಯ ಪ್ರಕಾರ, ಬಳಕೆದಾರರಿಗೆ ವಾಟ್ಸ್​ಆ್ಯಪ್ ಪೇಮೆಂಟ್​ ಮಾಡಿದ ತಕ್ಷಣ ಕ್ಯಶ್​ಬ್ಯಾಕ್ ಆಫರ್ ಎಂಬ ಹೊಸ ವೈಶಿಷ್ಟ್ಯವನ್ನು ತರಲು ವಾಟ್ಸ್​ಆ್ಯಪ್ ಡೆವಲಪರ್‌ಗಳು ಹೊಸ ಕೆಲಸ ಮಾಡುತ್ತಿದ್ದಾರೆ

WhatsApp: ಹಣ ಪಾವತಿ ಮಾಡಿ ಹಣ ಗಳಿಸಿ: ಬಂಪರ್ ಆಫರ್ ಪರಿಚಯಿಸಲಿದೆ ವಾಟ್ಸ್​ಆ್ಯಪ್: ಹೇಗೆ ಗೊತ್ತಾ?
WhatsApp Payments
TV9 Web
| Edited By: |

Updated on: Sep 25, 2021 | 2:06 PM

Share

ಬಳಕೆದಾರರಿಗೆ ಹೊಸ ಹೊಸ ಫೀಚರ್​​ಗಳನ್ನು ಪರಿಚಯಿಸುತ್ತಿರುವ ಫೇಸ್​ಬುಕ್ (Facebook) ಒಡೆತನದ ವಾಟ್ಸ್​ಆ್ಯಪ್ (WhatsApp) ಈಗ ಹೊಸ ಆಫರ್​ಗಳನ್ನೂ ನೀಡಲು ಮುಂದಾಗಿದೆ. 2020 ರಲ್ಲಿ ಭಾರತೀಯರಿಗೆ ವಾಟ್ಸ್​ಆ್ಯಪ್ ಪೇಮೆಂಟ್ (whatsapp payment) ಎಂಬ ಹೊಸ ವೈಶಿಷ್ಟ್ಯವನ್ನು ಸಂಸ್ಥೆ ಪರಿಚಯಿಸಿತ್ತು. ಆದರೆ, ದೇಶದಲ್ಲಿ ಇದು ಅಷ್ಟೊಂದು ಕ್ಲಿಕ್ ಆಗಲಿಲ್ಲ. ಭಾರತೀಯರು ಈಗಾಗಲೇ ಆನ್​ಲೈನ್ ಹಣದ ವ್ಯವಹಾರಕ್ಕೆ ಫೋನ್ ಪೇ (PhonePe), ಗೂಗಲ್ ಪೇ (Google Pay) ಯಂತಹ ಇತರೆ ಆ್ಯಪ್​ಗಳನ್ನು ಬಳಸುತ್ತಿರುವ ಕಾರಣ ವಾಟ್ಸ್​ಆ್ಯಪ್ ಪೇಮೆಂಟ್ ಅಷ್ಟೊಂದು ಪ್ರಸಿದ್ಧಿ ಪಡೆದಿರಲಿಲ್ಲ. ಸದ್ಯ ವಾಟ್ಸ್​ಆ್ಯಪ್ ಬಳಕೆದಾರರನ್ನು ತನ್ನತ್ತ ಸೆಳೆಯಲು ಹೊಸ ಯೋಜನೆ ಮಾಡಿಕೊಂಡಿದೆ. ಈಗ ವಾಟ್ಸಾಪ್ ಪಾವತಿ ವೈಶಿಷ್ಟ್ಯವನ್ನು ಬಳಸುವ ಭಾರತೀಯ ಬಳಕೆದಾರರಿಗೆ ಕ್ಯಾಶ್​ಬ್ಯಾಕ್​​​ (Whatsapp Cashback) ಆಫರ್ ನೀಡಲು ಮುಂದಾಗಿದೆ.

Wabetainfo ಬಹಿರಂಗಪಡಿಸಿರುವ ಮಾಹಿತಿಯ ಪ್ರಕಾರ, ಬಳಕೆದಾರರಿಗೆ ವಾಟ್ಸ್​ಆ್ಯಪ್ ಪೇಮೆಂಟ್​ ಮಾಡಿದ ತಕ್ಷಣ ಕ್ಯಶ್​ಬ್ಯಾಕ್ ಆಫರ್ ಎಂಬ ಹೊಸ ವೈಶಿಷ್ಟ್ಯವನ್ನು ತರಲು ವಾಟ್ಸ್​ಆ್ಯಪ್ ಡೆವಲಪರ್‌ಗಳು ಹೊಸ ಕೆಲಸ ಮಾಡುತ್ತಿದ್ದಾರೆ. ಈ ಹೊಸ ಕ್ಯಾಶ್‌ಬ್ಯಾಕ್ ವೈಶಿಷ್ಟ್ಯವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಹೇಳಿದೆ.

ಕುಸಿದಿರುವ ವಾಟ್ಸ್​ಆ್ಯಪ್ ಪೇಮೆಂಟ್ ಬಳಕೆದಾರರನ್ನು ಮೇಲೆತರಲು ಮತ್ತು ಗೂಗಲ್ ಪೇ, ಫೋನ್ ಪೇ ಯಂತಹ ಪ್ರತಿಸ್ಪರ್ಧಿಗಳೊಂದಿಗೆ ಸ್ಪರ್ಧಿಸಲು ವಾಟ್ಸ್​ಆ್ಯಪ್ ಬಹುಮಾನದ ರಿಯಾಯಿತಿಗಳನ್ನು ಪರಿಚಯಿಸುತ್ತಿದೆ. ಕ್ರಿಯಾತ್ಮಕತೆಯು ಇನ್ನೂ ಅಭಿವೃದ್ಧಿಯಲ್ಲಿದೆ ಮತ್ತು ಅದನ್ನು ಯಾರಿಂದಲೂ ಬಳಸಲಾಗುವುದಿಲ್ಲ. ಇದು ಆ್ಯಪ್‌ನ ಭವಿಷ್ಯದ ಆವೃತ್ತಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಶೀಘ್ರದಲ್ಲೇ ತಿಳಿಸುತ್ತೇವೆ ಎಂದು ಹೇಳಿದೆ.

ಈ ಸೇವೆಯು ಭಾರತದಲ್ಲಿ ವಾಟ್ಸ್​ಆ್ಯಪ್ ಅನ್ನು ಬಳಸುತ್ತಿರುವ ಗ್ರಾಹಕರಿಗೆ ಮಾತ್ರ ಸೀಮಿತವಾಗಿರುತ್ತದೆ. 10  ರೂ. ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ಪಾವತಿಯು ಕ್ಯಾಶ್‌ಬ್ಯಾಕ್ ವೋಚರ್‌ಗಳಾಗಿ ಸಿಗಲಿದೆ ಎಂದು ಹೇಳಲಾಗಿದೆ. ಪಾವತಿ ಮಾಡುವ ಬಳಕೆದಾರರು ಅದನ್ನು 48 ಗಂಟೆಗಳಲ್ಲಿ ಸ್ವೀಕರಿಸುತ್ತಾರೆ ಎಂದು ವರದಿ ಹೇಳುತ್ತದೆ. ಆದಾಗ್ಯೂ, ಈ ವೈಶಿಷ್ಟ್ಯದ ಅಧಿಕೃತ ಬಿಡುಗಡೆಯ ನಂತರ, ಕ್ಯಾಶ್‌ಬ್ಯಾಕ್ ಮೊತ್ತ ಮತ್ತು ಕ್ಯಾಶ್‌ಬ್ಯಾಕ್‌ಗಳ ಸಂಖ್ಯೆಯು ಬದಲಾಗುವ ಸಾಧ್ಯತೆಯಿದೆ. ಈ ವೈಶಿಷ್ಟ್ಯವನ್ನು ಬಳಸಿಕೊಂಡು ಭಾರತದಲ್ಲಿ UPI ಪಾವತಿಗಳನ್ನು ಮಾತ್ರ ಮಾಡಬಹುದು ಎಂಬುದನ್ನು ಬಳಕೆದಾರರು ಗಮನಿಸಬೇಕು.

ಇನ್ನೂ ವಾಟ್ಸ್ಆ್ಯಪ್ ವಾಯ್ಸ್ ಟ್ರಾನ್ಸ್​ಕ್ರಿಪ್ಶನ್ ಫೀಚರ್ ಪರಿಚಯಿಸುವ ಬಗ್ಗೆ ಕಾರ್ಯನಿರ್ವಹಿಸುತ್ತಿದೆ. ವಾಬೇಟಾ ಇನ್ಫೋ ವರದಿ ಪ್ರಕಾರ, ವಾಟ್ಸ್ಆ್ಯಪ್ ತನ್ನ ಪ್ಲಾಟ್​ಫಾರ್ಮ್​ನಲ್ಲಿ ಟ್ರಾನ್ಸ್​ಕ್ರಿಪ್ಶನ್ ಎಂಬ ಫೀಚರ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಹೊಸ ವೈಶಿಷ್ಟ್ಯವು ಹೊಸತನದಿಂದ ಕೂಡಿದೆ ಎಂದಿದೆ.

ವಾಟ್ಸ್ಆ್ಯಪ್ ಪರಿಚಯಿಸಲಿರುವ ಹೊಸ ವಾಯ್ಸ್ ಟ್ರಾನ್ಸ್​ಕ್ರಿಪ್ಶನ್ ಫೀಚರ್​ನಲ್ಲಿ ಬಳಕೆದಾರರಿಗೆ ಧ್ವನಿ ಸಂದೇಶದ ವಿಷಯವನ್ನು ಓದಬಲ್ಲ ರೂಪದಲ್ಲಿ ನೀಡುತ್ತದೆ. ಅಂದರೆ ಇದು ಇದು ಪಠ್ಯ ರೂಪದಲ್ಲಿ ಸಿಗಲಿದೆ. ಈ ಫೀಚರ್ ಅನ್ನು ಆಯ್ಕೆಯ ಆಧಾರ ಮೇಲೆ ನೀಡಲಾಗುತ್ತದೆ. ಅಂದರೆ ಈ ಫೀಚರ್ ಟ್ರಾನ್ಸ್​ಕ್ರಿಪ್ಶನ್ ಮಾಡಲು ಅನುಮತಿಸಿದಾಗ ಮಾತ್ರ ಸೇವೆ ಸಿಗಲಿದೆ. ವಾಟ್ಸ್ಆ್ಯಪ್ ಕ್ಯಾಮೆರಾ, ಮೈಕ್ರೋಫೋನ್​ಗೆ ಅನುಮತಿ ನೀಡಿದಂತೆ ಇದಕ್ಕೂ ಅನುಮತಿ ಕೇಳುತ್ತದೆಯಂತೆ.

Amazon: ಅಮೆಜಾನ್​ನಲ್ಲಿ ಹೀಗೊಂದು ಆಫರ್: ಕೇವಲ 20,000 ರೂ. ಒಳಗೆ ಲಭ್ಯವಿದೆ ಈ 5 ಸ್ಮಾರ್ಟ್ ಟಿವಿಗಳು

Amazon: ಊಹಿಸಲಾಗದಷ್ಟು ಡಿಸ್ಕೌಂಟ್: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್​ಗೆ ದಿನಾಂಕ ಫಿಕ್ಸ್

(WhatsApp is planning to give out cashback to WhatsApp Payments users soon)

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?