AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Feature: ವಾಟ್ಸ್​ಆ್ಯಪ್ ಗ್ರೂಪ್ ಅಡ್ಮಿನ್​ಗಳಿಗೆ ಶುಭ ಸುದ್ದಿ: ನಿಮಗೆ ಸಿಗಲಿದೆ ವಿಶೇಷ ಪವರ್

WhatsApp Group Admin: ವಾಟ್ಸ್​ಆ್ಯಪ್ ಇದೀಗ ಮತ್ತೊಂದ ಹೊಸ ಫೀಚರ್ ಬಿಡುಗಡೆ ಮಾಡುವ ಬಗ್ಗೆ ಘೋಷಣೆ ಮಾಡಿದೆ. ಇದರಲ್ಲಿ ಗ್ರೂಪ್ ಅಡ್ಮಿನ್​ಗೆ ವಿಶೇಷ ಪವರ್ ದೊರೆಯಲಿದೆ.

WhatsApp New Feature: ವಾಟ್ಸ್​ಆ್ಯಪ್ ಗ್ರೂಪ್ ಅಡ್ಮಿನ್​ಗಳಿಗೆ ಶುಭ ಸುದ್ದಿ: ನಿಮಗೆ ಸಿಗಲಿದೆ ವಿಶೇಷ ಪವರ್
WhatsApp New Feature
Vinay Bhat
|

Updated on: May 08, 2023 | 2:45 PM

Share

ಇಂದು ಕ್ಷಣಾರ್ಧದಲ್ಲಿ ಸಂದೇಶಗಳ ಮೂಲಕ ಮಾತುಕತೆ ನಡೆಸಲು ಬಹುತೇಕ ಜನರು ಉಪಯೋಗಿಸುತ್ತಿರುವ ಆ್ಯಪ್ ಎಂದರೆ ಅದು ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್ (WhatsApp). ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಈ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ಅನ್ನು ಉಪಯೋಗಿಸುತ್ತಿದ್ದಾರೆ. ಈಗಂತು ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಹೊಸ ಫೀಚರ್​ಗಳನ್ನು ಪರಿಚಯಿಸುತ್ತಿದೆ. ವಾರಕ್ಕೊಂದು ನೂತನ ಆಯ್ಕೆಗಳನ್ನು ನೀಡುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಹೊಸ ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಇದರ ನಡುವೆ ವಾಟ್ಸ್​ಆ್ಯಪ್ ಇದೀಗ ಮತ್ತೊಂದ ಹೊಸ ಫೀಚರ್ ಬಿಡುಗಡೆ ಮಾಡುವ ಬಗ್ಗೆ ಘೋಷಣೆ ಮಾಡಿದೆ. ಇದರಲ್ಲಿ ಗ್ರೂಪ್ ಅಡ್ಮಿನ್​ಗೆ (Group Admin) ವಿಶೇಷ ಪವರ್ ದೊರೆಯಲಿದೆ.

WABetaInfo ಮಾಡಿರುವ ವರದಿಯ ಪ್ರಕಾರ, ಗ್ರೂಪ್​ನಲ್ಲಿ ಬಂದ ಮೆಸೇಜ್​ ಅನಗತ್ಯ ಅಥವಾ ನಿಯಮಕ್ಕೆ ವಿರುದ್ಧವಾಗಿದ್ದರೆ ಸದಸ್ಯ ಅದನ್ನು ಗ್ರೂಪ್ ಅಡ್ಮಿನ್​ಗೆ ವರದಿ ಮಾಡಬಹುದು. ಅಷ್ಟೇ ಅಲ್ಲದೆ ಅಡ್ಮಿನ್ ಅನುಮತಿಸಿದರೆ ಆ ಮೆಸೇಜ್ ಅನ್ನು ಯಾವ ಸದಸ್ಯನಿಗೆ ಬೇಕಾದರೂ ಡಿಲೀಟ್ ಮಾಡಬಹುದು. ಸರಳವಾಗಿ ಹೇಳುವುದಾದರೆ, ಒಂದು ಗುಂಪಿನಿಂದ ನೀವು ಇಷ್ಟವಿಲ್ಲದ ಸಂದೇಶವನ್ನು ಸ್ವೀಕರಿಸಿದರೆ, ನೀವು ಆ ಸಂದೇಶದ ಕುರಿತು ಗ್ರೂಪ್ ಅಡ್ಮಿನ್‌ಗೆ ದೂರು ನೀಡಬಹುದು. ವರದಿ ಮಾಡಿದ ನಂತರ, ಗ್ರೂಪ್ ಅಡ್ಮಿನ್ ಆ ಸಂದೇಶವನ್ನ ಪರಿಶೀಲಿಸಿ ಡಿಲೀಟ್ ಮಾಡಬಹುದು ಅಥವಾ ಗ್ರೂಪ್​ನಲ್ಲಿರುವ ಇತರೆ ಸದಸ್ಯರಿಗೆ ಡಿಲೀಟ್ ಮಾಡುವಂತಹ ಅವಕಾಶ ನೀಡಬಹುದು. ಈ ಮೂಲಕ ಗ್ರೂಪ್​ನಲ್ಲಿ ಉತ್ತಮ ವಾತಾವರಣ ಸೃಷ್ಟಿಸುವುದು ವಾಟ್ಸ್​ಆ್ಯಪ್​ನ ಮುಖ್ಯ ಉದ್ದೇಶವಾಗಿದೆ.

Realme 11 Pro Plus: ಮೂರೇ ದಿನ ಬಾಕಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ 200MP ಕ್ಯಾಮೆರಾ ಸ್ಮಾರ್ಟ್​ಫೋನ್

ಇದನ್ನೂ ಓದಿ
Image
Google Pixel 7a: ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 7a ಬಿಡುಗಡೆಗೆ ದಿನಗಣನೆ: ಭಾರತದಲ್ಲಿ ಬೆಲೆ ಎಷ್ಟು ಗೊತ್ತೇ?
Image
Amazon Great Summer Sale: ಅಮೆಜಾನ್ ಗ್ರೇಟ್ ಸಮ್ಮರ್ ಡೇಸ್ ಸೇಲ್: ಇಂದು ಕೊನೇ ದಿನ: ಆಫರ್ ಮಿಸ್ ಮಾಡ್ಬೇಡಿ
Image
Fake App: ಪ್ಲೇ ಸ್ಟೋರ್​ನಲ್ಲಿ 11 ಅಪಾಯಕಾರಿ ಆ್ಯಪ್ ಪತ್ತೆ: ಇನ್​ಸ್ಟಾಲ್ ಮಾಡಿದ್ರೆ ತಕ್ಷಣ ಡಿಲೀಟ್ ಮಾಡಿ
Image
Motorola Edge 40: ಬೊಂಬಾಟ್ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್: ಮಾರುಕಟ್ಟೆಗೆ ಎಂಟ್ರಿಕೊಟ್ಟ ಮೋಟೋ ಎಡ್ಜ್‌ 40 ಸ್ಮಾರ್ಟ್‌ಫೋನ್‌

ಚಾಟ್ ಲಾಕ್ ಹಾಗೂ ಹೈಡ್ ಮಾಡುಬಹುದು:

ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ (Hide) ಮಾಡಬಹುದು ಎಂದು ಹೇಳಿದೆ. ಈ ಆಯ್ಕೆ ಚಾಟ್​ನ ಕಾಂಟೆಕ್ಟ್ ಅಥವಾ ಗ್ರೂಪ್​ನ ಇನ್​ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್​ಗೆ ಹೋಗುತ್ತದೆ. ಸದ್ಯಕ್ಕೆ ಈ ಫೀಚರ್ಸ್‌ ಅಭಿವೃದ್ಧಿ ಹಂತದಲ್ಲಿದೆ. ಆಂಡ್ರಾಯ್ಡ್ ಬೀಟಾ ಆವೃತ್ತಿಯ 2.23.8.2 ಅಪ್ಡೇಟ್​ನಲ್ಲಿ ಪರೀಕ್ಷಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರು ಈ ಫೀಚರ್ಸ್‌ ಅನ್ನು ಬಳಕೆ ಮಾಡಬಹುದು ಎಂದು ತಿಳಿದುಬಂದಿದೆ.

ವಾಟ್ಸ್​ಆ್ಯಪ್​ನಲ್ಲಿ ಇರಲ್ಲ ಸ್ಕ್ಯಾಮ್ ಕರೆಗಳ ಕಿರಿ ಕಿರಿ:

ವಾಟ್ಸ್​ಆ್ಯಪ್ ಸದ್ಯದಲ್ಲೇ ತನ್ನ ಬಳಕೆದಾರರಿಗೆ ಅಪರಿಚಿತ ಸಂಖ್ಯೆಗಳಿಂದ ಬರುವ ಕರೆಯನ್ನು ಮ್ಯೂಟ್‌ ಮಾಡುವ ಸೌಲಭ್ಯವನ್ನು ನೀಡಲಿದೆ. ಈ ಫೀಚರ್‌ ಆಯ್ದ ಬೀಟಾ ಟೆಸ್ಟರ್‌ಗಳಿಗೆ ಮಾತ್ರ ಲಭ್ಯವಿದೆ. ಕೆಲವೆ ದಿನಗಳಲ್ಲಿ ಆಂಡ್ರಾಯ್ಡ್‌ ಬಳಕೆದಾರರಿಗೆ ಸಿಗಲಿದೆ. ಇದರ ಮೂಲಕ ನಿಮ್ಮ ಫೋನ್‌ಗಳಿಗೆ ವಾಟ್ಸ್​ಆ್ಯಪ್ ಮೂಲಕ ಬರುವ ಅಪರಿಚಿತ ಕರೆಗಳನ್ನು ಸೈಲೆನ್ಸ್‌ ಮಾಡಬಹುದು. WABetaInfo ತಾಣದಲ್ಲಿ ಪ್ರಕಟವಾದ ಮಾಹಿತಿ ಪ್ರಕಾರ ಈ ಫೀಚರ್‌ ವಾಟ್ಸ್​ಆ್ಯಪ್ ಆಂಡ್ರಾಯ್ಡ್‌ 2.23.10.7 ಅಪ್‌ಡೇಟ್‌ನಲ್ಲಿ ದೊರಕಲಿದೆ. ಇದಕ್ಕಾಗಿ ಸೆಟ್ಟಿಂಗ್‌> ಪ್ರೈವೇಸಿ ಮೆನುಗೆ ಹೋಗಿ ಕ್ಲಿಕ್‌ ಮಾಡಬೇಕು. ಇದರಿಂದ ಸ್ಪ್ಯಾಮ್‌ ಕರೆಗಳನ್ನು ನಿಯಂತ್ರಿಸಲು ವಾಟ್ಸ್​ಆ್ಯಪ್ ಬಳಕೆದಾರರಿಗೆ ಸಾಧ್ಯವಾಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ