AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Voice Status: ವಾಯ್ಸ್ ಸ್ಟೇಟಸ್: ವಾಟ್ಸ್​ಆ್ಯಪ್ ಆಂಡ್ರಾಯ್ಡ್ ಬಳಕೆದಾರರಿಗೆ ಬರುತ್ತಿದೆ ಅಚ್ಚರಿಯ ಫೀಚರ್

ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಿತ್ತು. ಇದೀಗ ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ.

WhatsApp Voice Status: ವಾಯ್ಸ್ ಸ್ಟೇಟಸ್: ವಾಟ್ಸ್​ಆ್ಯಪ್ ಆಂಡ್ರಾಯ್ಡ್ ಬಳಕೆದಾರರಿಗೆ ಬರುತ್ತಿದೆ ಅಚ್ಚರಿಯ ಫೀಚರ್
WhatsApp
TV9 Web
| Updated By: Digi Tech Desk|

Updated on:Jan 19, 2023 | 11:34 AM

Share

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಕಳೆದ ವರ್ಷ ಪರಿಚಯಿಸಿದ ಫೀಚರ್​ಗಳಿಗೆ ಲೆಕ್ಕವಿಲ್ಲ. 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡ ವಾಟ್ಸ್​ಆ್ಯಪ್ ಈ ವರ್ಷ ಕೂಡ ವಿಶೇಷ ಅಪ್ಡೆಟ್​​​ಗಳನ್ನು ಪರಿಚಯಿಸುವಲ್ಲಿ ಕೆಸಲ ಮಾಡುತ್ತಿದೆ. ಇದಕ್ಕಾಗಿಯೆ ವಾಟ್ಸ್​ಆ್ಯಪ್ ಅನ್ನು ಇಂದು ವಿಶ್ವದಲ್ಲಿ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಹೆಚ್ಚಾಗಿ ಮೊಬೈಲ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುವ ವಾಟ್ಸ್​ಆ್ಯಪ್ (WhatsApp) ಇದೀಗ ತನ್ನ ಆಂಡ್ರಾಯ್ಡ್ ಬಳಕೆದಾರರಿಗೆ ಉಪಯುಕ್ತವಾದ ಆಯ್ಕೆಯನ್ನು ನೀಡುತ್ತಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ (Voice Message) ಅನ್ನು ಹಂಚಿಕೊಳ್ಳಬಹುದು.

ವಾಯ್ಸ್ ನೋಟ್ ಅನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ. ಈಗಾಗಲೇ ಇದು ಆಂಡ್ರಾಯ್ಡ್ ಬೇಟಾ ವರ್ಷನ್​ನಲ್ಲಿ ಲಭ್ಯವಾಗಿದೆ. ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಿತ್ತು. ಇದೀಗ ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ. 30 ಸೆಕೆಂಡ್​ಗಳ ಕಾಲ ಇದು ಇರಲಿದೆ. ಇದಕ್ಕಾಗಿ ಬರಹಗಳನ್ನು ಹಂಚಿಕೊಳ್ಳಬಹುದಾದ ಜಾಗದಲ್ಲಿ ಮೈಕ್ರೊ ಫೋನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಇಲ್ಲಿ ಮೈಕ್ರೊ ಫೋನ್ ಮೇಲೆ ಕ್ಲಿಕ್ ಮಾಡುವ ಮೂಲಕ ವಾಯ್ಸ್ ಸ್ಟೇಟಸ್ ಶೇರ್ ಮಾಡಬಹುದು. ಇದು ಎಂಡ್-ಟು-ಎಂಡ್ ಎನ್​ಕ್ರಿಪ್ಟೆಡ್ ಆಗಿದೆ.

Twitter: ಪರಿವರ್ತನೆ ಹಾದಿಯಲ್ಲಿ ಟ್ವಿಟರ್; ಹೊಸ ಫೀಚರ್ಸ್ ಘೋಷಿಸಿದ ಎಲಾನ್ ಮಸ್ಕ್

ಇದನ್ನೂ ಓದಿ
Image
Twitter Bird: ಪೀಠೋಪಕರಣ ಸೇರಿದಂತೆ ಟ್ವಿಟರ್ ಪ್ರಧಾನ ಕಚೇರಿ ವಸ್ತುಗಳ ಹರಾಜು; ಹಕ್ಕಿ ಪ್ರತಿಮೆಗೆ 1 ಲಕ್ಷ ಡಾಲರ್
Image
IPL 2023: ಈ ಬಾರಿ ಐಪಿಎಲ್ ಉಚಿತ ಪ್ರಸಾರ: ವರದಿ
Image
PLI scheme: ಐಟಿ ಸರ್ವರ್, ಹಾರ್ಡ್​ವೇರ್​ಗೂ ಪಿಎಲ್​ಐ ಸ್ಕೀಮ್​; ಏನಿದು?
Image
Twitter: ಆದಾಯಕ್ಕಾಗಿ ಯೂಸರ್ ನೇಮ್​ ಮಾರಾಟಕ್ಕೆ ಮುಂದಾದ ಟ್ವಿಟರ್; ಹೆಚ್ಚಾಗುತ್ತಿದೆ ಹ್ಯಾಕ್ ಆಗುವ ಆತಂಕ

ಐದು ಚಾಟ್‌ ಪಿನ್‌ ಮಾಡುಬಹುದು:

ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಪ್ರಮುಖ ಐದು ಚಾಟ್‌ಗಳನ್ನು ಪಿನ್‌ ಮಾಡುವಂತಹ ಆಯ್ಕೆ ನೀಡಲು ಮುಂದಾಗಿದೆ. ಈ ಫೀಚರ್ ಮೂಲಕ ನೀವು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಚಾಟ್‌ ಮಾಡುವ ಪ್ರಮುಖ ಐದು ಚಾಟ್‌ಗಳನ್ನು ಪಿನ್‌ ಮಾಡಬಹುದಾಗಿದೆ. ಈ ಚಾಟ್‌ಗಳು ನಿಮ್ಮ ವಾಟ್ಸ್​ಆ್ಯಪ್ ಚಾಟ್‌ನ ಮೇಲ್ಭಾಗದಲ್ಲಿ ಗೋಚರಿಸುತ್ತದೆ. ಸದ್ಯದಲ್ಲೇ ಈ ಆಯ್ಕೆ ಆಂಡ್ರಾಯ್ಡ್, ಐಒಎಸ್ ಮತ್ತು ವೆಬ್ ಬಳಕೆದಾರರಿಗೆ ಸಿಗಲಿದೆಯಂತೆ. ಸದ್ಯ ಈ ಹೊಸ ಫೀಚರ್ಸ್‌ ಬಗ್ಗೆ ವಾಬೇಟಾಇನ್ಫೋ ವೆಬ್‌ಸೈಟ್‌ ವರದಿ ಮಾಡಿದೆ. ಪ್ರಸ್ತುತ, ವಾಟ್ಸ್​ಆ್ಯಪ್ ಬಳಕೆದಾರರು ತಮ್ಮ ಚಾಟ್‌ ವಿಂಡೋದ ಮೇಲೆ ಕೇವಲ ಮೂರು ಚಾಟ್‌ಗಳನ್ನು ಮಾತ್ರ ಪಿನ್ ಮಾಡಬಹುದು. ಆದರೆ ಹೊಸ ಆಯ್ಕೆಯಲ್ಲಿ ನೀವು ಐದು ಚಾಟ್‌ಗಳನ್ನು ಪಿನ್‌ ಮಾಡುವುದಕ್ಕೆ ಅವಕಾಶ ಸಿಗಲಿದೆ.

ಇದರ ಜೊತೆಗೆ ವಾಟ್ಸ್​ಆ್ಯಪ್ ತನ್ನ ಡೆಸ್ಕ್​ಟಾಪ್ ಬಳಕೆದಾರರಿಗೆ ಸ್ಟೇಟಸ್ ಬಗ್ಗೆ ರಿಪೋರ್ಟ್ ಮಾಡುವ ಆಯ್ಕೆಯನ್ನು ನೀಡಲು ಮುಂದಾಗಿದೆ. ಈಗಾಗಲೇ ಬಳಕೆದಾರರು ಮೆಸೇಜ್ ಮಾಡುವುದರಲ್ಲಿ ಈ ಫೀಚರ್ ನೀಡಿದೆ. ನಿಮ್ಮ ಕಾಂಟೆಕ್ಟ್​ನಲ್ಲಿರುವ ವ್ಯಕ್ತಿಯು ಅಶ್ಲೀಲ ವಿಡಿಯೊವನ್ನು ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದರೆ ಅಥವಾ ಜನರ ಭಾವನೆಗಳಿಗೆ ಹಾನಿ ಮಾಡುವ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ವಿಷಯಗಳಲ್ಲಿ ಸ್ಟೇಟಸ್​ನಲ್ಲಿ ಶೇರ್ ಮಾಡಿದ್ದರೆ ಈ ಕುರಿತು ರಿಪೋರ್ಟ್ ಮಾಡಬಹುದು. ಹೊಸ ಡಿವೈಸ್‌ಗಳಿಗೆ ಲಾಗಿನ್‌ ಮಾಡುವಾಗ ಉತ್ತಮ ಭದ್ರತೆಯನ್ನು ನೀಡಲು ವಾಟ್ಸ್​ಆ್ಯಪ್ ಮುಂದಾಗಿದ್ದು, ಹೊಸ ಪರಿಶೀಲನಾ ಕೋಡ್ ಅನ್ನು ನಮೂದಿಸುವ ಮೂಲಕವೇ ಹೊಸ ಡಿವೈಸ್‌ನಲ್ಲಿ ಲಾಗ್‌ ಇನ್ ಪ್ರಕ್ರಿಯೆಯಲ್ಲಿ ತೊಡಗಬಹುದು ಎಂದು ತಿಳಿಸಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:15 am, Thu, 19 January 23

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ