AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡುವುದು ಹೇಗೆ ಗೊತ್ತೇ?

WhatsApp Edit Sent Message: ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡುವುದು ಹೇಗೆ ಗೊತ್ತೇ?
WhatsApp New Feature
Vinay Bhat
|

Updated on: Mar 28, 2023 | 12:31 PM

Share

ಮೆಟಾ (Meta) ಒಡೆತನದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಹೀಗಾಗಿಯೇ ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ತಿಂಗಳು ಒಂದಲ್ಲ ಒಂದು ಹೊಸ ಅಪ್ಡೇಟ್ ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಸಾಮಾನ್ಯವಾಗಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು ಆದರೆ, ಎಡಿಟ್ ಮಾಡುವಂತಹ ಆಯ್ಕೆ ಇಲ್ಲ. ಇದನ್ನು ಗಮನಿಸಿರುವ ಸಂಸ್ಥೆ ಇದೀಗ ”ಎಡಿಟ್ ಸೆಂಟ್ ಮೆಸೇಜ್” (Edit Sent Message) ಎಂಬ ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ.

ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ (Edit Message) ಮಾಡುವಂತಹ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

Infinix Hot 30i: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ರಿಲೀಸ್ ಆಗಿದೆ ಹೊಸ ಸ್ಮಾರ್ಟ್​ಫೋನ್: ದಂಗಾದ ಶವೋಮಿ, ರಿಯಲ್ ಮಿ

ಇದನ್ನೂ ಓದಿ
Image
Asus ROG Phone 7: ಶೀಘ್ರದಲ್ಲೇ ಮಾರುಕಟ್ಟೆಗೆ ಬರುತ್ತಿದೆ ಹೊಸ ಏಸಸ್ ಫೋನ್
Image
JIO New Plans: ಐಪಿಎಲ್ 2023 ಆಗಮಿಸುತ್ತಿದ್ದಂತೆ ಜಿಯೋದಿಂದ ಬಂಪರ್ ಆಫರ್ ಘೋಷಣೆ
Image
Nothing Phone 2: ಸ್ಟೈಲಿಶ್ ಫೋನ್ ಪ್ರಿಯರಿಗಾಗಿ ಬರುತ್ತಿದೆ ಹೊಸ ನಥಿಂಗ್ ಫೋನ್
Image
Tech Tips: ಇನ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಅನ್ನು ಕೆಲವೇ ಜನರಿಗೆ ಕಾಣುವಂತೆ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್

ಎಲ್ಲಾ ವಾಟ್ಸ್​ಆ್ಯಪ್​​ ಸಂಬಂಧಿತ ಬೆಳವಣಿಗೆಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ Wabetainfo ಈ ವೈಶಿಷ್ಟ್ಯವನ್ನು ಗುರುತಿಸಿದೆ. ಇಲ್ಲಿ ಗಮನಿಸ ಬೇಕಾದ ಸಂಗತಿ ಎಂದರೆ, ವಾಟ್ಸ್​ಆ್ಯಪ್​ನಲ್ಲಿ ನೀವು ಮೆಸೇಜ್ ಅನ್ನು ಡಿಲೀಟ್ ಮಾಡಿದರೆ ಹೇಗೆ ಚಾಟ್​ನಲ್ಲಿ ಮಾಹಿತಿ ನೀಡುತ್ತದೆಯೊ ಅದೇರೀತಿ ಎಡಿಟ್ ಮಾಡಿದರೆ ಕೂಡ ಕಳುಹಿಸಿದವರಿಗೆ ತಿಳಿಯುತ್ತದೆ. ಈ ಎಡಿಟ್ ಬಟನ್ ವೈಶಿಷ್ಟ್ಯದ ಮೇಲೆ ವಾಟ್ಸ್​ಆ್ಯಪ್​​ ಐದು ವರ್ಷಗಳ ಹಿಂದೆಯೇ ಗಮನಹರಿಸಲು ಆರಂಭಿಸಿದ್ದರೂ ಟ್ವಿಟರ್​ನಲ್ಲಿ ಈ ಕುರಿತು ವರದಿ ಬಂದ ಬೆನ್ನಿಗೆ ಅದನ್ನು ಕೈಬಿಟ್ಟಿತ್ತು.

ಐದು ವರ್ಷಗಳ ನಂತರ ಮತ್ತೆ ಎಡಿಟ್ ಬಟನ್ ಕುರಿತು ವಾಟ್ಸ್​ಆ್ಯಪ್​​ ಪರೀಕ್ಷಿಸುತ್ತಿದೆ. ಬಳಕೆದಾರರು ಕಳುಹಿಸಿದ ಸಂದೇಶವನ್ನು ಲಾಂಗ್ ಪ್ರೆಸ್ ಮೂಲಕ ಆಯ್ಕೆ ಮಾಡಿದಾಗ, ಸಂದೇಶವನ್ನು ನಕಲಿಸು(ಕಾಪಿ), ಫಾರ್ವರ್ಡ್ ಆಯ್ಕೆಯೊಂದಿಗೆ ಎಡಿಟ್ ಆಯ್ಕೆಯೂ ಗೋಚರಿಸಲಿದೆ. ಎಡಿಟ್ ಬಟನ್ ಆಯ್ಕೆ ಮಾಡಿದ ಬಳಿಕ ಕಳುಹಿಸಲಾದ ಸಂದೇಶದಲ್ಲಿ ಅಕ್ಷರ ದೋಷವಿದ್ದರೆ, ಅದನ್ನು ಸರಿಪಡಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ