AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಸದ್ದಿಲ್ಲದೆ ಗ್ರೂಪ್​ನಲ್ಲಿ ಅಚ್ಚರಿ ಫೀಚರ್ ಪರಿಚಯಿಸುತ್ತಿದೆ ವಾಟ್ಸ್​ಆ್ಯಪ್: ಬಳಕೆದಾರರು ಫುಲ್ ಶಾಕ್

ಇದೀಗ ವಾಟ್ಸ್​ಆ್ಯಪ್​ ಒಂದು ಹೆಜ್ಜೆ ಮುಂದಿಟ್ಟಿದ್ದು ಮತ್ತೊಂದು ಉಪಯುಕ್ತವಾದ ಹೊಸ ಆಯ್ಕೆ ನೀಡಲು ಮುಂದಾಗಿದೆ. ಅದು ವಾಟ್ಸ್​ಆ್ಯಪ್​​​ ಗ್ರೂಪ್​ನಲ್ಲಿ (WhatsApp Group) ಎಂಬುದು ವಿಶೇಷ.

WhatsApp: ಸದ್ದಿಲ್ಲದೆ ಗ್ರೂಪ್​ನಲ್ಲಿ ಅಚ್ಚರಿ ಫೀಚರ್ ಪರಿಚಯಿಸುತ್ತಿದೆ ವಾಟ್ಸ್​ಆ್ಯಪ್: ಬಳಕೆದಾರರು ಫುಲ್ ಶಾಕ್
WhatsApp
TV9 Web
| Edited By: |

Updated on: Mar 10, 2022 | 2:32 PM

Share

ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ಇಂದು ದೊಡ್ಡ ಮಟ್ಟದಲ್ಲಿ ಯಶಸ್ಸು ಸಾಧಿಸಿದೆ ಎಂದರೆ ಪ್ರಮುಖ ಕಾರಣ ಅದು ನೀಡಿರುವ ಫೀಚರ್ಸ್. ಬಳಕೆದಾರರ ಮನಸ್ಥಿತಿಯನ್ನು ಅರ್ಥಹಿಸಿ ಅವರ ಅನುಕೂಲಕ್ಕೆ ತಕ್ಕಂತೆ ಹೊಸ ಹೊಸ ಅಪ್ಡೇಟ್​ಗಳನ್ನು ನೀಡುತ್ತಲೇ ಇದೆ. ಇದೀಗ ವಾಟ್ಸ್​ಆ್ಯಪ್​ ಒಂದು ಹೆಜ್ಜೆ ಮುಂದಿಟ್ಟಿದ್ದು ಮತ್ತೊಂದು ಉಪಯುಕ್ತವಾದ ಹೊಸ ಆಯ್ಕೆ ನೀಡಲು ಮುಂದಾಗಿದೆ. ಅದು ವಾಟ್ಸ್​ಆ್ಯಪ್​​​ ಗ್ರೂಪ್​ನಲ್ಲಿ (WhatsApp Group) ಎಂಬುದು ವಿಶೇಷ. ಹೌದು, ಹೆಚ್ಚಿನವರು ಪ್ರಮುಖ ವಿಚಾರಗಳ ನಡುವೆ ವಾಟ್ಸ್​ಆ್ಯಪ್​​​ ಗ್ರೂಪ್‌ಗಳಲ್ಲಿ ಚರ್ಚೆ ನಡೆಸುವುದು ಕಾಮನ್. ಕೆಲವೊಮ್ಮೆ ಈ ವಾದಗಳು ಯಾವುದು ಸರಿ ಯಾವುದು ತಪ್ಪು ಅನ್ನೊ ಚರ್ಚೆ ಹುಟ್ಟುಹಾಕುತ್ತದೆ. ಇದಕ್ಕಾಗಿಯೇ ಇದೀಗ ವಾಟ್ಸ್​ಆ್ಯಪ್​​​ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಪೋಲ್‌ ಫೀಚರ್‌ ಪರಿಚಯಿಸಲು ಮುಂದಾಗಿದೆ. ಸದ್ಯಕ್ಕೆ ಈ ಫೀಚರ್‌ ಬೀಟಾ ಆವೃತ್ತಿಯಲ್ಲಿ (Beta Version) ಲಭ್ಯವಿದೆ.

ವಾಟ್ಸ್​ಆ್ಯಪ್​ನ ಹೊಸ ಅಪ್‌ಡೇಟ್ 22.6.0.70 ನಲ್ಲಿ ಈ ಫೀಚರ್ಸ್‌ ಬರಲಿದೆ ಎಂದು ವರದಿಯಾಗಿದೆ. ಇದು ವಾಟ್ಸ್​ಆ್ಯಪ್​​​ ಗ್ರೂಪ್‌ನಲ್ಲಿ ಸಮೀಕ್ಷೆಗಳನ್ನು ಕ್ರಿಯೆಟ್‌ ಮಾಡಲು ಅನುಕೂಲವಾಗಲಿದೆ ಎಂದು ಹೇಳಲಾಗಿದೆ. ಒಂದು ವಿಚಾರದ ಕುರಿತು ಮತ ಮತ ಚಲಾವಣೆಗೆ ಅವಕಾಶವಿದೆ. ಈ ಮತ ಚಲಾವಣೆಯಲ್ಲಿ ಬಳಕೆದಾರರು ತಮ್ಮ ತಮ್ಮ ಆಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಿದೆ. ಬಳಿಕ ಪರ ವಿರೋಧ ಶೇಕಡಾವಾರು, ಪ್ರತಿಶತ ಸೇರಿದಂತೆ ಎಲ್ಲಾ ಮಾಹಿತಿಯನ್ನು ಪಡೆಯಬಹುದು.ಗುಂಪಿನಲ್ಲಿ ಮಾಡುವ ಮತ ಚಲಾವಣೆ ಎಂಡ್ ಟು ಎಂಡ್ ಎನ್‌ಕ್ರಿಪ್ಟೆಡ್‍‌ನೊಂದಿಗೆ ಸಂರಕ್ಷಿಸಲ್ಪಡುತ್ತದೆ.

ವಾಟ್ಸ್​ಆ್ಯಪ್​ನಲ್ಲಿ ಈಗಾಗಲೇ ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್, ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಆಯ್ಕೆ, ಕವರ್ ಫೋಟೋ ಸೇರಿದಂತೆ ಅನೇಕ ಫೀಚರ್ಸ್​​ ಪರೀಕ್ಷಾ ಹಂತದಲ್ಲಿದೆ. ಇದರ ಜೊತೆಗೆ ಮತ್ತೊಂದು ಹೊಸ ವಾಯ್ಸ್‌ ನೋಟ್‌ಗಳನ್ನು ರೆಕಾರ್ಡಿಂಗ್ ಮತ್ತು ಸೆಂಡ್‌ ಮಾಡುವುದನ್ನು ಇನ್ನಷ್ಟು ಸುಲಭಗೊಳಿಸುವ ಫೀಚರ್ ನೀಡಲು ಕೆಸಲ ಮಾಡುತ್ತಿದೆ. ವಾಯ್ಸ್‌ ಮೆಸೇಜ್‌ ಅನ್ನು ವೇಗವಾಗಿ ಕಳುಹಿಸುವುದಕ್ಕೆ ಇದು ಅನುಮತಿಸುತ್ತದೆ. ಈ ಫೀಚರ್ ಮೂಲಕ ನೀವು ಯಾವುದೇ ಮಾಹಿತಿಯನ್ನು ಬೇಕಿದ್ದರೂ ವಾಟ್ಸ್​ಆ್ಯಪ್​​ ವಾಯ್ಸ್‌ ಮೆಸೇಜ್‌ನಲ್ಲಿ ರೆಕಾರ್ಡ್‌ ಮಾಡಿ ಕಳುಹಿಸಬಹುದು. ಅಲ್ಲದೆ ವಾಯ್ಸ್‌ ನೋಟ್‌ ರೆಕಾರ್ಡಿಂಗ್ ಮಾಡುವಾಗ ಪಾಸ್‌ ಮಾಡುವ ಮತ್ತು ರಿಸ್ಟಾರ್ಟ್‌ ಮಾಡುವುದಕ್ಕೆ ಅವಕಾಶ ಸಿಗಲಿದೆ.

ವಾಟ್ಸ್​ಆ್ಯಪ್​​ನ ಈ ಹೊಸ ಫೀಚರ್ಸ್‌ನಲ್ಲಿ ವಾಯ್ಸ್‌ ನೋಟ್‌ ರೆಕಾರ್ಡಿಂಗ್ ಅನ್ನು ಪ್ರಾರಂಭಿಸಲು ಮತ್ತು ನೀವು ಕಳುಹಿಸುವ ಮೊದಲು ಅದನ್ನು ಸ್ಟಾಪ್‌ ಮಾಡಲು ನಿಮಗೆ ಅನುಮತಿಸುತ್ತದೆ. ಬಳಕೆದಾರರು ಬಟನ್ ಅನ್ನು ಹಿಡಿದಿಟ್ಟುಕೊಳ್ಳುವ ಬದಲು ಒಂದು ಕೈಯನ್ನು ಬಳಸದೆಯೇ ರೆಕಾರ್ಡ್ ಬಟನ್ ಅನ್ನು ಲಾಕ್ ಮಾಡಬಹುದು. ಅಲ್ಲದೆ ಯಾವುದೇ ಬಟನ್‌ ಟ್ಯಾಪ್‌ ಮಾಡದೆ ಲಾಂಗ್‌ ಮೆಸೇಜ್‌ಗಳನ್ನು ರೆಕಾರ್ಡ್ ಮಾಡಬಹುದು. ಇದರಿಂದ ವಾಯ್ಸ್‌ ಮೆಸೇಜ್‌ ರೆಕಾರ್ಡಿಂಗ್‌ ಅನ್ನು ವಿರಾಮಗೊಳಿಸಲು ಮತ್ತು ಧ್ವನಿ ರೆಕಾರ್ಡಿಂಗ್‌ಗಳಿಗೆ ಹಿಂತಿರುಗಲು ಈ ಫೀಚರ್ಸ್‌ ಮುಖ್ಯವಾಗಿದೆ. ಪ್ರಸ್ತುತ ಈ ಫೀಚರ್ಸ್‌ ಬೀಟಾ ವರ್ಷನ್‌ನಲ್ಲಿ ಲಭ್ಯವಿದೆ. ಸದ್ಯದಲ್ಲೇ ಇದು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯ ಆಗುವ ಸಾಧ್ಯತೆ ಇದೆ.

Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್‌ ಸೇವಿಂಗ್‌ ಡೇಸ್‌ ಸೇಲ್: ಈ ಬಾರಿ ನೀಡಿರುವ ಡಿಸ್ಕೌಂಟ್ ಅಷ್ಟಿಟ್ಟಲ್ಲ

Redmi Note 11 Pro Series: ಭಾರತದಲ್ಲಿ ಬಿಡುಗಡೆ ಆಗಿದೆ ಕಡಿಮೆ ಬೆಲೆಯ 108MP ಕ್ಯಾಮೆರಾದ ಹೊಸ ಫೋನ್: ಹೇಗಿದೆ?, ಯಾವುದು?

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ