WhatsApp New Features: ವಾಟ್ಸ್​ಆ್ಯಪ್​ನಲ್ಲಿ ಬಹುನಿರೀಕ್ಷಿತ ಫೀಚರ್: ಏನಿದು ಸ್ಪ್ಲಿಟ್ ವ್ಯೂ ಆಯ್ಕೆ?

WhatsApp: ವಾಟ್ಸ್​ಆ್ಯಪ್ ತನ್ನ ಟ್ಯಾಬ್ಲೆಟ್ ಯೂಸರ್ಸ್​ಗೆ ವಿಶೇಷ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ. ಅದುವೆ ಸ್ಪ್ಲಿಟ್ ವ್ಯೂ (split-view). ಈಗಾಗಲೇ ಈ ಆಯ್ಕೆ ಸ್ಮಾರ್ಟ್​ಫೋನ್​ಗಳಲ್ಲಿ ಇದೆ.

WhatsApp New Features: ವಾಟ್ಸ್​ಆ್ಯಪ್​ನಲ್ಲಿ ಬಹುನಿರೀಕ್ಷಿತ ಫೀಚರ್: ಏನಿದು ಸ್ಪ್ಲಿಟ್ ವ್ಯೂ ಆಯ್ಕೆ?
WhatsApp
Follow us
|

Updated on: Mar 05, 2023 | 12:27 PM

ವಾಟ್ಸ್​ಆ್ಯಪ್ (WhatsApp) ಕಳೆದ ವರ್ಷದಂತೆ ಈ ವರ್ಷ ಕೂಡ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ದಿನದಿಂದ ದಿನಕ್ಕೆ ಬಳಕೆದಾರರನ್ನು ಹೆಚ್ಚಿಸುತ್ತಿರುವ ಮೆಟಾ ಒಡೆತನದ ಪ್ರಸಿದ್ಧ ಆ್ಯಪ್ ಕೇವಲ ಮೊಬೈಲ್ ಬಳಕೆದಾರರಿಗೆ ಮಾತ್ರವಲ್ಲದೆ ವೆಬ್ ಮತ್ತು ಟ್ಯಾಬ್ಲೆಟ್ ಬಳಕೆದಾರರಿಗೆ ಕೂಡ ವಿನೂತನ ಫೀಚರ್​ಗಳನ್ನು ಪರಿಚಯಿಸುತ್ತಿದೆ. ಅದರಂತೆ ಇದೀಗ ತನ್ನ ಟ್ಯಾಬ್ಲೆಟ್ ಯೂಸರ್ಸ್​ಗೆ ವಿಶೇಷ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ. ಅದುವೆ ಸ್ಪ್ಲಿಟ್ ವ್ಯೂ (split-view). ಈಗಾಗಲೇ ಈ ಆಯ್ಕೆ ಸ್ಮಾರ್ಟ್​ಫೋನ್​ಗಳಲ್ಲಿ ಇದೆ. ಇದರ ಮೂಲಕ ಒಂದೇ ಮೊಬೈಲ್‌ನಲ್ಲಿ ಎರಡೆರಡು ಆ್ಯಪ್‌ಗಳನ್ನು ಏಕಕಾಲದಲ್ಲಿ ಬಳಕೆ ಮಾಡಬಹುದು. ಇದೀಗ ಈ ಫೀಚರ್ ಅನ್ನು ವಾಟ್ಸ್​ಆ್ಯಪ್ ತನ್ನ ಟ್ಯಾಬ್ಲೆಟ್ (Tablet) ಬಳಕೆದಾರರಿಗೆ ನೀಡಲು ಮುಂದಾಗಿದೆ.

ಸ್ಪ್ಲಿಟ್ ವ್ಯೂ ಫೀಚರ್ಸ್‌ ಮೂಲಕ ಒಮ್ಮೆಲೆ ಒಂದೇ ಡಿಸ್‌ಪ್ಲೇನಲ್ಲಿ ಎರಡು ಆ್ಯಪ್​ಗಳನ್ನು ತೆರೆಯಲು ಅವಕಾಶ ನೀಡುತ್ತದೆ. ಇದು ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ. ನೀವು ಒಬ್ಬರ ಜೊತೆ ಚಾಟಿಂಗ್​ನಲ್ಲಿ ನಿರತವಾಗುವುದರ ಜೊತೆಗೆ ಇನ್ನೊಂದು ಬದಿಯಲ್ಲಿ ವಾಟ್ಸ್​ಆ್ಯಪ್​ನ ಇತರೆ ಫೀಚರ್ಸ್‌ ಅನ್ನು ಸಹ ಬಳಕೆ ಮಾಡಿಕೊಳ್ಳಬಹುದು. ಸ್ಪ್ಲಿಟ್ ವ್ಯೂ ಆಯ್ಕೆಯನ್ನು ಸದ್ಯಕ್ಕೆ ಪರೀಕ್ಷಿಸಲಾಗುತ್ತಿದ್ದು, ಟ್ಯಾಬ್ಲೆಟ್‌ಗಳಿಗಾಗಿ ಆಂಡ್ರಾಯ್ಡ್ ಬೀಟಾದಲ್ಲಿ ಇದನ್ನು ಹೊರತರಲು ಯೋಜಿಸಲಾಗುತ್ತಿದೆ. WABetaInfo ಈ ಬಗ್ಗೆ ವರದಿ ಮಾಡಿದ್ದು, ಆಂಡ್ರಾಯ್ಡ್ ಟ್ಯಾಬ್ಲೆಟ್ ಬಳಕೆದಾರರು ವಾಟ್ಸ್​ಆ್ಯಪ್​ನ ಸ್ಪ್ಲಿಟ್ ವ್ಯೂ ಫೀಚರ್ಸ್‌ ಅನ್ನು ಬಳಕೆ ಮಾಡಲು ಅನುಮತಿಸಲಾಗುತ್ತದೆ ಎಂದು ಉಲ್ಲೇಖಿಸಿದೆ.

ಈ ಆಯ್ಕೆ ಬಳಕೆದಾರರಿಗೆ ಲಭ್ಯವಾದರೆ ವಾಟ್ಸ್​ಆ್ಯಪ್ ಚಾಟ್‌ನಿಂದ ನಿರ್ಗಮಿಸುವ ಅಗತ್ಯವಿಲ್ಲದೇ ಚಾಟ್‌ ಪಟ್ಟಿಯನ್ನು ತ್ವರಿತವಾಗಿ ಸ್ಕ್ರೋಲ್ ಮಾಡುವ ಮೂಲಕ ಚಾಟ್‌ಗಳನ್ನು ಕಂಟ್ರೋಲ್‌ ಮಾಡಲು ಇದು ಸಹಾಯ ಮಾಡುತ್ತದೆ. ಇದರಿಂದಾಗಿ ಬಳಕೆದಾರರಿಗೆ ಸಮಯದ ವ್ಯರ್ಥವಾಗದೆ ಸುಲಭವಾಗಿ ಹಾಗೂ ವೇಗವಾಗಿ ಬೇಕಾದ ಚಾಟ್​ನಲ್ಲಿ ಸಕ್ರಿಯವಾಗಬಹುದು. ಟ್ಯಾಬ್ಲೆಟ್ ಬಳಿಕ ಈ ಆಯ್ಕೆ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೂ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
iPhone 13 Offer: ಹೋಳಿ ಹಬ್ಬಕ್ಕೆ ಬಂಪರ್ ಆಫರ್: ಐಫೋನ್ ಖರೀದಿಗೆ ಇದಕ್ಕಿಂತ ಒಳ್ಳೆಯ ಸಮಯ ಬರಲ್ಲ
Image
Smartphones: ಹುಬ್ಬೇರಿಸುವಂತಹ ಫೀಚರ್​ಗಳಿದ್ದರೂ ಮಾರುಕಟ್ಟೆಯಲ್ಲಿ ಫೇಲ್ ಆದ ಸ್ಮಾರ್ಟ್​ಫೋನ್​ಗಳು ಯಾವುವು ಗೊತ್ತೇ?
Image
POCO C55: ಕೇವಲ 8,999 ರೂ.: ಕಳೆದ ವಾರ ಬಿಡುಗಡೆ ಆದ ಈ ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್
Image
Amazon, Flipkart Holi sale 2023: ಅಮೆಜಾನ್, ಫ್ಲಿಪ್​ಕಾರ್ಟ್​ನಲ್ಲಿ ಹೋಳಿ ಸೇಲ್: ಅನೇಕ ಪ್ರಾಡಕ್ಟ್ ಮೇಲೆ ಬಂಪರ್ ಡಿಸ್ಕೌಂಟ್

Tech Tips: ಇಂಟರ್ನೆಟ್ ಇಲ್ಲದೆಯೂ ಇಮೇಲ್ ಕಳುಹಿಸುವ ಟ್ರಿಕ್ ಗೊತ್ತೇ?: ಇಲ್ಲಿದೆ ನೋಡಿ

ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಶೆಡ್ಯುಲ್‌ ಫೀಚರ್:

ವಾಟ್ಸ್​ಆ್ಯಪ್​ ಇದೀಗ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಬಳಕೆದಾರರು ಮುಂಚಿತವಾಗಿಯೇ ಕರೆಯನ್ನು ನಿಗದಿಪಡಿಸುವ ಸಮಯಕ್ಕೆ ಮಾಡಬಹುದಾಗಿದೆ. ಈ ಮೂಲಕ ಪ್ರಮುಖ ಸಂಭಾಷಣೆಯನ್ನು ಯಾರೂ ಸಹ ಮಿಸ್‌ ಮಾಡಿಕೊಳ್ಳುವ ಸಂಭವ ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಯಾರನ್ನಾದರೂ ಕೆಲಸಕ್ಕೆ ನೇಮಿಸಿಕೊಳ್ಳಲು ಸಂದರ್ಶನ ಮಾಡಬೇಕು ಎಂದಿದ್ದರೆ, ಈ ವೇಳೆ ಸಂದರ್ಶಕರು ಸಂದರ್ಶನಕ್ಕೆ ಹಾಜರಾಗುವ ವ್ಯಕ್ತಿ ಜೊತೆ ಯಾವ ಸಮಯದಲ್ಲಿ ಮಾತನಾಡಬೇಕು ಎಂಬುದನ್ನು ಶೆಡ್ಯುಲ್‌ ಮಾಡಬಹುದು.

ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಿ:

ವಾಟ್ಸ್​ಆ್ಯಪ್ ಮತ್ತೊಂದು ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ. ಅದುವೇ ಎಡಿಟ್ ಮೆಸೇಜ್ ಆಯ್ಕೆ. ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ನಿಮಗೆ ಸಿಗಲಿದೆ. ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು