WhatsApp: ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಬೇಕಾದ ಚಾಟ್ ಲಾಕ್ ಮಾಡಬಹುದು, ಹೈಡ್ ಮಾಡಬಹುದು: ಹೇಗೆ ಗೊತ್ತೇ?

WhatsApp New Features: ವಾಟ್ಸ್​ಆ್ಯಪ್ ಒಂದು ಘೋಷಣೆ ಮಾಡಿದ್ದು ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ ಮಾಡಬಹುದು ಎಂದು ಹೇಳಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಬೇಕಾದ ಚಾಟ್ ಲಾಕ್ ಮಾಡಬಹುದು, ಹೈಡ್ ಮಾಡಬಹುದು: ಹೇಗೆ ಗೊತ್ತೇ?
WhatsApp
Follow us
|

Updated on:Apr 04, 2023 | 1:33 PM

ಮೆಟಾ (Meta) ಒಡೆತನದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಅನ್ನು ಇಂದು ಬಳಕೆ ಮಾಡುವವರ ಸಂಖ್ಯೆ ಕೇವಲ ಭಾರತದಲ್ಲೇ 550 ಮಿಲಿಯನ್ ದಾಟಿದೆ. ಪ್ರತಿ ತಿಂಗಳು ಒಂದಲ್ಲ ಒಂದು ಹೊಸ ಅಪ್ಡೇಟ್ ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ (WhatsApp) ಸಾಲು ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ನೂತನ ಆಯ್ಕೆಗಳನ್ನು ಬಿಡುಗಡೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಮುಂದಿನ ದಿನಗಳಲ್ಲಿ ಊಹಿಸಲಾಗದ ಫೀಚರ್​ಗಳು ಬರಲಿದೆ. ಆಂಡ್ರಾಯ್ಡ್ (Android), ಐಒಎಸ್, ವೆಬ್, ಟ್ಯಾಬ್ಲೆಟ್ ಬಳಕೆದಾರರಿಗೆ ಕೂಡ ಹೊಸ ಅಪ್ಡೇಟ್ ನೀಡುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೀಗಿರುವಾಗ ವಾಟ್ಸ್​ಆ್ಯಪ್ ಒಂದು ಘೋಷಣೆ ಮಾಡಿದ್ದು ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ ಮಾಡಬಹುದು ಎಂದು ಹೇಳಿದೆ.

ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ವಾಟ್ಸ್​ಆ್ಯಪ್​ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತಂತೆ. ಹೀಗಿದ್ದಾಗ ಇದನ್ನು ಬೇರೆ ಯಾರೂ ಸಹ ವೀಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಈ ಆಯ್ಕೆ ಚಾಟ್​ನ ಕಾಂಟೆಕ್ಟ್ ಅಥವಾ ಗ್ರೂಪ್​ನ ಇನ್​ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್​ಗೆ ಹೋಗುತ್ತದೆ. ಸದ್ಯಕ್ಕೆ ಈ ಫೀಚರ್ಸ್‌ ಅಭಿವೃದ್ಧಿ ಹಂತದಲ್ಲಿದೆ. ಆಂಡ್ರಾಯ್ಡ್ ಬೀಟಾ ಆವೃತ್ತಿಯ 2.23.8.2 ಅಪ್ಡೇಟ್​ನಲ್ಲಿ ಪರೀಕ್ಷಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರು ಈ ಫೀಚರ್ಸ್‌ ಅನ್ನು ಬಳಕೆ ಮಾಡಬಹುದು ಎಂದು ತಿಳಿದುಬಂದಿದೆ.

Tech Tips: ಮೊಬೈಲ್​ನಲ್ಲಿ ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್‌ ಸೆಂಡ್ ಮಾಡುವುದು ಹೇಗೆ?

ಇದನ್ನೂ ಓದಿ
Image
WWDC 2023: ಐಫೋನ್​ಗೆ ಹೊಸ iOS ಘೋಷಿಸಲಿದೆ ಆ್ಯಪಲ್
Image
Tecno Phantom V Fold: ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದೆ ಮತ್ತೊಂದು ಫೋಲ್ಡಿಂಗ್ ಫೋನ್
Image
OnePlus Nord CE 3 Lite: ಭಾರತದಲ್ಲಿಂದು 108MP ಕ್ಯಾಮೆರಾದ ಬಹುನಿರೀಕ್ಷಿತ ನಾರ್ಡ್ CE 3 ಲೈಟ್ ಬಿಡುಗಡೆ
Image
Nokia C12 Plus: ಭಾರತದಲ್ಲಿ ಕೇವಲ 7,999 ರೂ. ಗೆ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ನೋಕಿಯಾ: ಭರ್ಜರಿ ಸೇಲ್ ಖಚಿತ

ಐಒಎಸ್​ನಲ್ಲಿ ಎಡಿಟ್ ಸೆಂಟ್ ಮೆಸೇಜ್ ಆಯ್ಕೆ:

ವಾಟ್ಸ್​ಆ್ಯಪ್​ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು ಆದರೆ, ಎಡಿಟ್ ಮಾಡುವಂತಹ ಆಯ್ಕೆ ಇಲ್ಲ. ಇದನ್ನು ಗಮನಿಸಿರುವ ಸಂಸ್ಥೆ ಇದೀಗ ”ಎಡಿಟ್ ಸೆಂಟ್ ಮೆಸೇಜ್” (Edit Sent Message) ಎಂಬ ನೂತನ ಅಪ್ಡೇಟ್ ಪರಿಚಯಿಸಲು ಮುಂದಾಗಿದೆ. ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡುವಂತಹ ಆಯ್ಕೆ ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ. ಈ ಆಯ್ಕೆಯ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ವಾಟ್ಸ್​ಆ್ಯಪ್​ನಿಂದ ಬರುತ್ತೆ ಮೆಸೇಜ್:

ಬಳಕೆದಾರರಿಗೆ ಬಹಳ ಉಪಯುಕ್ತವಾದ ಫೀಚರ್ ಪರಿಚಯಿಸುವತ್ತ ವಾಟ್ಸ್​ಆ್ಯಪ್ ಕೆಲಸ ಮಾಡುತ್ತಿದೆ. ಹೊಸ ಆಯ್ಕೆಯ ಮೂಲಕ ವಾಟ್ಸ್​ಆ್ಯಪ್ ನಿಮಗೆ ವಿಶೇಷವಾದ ಮೆಸೇಜ್​ಗಳನ್ನು ಕಳುಹಿಸಲಿದೆ. ಅಂದರೆ ವಾಟ್ಸ್​ಆ್ಯಪ್ ತನ್ನ ಬಳಕೆದಾರರೊಂದಿಗೆ ಅಧಿಕೃತ ಚಾಟ್ ಅನ್ನು ಪ್ರಾರಂಭಿಸಲಿದೆ. ಅಂದರೆ ನಿಮ್ಮ ಖಾತೆಗೆ ವಾಟ್ಸ್​ಆ್ಯಪ್​ನಿಂದ ಮೆಸೇಜ್ ಬರಲಿದ್ದು, ಇದರಲ್ಲಿ ಅನೇಕ ಮಾಹಿತಿಗಳನ್ನು ನೀಡಲಾಗುತ್ತದೆ. ಉದಾಹರಣೆಗೆ ಕಂಪನಿ ಮುಂದಿನ ದಿನಗಳಲ್ಲಿ ಪರಿಚಯಿಸಲಿರುವ ಹೊಸ ಅಪ್ಡೇಟ್ ಬಗ್ಗೆ ಅಥವಾ ನೂತನ ಫೀಚರ್ ಕುರಿತು ಮೆಸೇಜ್ ಕಳುಹಿಸಿ ಮಾಹಿತಿ ನೀಡಲಿದೆ. ಇದು ವಾಟ್ಸ್​ಆ್ಯಪ್​ನ ಅಧಿಕೃತ ಚಾಟ್ ಆಗಿದ್ದು ವೆರಿಫೈ ಮಾರ್ಕ್ ಕೂಡ ಇರಲಿದೆ. ಬಳಕೆದಾರರಿಗೆ ವಾಟ್ಸ್​ಆ್ಯಪ್ ಅನ್ನು ಹೇಗೆ ಉಪಯೋಗಿಸ ಬೇಕು ಎಂಬುವುದರಿಂದ ಹಿಡಿದು ಕೆಲ ಟಿಪ್ಸ್​ಗಳನ್ನು ಕೂಡ ನೀಡಲಿದೆಯಂತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Tue, 4 April 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ