AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Feature: ಒಂದೇ ಸ್ಮಾರ್ಟ್​ಫೋನ್​ನಲ್ಲಿ ಎರಡು ಅಕೌಂಟ್: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿಯ ಫೀಚರ್

ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಒಂದೇ ಅಪ್ಲಿಕೇಶನ್‌ನಲ್ಲಿ ಎರಡು ಪ್ರತ್ಯೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ತೆರೆಯುವ ಆಯ್ಕೆ ನೀಡುತ್ತಿದೆ. ಅಂದರೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಎರಡು ಸಿಮ್​ಗಳಿದ್ದರೆ ಈ ಎರಡೂ ಸಿಮ್​ಗೆ ಒಂದೇ ಮೊಬೈಲ್​ನಲ್ಲಿ ಎರಡು ವಾಟ್ಸ್​ಆ್ಯಪ್​ ಅಕೌಂಟ್ ತೆರೆಯಬಹುದು.

WhatsApp New Feature: ಒಂದೇ ಸ್ಮಾರ್ಟ್​ಫೋನ್​ನಲ್ಲಿ ಎರಡು ಅಕೌಂಟ್: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿಯ ಫೀಚರ್
WhatsApp Update
Follow us
Vinay Bhat
|

Updated on: Jun 18, 2023 | 1:04 PM

ಮೆಟಾ ಒಡೆತನದ ಪ್ರಸಿದ್ಧ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ಬಳಸದೇ ಇರುವವರ ಸಂಖ್ಯೆ ತೀರಾ ಕಡಿಮೆ. ಕೇವಲ ಭಾರತದಲ್ಲೇ (India) ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಇದಕ್ಕಾಗಿ ಇದು ಇಂದು ವಿಶ್ವದ ನಂಬರ್ ಒನ್ ಮೆಸೇಜಿಂಗ್ ಆ್ಯಪ್ ಆಗಿ ಬೆಳೆದು ನಿಂತಿದೆ. ಅನೇಕ ಅಪ್ಡೇಟ್​ಗಳನ್ನು ಪರಿಚಯಿಸಿ ಗ್ರಾಹಕರ ನೆಚ್ಚಿನ ಅಪ್ಲಿಕೇಷನ್ ಆಗಿರುವ ವಾಟ್ಸ್​ಆ್ಯಪ್​ನಲ್ಲಿ ವಾರಕ್ಕೊಂದು ನೂತನ ಫೀಚರ್​ಗಳ ಕುರಿತು ಘೋಷಣೆ ಆಗುತ್ತಿದೆ. ಮೊನ್ನೆಯಷ್ಟೆ ಆಂಡ್ರಾಯ್ಡ್ (Android) ನವರಿಗೆ ಮರುವಿನ್ಯಾಸಗೊಳಿಸಲಾದ ಎಮೋಜಿ ಕೀಬೋರ್ಡ್ ಅನ್ನು ಹೊರತರುವುದಾಗಿ ಹೇಳಿತ್ತು. ಇದೀಗ ಬಳಕೆದಾರರಿಗೆ ಖುಷಿ ನೀಡಲು ಮತ್ತೊಂದು ಬಹುನಿರೀಕ್ಷಿತ ಅಪ್ಡೇಟ್ ನೀಡುತ್ತಿದೆ.

ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಒಂದೇ ಅಪ್ಲಿಕೇಶನ್‌ನಲ್ಲಿ ಎರಡು ಪ್ರತ್ಯೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ತೆರೆಯುವ ಆಯ್ಕೆ ನೀಡುತ್ತಿದೆ. ಅಂದರೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಎರಡು ಸಿಮ್​ಗಳಿದ್ದರೆ ಈ ಎರಡೂ ಸಿಮ್​ಗೆ ಒಂದೇ ಮೊಬೈಲ್​ನಲ್ಲಿ ಎರಡು ವಾಟ್ಸ್​ಆ್ಯಪ್​ ಅಕೌಂಟ್ ತೆರೆಯಬಹುದು. ಸದ್ಯ ವಾಟ್ಸ್​ಆ್ಯಪ್​ ಈ ಫೀಚರ್ ಮೇಲೆ ಕಾರ್ಯ ನಿರ್ವಹಿಸುತ್ತಿದ್ದು, ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗುವ ನಿರೀಕ್ಷೆ ಇದೆ.

Redmi Buds 4 Active: ಸದ್ದು-ಗದ್ದಲವಿಲ್ಲದೆ ಮ್ಯೂಸಿಕ್ ಆನಂದ ಸವಿಯಲು ರೆಡ್ಮಿ ಬಡ್ಸ್

ಇದನ್ನೂ ಓದಿ
Image
iQoo Neo 7 Pro: ಗೇಮಿಂಗ್ ಪ್ರಿಯರು ಸಿದ್ಧರಾಗಿ: ಬರುತ್ತಿದೆ ಬಲಿಷ್ಠ ಪ್ರೊಸೆಸರ್​ನ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ಫೋನ್
Image
Vivo Y35: ಹೊಸ ವಿವೋ ಫೋನ್ ಖರೀದಿಗೆ ₹1,500 ಡಿಸ್ಕೌಂಟ್ ಲಭ್ಯ
Image
Xiaomi Pad 6: ಶಓಮಿ ರೆಡ್ಮಿ ಸೂಪರ್ ಫೀಚರ್ಸ್ ಹೊಸ ಪ್ಯಾಡ್ ಭಾರತದಲ್ಲಿ ಬಿಡುಗಡೆ
Image
Tech Tips: ಸಿಮ್ ಕಾರ್ಡ್ ಅನ್ನು ಜಸ್ಟ್ ಹೀಗೆ ಮಾಡಿ: ನಿಮ್ಮ ಇಂಟರ್ನೆಟ್ ಹೈ-ಸ್ಪೀಡ್ ಆಗುತ್ತದೆ

ವಾಟ್ಸ್​ಆ್ಯಪ್ ಪರಿಚಯಿಸಲಿರುವ ಈ ಹೊಸ ಆಯ್ಕೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮುಖ್ಯ ಡಿವೈಸ್‌ಗೆ ಲಿಂಕ್ ಮಾಡಲಾದ ಕಂಪ್ಯಾನಿಯನ್ ಡಿವೈಸ್‌ಗಳಲ್ಲಿ ಅವರು ಡ್ಯುಯಲ್ ಖಾತೆಗಳನ್ನು ಬಳಸಲು ಸಾಧ್ಯವಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ನೂತನ ಫೀಚರ್ ವಾಟ್ಸ್​ಆ್ಯಪ್​ ಅಪ್ಲಿಕೇಶನ್‌ನ ಬಿಸಿನೆಸ್ ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾಮಾನ್ಯ ಆವೃತ್ತಿಗೆ ಸಹ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ಮರುವಿನ್ಯಾಸದ ಎಮೋಜಿ ಕೀಬೋರ್ಡ್:

ವಾಟ್ಸ್​ಆ್ಯಪ್ ಆಂಡ್ರಾಯ್ಡ್‌ನಲ್ಲಿ ಕೆಲ ಬೀಟಾ ಪರೀಕ್ಷಕರಿಗೆ ಮರುವಿನ್ಯಾಸಗೊಳಿಸಲಾದ ಎಮೋಜಿ ಕೀಬೋರ್ಡ್ ಅನ್ನು ಹೊರತರುತ್ತಿದೆ. ಈ ಮರುವಿನ್ಯಾಸಗೊಳಿಸಲಾದ ಎಮೋಜಿ ಕೀಬೋರ್ಡ್​ನಲ್ಲಿ ಸ್ಕ್ರಾಲ್ ಮಾಡುವ ಮೂಲಕ ಅನೇಕ ಆಯ್ಕೆ ಪಡೆಯಬಹುದು ಎಂದು WABetaInfo ವರದಿ ಮಾಡಿದೆ. ಜೊತೆಗೆ GIF, ಸ್ಟಿಕ್ಕರ್ ಮತ್ತು ಅವತಾರ್ ಎಂಬ ಕಾಲಮ್​ಗಳನ್ನು ಮೇಲ್ಭಾಗದಲ್ಲಿ ನೀಡಲಾಗಿದೆ. ಮರುವಿನ್ಯಾಸಗೊಳಿಸಲಾದ ಕೀಬೋರ್ಡ್ ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ. ಇದು ಕೆಲವೇ ವಾರಗಳಲ್ಲಿ ಎಲ್ಲ ಬಳಕೆದಾರರಿಗೆ ಸಿಗುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ.

ಕ್ರಾಪ್‌ ಟೂಲ್ ಆಯ್ಕೆ:

ಇದರ ಜೊತೆಗೆ ವಾಟ್ಸ್​ಆ್ಯಪ್ ಹೊಸ ಕ್ರಾಪ್‌ ಟೂಲ್ ಎಂಬ ಆಯ್ಕೆ ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್ ವಿಂಡೋಸ್‌ ಬಿಟಾದಲ್ಲಿ ಡ್ರಾಯಿಂಗ್‌ ಎಡಿಟರ್‌ಗಾಗಿ ಹೊಸ ಕ್ರಾಪ್‌ ಟೂಲ್ ತಯಾರಾಗುತ್ತಿದೆ. ಈ ಟೂಲ್‌ನಿಂದಾಗಿ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ಇಮೇಜ್‌ಗಳನ್ನು ಕ್ರಾಪ್‌ ಮಾಡಬಹುದು. ಜೊತೆಗೆ ಇಮೇಜ್‌ಗಳನ್ನು ಎಡಿಟ್‌ ಮಾಡಲು ಸಾದ್ಯವಾಗಲಿದೆ. ಈ ಹಿಂದೆ ಬಳಕೆದಾರರು ತಮ್ಮ ಫೋಟೋಗಳನ್ನು ಶೇರ್‌ ಮಾಡುವ ಮೊದಲು ಕ್ರಾಪ್‌ ಮಾಡಬೇಕಾದರೆ ಬಾಹ್ಯ ಇಮೇಜ್ ಎಡಿಟಿಂಗ್ ಟೂಲ್‌ಗಳನ್ನು ಬಳಸಬೇಕಿತ್ತು. ಆದರೆ ಈ ಹೊಸ ಆಯ್ಕೆಯು ನಿಮಗೆ ಅಪ್ಲಿಕೇಶನ್‌ನಲ್ಲಿಯೇ ಇಮೇಜ್‌ ಕ್ರಾಪ್‌ ಮಾಡಲು ಅವಕಾಶ ನೀಡಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ