WhatsApp Features: ಸೈಲೆಂಟ್ ಆಗಿರುವ ವಾಟ್ಸ್​ಆ್ಯಪ್ ಗ್ರೂಪ್​ಗಳಿಗೆ ಶಾಕ್: ಬರುತ್ತಿದೆ ಹುಬ್ಬೇರಿಸುವ ಫೀಚರ್

WhatsApp Group: ಬರ್ತ್ ಡೇ ಪಾರ್ಟಿ, ಮದುವೆಗೆ ಸಂಬಂಧಿಸಿದ ಗ್ರೂಪ್ ಅಥವಾ ಕಾಲೇಜು ಸ್ನೇಹಿತರ ಗ್ರೂಪ್​ ಕ್ರಿಯೆಟ್ ಆಗಿರುತ್ತದೆ. ಆದರೆ, ಅದು ಕೆಲವು ದಿನಗಳ ವರೆಗೆ ಮಾತ್ರ ನಂತರ ಆ್ಯಕ್ಟಿವ್ ಇರುವುದಿಲ್ಲ. ಇದಕ್ಕೀಗ ವಾಟ್ಸ್​ಆ್ಯಪ್ ಹೊಸ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ.

WhatsApp Features: ಸೈಲೆಂಟ್ ಆಗಿರುವ ವಾಟ್ಸ್​ಆ್ಯಪ್ ಗ್ರೂಪ್​ಗಳಿಗೆ ಶಾಕ್: ಬರುತ್ತಿದೆ ಹುಬ್ಬೇರಿಸುವ ಫೀಚರ್
WhatsApp
Follow us
| Updated By: Vinay Bhat

Updated on:Mar 10, 2023 | 1:02 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ಇಂದು ವಿನೂತನ ಫೀಚರ್​ಗಳನ್ನು ಪರಿಚಯಿಸಿ ತನ್ನ ತೆಕ್ಕೆಗೆ ಕೋಟ್ಯಾಂತರ ಬಳಕೆದಾರರನ್ನು ಸೇರಿಸಿಕೊಂಡಿದೆ. ದಿನಕ್ಕೊಂದರಂತೆ ಹೊಸ ಹೊಸ ಆಯ್ಕೆಗಳ ಬಗ್ಗೆ ಘೋಷಣೆ ಮಾಡುವ ವಾಟ್ಸ್​ಆ್ಯಪ್ ಇದೀಗ ಬಳಕೆದಾರರಿಗೆ ಉಪಯುಕ್ತ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್​ನಲ್ಲಿ ನೀವು ಗ್ರೂಪ್ (WhatsApp Group) ಕ್ರಿಯೆಟ್ ಮಾಡಿರುತ್ತೀರಿ ಅಥವಾ ಗ್ರೂಪ್​ನ ಸದಸ್ಯರಾಗಿರುತ್ತೀರಿ. ಬರ್ತ್ ಡೇ ಪಾರ್ಟಿ, ಮದುವೆಗೆ ಸಂಬಂಧಿಸಿದ ಗ್ರೂಪ್ ಅಥವಾ ಕಾಲೇಜು ಸ್ನೇಹಿತರ ಗ್ರೂಪ್​ ಕ್ರಿಯೆಟ್ ಆಗಿರುತ್ತದೆ. ಆದರೆ, ಅದು ಕೆಲವು ದಿನಗಳ ವರೆಗೆ ಮಾತ್ರ ನಂತರ ಆ್ಯಕ್ಟಿವ್ ಇರುವುದಿಲ್ಲ. ಇದು ನಿಮ್ಮ ಸ್ಟೋರೇಜ್ (Storage) ಅನ್ನು ಭರ್ತಿ ಮಾಡುತ್ತಿರುತ್ತದೆ. ಇದಕ್ಕೀಗ ವಾಟ್ಸ್​ಆ್ಯಪ್ ಹೊಸ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ.

ಎಕ್ಸ್​ಪೇರಿಂಗ್ ಗ್ರೂಪ್ ಎಂಬ ಫೀಚರ್ ಮೇಲೆ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುತ್ತಿದೆ. ಇದರ ಮೂಲಕ ಆ್ಯಕ್ಟಿವ್ ಇಲ್ಲದ ಗ್ರೂಪ್​ಗೆ ಮುಕ್ತಾಯದ ದಿನಾಂಕ ಎಂಬುದನ್ನು ನಿಗದಿ ಮಾಡಿರಲಾಗುತ್ತದೆ. ಆ ಸಮಯ ಬಂದ ನಂತರ ವಾಟ್ಸ್​ಆ್ಯಪ್ ನಿಮಗೆ ಆ ಗ್ರೂಪ್​ನಿಂದ ಹಿಂದೆ ಸರಿಯಲು ಮತ್ತು ಅಡ್ಮಿನ್​ಗೆ ಗ್ರೂಪ್ ಡಿಲೀಟ್ ಮಾಡಲು ಅಲರ್ಟ್ ಮಾಡುತ್ತಾ ಇರುತ್ತದೆ. ಈ ಆಯ್ಕೆ ವಾಟ್ಸ್​ಆ್ಯಪ್ ಗ್ರೂಪ್ ಇನ್​ಫೋ ದಲ್ಲಿ ಇರುತ್ತದೆ. ಅಂತೆಯೆ ಈ ಮುಕ್ತಾಯದ ದಿನಾಂಕವನ್ನು ಬದಲಾವಣೆ ಮಾಡುವ ಅವಕಾಶ ಕೂಡ ಇರುತ್ತದಂತೆ. ಇದರ ಮೂಲಕ ಆ್ಯಕ್ಟಿವ್ ಇಲ್ಲದ ಗ್ರೂಪ್​ನಿಂದ ನೀವು ಹಿಂದೆ ಸರಿದು ಮೆಮೋರಿಯನ್ನು ಉಳಿತಾಯ ಮಾಡಬಹುದು.

ಐಒಎಸ್​​ನಲ್ಲಿ ಹೊಸ ಫೀಚರ್:

ಇದನ್ನೂ ಓದಿ
Image
Moto G73 5G: ಭಾರತೀಯ ಮಾರುಕಟ್ಟೆಗೆ ಇಂದು ಅಪ್ಪಳಿಸಲಿದೆ ಮೋಟೋ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಯಾವುದು ನೋಡಿ
Image
Poco X5 5G: ದೇಶದ ಗ್ಯಾಜೆಟ್ ಲೋಕಕ್ಕೆ ಲೇಟೆಸ್ಟ್ ಎಂಟ್ರಿ ಪೋಕೊ ಫೋನ್
Image
iPhone 14: ಐಫೋನ್ ಪ್ರಿಯರಿಗೆ ಸಂತಸದ ಸುದ್ದಿ: ಹೊಸ ಕಲರ್​ನಲ್ಲಿ ಬಂತು ಐಫೋನ್ 14, ಐಫೋನ್ 14 ಪ್ಲಸ್
Image
Samsung Galaxy M14 5G: ಸ್ಯಾಮ್​ಸಂಗ್​ನಿಂದ 6000mAh ಸಾಮರ್ಥ್ಯದ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ: ಯಾವುದು?, ಬೆಲೆ ಎಷ್ಟು?

ವಾಟ್ಸ್​ಆ್ಯಪ್ ಐಒಎಸ್‌ ಬೀಟಾ ವರ್ಷನ್‌ನಲ್ಲಿ ಚಾಟ್‌ ಪಟ್ಟಿಯೊಳಗೆ ಪುಶ್‌ ಹೆಸರು (“Push name within the chat list”) ಫೀಚರ್ಸ್‌ ಸೇರ್ಪಡೆ ಮಾಡಲು ಮುಂದಾಗಿದೆ. ಇದು ವಾಟ್ಸ್​ಆ್ಯಪ್​ನಲ್ಲಿ ಅಪರಿಚಿತ ಗುಂಪಿನ ಸದಸ್ಯರಿಂದ ಯಾವುದೇ ಸಂದೇಶ ಬಂದರೆ ಚಾಟ್‌ ಲಿಸ್ಟ್‌ನಲ್ಲಿ ಪುಶ್‌ ನೇಮ್‌ಗಳನ್ನು ಕಾಣಿಸುತ್ತದೆ. ಇದರಿಂದ ಪ್ರತಿ ಭಾರಿಯು ಮೆಸೇಜ್ ಕಳುಹಿಸಿದ ಸಂದೇಶವನ್ನು ಕಾಣುವ ಬದಲಿಗೆ ಪುಶ್‌ ನೇಮ್‌ ನಿಮಗೆ ಕಾಣಿಸಲಿದೆ. ಈ ಮೂಲಕ ಬಳಕೆದಾರರು ಅಪರಿಚಿತ ಕಂಟ್ಯಾಕ್ಟ್‌ ಯಾರೆಂದು ಸುಲಭವಾಗಿ ತಿಳಿದುಕೊಳ್ಳಬಹುದು. ಅಲ್ಲದೆ ನೀವು ಪ್ರತಿ ಭಾರಿ ಸಂದೇಶ ಕಳುಹಿಸುವ ಸಂಖ್ಯೆಯನ್ನು ಸೇವ್‌ ಮಾಡಬೇಕಾದ ಅನಿವಾರ್ಯತೆ ಕೂಡ ಬರುವುದಿಲ್ಲ.

ಅಪರಿಚಿತ ಕರೆಗಳನ್ನು ಮ್ಯೂಟ್ ಮಾಡಿ:

ಅಪರಿಚಿತ ಕರೆಗಳನ್ನು ಮ್ಯೂಟ್ ಮಾಡುವಂತಹ ಆಯ್ಕೆಯನ್ನು ವಾಟ್ಸ್​ಆ್ಯಪ್ ನೀಡಲು ಮುಂದಾಗಿದೆ. ಅಂದರೆ ಎಲ್ಲ ಅಪರಿಚಿತ ಸಂಖ್ಯೆಗಳು ಅಥವಾ ಸೇವ್‌ ಮಾಡಿರದ ಕಾಂಟೆಕ್ಟ್​ಗಳಿಂದ ಬರುವ ಕರೆಗಳ ವಿರುದ್ಧ ಇದು ಕ್ರಮ ಕೈಗೊಳ್ಳುತ್ತದೆ. ಆರಂಭದಲ್ಲಿ ಆಂಡ್ರಾಯ್ಡ್‌ ಬಳಕೆದಾರರಿಗೆ ಈ ಫೀಚರ್ಸ್‌ ಲಭ್ಯವಾಗಲಿದೆ. ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನ ವಾಟ್ಸ್​ಆ್ಯಪ್ ಸೆಟ್ಟಿಂಗ್‌ ವಿಭಾಗದಲ್ಲಿ ‘ಅನಾಮಿಕ ಕರೆ ಮಾಡುವವರನ್ನು ಮ್ಯೂಟ್‌ ಮಾಡು’ ಎಂಬ ಫೀಚರ್ಸ್‌ ಕಾಣಿಸಲಿದೆ. ಇದರಲ್ಲಿ ಆನ್‌ ಹಾಗೂ ಆಫ್‌ ಎಂಬ ಆಯ್ಕೆಯನ್ನು ನೀಡಲಾಗಿದ್ದು, ನೀವು ಇದನ್ನು ಆಫ್‌ ಮಾಡಿದಾಗ ಅಪರಿಚಿತ ನಂಬರ್​ನಿಂದ ವಾಟ್ಸ್​ಆ್ಯಪ್ ಕಾಲ್‌ ಬರುವುದಿಲ್ಲ. ಆದರೆ, ನೋಟಿಫಿಕೇಶನ್‌ ಬಾರ್‌ನಲ್ಲಿ ಈ ಕರೆಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಸದ್ಯಕ್ಕೆ ಈ ಫೀಚರ್ಸ್ ಅಭಿವೃದ್ಧಿ ಹಂತದಲ್ಲಿದೆ. ಶೀಘ್ರದಲ್ಲೇ ಪರೀಕ್ಷೆ ಉದ್ದೇಶಕ್ಕೆ ಲಭ್ಯವಾಗುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Fri, 10 March 23

ತಾಜಾ ಸುದ್ದಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ