AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Features: ಡೆಸ್ಕ್​ಟಾಪ್ ಬಳಕೆದಾರರಿಗೆ ಎರಡು ಹೊಸ ಫೀಚರ್: ವಾಟ್ಸ್​ಆ್ಯಪ್​ನಿಂದ ವಿಭಿನ್ನ ಪ್ರಯತ್ನ

WhatsApp Web: ವಾಟ್ಸ್​ಆ್ಯಪ್ ತನ್ನ ವೆಬ್ ಬಳಕೆದಾರರಿಗೆ ಶೇರ್ ಕಾಂಟೆಕ್ಟ್ (Share Contact) ಮತ್ತು ಮ್ಯೂಟ್ ಶಾರ್ಟ್​ಕಟ್ ಎಂಬ ಎರಡು ಹೊಸ ಫೀಚರ್​​ಗಳನ್ನು ಪರಿಚಯಿಸುತ್ತಿದೆ.

WhatsApp New Features: ಡೆಸ್ಕ್​ಟಾಪ್ ಬಳಕೆದಾರರಿಗೆ ಎರಡು ಹೊಸ ಫೀಚರ್: ವಾಟ್ಸ್​ಆ್ಯಪ್​ನಿಂದ ವಿಭಿನ್ನ ಪ್ರಯತ್ನ
whatsapp web
TV9 Web
| Updated By: Vinay Bhat|

Updated on:Nov 28, 2022 | 12:17 PM

Share

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಈ ವರ್ಷ ಪರಿಚಯಿಸಿರುವ ಫೀಚರ್​ಗಳಿಗೆ ಲೆಕ್ಕವಿಲ್ಲ. 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡ ವಾಟ್ಸ್​ಆ್ಯಪ್ ಅನ್ನು ಇಂದು ವಿಶ್ವದಲ್ಲಿ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ವಾರಕ್ಕೆ ಒಂದು ಹೊಸ ಫೀಚರ್​ಗಳ ಬಗ್ಗೆ ಘೋಷಣೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಇನ್ನಷ್ಟು ಅನೇಕ ಅಪ್ಡೇಟ್​ಗಳು ಬರಲಿಕ್ಕಿದ್ದು ಪರೀಕ್ಷಾ ಹಂತದಲ್ಲಿದೆ. ಹೆಚ್ಚಾಗಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿದ್ದ ವಾಟ್ಸ್​ಆ್ಯಪ್ (WhatsApp) ಈಗೀಗ ವೆಬ್ ಬಳಕೆದಾರರಿಗೆ ಉಪಯುಕ್ತವಾದ ಆಯ್ಕೆನ್ನು ನೀಡುತ್ತಿದೆ. ಇದೀಗ ಡೆಸ್ಕ್​ಟಾಪ್‌ನಲ್ಲಿ (Desktop) ವಾಟ್ಸ್‌ಆ್ಯಪ್‌ ಬಳಸುವವರಿಗೆ ಎರಡು ಹೊಸ ಆಯ್ಕೆಯನ್ನು ನೀಡಲು ಕಂಪನಿ ಮುಂದಾಗಿದೆ.

ವಾಟ್ಸ್​ಆ್ಯಪ್ ತನ್ನ ವೆಬ್ ಬಳಕೆದಾರರಿಗೆ ಶೇರ್ ಕಾಂಟೆಕ್ಟ್ (Share Contact) ಮತ್ತು ಮ್ಯೂಟ್ ಶಾರ್ಟ್​ಕಟ್ ಎಂಬ ಎರಡು ಹೊಸ ಫೀಚರ್​​ಗಳನ್ನು ಪರಿಚಯಿಸುತ್ತಿದೆ. ಶೇರ್ ಕಾಂಟೆಕ್ಟ್ ಆಯ್ಕೆಯ ಮೂಲಕ ಬಳಕೆದಾರರು ಒಂದು ನಂಬರ್ ಅನ್ನು ಬೇರೆ ಅವರಿಗೆ ಹಂಚಿಕೊಳ್ಳಲು ವಿಶೇಷ ಆಯ್ಕೆ ಸಿಗಲಿದೆ. ಇದರ ಮೂಲಕ ನೀವು ಫ್ಯಾಮಿಲಿ ಸ್ಹೇಹಿತರಿಗೆ ಒಮ್ಮೆಲೆ ಕಾಂಟೆಕ್ಟ್ ಅನ್ನು ಕಳುಹಿಸಬಹುದು. ಅಂತೆಯೆ ಮ್ಯೂಟ್ ಶಾರ್ಟ್​ಕಟ್ ಎಂಬ ಆಯ್ಕೆ, ಇದು ನಿಮ್ಮ ವಾಟ್ಸ್​ಆ್ಯಪ್​ನಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ಒಂದು ಗ್ರೂಪ್ ಅನ್ನು ತೆರೆದಾಗ ಕಾಣಿಸುತ್ತದೆ. ಗ್ರೂಪ್​ನ ಮೇಲ್ಬಾಗದಲ್ಲಿ ಮ್ಯೂಟ್ ಮಾಡುವ ಡೈರೆಕ್ಟ್ ಶಾರ್ಟ್​ಕಟ್ ಆಯ್ಕೆ ನೀಡಲಾಗುತ್ತಿದೆ. ಇದನ್ನು ಆ್ಯಕ್ಟಿವ್ ಮಾಡಿದಲ್ಲಿ ಆ ಗ್ರೂಪ್​ಗೆ ಬಂದ ಯಾವುದೇ ಮೆಸೇಜ್ ಬಗ್ಗೆ ನಿಮಗೆ ವಾಟ್ಸ್​ಆ್ಯಪ್​ ಅಲರ್ಟ್ ಮಾಡುವುದಿಲ್ಲ. ಈ ಎರಡೂ ಆಯ್ಕೆ ಸದ್ಯ ವಾಟ್ಸ್​ಆ್ಯಪ್ ಡೆಸ್ಕ್​ಟಾಪ್ ಬೇಟಾ ಬಳಕೆದಾರರಿಗೆ ಲಭ್ಯವಿದೆ.

ಸ್ಕ್ರೀನ್‌ ಲಾಕ್‌ ಫೀಚರ್:

ಇದನ್ನೂ ಓದಿ
Image
Sharkbot Malware: ಗೂಗಲ್ ಪ್ಲೇ ಸ್ಟೋರ್​​ನಲ್ಲಿ ಅಪಾಯಕಾರಿ ವೈರಸ್ ಪತ್ತೆ: ಇನ್​ಸ್ಟಾಲ್ ಆಗಿದ್ದರೆ ತಕ್ಷಣ ಡಿಲೀಟ್ ಮಾಡಿ
Image
Tech Tips: ಸ್ಮಾರ್ಟ್​ಫೋನ್ ಮಾರಾಟ ಮಾಡುವ ಮುನ್ನ ಹೀಗೆ ಮಾಡಲು ಮರೆಯದಿರಿ
Image
Black Friday Sale: ಕೇವಲ 7999 ರೂ. ಗೆ ನಥಿಂಗ್ ಫೋನ್ (1) ಖರೀದಿಸಿ: ಇಲ್ಲಿದೆ ನೋಡಿ ಟ್ರಿಕ್
Image
Oppo Reno 9 Series: ಭಾರತಕ್ಕೆ ಬರುತ್ತಿದೆ ವಿದೇಶದಲ್ಲಿ ಧೂಳೆಬ್ಬಿಸುತ್ತಿರುವ ಒಪ್ಪೋ ರೆನೋ 9 ಸರಣಿ: ಬೆಲೆ ಎಷ್ಟು?

ಇನ್ನು ಡೆಸ್ಕ್​ಟಾಪ್‌ನಲ್ಲಿ ವಾಟ್ಸ್‌ಆ್ಯಪ್‌ ಬಳಸುವವರಿಗೆ ಸದ್ಯದಲ್ಲೇ ಸ್ಕ್ರೀನ್‌ ಲಾಕ್‌ ಎಂಬ ಹೊಸ ಆಯ್ಕೆ ಸಿಗಲಿದೆ. ವಾಟ್ಸ್​ಆ್ಯಪ್ ಹಿಂದಿನಿಂದಲೂ ಬಳಕೆದಾರರ ಪ್ರೈವಸಿ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ವಹಿಸುತ್ತದೆ. ಇದೀಗ ಭದ್ರತೆಯನ್ನು ಮತ್ತಷ್ಟು ಗಟ್ಟಿ ಮಾಡುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ. ವಾಟ್ಸ್‌ಆ್ಯಪ್‌ ವೆಬ್​ನಲ್ಲಿ ಬರುವ ಸ್ಕ್ರೀನ್‌ ಲಾಕ್‌ ಎಂಬ ಹೊಸ ಫೀಚರ್​ನಲ್ಲಿ ವಾಟ್ಸ್​ಆ್ಯಪ್ ಓಪನ್‌ ಮಾಡಿದ ಪ್ರತಿ ಬಾರಿ ಬಳಕೆದಾರರು ಪಾಸ್‌ವರ್ಡ್‌ ಹಾಕಬೇಕಾಗುತ್ತದೆ. ಬಳಕೆದಾರರು ತಮ್ಮ ಡೆಸ್ಕ್​​ಟಾಪ್‌ನಲ್ಲಿ ವಾಟ್ಸ್‌ಆ್ಯಪ್‌ ಬಳಸದೇ ಇದ್ದಾಗ ಬೇರೆಯವರು ಅನಧಿಕೃತವಾಗಿ ಬಳಸದಂತೆ ಇದು ರಕ್ಷಣೆ ನೀಡಲಿದೆ ಎಂದು ಕಂಪನಿ ತಿಳಿಸಿದೆ. ಹಾಗಂತ ಇದು ಕಡ್ಡಾಯವಲ್ಲ. ಬಳಕೆದಾರರು ಈ ಸ್ಕ್ರೀನ್‌ ಲಾಕ್‌ ಫೀಚರ್‌ ಅನ್ನು ಬೇಕಾದಾಗ ಮಾತ್ರ ಉಪಯೋಗಿಸಬಹುದು.

ಸ್ಟೇಟಸ್​ನಲ್ಲಿ ವಾಯ್ಸ್ ನೋಟ್:

ಸದ್ಯದಲ್ಲೇ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದಂತೆ. ವಾಯ್ಸ್ ನೋಟ್ ಅನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಐಒಎಸ್ ಬಳಕೆದಾರರಿಗೆ ಸಿಗಲಿದೆ. ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದು. ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಂದರೆ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ. 30 ಸೆಕೆಂಡ್​ಗಳ ಕಾಲ ಇದು ಇರಲಿದೆ. ಇದಕ್ಕಾಗಿ ಬರಹಗಳನ್ನು ಹಂಚಿಕೊಳ್ಳಬಹುದಾದ ಜಾಗದಲ್ಲಿ ಮೈಕ್ರೊ ಫೋನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಇಲ್ಲಿ ಮೈಕ್ರೊ ಫೋನ್ ಮೇಲೆ ಕ್ಲಿಕ್ ಮಾಡುವ ಮೂಲಕ ವಾಯ್ಸ್ ಸ್ಟೇಟಸ್ ಶೇರ್ ಮಾಡಬಹುದು. ಇದು ಎಂಡ್-ಟು-ಎಂಡ್ ಎನ್​ಕ್ರಿಪ್ಟೆಡ್ ಆಗಿದೆ. ಸದ್ಯಕ್ಕೆ ಈ ಆಯ್ಕೆ ಐಒಎಸ್ ಬೇಟಾ ಬಳಕೆದಾರರಿಗೆ ಲಭ್ಯವಾಗುತ್ತಿದೆ.

Published On - 12:17 pm, Mon, 28 November 22

ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ