AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ ಗ್ರೂಪ್​ಗೆ ಎಷ್ಟು ಮಂದಿಯನ್ನು ಆ್ಯಡ್ ಮಾಡಬಹುದು?: ಬರುತ್ತಿದೆ ಅಚ್ಚರಿಯ ಆಯ್ಕೆ

WhatsApp New Feature: ಇದೀಗ ವಾಟ್ಸ್​ಆ್ಯಪ್ ಗ್ರೂಪ್ ವಿಚಾರಕ್ಕೆ ಸಂಬಂಧಿಸಿದಂತೆ ನೂತನ ಆಯ್ಕೆಯನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ವಾಟ್ಸ್​ಆ್ಯಪ್ ತನ್ನ ನೂತನ ಅಪ್‌ಡೇಟ್‌ನಲ್ಲಿ ಗ್ರೂಪ್‌ ಸದಸ್ಯರ ಸಂಖ್ಯೆ ಹೆಚ್ಚಿಸಲಿದೆ ಎಂದು ವರದಿಯಾಗಿದೆ.

WhatsApp: ವಾಟ್ಸ್​ಆ್ಯಪ್​ ಗ್ರೂಪ್​ಗೆ ಎಷ್ಟು ಮಂದಿಯನ್ನು ಆ್ಯಡ್ ಮಾಡಬಹುದು?: ಬರುತ್ತಿದೆ ಅಚ್ಚರಿಯ ಆಯ್ಕೆ
WhatsApp
TV9 Web
| Updated By: Vinay Bhat|

Updated on:Oct 11, 2022 | 2:52 PM

Share

ಮೆಟಾ ಮಾಲೀಕತ್ವದ ಜನಪ್ರಿಯ ಮೆಸೆಜಿಂಗ್ ಆ್ಯಪ್‌ ವಾಟ್ಸ್​ಆ್ಯಪ್​ (WhatsApp) ಅತೀ ಹೆಚ್ಚಿನ ಸಕ್ರಿಯ ಬಳಕೆದಾರರನ್ನು ಹೊಂದಿದೆ. ಈ ವರ್ಷ ಮೆಸೇಜ್​ಗೆ ಎಮೋಜಿ ರಿಯಾಕ್ಷನ್​ನಿಂದ ಹಿಡಿದು ಮೆಸೇಜ್ ಡಿಲೀಟ್ ಮಾಡುವ ಸಮಯವನ್ನು ಹೆಚ್ಚಿಸಿ ಇನ್ನು ಕೆಲವೇ ದಿನಗಳಲ್ಲಿ ಲಾಗೌಟ್ ಆಯ್ಕೆ, ಗ್ರೂಪ್ ಅಡ್ಮಿನ್​ಗೆ (Admin) ಮೆಸೇಜ್ ಡಿಲೀಟ್ ಮಾಡುವ ಆಯ್ಕೆ, ಕಳುಹಿಸಿದ ಮೆಸೇಜ್ ಎಡಿಟ್ ಮಾಡುವ ಆಯ್ಕೆ ಹೀಗೆ ಅನೇಕ ಫೀಚರ್​ಗಳನ್ನು ಪರಿಚಯಿಸಲು ಮುಂದಾಗಿದೆ. ಯಾವುದೇ ಮಾಹಿತಿಯನ್ನು ಹಲವು ಮಂದಿಯೊಂದಿಗೆ ಹಂಚಿಕೊಳ್ಳಬೇಕು ಎಂಬ ಸಂದರ್ಭದಲ್ಲಿ ವಾಟ್ಸ್​ಆ್ಯಪ್ ಗ್ರೂಪ್ (WhatsApp Group) ಚಾಟ್ ಫೀಚರ್ ಬಹಳ ಪ್ರಯೋಜನಕಾರಿಯಾಗಿದೆ. ಅಥವಾ ಯಾವುದೇ ಒಂದು ವಿಚಾರದ ಬಗ್ಗೆ ಸ್ನೇಹಿತರ ಜೊತೆಗೆ, ಕುಟುಂಬದ ಜೊತೆಗೆ, ಬ್ಯುಸಿನೆಸ್ ಸಹದ್ಯೋಗಿಗಳ ಜೊತೆಗೆ, ಸಹಪಾಠಿಗಳ ಜೊತೆಗೆ ಚರ್ಚಿಸುವುದಕ್ಕೆ ಗ್ರೂಪ್ ಅನುಕೂಲಕರವಾಗಿದೆ.

ಇದೀಗ ವಾಟ್ಸ್​ಆ್ಯಪ್ ಗ್ರೂಪ್ ವಿಚಾರಕ್ಕೆ ಸಂಬಂಧಿಸಿದಂತೆ ನೂತನ ಆಯ್ಕೆಯನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ವಾಟ್ಸ್​ಆ್ಯಪ್ ತನ್ನ ನೂತನ ಅಪ್‌ಡೇಟ್‌ನಲ್ಲಿ ಗ್ರೂಪ್‌ ಸದಸ್ಯರ ಸಂಖ್ಯೆ ಹೆಚ್ಚಿಸಲಿದೆ ಎಂದು ವರದಿಯಾಗಿದೆ.

ಆರಂಭದಲ್ಲಿ ವಾಟ್ಸ್​ಆ್ಯಪ್​​ ಗ್ರೂಪ್‌ಗೆ 256 ಸದಸ್ಯರನ್ನು ಸೇರಿಸಲು ಅವಕಾಶ ಇತ್ತು. ಬಳಿಕ ಆ ಸಂಖ್ಯೆಯನ್ನು 512 ಕ್ಕೆ ಹೆಚ್ಚಿಸಿತ್ತು. ಈಗ ಈ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಲು ಮುಂದಾಗಿದೆ. WaBetaInfo ನ ವರದಿಯ ಪ್ರಕಾರ, ವಾಟ್ಸ್​ಆ್ಯಪ್​​ ಗ್ರೂಪ್‌ ರಚನೆಯ ಸದಸ್ಯರ ಮಿತಿಯನ್ನು 1024 ಗೆ ಹೆಚ್ಚಿಸಲು ಕೆಲಸ ಮಾಡುತ್ತಿದೆ. ಈ ಆಯ್ಕೆಯು ಪ್ರಸ್ತುತ ಆಯ್ದ ಬೀಟಾ ಬಳಕೆದಾರರಿಗೆ ಸೀಮಿತವಾಗಿದೆ ಎಂದು ಹೇಳಲಾಗಿದೆ. ಆದಷ್ಟು ಬೇಗ ಈ ನೂತನ ಫೀಚರ್ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ.

ಇದನ್ನೂ ಓದಿ
Image
Flipkart Big Diwali Sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ದೀಪಾವಳಿ ಸೇಲ್ ಆರಂಭ: ಏನಿದೆ ಆಫರ್?, ಇಲ್ಲಿದೆ ಮಾಹಿತಿ
Image
Reliance Jio: ಬಜೆಟ್ ಬೆಲೆಗೆ ಬಂಪರ್ ಪ್ಲಾನ್: ಜಿಯೋ, ಏರ್ಟೆಲ್, ವಿ ನಡುವೆ ಪೈಪೋಟಿ
Image
Tecno Pova 4 Pro: ಟೆಕ್ನೋ ಪೋವಾ 4 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ: ಇದು ಬಜೆಟ್ ಬೆಲೆಯ ಬಂಪರ್ ಫೋನ್
Image
WhatsApp Scam: ವಾಟ್ಸ್​ಆ್ಯಪ್​ನಲ್ಲಿ ನಡೆಯುತ್ತಿದೆ ಬಹುದೊಡ್ಡ ವಂಚನೆ: ತಪ್ಪಿಯೂ ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಡಿ

ಕಳೆದ ವಾರವಷ್ಟೆ ವಾಟ್ಸ್​ಆ್ಯಪ್ ತನ್ನ ಆಂಡ್ರಾಯ್ಡ್ ಬಳಕೆದಾರರಿಗೆ ಅನುಕೂಲವಾಗುವ ಪ್ರೈವೆಸಿ ಫೀಚರ್ಸ್‌ ಅನ್ನು ಪರಿಚಯಿಸಿತ್ತು. ಈ ಫೀಚರ್ಸ್‌ ಮೂಲಕ ವಾಟ್ಸ್​ಆ್ಯಪ್​​ ಚಾಟ್‌ಗಳಲ್ಲಿ ನೀವು ನಿಮ್ಮ ಆನ್‌ಲೈನ್ ಸ್ಟೇಟಸ್‌ ಅನ್ನು ಹೈಡ್‌ ಮಾಡಬಹುದು. ಈ ಆಯ್ಕೆಯನ್ನು ಆ್ಯಕ್ಟಿವ್ ಮಾಡಲು ಮೊದಲಿಗೆ ವಾಟ್ಸ್​ಆ್ಯಪ್​​ ಅಪ್ಲಿಕೇಶನ್‌ ತೆರೆಯಿರಿ. ಮೇಲಿನ ಬಲ ಮೂಲೆಯಲ್ಲಿರುವ ಮೂರು-ಚುಕ್ಕೆಗಳ ಐಕಾನ್ ಮೇಲೆ ಟ್ಯಾಪ್ ಮಾಡಿರಿ. ನಂತರ ಸೆಟ್ಟಿಂಗ್ಸ್‌ >ಅಕೌಂಟ್‌> ಪ್ರೈವೆಸಿ ಆಯ್ಕೆಯನ್ನು ಟ್ಯಾಪ್ ಮಾಡಿರಿ. ಇದರಲ್ಲಿ ನಿಮಗೆ ಲಾಸ್ಟ್‌ ಸೀನ್‌ ಆಂಡ್‌ ಆನ್‌ಲೈನ್ ಫೀಚರ್ಸ್‌ ಕಾಣಲಿದೆ. ಇದರ ಮೇಲೆ ಟ್ಯಾಪ್ ಮಾಡಿ ನಂತರ Nobody ಮತ್ತು Same as last seen” ಆಯ್ಕೆಯನ್ನು ಆರಿಸಿ. ಇದರಲ್ಲಿ ನೀವು ಯಾರೂ ಇಲ್ಲ ಅನ್ನು ಟ್ಯಾಪ್ ಮಾಡಿದಾಗ, ನೀವು ಪ್ರತಿಯೊಬ್ಬರಿಂದ ಆನ್‌ಲೈನ್ ಸ್ಟೇಟಸ್‌ ಅನ್ನು ಹೈಡ್‌ ಮಾಡಲು ಸಾಧ್ಯವಾಗಲಿದೆ.

ಇದರ ಜೊತೆಗೆ ಎಡಿಟ್ ಆಯ್ಕೆ ಪರಿಚಯಿಸುವ ಬಗ್ಗೆ ವರದಿಯಾಗಿದೆ. ಅಂದರೆ ನೀವು ವಾಟ್ಸ್​ಆ್ಯಪ್​ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡಬಹುದಾಗಿದೆ. ಈ ಬಗ್ಗೆ ವಾಬೇಟಾಇನ್​ಫೊ ವರದಿ ಮಾಡಿದ್ದು, ವಾಟ್ಸ್​ಆ್ಯಪ್ ಸದ್ಯದಲ್ಲೇ ಎಡಿಟ್ ಮೆಸೇಜ್ ಆಯ್ಕೆಯನ್ನು ನೀಡಲಿದೆ ಎಂದು ಹೇಳಿದೆ. ಈ ಆಯ್ಕೆಯನ್ನು ಬಳಸಿಕೊಂಡು ಬಳಕೆದಾರರು ಇತರರಿಗೆ ಮೆಸೇಜ್ ಮಾಡುವ ಸಂದರ್ಭ ಅಕ್ಷರ ತಪ್ಪಿ ಸೆಂಡ್ ಮಾಡಿದ್ದರೆ ಪುನಃ ಅದನ್ನು ಸರಿಗೊಳಿಸಬಹುದು. ಸದ್ಯಕ್ಕೆ ಈ ಇದು ಆಂಡ್ರಾಯ್ಡ್ ಬೇಟಾ ವರ್ಷನ್​ನಲ್ಲಿ ಲಭ್ಯವಿದೆ. ಈಗಾಗಲೇ ಇರುವ ಡಿಲೀಟ್ ಫಾರ್ ಎವರಿವನ್ ಆಯ್ಕೆ ಸಂಪೂರ್ಣ ಮೆಸೇಜ್ ಅನ್ನು ಡಿಲೀಟ್ ಮಾಡುತ್ತದೆ. ಆದರೆ, ಈ ಎಡಿಟ್ ಆಯ್ಕೆಯಲ್ಲಿ ಮೆಸೇಜ್ ಅನ್ನು ಡಿಲೀಟ್ ಮಾಡುವ ಬದಲು ಅಕ್ಷರವನ್ನು ಸರಿಪಡಿಸುವುದಾಗಿದೆ.

Published On - 2:51 pm, Tue, 11 October 22

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ