AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾವ್… ವಾಟ್ಸ್​ಆ್ಯಪ್​ನಲ್ಲಿ ಸದ್ಯದಲ್ಲೇ ಬರಲಿದೆ ಊಹಿಸಲಾಗದ ವಿಶೇಷ ಫೀಚರ್

ವಾಟ್ಸ್ಆ್ಯಪ್ ಪರಿಚಯಿಸಲಿರುವ ಹೊಸ ವಾಯ್ಸ್ ಟ್ರಾನ್ಸ್​ಕ್ರಿಪ್ಶನ್ ಫೀಚರ್​ನಲ್ಲಿ ಬಳಕೆದಾರರಿಗೆ ಧ್ವನಿ ಸಂದೇಶದ ವಿಷಯವನ್ನು ಓದಬಲ್ಲ ರೂಪದಲ್ಲಿ ನೀಡುತ್ತದೆ.

WhatsApp: ವಾವ್… ವಾಟ್ಸ್​ಆ್ಯಪ್​ನಲ್ಲಿ ಸದ್ಯದಲ್ಲೇ ಬರಲಿದೆ ಊಹಿಸಲಾಗದ ವಿಶೇಷ ಫೀಚರ್
WhatsApp
TV9 Web
| Edited By: |

Updated on: Sep 12, 2021 | 11:46 AM

Share

ಬಳಕೆದಾರರಿಗೆ ಸದಾ ಒಂದಲ್ಲಾ ಒಂದು ಹೊಸ ಹೊಸ ಫೀಚರ್​ಗಳನ್ನು ನೀಡುತ್ತಿರುವ ಫೇಸ್​ಬುಕ್ (Facebook) ಒಡೆತನದ ವಾಟ್ಸ್​ಆ್ಯಪ್ (WhatsApp)​ ಮುಂದಿನ ದಿನಗಳಲ್ಲಿ ಸಾಲು ಸಾಲು ಅಪ್ಡೇಟ್​ಗಳನ್ನು ನೀಡುತ್ತಿದೆ. ವಾಟ್ಸ್​ಆ್ಯಪ್​ನಲ್ಲೇ ಫೋಟೋ ಎಡಿಟಿಂಗ್, ವಾಯ್ಸ್ ಮೆಸೇಜ್ ಕಳುಹಿಸುವ ಮುನ್ನ ಕೇಳುವ ಆಯ್ಕೆ, ಲಾಗೌಟ್ ಫೀಚರ್, ಸ್ಟೇಟಸ್​ನಂತೆ ಪ್ರೊಫೈಲ್ ಪೋಟೋ ಕೂಡ ಕೆಲವರಿಗೆ ಮಾತ್ರ ಕಾಣಿಸುವಂತಹ ಆಯ್ಕೆ ಹೀಗೆ ಅನೇಕ ಹೊಸ ಹೊಸ ಫೀಚರ್​ಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಎಲ್ಲ ಬಳಕೆದಾರರಿಗೆ ಸಿಗಲಿದೆ. ಇದರ ನಡುವೆ ಸದ್ಯ ವಾಟ್ಸ್​ಆ್ಯಪ್ ಮತ್ತೊಂದು ಹೊಸ ಅಪ್ಡೇಟ್ (Update) ನೀಡಲು ಮುಂದಾಗಿದೆ. ಅದುವೇ ವಾಯ್ಸ್ ಟ್ರಾನ್ಸ್​​ಕ್ರಿಪ್ಶನ್ ಫೀಚರ್.

ಹೌದು, ಇದೀಗ ವಾಟ್ಸ್ಆ್ಯಪ್ ವಾಯ್ಸ್ ಟ್ರಾನ್ಸ್​ಕ್ರಿಪ್ಶನ್ ಫೀಚರ್ ಪರಿಚಯಿಸುವ ಬಗ್ಗೆ ಕಾರ್ಯನಿರ್ವಹಿಸುತ್ತಿದೆ. ವಾಬೇಟಾ ಇನ್ಫೋ ವರದಿ ಪ್ರಕಾರ, ವಾಟ್ಸ್ಆ್ಯಪ್ ತನ್ನ ಪ್ಲಾಟ್​ಫಾರ್ಮ್​ನಲ್ಲಿ ಟ್ರಾನ್ಸ್​ಕ್ರಿಪ್ಶನ್ ಎಂಬ ಫೀಚರ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಹೊಸ ವೈಶಿಷ್ಟ್ಯವು ಹೊಸತನದಿಂದ ಕೂಡಿದೆ ಎಂದಿದೆ.

ವಾಟ್ಸ್ಆ್ಯಪ್ ಪರಿಚಯಿಸಲಿರುವ ಹೊಸ ವಾಯ್ಸ್ ಟ್ರಾನ್ಸ್​ಕ್ರಿಪ್ಶನ್ ಫೀಚರ್​ನಲ್ಲಿ ಬಳಕೆದಾರರಿಗೆ ಧ್ವನಿ ಸಂದೇಶದ ವಿಷಯವನ್ನು ಓದಬಲ್ಲ ರೂಪದಲ್ಲಿ ನೀಡುತ್ತದೆ. ಅಂದರೆ ಇದು ಇದು ಪಠ್ಯ ರೂಪದಲ್ಲಿ ಸಿಗಲಿದೆ. ಈ ಫೀಚರ್ ಅನ್ನು ಆಯ್ಕೆಯ ಆಧಾರ ಮೇಲೆ ನೀಡಲಾಗುತ್ತದೆ. ಅಂದರೆ ಈ ಫೀಚರ್ ಟ್ರಾನ್ಸ್​ಕ್ರಿಪ್ಶನ್ ಮಾಡಲು ಅನುಮತಿಸಿದಾಗ ಮಾತ್ರ ಸೇವೆ ಸಿಗಲಿದೆ. ವಾಟ್ಸ್ಆ್ಯಪ್ ಕ್ಯಾಮೆರಾ, ಮೈಕ್ರೋಫೋನ್​ಗೆ ಅನುಮತಿ ನೀಡಿದಂತೆ ಇದಕ್ಕೂ ಅನುಮತಿ ಕೇಳುತ್ತದೆ.

ಮಾಹಿತಿ ಪ್ರಕಾರ ವಾಟ್ಸ್ಆ್ಯಪ್ ಬಳಕೆದಾರರ ವಾಯ್ಸ್ ಟ್ರಾನ್ಸ್​ಕ್ರಿಪ್ಶನ್ ಅನ್ನು ಫೇಸ್​ಬುಕ್ ಸರ್ವರ್​ಗೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದೆ. ಕೇವಲ ಆ್ಯಂಡ್ರಾಯ್ಡ್ ಬಳಕೆದಾರರಿಗೆ ಮಾತ್ರವಲ್ಲದೆ ಐಫೊನ್ ಬಳಕೆದಾರರಿಗೂ ಈ ಸೇವೆ ಸಿಗಲಿದೆ. ಧ್ವನಿ ಸಂದೇಶ ಲಿಪ್ಯಾಂತರ ಮಾಡುವುದು, ಭಾಷಣವನ್ನು ಗುರುತಿಸುವ ಸೇವೆಯನ್ನು ಒದಗಿಸಲಿದೆ. ಇದು ಬಳಕೆದಾರರಿಗೆ ಹೆಚ್ಚು ಸಹಾಯಕವಾಗಲಿದೆ.

ಸದ್ಯಕ್ಕೆ iOS ಆಧಾರಿತ ಆ್ಯಪ್ ಗಾಗಿ ಈ ವೈಶಿಷ್ಟ್ಯವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದು ಪಠ್ಯ ನವೀಕರಣದೊಂದಿಗೆ ಬೀಟಾ ಪರೀಕ್ಷಕರಿಗೆ ಸಿಗಲಿದೆ. ಆಂಡ್ರಾಯ್ಡ್ ಆ್ಯಪ್​ಗೆ ವಾಟ್ಸ್ಆ್ಯಪ್​ ವಾಯ್ಸ್ ಟ್ರಾನ್ಸ್​ಕ್ರಿಪ್ಶನ್ ಫೀಚರ್ ಯಾವಾಗ ಲಭ್ಯವಾಗುತ್ತದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ, ಸದ್ಯದಲ್ಲೇ ಈ ಫೀಚರ್ ನೀಡಲಿದೆ ಎಂದು ಹೇಳಲಾಗಿದೆ.

ಇನ್ನೂ ಖಾಸಗಿತನ ಅಥವಾ ಗೌಪ್ಯತೆ ಹಾಗೂ ಭದ್ರತೆಗೆ ಹೆಚ್ಚಿನ ಮಹತ್ವ ನೀಡುವ ವಾಟ್ಸ್​ಆ್ಯಪ್ ಇದಕ್ಕೆ ಸಂಬಂಧ ಪಟ್ಟಂತೆ ತನ್ನ ಚಾಟ್ ಬ್ಯಾಕಪ್‌ಗಳಿಗೂ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಸೇರಿಸಲು ಮುಂದಾಗಿದೆ. ವಾಟ್ಸ್​ಆ್ಯಪ್ ಈಗಾಗಲೇ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಆಗಿವೆ. ಆದರೆ, ಗೂಗಲ್ ಡ್ರೈವ್‌ಗೆ ಮಾಡಿದ ಬ್ಯಾಕಪ್‌ಗಳಿಗೆ ಎನ್‌ಕ್ರಿಪ್ಟ್ ಇರಲಿಲ್ಲ. ಇದರಿಂದ, ಆ ಸಂದೇಶಗಳನ್ನು ಗೂಗಲ್ ಮತ್ತು ಆ ಕಂಪನಿಯ ಉದ್ಯೋಗಿಗಳು ನೋಡಬಹುದಾಗಿತ್ತು. ಸದ್ಯ ಇದನ್ನು ಬದಲಾಯಿಸಲು, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ (E2EE) ಬ್ಯಾಕಪ್‌ಗಳನ್ನು ರಚಿಸುವ ಆಯ್ಕೆಯನ್ನು ಸೇರಿಸುವುದಾಗಿ ಘೋಷಣೆ ಮಾಡಿದೆ.

Jio: IPL​ ಗಾಗಿ ಉಚಿತ ಹಾಟ್​ಸ್ಟಾರ್ ರಿಚಾರ್ಜ್​ ಪ್ಲ್ಯಾನ್ ಪರಿಚಯಿಸಿದ ಜಿಯೋ

ಅಂಡ್ರಾಯ್ಡ್ ಬಳಕೆದಾರರೇ ಎಚ್ಚರ! 19 ಸಾವಿರಕ್ಕೂ ಹೆಚ್ಚು ಆ್ಯಪ್​ಗಳಲ್ಲಿದೆ ನ್ಯೂನತೆ

(WhatsApp New Update WhatsApp is working on a host of new voice transcription feature)

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ