AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Feature: ವಾಟ್ಸ್​ಆ್ಯಪ್ ವಾಯ್ಸ್ ನೋಟ್​ನಲ್ಲಿ ಅಚ್ಚರಿ ಫೀಚರ್: ಸೆಂಡ್ ಮಾಡುವಾಗ ಸಿಗುತ್ತೆ ಈ ಆಯ್ಕೆ

WhatsApp Rolls Out ‘View Once’ Mode for Voice Notes: ವಾಟ್ಸ್​ಆ್ಯಪ್ ತನ್ನ ಐಒಎಸ್ ಮತ್ತು ಆಂಡ್ರಾಯ್ಡ್ ಎರಡರಲ್ಲೂ ಬಳಕೆದಾರರಿಗೆ ವಾಯ್ಸ್ ನೋಟ್ಸ್​ನಲ್ಲಿ 'ವೀವ್ ಒನ್ಸ್' ವೈಶಿಷ್ಟ್ಯವನ್ನು ಹೊರತರುತ್ತಿದೆ. ಈ ಫೀಚರ್ ಪ್ರಸ್ತುತ ಬೀಟಾ ಪರೀಕ್ಷೆಯ ಹಂತದಲ್ಲಿದೆ ಮತ್ತು ಮುಂಬರುವ ದಿನಗಳಲ್ಲಿ ಬಳಕೆದಾರರಿಗೆ ಸಿಗಲಿದೆ.

WhatsApp New Feature: ವಾಟ್ಸ್​ಆ್ಯಪ್ ವಾಯ್ಸ್ ನೋಟ್​ನಲ್ಲಿ ಅಚ್ಚರಿ ಫೀಚರ್: ಸೆಂಡ್ ಮಾಡುವಾಗ ಸಿಗುತ್ತೆ ಈ ಆಯ್ಕೆ
WhatsApp View Once Voice Notes
Follow us
Vinay Bhat
|

Updated on: Oct 19, 2023 | 3:17 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ಕಳೆದ ಕೆಲವು ವಾರಗಳಿಂದ ಒಂದರ ಹಿಂದೆ ಒಂದರಂತೆ ನೂತನ ಫೀಚರ್​ಗಳನ್ನು ಘೋಷಣೆ ಮಾಡುವ ಜೊತೆಗೆ ಬಳಕೆದಾರರಿಗೆ ನೀಡುತ್ತಿದೆ. ಇದೀಗ ಮತ್ತೊಂದು ಉಪಯುಕ್ತ ಆಯ್ಕೆಯನ್ನು ನೀಡಲು ವಾಟ್ಸ್​ಆ್ಯಪ್ ಮುಂದಾಗಿದೆ. ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್​ನಲ್ಲಿ ಕಳುಹಿಸುವ ವಾಯ್ಸ್ ನೋಟ್​ನಲ್ಲಿ ಹೊಸ ಆಯ್ಕೆ ಬರಲಿದೆ. ಇನ್‌ಸ್ಟಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ತನ್ನ ಐಒಎಸ್ ಮತ್ತು ಆಂಡ್ರಾಯ್ಡ್ ಎರಡರಲ್ಲೂ ಬಳಕೆದಾರರಿಗೆ ವಾಯ್ಸ್ ನೋಟ್ಸ್​ನಲ್ಲಿ ‘ವೀವ್ ಒನ್ಸ್’ ವೈಶಿಷ್ಟ್ಯವನ್ನು ಹೊರತರುತ್ತಿದೆ. ಈ ಫೀಚರ್ ಪ್ರಸ್ತುತ ಬೀಟಾ ಪರೀಕ್ಷೆಯ ಹಂತದಲ್ಲಿದೆ ಮತ್ತು ಮುಂಬರುವ ದಿನಗಳಲ್ಲಿ ಬಳಕೆದಾರರಿಗೆ ಸಿಗಲಿದೆ.

ವಾಟ್ಸ್​ಆ್ಯಪ್ ವೈಶಿಷ್ಟ್ಯದ ಟ್ರ್ಯಾಕರ್ WABetaInfo ನ ವರದಿಯ ಪ್ರಕಾರ, ಬೀಟಾ ಬಳಕೆದಾರರಿಗೆ ಈ ಹೊಸ ಗೌಪ್ಯತೆ ವೈಶಿಷ್ಟ್ಯವನ್ನು ಹೊರತರುತ್ತಿದೆ. ವಾಟ್ಸ್​ಆ್ಯಪ್ ಬಳಕೆದಾರರು ಈಗಾಗಲೇ ಆ್ಯಪ್‌ನಲ್ಲಿ ಯಾರಿಗಾದರು ಫೋಟೋ ಮತ್ತು ವಿಡಿಯೋಗಳನ್ನು ಕಳುಹಿಸುವಾಗ ‘ವೀನ್ ಒನ್ಸ್’ ಆಯ್ಕೆಯನ್ನು ಆರಿಸಿಕೊಳ್ಳಬಹುದು. ಈಗ ಅದೇ ಫೀಚರ್ ವಾಯ್ಸ್ ನೋಟ್‌ಗಳಿಗೂ ಬರಲಿದೆ.

ಇಂದು ಒನ್​ಪ್ಲಸ್​ನ ಮೊಟ್ಟ ಮೊದಲ ಮಡಚುವ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಇದನ್ನೂ ಓದಿ
Image
ಭಾರತದಲ್ಲಿ ಪಿಕ್ಸೆಲ್ ಸರಣಿಯ ಸ್ಮಾರ್ಟ್​ಫೋನ್ ತಯಾರಿಸಲು ಮುಂದಾದ ಗೂಗಲ್
Image
ಇನ್ಮುಂದೆ ನಿಮ್ಮ ಹಣ ಸುರಕ್ಷಿತ: ಗೂಗಲ್​ನಿಂದ ಡಿಜಿಕವಚ್ ಅನಾವರಣ
Image
ಬಹುನಿರೀಕ್ಷಿತ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಬಿಡುಗಡೆ: ಬೆಲೆ 14,999 ರೂ.
Image
ಬಲಿಷ್ಠ ಬ್ಯಾಟರಿ, ಪ್ರೊಸೆಸರ್, ಕ್ಯಾಮೆರಾ: ಹಾನರ್​ನಿಂದ ಬಂತು ಅದ್ಭುತ ಫೋನ್

ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್‌ಗಾಗಿ ವಾಟ್ಸ್​ಆ್ಯಪ್​ ಬೀಟಾದಲ್ಲಿ ಮತ್ತು ಟೆಸ್ಟ್‌ಫ್ಲೈಟ್ ಅಪ್ಲಿಕೇಶನ್ ಮೂಲಕ ಐಒಎಸ್‌ಗಾಗಿ ಈ ವೈಶಿಷ್ಟ್ಯವು ಹೊರಹೊಮ್ಮುತ್ತಿದೆ ಎಂದು ವರದಿಯಾಗಿದೆ. ‘ವೀನ್ ಒನ್ಸ್’ ಮೋಡ್ ವೈಶಿಷ್ಟ್ಯ ಆಂಡ್ರಾಯ್ಡ್ 2.23.21.15 ಮತ್ತು 2.23.22.4 ಅಪ್ಡೇಟ್​ನಲ್ಲಿ ಮತ್ತು iOS ನಲ್ಲಿ, ವಾಟ್ಸ್​ಆ್ಯಪ್​ ಬೀಟಾ 23.21.1.73 ಅಪ್‌ಡೇಟ್‌ಗೆ ಬರಲಿದೆ ಎಂದು ವರದಿಯಾಗಿದೆ.

ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಮಾತ್ರ ಲಭ್ಯವಿರುತ್ತದೆ. ಕೆಲವು ದಿನಗಳಲ್ಲಿ ಎಲ್ಲರಿಗೂ ಇದು ಸಿಗಲಿದೆ. ‘ವೀವ್ ಒನ್ಸ್’ ಮೋಡ್ ಆನ್ ಆಗಿರುವ ವಾಯ್ಸ್ ನೋಟ್ಸ್ ಅನ್ನು ಸೇವ್ ಮಾಡಲಿ ಅಥವಾ ಇತರ ಬಳಕೆದಾರರಿಗೆ ಫಾರ್ವರ್ಡ್ ಮಾಡಲು ಸಾಧ್ಯವಿಲ್ಲ. ಹಾಗೆಯೆ ಈ ವೈಶಿಷ್ಟ್ಯವನ್ನು ಸಕ್ರಿಯಗೊಳಿಸಿ ಕಳುಹಿಸಲಾದ ವಾಯ್ಸ್ ನೋಟ್ಸ್ ಅನ್ನು ಮರುಪ್ಲೇ ಮಾಡಲು, ಉಳಿಸಲು ಅಥವಾ ಹಂಚಿಕೊಳ್ಳಲು ಸಾಧ್ಯವಿಲ್ಲ.

ಇತ್ತೀಚಿನ ದಿನಗಳಲ್ಲಿ ವಾಟ್ಸ್​ಆ್ಯಪ್​ ತನ್ನ ಗೌಪ್ಯತೆ ವೈಶಿಷ್ಟ್ಯಗಳನ್ನು ಹೆಚ್ಚಿಸುತ್ತಿದೆ. ಲಾಕ್ ಮಾಡಿದ ಚಾಟ್‌ಗಳಿಗಾಗಿ ಹೊಸ ಸೆಕ್ಯುರುಟಿ ಕೋಡ್ ವೈಶಿಷ್ಟ್ಯದಲ್ಲಿ ಅಪ್ಲಿಕೇಶನ್ ಕಾರ್ಯನಿರ್ವಹಿಸುತ್ತಿದೆ ಎಂದು ಇತ್ತೀಚೆಗೆ ವರದಿಯಾಗಿದೆ. ಇದು ಬಳಕೆದಾರರು ತಮ್ಮ ಸಂರಕ್ಷಿತ ಚಾಟ್ ಫೋಲ್ಡರ್‌ಗಳಿಗೆ ಕಸ್ಟಮ್ ಪಾಸ್‌ವರ್ಡ್ ರಚಿಸಲು ಅನುಮತಿಸುತ್ತದೆ.

ವಾಟ್ಸ್​ಆ್ಯಪ್ ತನ್ನ ಚಾಟ್‌ಗಳಲ್ಲಿ ಸಂದೇಶಗಳನ್ನು ಪಿನ್ ಮಾಡಲು ಅನುಮತಿಸುವ ವೈಶಿಷ್ಟ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಭಿವೃದ್ಧಿಯಲ್ಲಿದ್ದ ಈ ಫೀಚರ್ ಇದೀಗ ಆಂಡ್ರಾಯ್ಡ್ ವಾಟ್ಸ್​ಆ್ಯಪ್ ಬೀಟಾದಲ್ಲಿ ಲಭ್ಯವಿದೆ. ಈ ಹೊಸ ವೈಶಿಷ್ಟ್ಯವು ಇತ್ತೀಚಿನ ವಾಟ್ಸ್​ಆ್ಯಪ್​ ಬೀಟಾದ ಆಂಡ್ರಾಯ್ಡ್ 2.23.21.4 ಅಪ್‌ಡೇಟ್‌ನಲ್ಲಿ ಲಭ್ಯವಿದ್ದು, ಗೂಗಲ್ ಪ್ಲೇ ಸ್ಟೋರ್​ನಿಂದ ಡೌನ್‌ಲೋಡ್ ಮಾಡಬಹುದು. WABetaInfo ಹಂಚಿಕೊಂಡಿರುವ ಸ್ಕ್ರೀನ್‌ಶಾಟ್ ಪ್ರಕಾರ, ಈ ಫೀಚರ್ ಮೂಲಕ ಚಾಟ್‌ಗಳಲ್ಲಿ ಮೆಸೇಜ್ ಅನ್ನು ಪಿನ್ ಮಾಡಬಹುದು. ನೀವು ಪಿನ್ ಮಾಡಲು ಬಯಸುವ ಸಂದೇಶವನ್ನು ಆಯ್ಕೆ ಮಾಡಿದರೆ, ಅದು ಚಾಟ್‌ನ ಮೇಲ್ಭಾಗದಲ್ಲಿ ಗೋಚರಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್