AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp New Feature: ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್: ಇನ್ಮುಂದೆ ಮೆಸೇಜ್ ಬಂದರೆ ನಂಬರ್ ಕಾಣಿಸುವುದಿಲ್ಲ

ಸಾಲು ಸಾಲು ಆಯ್ಕೆಗಳು ಪರೀಕ್ಷೆ ಹಂತದಲ್ಲಿ ಇರುವಾಗಲೇ ಮತ್ತೊಂದು ಹೊಸ ಫೀಚರ್ ಬಗ್ಗೆ ವಾಟ್ಸ್​ಆ್ಯಪ್ ಘೋಷಣೆ ಮಾಡಿದೆ. ಅದುವೇ ಗ್ರೂಪ್​ನಲ್ಲಿ (WhatsApp Group) ಫೋನ್ ನಂಬರ್ ಬದಲಿಗೆ ಹೆಸರು ಕಾಣಿಸುವಂತಹ ಆಯ್ಕೆ.

WhatsApp New Feature: ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್: ಇನ್ಮುಂದೆ ಮೆಸೇಜ್ ಬಂದರೆ ನಂಬರ್ ಕಾಣಿಸುವುದಿಲ್ಲ
WhatsApp
Vinay Bhat
|

Updated on:Mar 17, 2023 | 12:25 PM

Share

ವಿಶ್ವದಲ್ಲಿ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ದಿನಕ್ಕೊಂದು ಹೊಸ ಹೊಸ ಅಪ್ಡೇಟ್ ಅನ್ನು ಘೋಷಣೆ ಮಾಡುತ್ತಿದೆ. ಆಂಡ್ರಾಯ್ಡ್, ಐಒಎಸ್​ಗೆ ಮಾತ್ರವಲ್ಲದೆ ಈಗೀಗ ವೆಬ್ ಬಳಕೆದಾರರಿಗೆ, ಟ್ಯಾಬ್ಲೆಟ್​ನವರಿಗೆ ಕೂಡ ವಿನೂತನ ಫೀಚರ್​ಗಳನ್ನು ನೀಡುತ್ತಿದೆ. ಇತ್ತೀಚೆಗಷ್ಟೆ ತನ್ನ ಬಳಕೆದಾರರಿಗೆ 21 ಹೊಸ ಎಮೋಜಿಗಳನ್ನು ನೀಡಿ ಅಚ್ಚರಿಗೊಳಿಸಿತ್ತು. ಇದರ ನಡುವೆ ಸಾಲು ಸಾಲು ಆಯ್ಕೆಗಳು ಪರೀಕ್ಷೆ ಹಂತದಲ್ಲಿ ಇರುವಾಗಲೇ ಮತ್ತೊಂದು ಹೊಸ ಫೀಚರ್ ಬಗ್ಗೆ ವಾಟ್ಸ್​ಆ್ಯಪ್ ಘೋಷಣೆ ಮಾಡಿದೆ. ಅದುವೇ ಗ್ರೂಪ್​ನಲ್ಲಿ (WhatsApp Group) ಫೋನ್ ನಂಬರ್ ಬದಲಿಗೆ ಹೆಸರು ಕಾಣಿಸುವಂತಹ ಆಯ್ಕೆ.

ಅಂದರೆ ಬಳಕೆದಾರರು ವಾಟ್ಸ್​ಆ್ಯಪ್​ ಗ್ರೂಪ್‌ನಲ್ಲಿ ಯಾವುದೇ ಅಪರಿಚಿತ ಸಂಪರ್ಕದಿಂದ ಸಂದೇಶವನ್ನು ಸ್ವೀಕರಿಸಿದರೆ ಚಾಟ್ ಪಟ್ಟಿಯೊಳಗೆ ಬಳಕೆದಾರರ ಫೋನ್‌ ಸಂಖ್ಯೆ ಬದಲಿಗೆ ಹೆಸರುಗಳನ್ನು ತೋರಿಸುತ್ತದೆ. ಈ ಮೂಲಕ ನಂಬರ್ ಸೇವ್ ಮಾಡದೆ ಮೆಸೇಜ್ ಕಳುಹಿಸಿದವರು ಯಾರೆಂದು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.

ಈ ಫೀಚರ್​ನ ಮತ್ತೊಂದು ಉಪಯೋಗ ಎಂದರೆ ದೊಡ್ಡ ಗ್ರೂಪ್‌ ಇದ್ದಾಗ ಅದರಲ್ಲಿ ಅನೇಕ ಸದಸ್ಯರು ಇರುತ್ತರೆ. ಆದರೆ, ಈ ಎಲ್ಲರ ಹೆಸರುಗಳನ್ನು ನೆನಪಿನಲ್ಲಿ ಇಡುವುದು ಅಥವಾ ಎಲ್ಲರ ಸಂಖ್ಯೆಗಳನ್ನು ಸೇವ್‌ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೀಗ ವಾಟ್ಸ್​ಆ್ಯಪ್ ಪರಿಚಯಿಸಲಿರುವ ಈ ಹೊಸ ಫೀಚರ್​ನಲ್ಲಿ ಸಂಖ್ಯೆಯ ಬದಲಿಗೆ ಹೆಸರನ್ನು ತೋರಿಸಲಾಗುವುದರಿಂದ ಯಾರು ಮೆಸೆಜ್‌ ಕಳುಹಿಸಿದ್ದಾರೆ ಎಂಬುದನ್ನು ಸುಲಭವಾಗಿ ಕಂಡುಹಿಡಿಯಬಹುದು.

ಇದನ್ನೂ ಓದಿ
Image
JIO True 5G: ಕರ್ನಾಟಕದ ಈ ಮೂರು ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಆರಂಭ: ಎಲ್ಲಿ ನೋಡಿ
Image
ಡೈವರ್​​ ಇಲ್ಲದೇ ಕಾರು ಓಡಿಸಬಹುದು, ಮಹೀಂದ್ರಾ XUV700 ನ ವೀಡಿಯೊ ವೈರಲ್
Image
Mozilla Firefox: ಆ್ಯಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಮೊಝಿಲ್ಲಾ ಫೈರ್​ಫಾಕ್ಸ್ ಬಳಸುತ್ತಿದ್ದೀರಾ? ಎಚ್ಚರಿಕೆ!
Image
Flipkart Big Saving Days Sale: ಇಂದು ಕೊನೇ ದಿನ: ದುಬಾರಿ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಕಡಿಮೆಗೆ ಖರೀದಿಸಿ

Meta Layoff: ಮೆಟಾದಿಂದ ಎರಡನೇ ಸುತ್ತಿನ ಉದ್ಯೋಗ ಕಡಿತ ಘೋಷಣೆ; ಕೆಲಸ ಕಳೆದುಕೊಳ್ಳಲಿದ್ದಾರೆ 10 ಸಾವಿರ ಮಂದಿ

ವಾಟ್ಸ್​ಆ್ಯಪ್​ನ ಈ ಫೀಚರ್ ಆಂಡ್ರಾಯ್ಡ್ ಬಳಕೆದಾರರಿಗೆ ಇತ್ತೀಚಿನ ವಾಟ್ಸಾಪ್‌ 2.23.5.12 ಅಪ್‌ಡೇಟ್‌ನಲ್ಲಿ ಮತ್ತು iOS ಬಳಕೆದಾರರಿಗೆ ಇತ್ತೀಚಿನ 23.5.0.73 ಅಪ್‌ಡೇಟ್‌ನಲ್ಲಿ ಲಭ್ಯವಾಗಲಿದ್ದು, ಪರೀಕ್ಷೆಯ ನಂತರ ಎಲ್ಲಾ ಬಳಕೆದಾರರಿಗೂ ಲಭ್ಯವಿರುತ್ತದೆ ಎಂದು ಮೆಟಾ ಹೇಳಿದೆ.

ವಾಟ್ಸ್​ಆ್ಯಪ್​ನಲ್ಲಿ 21 ಹೊಸ ಎಮೋಜಿ:

ಈ ಹೊಸ ಎಮೋಜಿಗಳನ್ನು ವಾಟ್ಸ್​ಆ್ಯಪ್​ ಕೀಬೋರ್ಡ್‌ನಿಂದ ನೇರವಾಗಿ ಸೆಂಡ್‌ ಮಾಡಬಹುದಾಗಿದೆ. ವಾಬೇಟಾಇನ್ಫೋ ಪ್ರಕಾರ ಯುನಿಕೋಡ್ 15.0 ನಿಂದ ಈ 21 ಎಮೋಜಿಗಳನ್ನು ಕಳುಹಿಸಲು ಬೇರೆ ಕೀಬೋರ್ಡ್ ಅನ್ನು ಡೌನ್‌ಲೋಡ್ ಮಾಡಬೇಕಾದ ಅಗತ್ಯವಿಲ್ಲ. ಸದ್ಯದ ಮಾಹಿತಿಯ ಪ್ರಕಾರ, ಕೆಲವು ಬಳಕೆದಾರರಿಗೆ ಈಗಾಗಲೇ ಅಧಿಕೃತ ವಾಟ್ಸ್​ಆ್ಯಪ್​ ಕೀಬೋರ್ಡ್‌ ಮೂಲಕ ಈ ಹೊಸ ಎಮೋಜಿಗಳನ್ನು ಉಪಯೋಗಿಸಬಹುದಾಗಿದೆ. ಇದರ ಮೂಲಕ ಬಳಕೆದಾರರು ಸಂದೇಶದ ಮೂಲಕ ವ್ಯಕ್ತಪಡಿಸಬಹುದಾದ ಭಾವನೆಗಳನ್ನು ಕೆಲವೇ ಎಮೋಜಿಗಳಲ್ಲಿ ತಿಳಿಸಬಹುದು. ನಿಮಗೂ ಆಯ್ಕೆ ಬೇಕು ಎಂದಾದಲ್ಲಿ ವಾಟ್ಸ್​ಆ್ಯಪ್​ ಖಾತೆಯಲ್ಲಿಯೂ ನೂತನ ಆವೃತ್ತಿಗೆ ಅಪ್ಡೇಟ್‌ ಮಾಡಬೇಕು.

ಎಕ್ಸ್​ಪೇರಿಂಗ್ ಗ್ರೂಪ್:

ಎಕ್ಸ್​ಪೇರಿಂಗ್ ಗ್ರೂಪ್ ಎಂಬ ಫೀಚರ್ ಮೇಲೆ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುತ್ತಿದೆ. ಇದರ ಮೂಲಕ ಆ್ಯಕ್ಟಿವ್ ಇಲ್ಲದ ಗ್ರೂಪ್​ಗೆ ಮುಕ್ತಾಯದ ದಿನಾಂಕ ಎಂಬುದನ್ನು ನಿಗದಿ ಮಾಡಿರಲಾಗುತ್ತದೆ. ಆ ಸಮಯ ಬಂದ ನಂತರ ವಾಟ್ಸ್​ಆ್ಯಪ್ ನಿಮಗೆ ಆ ಗ್ರೂಪ್​ನಿಂದ ಹಿಂದೆ ಸರಿಯಲು ಮತ್ತು ಅಡ್ಮಿನ್​ಗೆ ಗ್ರೂಪ್ ಡಿಲೀಟ್ ಮಾಡಲು ಅಲರ್ಟ್ ಮಾಡುತ್ತಾ ಇರುತ್ತದೆ. ಈ ಆಯ್ಕೆ ವಾಟ್ಸ್​ಆ್ಯಪ್ ಗ್ರೂಪ್ ಇನ್​ಫೋ ದಲ್ಲಿ ಇರುತ್ತದೆ. ಅಂತೆಯೆ ಈ ಮುಕ್ತಾಯದ ದಿನಾಂಕವನ್ನು ಬದಲಾವಣೆ ಮಾಡುವ ಅವಕಾಶ ಕೂಡ ಇರುತ್ತದಂತೆ. ಇದರ ಮೂಲಕ ಆ್ಯಕ್ಟಿವ್ ಇಲ್ಲದ ಗ್ರೂಪ್​ನಿಂದ ನೀವು ಹಿಂದೆ ಸರಿದು ಮೆಮೋರಿಯನ್ನು ಉಳಿತಾಯ ಮಾಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:44 pm, Thu, 16 March 23

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ