AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್ಆ್ಯಪ್​​ನಲ್ಲಿರುವ ಅಟೊಮೆಟಿಕ್ ಡಿಲೀಟೆಡ್ ಫೀಚರ್ ಬಳಸಿದ್ದೀರಾ?: ಇಲ್ಲಿದೆ ನೋಡಿ

WhatsApp Tips and Tricks: ವಾಟ್ಸ್​ಆ್ಯಪ್​ನಲ್ಲಿ ಯಾವುದೇ ಥರ್ಡ್​ ಪಾರ್ಟಿ ಆ್ಯಪ್​ಗಳನ್ನು ಬಳಸದೆ ನೀವು ಒಬ್ಬರಿಗೆ ಫೋಟೋ ಅಥವಾ ವಿಡಿಯೋವೊಂದನ್ನು ಕಳುಹಿಸಿದಾಗ, ಅದನ್ನು ಅವರು ಓಪನ್ ಮಾಡಿ ನೋಡಿದ ತಕ್ಷಣ ಡಿಲೀಟ್ ಆಗುವಂತಹ ಆಯ್ಕೆ ನೀಡಲಾಗಿದೆ.

WhatsApp: ವಾಟ್ಸ್ಆ್ಯಪ್​​ನಲ್ಲಿರುವ ಅಟೊಮೆಟಿಕ್ ಡಿಲೀಟೆಡ್ ಫೀಚರ್ ಬಳಸಿದ್ದೀರಾ?: ಇಲ್ಲಿದೆ ನೋಡಿ
WhatsApp
Follow us
TV9 Web
| Updated By: Vinay Bhat

Updated on: Apr 04, 2022 | 6:35 AM

ವಿಶ್ವದಲ್ಲಿ ಕೋಟ್ಯಾಂತರ ಮಂದಿ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆತನದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಹೊಸ ಹೊಸ ಅಪ್ಡೇಟ್ ಅನ್ನು ನೀಡುತ್ತಲೇ ಇದೆ. ಇದಕ್ಕೆ ತಕ್ಕಂತೆ ಅನೇಕ ಟ್ರಿಕ್​ಗಳು ಕೂಡ ಹುಟ್ಟಿಕೊಳ್ಳುತ್ತಾ ಇರುತ್ತವೆ. ಈಗಾಗಲೇ ವಾಟ್ಸ್​ಆ್ಯಪ್​ನಲ್ಲಿ ಡಿಲೀಟ್ ಆದ ಮೆಸೇಜ್​ಗಳನ್ನು ಓದಲು, ಡಿಪಿ ಯಾರು ನೋಡಿದ್ದಾರೆಂದು ತಿಳಿಯಲು ಹೀಗೆ ಹೆಚ್ಚಿನ ಆಯ್ಕೆಗಳನ್ನು ತಿಳಿಯಲು ಬೇರೆ ಬೇರೆ ಥರ್ಡ್​ ಪಾರ್ಟಿ ಆ್ಯಪ್​ಗಳಿವೆ (Third Party App). ಅಂತೆಯೆ ನೀವು ಒಬ್ಬರಿಗೆ ಫೋಟೋ ಅಥವಾ ವಿಡಿಯೋವೊಂದನ್ನು ಕಳುಹಿಸಿದಾಗ, ಅದನ್ನು ಅವರು ಓಪನ್ ಮಾಡಿ ನೋಡಿದ ತಕ್ಷಣ ಡಿಲೀಟ್ ಆಗಿ ಬಿಡುವ ಆಯ್ಕೆ ಕೂಡ ವಾಟ್ಸ್​ಆ್ಯಪ್​ನಲ್ಲಿದೆ. ಇದಕ್ಕೆ ನೀವು ಯಾವುದೇ ಥರ್ಡ್ ಪಾರ್ಟಿ ಆ್ಯಪ್​​ಗಳನ್ನು ಡೌನ್​ಲೋಡ್ ಮಾಡುವ ಅವಶ್ಯಕತೆಯಿಲ್ಲ. ಬದಲಾಗಿ ಈ ಆಯ್ಕೆ ಸ್ವತಃ ವಾಟ್ಸ್​ಆ್ಯಪ್​ನಲ್ಲಿಯೇ ಇದೆ.

ಹೌದು, ವಾಟ್ಸ್​ಆ್ಯಪ್​ನಲ್ಲಿ View Once Feature ಎಂಬ ಸೌಲಭ್ಯ ಆ್ಯಂಡ್ರಾಯ್ಡ್ ಹಾಗೂ ಐಓಎಸ್ ಎರಡೂ ಬಳಕೆದಾರರಿಗೆ ಲಭ್ಯವಾಗುತ್ತಿದೆ. ಇದರಲ್ಲಿ ಫೋಟೋ ಅಥವಾ ವಿಡಿಯೋವನ್ನು ಓಪನ್ ಮಾಡಿ ನೋಡಿದ ತಕ್ಷಣ ಅದು ಮಾಯವಾಗುವುದು ಮಾತ್ರವಲ್ಲದೆ, ಇವು ಫೋನ್ ಮೆಮೊರಿಯಲ್ಲಿ ಎಲ್ಲಿಯೂ ಸ್ಟೋರ್ ಕೂಡ ಆಗದಿರುವುದು ವಿಶೇಷವಾಗಿದೆ. ವಾಟ್ಸ್​ಆ್ಯಪ್ ಪರಿಚಯಿಸಿರುವ ಈ ಸಿಂಗಲ್ ವೀವಿಂಗ್ ಆಯ್ಕೆಯನ್ನು ಈಗಾಗಲೇ ಅನೇಕರು ಮೆಚ್ಚಿಕೊಂಡಿದ್ದಾರೆ. ವಾಟ್ಸ್​ಆ್ಯಪ್​ ಕೆಲ ತಿಂಗಳ ಹಿಂದಷ್ಟೆ ಈ ಆಯ್ಕೆಯನ್ನು ಪರಿಚಯಿಸಿತ್ತು.

ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂದರೆ, ಉದಾಹರಣೆಗೆ ನೀವು ನಿಮ್ಮ ಸ್ನೇಹಿತರ ಚಾಟ್ ಬಾಕ್ಸ್ ಓಪನ್ ಮಾಡಿ ಫೋಟೋ ಅಥವಾ ವಿಡಿಯೋ ಕಳುಹಿಸ ಬೇಕೆಂದಿದ್ದರೆ, ಐಕಾನ್ ಮೇಲೆ ಕ್ಲಿಕ್ ಮಾಡುತ್ತೀರಿ. ಆಗ ಫೋಟೋ ಅಥವಾ ವಿಡಿಯೋ ಸೆಲಕ್ಟ್ ಮಾಡಿ ಸೆಂಡ್ ಬಟನ್ ಪ್ರೆಸ್ ಮಾಡುವ ಪಕ್ಕದಲ್ಲೇ ವೀವ್ ಒನ್ಸ್ ಮೋಡ್ ಆಯ್ಕೆ ಇರುತ್ತದೆ. ಅದನ್ನು ಪ್ರೆಸ್ ಮಾಡಿ ಕಳುಹಿಸಿದರೆ, ನೀವು ಸೆಂಡ್ ಮಾಡಿದ ಫೈಲ್ ಅನ್ನು ಅವರಿಗೆ ಒಮ್ಮೆಗೆ ಮಾತ್ರ ಓಪನ್ ಮಾಡಲು ಸಾಧ್ಯವಾಗುತ್ತಿದೆ.

ಈ View Once Feature ತನ್ನದೇ ಆದ ಕೆಲ ಅನುಕೂಲತೆಗಳೊಂದಿಗೆ ಕೆಲ ಅನಾನುಕೂಲಗಳನ್ನು ಸಹ ಹೊಂದಿದೆ. ಚಾಟ್ ಒಂದನ್ನು ಓಪನ್ ಮಾಡಿದ ತಕ್ಷಣ ಅದು ಚಾಟ್ ಬಾಕ್ಸ್ ನಿಂದ ಮಾಯವಾಗುವುದು ಈ ಫೀಚರ್​ನ ಅತ್ಯಂತ ಕುತೂಹಲಕಾರಿ ವಿಷಯವಾಗಿದೆ. ಈ ಚಾಟ್ ಅಥವಾ ಇದರಲ್ಲಿನ ಫೋಟೋ, ವಿಡಿಯೋ ಫೋನಿನಲ್ಲಿ ಎಲ್ಲಿಯೂ ಸೇವ್ ಆಗಿರುವುದಿಲ್ಲ ಹಾಗೂ ಇದನ್ನು ನೀವು ಮತ್ತೊಬ್ಬರಿಗೆ ಫಾರ್ವರ್ಡ್ ಕೂಡ ಮಾಡಲಾಗುವುದಿಲ್ಲ ಎಂಬುದು ಬೇಸರದ ಸಂಗತಿ.

ಇನ್ನು ವಾಟ್ಸ್​ಆ್ಯಪ್​​ನಲ್ಲಿ ಮುಂದೆ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿದೆ. ಶೀಘ್ರದಲ್ಲೇ ಫೇಸ್​ಬುಕ್​ನಲ್ಲಿರುವಂತೆಯೆ ಮೆಸೇಜ್‌ ರಿಯಾಕ್ಷನ್‌ ಫೀಚರ್ಸ್‌ ಅನ್ನು ಪರಿಚಯಿಸಲಿದೆ. ಇದು ಈಗಾಗಲೇ ಬೇಟಾ ಆವೃತ್ತಿಯಲ್ಲಿ ಲಭ್ಯವಿದೆ. ಇದರ ಜೊತೆಗೆ ವಾಟ್ಸ್​ಆ್ಯಪ್​ನಲ್ಲಿ ಬರೋಬ್ಬರಿ 2GB ವರೆಗೆ ಫೈಲ್​ಗಳನ್ನು ಕಳುಹಿಸಲು ಅನುವು ಮಾಡಿಕೊಡುವ ಫೀಚರ್ ಪರಿಚಯಿಸುತ್ತೇದೆ. ಅಂತೆಯೆ ತನ್ನ ವಾಯ್ಸ್‌ ಮೆಸೇಜ್‌ ಎಕೋ ಸಿಸ್ಟಂನಲ್ಲಿ ಅನೇಕ ಫೀಚರ್​​ಗಳನ್ನು ಘೋಷಣೆ ಮಾಡಿದೆ. ಬಳಕೆದಾರರಿಗೆ ಇನ್ನೂ ಹೆಚ್ಚು ಅನುಕೂಲವಾಗುವಂತೆ ಹೊಸ ಫೀಚರ್ಸ್‌ ಪರಿಚಯಿಸುತ್ತಿದ್ದು, ಇದುಕೂಡ ಆಂಡ್ರಾಯ್ಡ್, ಐಒಎಸ್ ಬಳಕೆದಾರರಿಗೆ ಏಕಕಾಲದಲ್ಲಿ ಲಭ್ಯವಾಗಲಿದೆಯಂತೆ.

Vodafone Idea: ವೊಡಾಫೋನ್ ಐಡಿಯಾ ಪರಿಚಯಿಸಿದ ಹೊಸ ಪ್ಲಾನ್​ಗೆ ದಂಗಾದ ಜಿಯೋ, ಏರ್ಟೆಲ್

Airtel: ನೀವು ಏರ್ಟೆಲ್ ಬಳಕೆದಾರರೇ?: ಹಾಗಿದ್ರೆ ಡಿಸ್ನಿ+ ಹಾಟ್​ಸ್ಟಾರ್​​ನ ಈ ಬಂಪರ್ ಪ್ಲಾನ್ ನೋಡಿ

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ