AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ನಿಮ್ಮನ್ನ ಯಾರು ಬ್ಲಾಕ್ ಮಾಡಿದ್ದಾರೆಂದು ಸುಲಭವಾಗಿ ತಿಳಿಯಿರಿ: ಹೇಗೆ ಗೊತ್ತೇ?

Tech Tips: ವಾಟ್ಸ್​ಆ್ಯಪ್​ನಲ್ಲಿ ಯಾರಾದರೂ ಬ್ಲಾಕ್​ ಮಾಡಿದ್ದಾರಾ ಎಂದು ತಿಳಿಯುವುದು ಅಷ್ಟು ಸುಲಭವಿಲ್ಲ. ಹೀಗಿದ್ದರೂ ಕೆಲವು ಟ್ರಿಕ್ಸ್​ಗಳ ಮೂಲಕ ನಿಮ್ಮ ನಂಬರ್​ ಅನ್ನು ಯಾರಾದರೂ ಬ್ಲಾಕ್ (Block) ಮಾಡಿದ್ದಾರೆಂದು ಸುಲಭವಾಗಿ ತಿಳಿಯಬಹುದಾಗಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ನಿಮ್ಮನ್ನ ಯಾರು ಬ್ಲಾಕ್ ಮಾಡಿದ್ದಾರೆಂದು ಸುಲಭವಾಗಿ ತಿಳಿಯಿರಿ: ಹೇಗೆ ಗೊತ್ತೇ?
Whatsapp Tricks
TV9 Web
| Updated By: Vinay Bhat|

Updated on: Sep 22, 2022 | 11:41 AM

Share

ಇಂದು ವಾಟ್ಸ್​ಆ್ಯಪ್ (WhatsApp) ಮೆಸೆಂಜರ್ ಬಳಕೆ ಮಾಡುವವರ ಸಂಖ್ಯೆ ಕೋಟಿ ದಾಟಿದೆ. ಇದು ಮನುಷ್ಯನ ಜೀವನದ ಒಂದು ಭಾಗವಾಗಿ ಬಿಟ್ಟಿದೆ. ಹಿರಿಯರಿಂದ ಹಿಡಿದು ಕಿರಿಯರವರೆಗೂ ಸಹ ವಾಟ್ಸ್​ಆ್ಯಪ್​ ಬಳಕೆ ಮಾಡುತ್ತಿದ್ದಾರೆ. ಕಾಲ ಕಾಲಕ್ಕೆ ತಕ್ಕಂತೆ ಹೊಸತನಗಳನ್ನು ಅಳವಡಿಸಿಕೊಳ್ಳುತ್ತಾ ಜಾಗತಿಕ ಸಮುದಾಯವನ್ನು ತನ್ನ ತೆಕ್ಕೆಯಲ್ಲಿ ಭದ್ರವಾಗಿ ಹಿಡಿದಿಟ್ಟುಕೊಂಡಿರುವ ವಾಟ್ಸ್​ಆ್ಯಪ್​ನಲ್ಲಿ ಯಾರಾದರೂ ಅನಗತ್ಯ ಮೆಸೇಜುಗಳನ್ನು ಕಳುಹಿಸುತ್ತಿದ್ದರೆ, ಕಿರಿಕಿರಿ ಮಾಡುತ್ತಿದ್ದರೆ ಅವರ ಮೆಸೇಜು ನಮಗೆ ತಲುಪದಂತೆ ಬ್ಲಾಕ್ ಮಾಡಬಹುದು ಆಯ್ಕೆ ಕೂಡ ನೀಡಲಾಗಿದೆ. ಆದರೆ, ಇದರಲ್ಲಿ ಗೌಪ್ಯತೆಗೆ (Privacy) ಒತ್ತು ನೀಡುವ ವಾಟ್ಸ್​ಆ್ಯಪ್ ಬ್ಲಾಕ್​ ಮಾಡಿದ ಸೂಚನೆಯನ್ನು ನೀಡುವುದಿಲ್ಲ. ಹೀಗಾಗಿ ಯಾರಾದರೂ ಬ್ಲಾಕ್​ ಮಾಡಿದ್ದಾರಾ ಎಂದು ತಿಳಿಯುವುದು ಅಷ್ಟು ಸುಲಭವಿಲ್ಲ. ಹೀಗಿದ್ದರೂ ಕೆಲವು ಟ್ರಿಕ್ಸ್​ಗಳ ಮೂಲಕ ನಿಮ್ಮ ನಂಬರ್​ ಅನ್ನು ಯಾರಾದರೂ ಬ್ಲಾಕ್ (Block) ಮಾಡಿದ್ದಾರೆಂದು ಸುಲಭವಾಗಿ ತಿಳಿಯಬಹುದಾಗಿದೆ.

ವಾಟ್ಸ್​ಆ್ಯಪ್​​ ಚಾಟ್ ವಿಂಡೋದಲ್ಲಿ ನಮಗೆ ಬೇಕಾದವರ ಲಾಸ್ಟ್ ಸೀನ್ ಅಥವಾ ಆನ್​ಲೈನ್ ಸ್ಟೇಟಸ್ ಪರಿಶೀಲಿಸುವುದರ ಮೂಲಕ ಅವರು ನಮ್ಮನ್ನು ಬ್ಲಾಕ್ ಮಾಡಿದ್ದನ್ನು ತಿಳಿಯಬಹುದು. ಆದರೆ, ಅವರು ತಮ್ಮ ಲಾಸ್ಟ್ ಸೀನ್ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದರೆ ಈ ವಿಧಾನ ಕೆಲಸಕ್ಕೆ ಬರಲಾರದು. ಅಥವಾ ಒಂದೊಮ್ಮೆ ನಿಮ್ಮ ಗೆಳೆಯರೊಬ್ಬರು ನಿಮ್ಮನ್ನು ವಾಟ್ಸ್​ಆ್ಯಪ್​ನಲ್ಲಿ ಬ್ಲಾಕ್ ಮಾಡಿದ್ದರೆ ಅವರ ಪ್ರೊಫೈಲ್ ಫೋಟೋ ನಿಮಗೆ ಕಾಣಿಸುವುದು ನಿಂತು ಹೋಗುತ್ತದೆ.

ಸುಲಭ ವಿಧಾನ ಎಂದರೆ ವಾಟ್ಸ್​ಆ್ಯಪ್​​ ಗ್ರೂಪ್ ಮಾಡಿ ಚೆಕ್ ಮಾಡುವುದು. ಇದಕ್ಕಾಗಿ ನೀವು ವಾಟ್ಸ್​ಆ್ಯಪ್​​ನಲ್ಲಿ ಹೊಸ ಗ್ರೂಪ್ ವೊಂದನ್ನು ತೆರೆಯಬೇಕು. ನಂತರ ಹೊಸ ಹೆಸರು ನಮೂದಿಸಿದ ಮೇಲೆ ನೆಕ್ಸ್ಟ್ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಹೊಸ ಸದಸ್ಯರನ್ನು ಸೇರಿಸುವ ಅವಕಾಶ ಇರುತ್ತದೆ. ಇಲ್ಲಿ ನಿಮ್ಮನ್ನು ಬ್ಲಾಕ್ ಮಾಡದವರ ಹೆಸರನ್ನು ಕಂಡುಹಿಡಿದುಕೊಳ್ಳಬಹುದು. ಪ್ಲಸ್ ಆಯ್ಕೆ ಮೇಲೆ ಕ್ಲಿಕ್ ಮಾಡುವ ಮೂಲಕ ಅವರ ನಂಬರನ್ನು ಸಹ ಸೇರಿಸಿಕೊಳ್ಳಬಹುದು. ಹಾಗೆ ನೀವು ಆಯ್ಕೆ ಮಾಡಿದ ವ್ಯಕ್ತಿ ಗ್ರೂಪ್ ಸದಸ್ಯನಾಗುತ್ತಾನೆ. ನೀವು ತೆಗೆದುಕೊಂಡ ನಂಬರ್ ಮೇಲೆ ಮಾಡಿ ಕ್ರೀಯೆಟ್ ಅಂತ ಹೇಳಿದರೆ ಹೊಸ ಗ್ರೂಪ್ ಆರಂಭವಾಗುತ್ತದೆ. ಕ್ರೀಯೆಟ್ ಮಾಡಿದ ಗ್ರೂಪ್​ಗೆ ನೀವು ತೆಗೆದುಕೊಂಡ ಸೇರದಿದ್ದರೆ ಅವರು ನಿಮ್ಮನ್ನು ಬ್ಲಾಕ್ ಲಿಸ್ಟ್ ನಲ್ಲಿ ಇಟ್ಟಿದ್ದಾರೆ ಎಂದು ಗೊತ್ತಾಗುತ್ತದೆ.

ಇದನ್ನೂ ಓದಿ
Image
Vivo V25 5G: ಕ್ಯಾಮೆರಾದಲ್ಲಿ ಭರ್ಜರಿ ಫೀಚರ್​​ಗಳಿರುವ ವಿವೋ V25 ಈಗ ಖರೀದಿಗೆ ಲಭ್ಯ: ಆಫರ್ ಏನಿದೆ?
Image
WhatsApp: ವಾಟ್ಸ್​ಆ್ಯಪ್​ನಲ್ಲಿ ಇನ್ನುಂದೆ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಬಹುದು: ಹೇಗೆ ಗೊತ್ತೇ?
Image
Fake App: ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಹಣ ಕದಿಯುವ ಫೇಕ್ ಆ್ಯಪ್ ಇರಬಹುದು: ಸರ್ಕಾರದಿಂದ ವಾರ್ನಿಂಗ್
Image
Flying Bike: ವಿಶ್ವದ ಮೊದಲ ಹಾರುವ ಬೈಕ್ ಬಿಡುಗಡೆಗೆ ಸಜ್ಜು; ಹೇಗಿದೆ ಗೊತ್ತಾ ಬೈಕ್?

ನಿಮ್ಮನ್ನು ಬ್ಲಾಕ್ ಮಾಡಿದವರಿಗೆ ನೀವು ವಾಟ್ಸ್​ಆ್ಯಪ್​​ ಕಾಲ್ ಮಾಡಲು ಪ್ರಯತ್ನಿಸಿದಾಗ ಕಾಲ್ ಕನೆಕ್ಟ್ ಆಗುವುದಿಲ್ಲ. ಕಾಲ್ ಕನೆಕ್ಟ್ ಆಗುತ್ತಿದೆ ಎಂದು ವಾಟ್ಸ್​ಆ್ಯಪ್​​ ತೋರಿಸಿದರೂ ನಿಜವಾಗಿ ಹಾಗೆ ಆಗುತ್ತಿರುವುದಿಲ್ಲ. ಆದರೆ, ಆ ಕಡೆಯವರು ತಮ್ಮ ಇಂಟರ್ನೆಟ್ ಸಂಪರ್ಕ ಬಂದ್ ಮಾಡಿದ್ದರೂ ಹೀಗೇ ಆಗುತ್ತದೆ. ವಾಟ್ಸ್​ಆ್ಯಪ್​​ನಲ್ಲಿ ನಾವು ಕಳುಹಿಸಿದ ಮೆಸೇಜ್ ಆ ಕಡೆಯವರಿಗೆ ತಲುಪಿದಾಗ ಎರಡು ಟಿಕ್ ಮಾರ್ಕ್ ಕಾಣಿಸುತ್ತವೆ. ಆದರೆ ಒಂದೊಮ್ಮೆ ಆ ಕಡೆಯವರು ನಿಮ್ಮನ್ನು ಬ್ಲಾಕ್ ಮಾಡಿದ್ದಲ್ಲಿ ಒಂದು ಟಿಕ್ ಮಾರ್ಕ್ ಮಾತ್ರ ಕಾಣಿಸುತ್ತದೆ.

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ