AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಆಂಡ್ರಾಯ್ಡ್ ಮತ್ತು ಐಫೋನ್​ನಲ್ಲಿ ವಾಟ್ಸ್​ಆ್ಯಪ್ ಡಿಸಪಿಯರಿಂಗ್ ಮೆಸೇಜ್ ಸಕ್ರಿಯಗೊಳಿಸುವುದು ಹೇಗೆ?

ಕಳೆದ ವರ್ಷ ವಾಟ್ಸ್​ಆ್ಯಪ್​​ ಕಣ್ಮರೆಯಾಗುವ ಸಂದೇಶ ಅಂದರೆ ಡಿಸಪಿಯರಿಂಗ್ (Disappearing ) ಮೆಸೇಜ್ ಫೀಚರ್ ಪರಿಚಯಿಸಿತ್ತು. ಈ ಫೀಚರ್‌ಅನ್ನು ಆನ್‌ ಮಾಡಿದಾಗ ನಾವು ಇತರರಿಗೆ ಕಳುಹಿಸಿದ ಅಥವಾ ಇತರರಿಂದ ಪಡೆದ ಮೇಸೆಜ್‌ಗಳು ನಿರ್ದಿಷ್ಟ ಅವಧಿ ನಂತರ ಚಾಟ್‌ನಿಂದ ಅಟೋಮೆಟಿಕ್ ಆಗಿ ಡಿಲೀಟ್ ಆಗುತ್ತವೆ.

WhatsApp: ಆಂಡ್ರಾಯ್ಡ್ ಮತ್ತು ಐಫೋನ್​ನಲ್ಲಿ ವಾಟ್ಸ್​ಆ್ಯಪ್ ಡಿಸಪಿಯರಿಂಗ್ ಮೆಸೇಜ್ ಸಕ್ರಿಯಗೊಳಿಸುವುದು ಹೇಗೆ?
Whatsapp Tricks
TV9 Web
| Edited By: |

Updated on: Oct 03, 2022 | 11:50 AM

Share

ವಿಶ್ವದಲ್ಲಿ ಕೋಟ್ಯಾಂತರ ಮಂದಿ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ವಿನೂತನ ಫೀಚರ್​ಗಳನ್ನು ಪರಿಚಯಿಸುತ್ತಲೇ ಇದೆ. ಈ ವರ್ಷವಂತು ಅತಿ ಹೆಚ್ಚು ಅಪ್ಡೇಟ್​ಗಳನ್ನು ನೀಡಿರುವ ವಾಟ್ಸ್​ಆ್ಯಪ್​ನಲ್ಲಿ ಇನ್ನೂ ಅನೇಕ ಆಯ್ಕೆಗಳು ಬರುವುದರಲ್ಲಿದೆ. ಕಳೆದ ವರ್ಷ ವಾಟ್ಸ್​ಆ್ಯಪ್​​ ಕಣ್ಮರೆಯಾಗುವ ಸಂದೇಶ ಅಂದರೆ ಡಿಸಪಿಯರಿಂಗ್ (Disappearing ) ಮೆಸೇಜ್ ಫೀಚರ್ ಪರಿಚಯಿಸಿತ್ತು. ಈ ಫೀಚರ್‌ಅನ್ನು ಆನ್‌ ಮಾಡಿದಾಗ ನಾವು ಇತರರಿಗೆ ಕಳುಹಿಸಿದ ಅಥವಾ ಇತರರಿಂದ ಪಡೆದ ಮೇಸೆಜ್‌ಗಳು ನಿರ್ದಿಷ್ಟ ಅವಧಿ ನಂತರ ಚಾಟ್‌ನಿಂದ ಅಟೋಮೆಟಿಕ್ ಆಗಿ ಡಿಲೀಟ್ ಆಗುತ್ತವೆ. ಹೀಗೆ ಸಂದೇಶಗಳನ್ನು ಕಣ್ಮರೆಯಾಗಿಸಲು 90 ದಿನಗಳವರೆಗೆ ಅವಕಾಶವಿದೆ. ಹಾಗಾದರೆ ಆಂಡ್ರಾಯ್ಡ್ ಮತ್ತು ಐಫೋನ್ (iPhone)​ನಲ್ಲಿ ವಾಟ್ಸ್​ಆ್ಯಪ್ ಡಿಸಪಿಯರಿಂಗ್ ಮೆಸೇಜ್ ಸಕ್ರಿಯಗೊಳಿಸುವುದು ಹೇಗೆ?.

ಆಂಡ್ರಾಯ್ಡ್​ನಲ್ಲಿ ಕಣ್ಮರೆಯಾಗುವ ಸಂದೇಶಗಳನ್ನು ಸಕ್ರಿಯಗೊಳಿಸುವುದು ಹೇಗೆ?

  • ವಾಟ್ಸ್​ಆ್ಯಪ್ ತೆರೆಯಿರಿ.
  • ಕಾಂಟ್ಯಾಕ್ಟ್ ಹೆಸರನ್ನು ಟ್ಯಾಪ್ ಮಾಡಿ.
  • ಡಿಸಪಿಯರಿಂಗ್‌ ಮೇಸೆಜ್ ಟ್ಯಾಪ್ ಮಾಡಿ. ಪ್ರಾಂಪ್ಟ್ (Prompt) ಮಾಡಿದರೆ, ‘Continue’ ಟ್ಯಾಪ್ ಮಾಡಿ.
  • 24 ಗಂಟೆಗಳು, 7 ದಿನಗಳು ಅಥವಾ 90 ದಿನಗಳನ್ನು ಆಯ್ಕೆಮಾಡಿ.

ಐಫೋನ್​​ನಲ್ಲಿ ಕಣ್ಮರೆಯಾಗುವ ಸಂದೇಶಗಳನ್ನು ಸಕ್ರಿಯಗೊಳಿಸುವುದು ಹೇಗೆ?

ಇದನ್ನೂ ಓದಿ
Image
Paytm: ಪೇಟಿಯಂ ಆ್ಯಪ್ ಮೂಲಕ ರೈಲು ಎಲ್ಲಿದೆ ಎಂದು ಟ್ರ್ಯಾಕ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್
Image
Reliance Jio: ಬರೋಬ್ಬರಿ 168GB ಡೇಟಾ: ಜಿಯೋದ ಈ ಪ್ಲಾನ್ ಹಾಕಿಸಿಕೊಂಡರೆ ಟೆನ್ಶನ್ ಬೇಡ
Image
Spam Calls: ಪದೇ ಪದೇ ಬರುವ ಸ್ಪ್ಯಾಮ್ ಕಾಲ್​ಗಳನ್ನು ಬ್ಲಾಕ್ ಮಾಡುವುದು ಹೇಗೆ?: ಇಲ್ಲಿದೆ ಸಿಂಪಲ್ ಟ್ರಿಕ್
Image
Airtel 5G: ಭಾರತದಲ್ಲಿ ಮೊಟ್ಟ ಮೊದಲ 5G ಸೇವೆ ಆರಂಭಿಸಿದ ಏರ್ಟೆಲ್: ಎಲ್ಲೆಲ್ಲಿ ಲಭ್ಯ, ಬೆಲೆ ಎಷ್ಟು?, ಇಲ್ಲಿದೆ ಮಾಹಿತಿ
  • ವಾಟ್ಸ್​ಆ್ಯಪ್ ತೆರೆಯಿರಿ.
  • ಕಾಂಟ್ಯಾಕ್ಟ್ ಹೆಸರನ್ನು ಟ್ಯಾಪ್ ಮಾಡಿ.
  • ಡಿಸಪಿಯರಿಂಗ್‌ ಮೇಸೆಜ್ ಟ್ಯಾಪ್ ಮಾಡಿ. ಪ್ರಾಂಪ್ಟ್ (Prompt) ಮಾಡಿದರೆ, ‘Continue’ ಟ್ಯಾಪ್ ಮಾಡಿ.
  • 24 ಗಂಟೆಗಳು, 7 ದಿನಗಳು ಅಥವಾ 90 ದಿನಗಳನ್ನು ಆಯ್ಕೆಮಾಡಿ.

ನಿಮ್ಮ ಎಲ್ಲಾ ಹೊಸ ಚಾಟ್‌ಗಳಿಗೆ ಕಣ್ಮರೆಯಾಗುವ ಫಿಚರ್ ಅನ್ನು ಆನ್ ಮಾಡಿದ ನಂತರ ಈ ಬಗ್ಗೆ ಆನ್ ಮಾಡಲಾಗಿದೆ ಎಂಬ ಅಧಿಸೂಚನೆಯು ಚಾಟ್‌ನಲ್ಲಿ ಕಾಣಿಸಿಕೊಳ್ಳುತ್ತದೆ. ಕಣ್ಮರೆಯಾಗುವ ಮೆಸೇಜ್ ಗಳನ್ನು ಪೂರ್ವನಿಯೋಜಿತವಾಗಿ ಆನ್ ಮಾಡಲಾಗಿದೆ ಎಂದು ಅಧಿಸೂಚನೆಯು ತಿಳಿಸುತ್ತದೆ. ಆದ್ದರಿಂದ ನೀವು ನಿರ್ದಿಷ್ಟವಾಗಿ ಆ ಫೀಚರ್ ಅನ್ನು ಬಳಸಿದ್ದೀರಿ ಎಂದು ತಿಳಿಸಲಾಗುತ್ತದೆ.

ಡೀಫಾಲ್ಟ್ ಆಗಿ ಕಣ್ಮರೆಯಾಗುವ ಸಂದೇಶಗಳ ಫಿಚರ್ ಆನ್ ಮಾಡಲು ಬಯಸುವ ಜನರಿಗೆ, ವಾಟ್ಸ್​ಆ್ಯಪ್ ಇತರ ವ್ಯಕ್ತಿಯು ಆಯ್ಕೆ ಮಾಡಿದ ಡೀಫಾಲ್ಟ್ ಎಂದು ಜನರಿಗೆ ಹೇಳುವ ಸಂದೇಶವನ್ನು ಅವರ ಚಾಟ್‌ಗಳಲ್ಲಿ ಪ್ರದರ್ಶಿಸುತ್ತದೆ. ಇದು ವಾಟ್ಸ್​ಆ್ಯಪ್​​ನಲ್ಲಿ ಪ್ರತಿಯೊಬ್ಬರೊಂದಿಗೂ ನೀವು ಹೇಗೆ ಸಂವಹನ ನಡೆಸಬೇಕು ಎಂಬುದರ ಕುರಿತು ನೀವು ಮಾಡಿದ ಆಯ್ಕೆಯಾಗಿರಲಿದೆ.

ವಾಟ್ಸ್​ಆ್ಯಪ್​​ನಲ್ಲಿ ಕಳೆದ ವರ್ಷದ ಡಿಸ್‌ಅಪಿಯರಿಂಗ್‌ ಮೆಸೇಜ್‌ ಫೀಚರ್ಸ್‌ ಅನ್ನು ಪರಿಚಯಿಸಿತ್ತು. ಪ್ರಾರಂಭದಲ್ಲಿ ಡಿಸ್‌ಅಪಿಯರಿಂಗ್‌ ಮೆಸೇಜ್‌ ಫೀಚರ್ಸ್‌ ಸಕ್ರಿಯಗೊಳಿಸಿದರೆ ವಾಟ್ಸ್​ಆ್ಯಪ್​​ನಲ್ಲಿ ಬರುವ ಹೊಸ ಸಂದೇಶಗಳು ಏಳು ದಿನಗಳ ನಂತರ ಸ್ವಯಂಚಾಲಿತವಾಗಿ ಕಣ್ಮರೆಯಾಗುವ ಅವಕಾಶ ನೀಡಲಾಗಿತ್ತು. ಬಳಿಕ ಬಳಕೆದಾರರು ಡಿಸ್‌ಅಪಿಯರಿಂಗ್‌ ಮೆಸೇಜ್‌ ಟೈಂ ಅನ್ನು 90 ದಿನಗಳವರೆಗೆ ಹೆಚ್ಚಿಸಲಾಯಿತು. ಇದಲ್ಲದೆ, ವಾಟ್ಸ್​ಆ್ಯಪ್​​ ಬಳಕೆದಾರರು ಎಲ್ಲಾ ಹೊಸ ಚಾಟ್‌ಗಳಿಗೆ ಡೀಫಾಲ್ಟ್ ಆಗಿ ಮೆಸೇಜ್‌ ಡಿಸ್‌ಅಪಿಯರಿಂಗ್ ಅನ್ನು ಆನ್ ಮಾಡುವ ಆಯ್ಕೆಯನ್ನು ಸಹ ನೀಡಲಾಗಿದೆ.

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ