AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಬಳಕೆದಾರರ ಸುರಕ್ಷತೆಗೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟ ವಾಟ್ಸ್​ಆ್ಯಪ್: ಏನದು ನೋಡಿ

WhatsApp Double Verification System: ಇದೀಗ ಬಳಕೆದಾರರು ವಾಟ್ಸ್​ಆ್ಯಪ್​​ ಅಕೌಂಟ್‌ಗೆ ಲಾಗ್‌ ಇನ್‌ ಮಾಡುವುದಕ್ಕೆ ಹೆಚ್ಚುವರಿ ಭದ್ರತೆಯ ಫೀಚರ್ಸ್‌ ಪರಿಚಯಿಸಲು ಮುಂದಾಗಿದೆ. ಅಂದರೆ ವಾಟ್ಸ್​ಆ್ಯಪ್​​​ ಡಬಲ್ ವೆರಿಫಿಕೇಶನ್ ಕೋಡ್ ಅನ್ನು ಕೇಳಲಿದೆ.

WhatsApp: ಬಳಕೆದಾರರ ಸುರಕ್ಷತೆಗೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟ ವಾಟ್ಸ್​ಆ್ಯಪ್: ಏನದು ನೋಡಿ
WhatsApp
TV9 Web
| Updated By: Vinay Bhat|

Updated on:Jun 06, 2022 | 1:36 PM

Share

ವಿಶ್ವದಲ್ಲಿ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆತನದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp)​ ಈಗಾಗಲೇ ಹೊಸ ಹೊಸ ಫೀಚರ್​ಗಳನ್ನು ಪರಿಚಯಿಸುತ್ತಿದೆ. ಇತ್ತೀಚೆಗಷ್ಟೆ ಮೆಸೇಜ್ ರಿಯಾಕ್ಷನ್ (Message Reaction) ಸೇರಿದಂತೆ ಕೆಲ ಅಮೂಲ್ಯ ವಿಶೇಷತೆಗಳನ್ನು ಪರಿಚಯಿಸಿದ್ದ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಹೊಸ ಆಯ್ಕೆಗಳು ಬರಲು ಪರೀಕ್ಷಾ ಹಂತದಲ್ಲಿದೆ. ಎರಡು ದಿನಗಳ ಹಿಂದೆಯಷ್ಟೆ ವಾಟ್ಸ್‌ಆ್ಯಪ್, ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡುವ ಆಯ್ಕೆ ಗ್ರಾಹಕರಿಗೆ ಒದಗಿಸುವುದಾಗಿ ಹೇಳಿತ್ತು. ಅಲ್ಲದೆ ಡಿಲೀಟ್ ಆದ ಚಾಟ್ ಅನ್ನು ಮರಳಿಸುವ ಅನ್​ಡು ಆಯ್ಕೆ ನೀಡುವುದಾಗಿ ಹೇಳಿತ್ತು. ಇದೀಗ ಬಳಕೆದಾರರು ವಾಟ್ಸ್​ಆ್ಯಪ್​​ ಅಕೌಂಟ್‌ಗೆ ಲಾಗ್‌ ಇನ್‌ ಮಾಡುವುದಕ್ಕೆ ಹೆಚ್ಚುವರಿ ಭದ್ರತೆಯ ಫೀಚರ್ಸ್‌ ಪರಿಚಯಿಸಲು ಮುಂದಾಗಿದೆ.

ಅಂದರೆ ವಾಟ್ಸ್​ಆ್ಯಪ್​​​ ಡಬಲ್ ವೆರಿಫಿಕೇಶನ್ ಕೋಡ್ ಅನ್ನು ಕೇಳಲಿದೆ. SMS ಮೂಲಕ ಕಳುಹಿಸಲಾದ ವೆರಿಫಿಕೇಶನ್‌ ಕೋಡ್‌ ಹೊರತುಪಡಿಸಿ ನಿಮಗೆ ಹೆಚ್ಚುವರಿ ಪರಿಶೀಲನೆ ಕೋಡ್ ಕೇಳಲಿದೆ. ಇದರಿಂದ ನಿಮ್ಮ ವಾಟ್ಸ್​ಆ್ಯಪ್​​​ ಅಕೌಂಟ್‌ ಫೋನ್‌ ನಂಬರ್‌ ಅನ್ನು ಈಗಾಗಲೇ ಮತ್ತೊಂದು ಫೋನ್‌ನಲ್ಲಿ ಬಳಸುತ್ತಿದ್ದರೆ, ನಿಮ್ಮ ಖಾತೆಯು ನಿಮ್ಮ ನಿಯಂತ್ರಣದಲ್ಲಿದೆ ಎಂದು ಖಚಿತಪಡಿಸಿಕೊಳ್ಳಲು ಇದು ಸಹಾಯ ಮಾಡಲಿದೆ.

ಇಂದಿನಿಂದ Apple WWDC 2022 ಈವೆಂಟ್‌ ಪ್ರಾರಂಭ: iOS 16 ಬಿಡುಗಡೆ ಆಗುವ ನಿರೀಕ್ಷೆ

ಇದನ್ನೂ ಓದಿ
Image
Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಫೋನ್ ಮಾರಾಟ ಇಂದಿನಿಂದ ಆರಂಭ
Image
Best Smartphone: ಇಲ್ಲಿದೆ ನೋಡಿ 15,000 ರೂ. ಒಳಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು
Image
WhatsApp: ನಿಮ್ಮ ಫ್ರೆಂಡ್ಸ್ ನಿಮ್ಮನ್ನ ಹೈಡ್ ಮಾಡಿ ಏನು ಸ್ಟೇಟಸ್ ಹಾಕಿದ್ದಾರೆ ನೋಡಬೇಕೇ?: ಇಲ್ಲಿದೆ ಟ್ರಿಕ್
Image
Vivo: ವಿವೋದ ಹೊಸ ಸ್ಮಾರ್ಟ್​​ಫೋನ್ ಫೀಚರ್ ಕಂಡು ಬೆರಗಾದ ಟೆಕ್ ಮಾರುಕಟ್ಟೆ: ಅಂಥದ್ದೇನಿದೆ ನೋಡಿ

ಹೆಚ್ಚುವರಿ ಭದ್ರತೆಗಾಗಿ ನೀವು ಕೋಡ್ ಕಳುಹಿಸುವ ಮೊದಲು ಟೈಮರ್ ಮುಗಿಯುವವರೆಗೆ ಕಾಯಬೇಕಾಗುತ್ತದೆ. ಆದರೆ ನೀವು ಕೋಡ್ ಅನ್ನು ಸ್ವೀಕರಿಸಿದಾಗ, ಅದನ್ನು ನಮೂದಿಸುವ ಮೂಲಕ ನಿಮ್ಮ ಖಾತೆಗೆ ಪ್ರವೇಶವನ್ನು ಪಡೆಯಬಹುದಾಗಿದೆ. ಈ ಹೊಸ ವೆರಿಫಿಕೇಶನ್‌ ಫೀಚರ್ಸ್‌ನಿಂದಾಗಿ ವಾಟ್ಸ್​ಆ್ಯಪ್​​​ ಬಳಕೆದಾರರ ಖಾತೆಗಳಿಗೆ ಅನಧಿಕೃತ ಪ್ರವೇಶವನ್ನು ತಡೆಯಲು ಸಾಧ್ಯವಾಗಲಿದೆ.

ಇನ್ನು ವಾಟ್ಸ್​ಆ್ಯಪ್​ನಲ್ಲಿ ನೀವು ಮೆಸೇಜ್ ಒಂದನ್ನು ಡಿಲೀಟ್ ಮಾಡಿದರೆ ಅದನ್ನು ಅನ್​ಡು ಮಾಡುವ ಆಯ್ಕೆ ನಿಮಗೆ ಸಿಗಲಿದೆ. ಹೆಚ್ಚಿನ ಬಾರಿ ಬಳಕೆದಾರರು ಮೆಸೇಜ್ ಡಿಲೀಟ್ ಮಾಡಲು ಹೊರಟಾಗ ಡಿಲೀಟ್ ಫಾರ್ ಎವರಿವರ್ ಬದಲು ಡಿಲೀಟ್ ಫಾರ್ ಮಿ ಒತ್ತಿ ಬಿಡುತ್ತಾರೆ. ವಾಟ್ಸ್​ಆ್ಯಪ್​ನ ಈ ಹೊಸ ಅನ್​ಡು ಬಟನ್ ಇದಕ್ಕೆ ಸಹಕಾರಿ ಆಗಲಿದೆ. ಸದ್ಯದಲ್ಲೇ ಈ ಆಯ್ಕೆ ಎಲ್ಲ ಬಳಕೆದಾರರಿಗೆ ಸಿಗಲಿದೆಯಂತೆ. ವಾಟ್ಸ್​ಆ್ಯಪ್​ ಬೇಟಾ ವರ್ಷನ್​ನಲ್ಲಿರುವ ಈ ಆಯ್ಕೆ ಬಗ್ಗೆ ಸ್ಕ್ರೀನ್ ಶಾಟ್ ಒಂದಿದ್ದು, ಇದರ ಪ್ರಕಾರ ನೀವು ಡಿಲೀಟ್ ಫಾರ್ ಮಿ ಆಯ್ಕೆಯನ್ನು ಒತ್ತಿದ ತಕ್ಷಣ ಮೇಲಿನ ಭಾಗದಲ್ಲಿ ಈ ಮೆಸೇಜ್ ಅನ್ನು ಅನ್​ಡು ಮಾಡಬೇಕೆ ಎಂಬ ಪಾಪ್​-ಅಪ್ ಆಯ್ಕೆ ಕಾಣಲಿದೆ. ಈಗಾಗಲೇ ಟೆಲಿಗ್ರಾಮ್​ನಲ್ಲಿ ಈ ಅಪ್ಡೇಟ್ ನೀಡಲಾಗಿದೆ.

ಅಂತೆಯೆ ವಾಟ್ಸ್​​ಆ್ಯಪ್‌ನ ಬೀಟಾ ಆವೃತ್ತಿಯಲ್ಲಿ ಎಡಿಟ್ ಬಟನನ್ನು ಪರೀಕ್ಷಿಸುತ್ತಿದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಸದ್ಯ ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ. ಎಲ್ಲಾ ವಾಟ್ಸ್​ಆ್ಯಪ್​​ ಸಂಬಂಧಿತ ಬೆಳವಣಿಗೆಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ Wabetainfo ಈ ವೈಶಿಷ್ಟ್ಯವನ್ನು ಗುರುತಿಸಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:36 pm, Mon, 6 June 22

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ