AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಬಳಕೆದಾರರ ಸುರಕ್ಷತೆಗೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟ ವಾಟ್ಸ್​ಆ್ಯಪ್: ಏನದು ನೋಡಿ

WhatsApp Double Verification System: ಇದೀಗ ಬಳಕೆದಾರರು ವಾಟ್ಸ್​ಆ್ಯಪ್​​ ಅಕೌಂಟ್‌ಗೆ ಲಾಗ್‌ ಇನ್‌ ಮಾಡುವುದಕ್ಕೆ ಹೆಚ್ಚುವರಿ ಭದ್ರತೆಯ ಫೀಚರ್ಸ್‌ ಪರಿಚಯಿಸಲು ಮುಂದಾಗಿದೆ. ಅಂದರೆ ವಾಟ್ಸ್​ಆ್ಯಪ್​​​ ಡಬಲ್ ವೆರಿಫಿಕೇಶನ್ ಕೋಡ್ ಅನ್ನು ಕೇಳಲಿದೆ.

WhatsApp: ಬಳಕೆದಾರರ ಸುರಕ್ಷತೆಗೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟ ವಾಟ್ಸ್​ಆ್ಯಪ್: ಏನದು ನೋಡಿ
WhatsApp
TV9 Web
| Edited By: |

Updated on:Jun 06, 2022 | 1:36 PM

Share

ವಿಶ್ವದಲ್ಲಿ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆತನದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp)​ ಈಗಾಗಲೇ ಹೊಸ ಹೊಸ ಫೀಚರ್​ಗಳನ್ನು ಪರಿಚಯಿಸುತ್ತಿದೆ. ಇತ್ತೀಚೆಗಷ್ಟೆ ಮೆಸೇಜ್ ರಿಯಾಕ್ಷನ್ (Message Reaction) ಸೇರಿದಂತೆ ಕೆಲ ಅಮೂಲ್ಯ ವಿಶೇಷತೆಗಳನ್ನು ಪರಿಚಯಿಸಿದ್ದ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಹೊಸ ಆಯ್ಕೆಗಳು ಬರಲು ಪರೀಕ್ಷಾ ಹಂತದಲ್ಲಿದೆ. ಎರಡು ದಿನಗಳ ಹಿಂದೆಯಷ್ಟೆ ವಾಟ್ಸ್‌ಆ್ಯಪ್, ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡುವ ಆಯ್ಕೆ ಗ್ರಾಹಕರಿಗೆ ಒದಗಿಸುವುದಾಗಿ ಹೇಳಿತ್ತು. ಅಲ್ಲದೆ ಡಿಲೀಟ್ ಆದ ಚಾಟ್ ಅನ್ನು ಮರಳಿಸುವ ಅನ್​ಡು ಆಯ್ಕೆ ನೀಡುವುದಾಗಿ ಹೇಳಿತ್ತು. ಇದೀಗ ಬಳಕೆದಾರರು ವಾಟ್ಸ್​ಆ್ಯಪ್​​ ಅಕೌಂಟ್‌ಗೆ ಲಾಗ್‌ ಇನ್‌ ಮಾಡುವುದಕ್ಕೆ ಹೆಚ್ಚುವರಿ ಭದ್ರತೆಯ ಫೀಚರ್ಸ್‌ ಪರಿಚಯಿಸಲು ಮುಂದಾಗಿದೆ.

ಅಂದರೆ ವಾಟ್ಸ್​ಆ್ಯಪ್​​​ ಡಬಲ್ ವೆರಿಫಿಕೇಶನ್ ಕೋಡ್ ಅನ್ನು ಕೇಳಲಿದೆ. SMS ಮೂಲಕ ಕಳುಹಿಸಲಾದ ವೆರಿಫಿಕೇಶನ್‌ ಕೋಡ್‌ ಹೊರತುಪಡಿಸಿ ನಿಮಗೆ ಹೆಚ್ಚುವರಿ ಪರಿಶೀಲನೆ ಕೋಡ್ ಕೇಳಲಿದೆ. ಇದರಿಂದ ನಿಮ್ಮ ವಾಟ್ಸ್​ಆ್ಯಪ್​​​ ಅಕೌಂಟ್‌ ಫೋನ್‌ ನಂಬರ್‌ ಅನ್ನು ಈಗಾಗಲೇ ಮತ್ತೊಂದು ಫೋನ್‌ನಲ್ಲಿ ಬಳಸುತ್ತಿದ್ದರೆ, ನಿಮ್ಮ ಖಾತೆಯು ನಿಮ್ಮ ನಿಯಂತ್ರಣದಲ್ಲಿದೆ ಎಂದು ಖಚಿತಪಡಿಸಿಕೊಳ್ಳಲು ಇದು ಸಹಾಯ ಮಾಡಲಿದೆ.

ಇಂದಿನಿಂದ Apple WWDC 2022 ಈವೆಂಟ್‌ ಪ್ರಾರಂಭ: iOS 16 ಬಿಡುಗಡೆ ಆಗುವ ನಿರೀಕ್ಷೆ

ಇದನ್ನೂ ಓದಿ
Image
Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಫೋನ್ ಮಾರಾಟ ಇಂದಿನಿಂದ ಆರಂಭ
Image
Best Smartphone: ಇಲ್ಲಿದೆ ನೋಡಿ 15,000 ರೂ. ಒಳಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು
Image
WhatsApp: ನಿಮ್ಮ ಫ್ರೆಂಡ್ಸ್ ನಿಮ್ಮನ್ನ ಹೈಡ್ ಮಾಡಿ ಏನು ಸ್ಟೇಟಸ್ ಹಾಕಿದ್ದಾರೆ ನೋಡಬೇಕೇ?: ಇಲ್ಲಿದೆ ಟ್ರಿಕ್
Image
ವಿವೋದ ಹೊಸ ಸ್ಮಾರ್ಟ್​​ಫೋನ್ ಫೀಚರ್ ಕಂಡು ಬೆರಗಾದ ಟೆಕ್ ಮಾರುಕಟ್ಟೆ

ಹೆಚ್ಚುವರಿ ಭದ್ರತೆಗಾಗಿ ನೀವು ಕೋಡ್ ಕಳುಹಿಸುವ ಮೊದಲು ಟೈಮರ್ ಮುಗಿಯುವವರೆಗೆ ಕಾಯಬೇಕಾಗುತ್ತದೆ. ಆದರೆ ನೀವು ಕೋಡ್ ಅನ್ನು ಸ್ವೀಕರಿಸಿದಾಗ, ಅದನ್ನು ನಮೂದಿಸುವ ಮೂಲಕ ನಿಮ್ಮ ಖಾತೆಗೆ ಪ್ರವೇಶವನ್ನು ಪಡೆಯಬಹುದಾಗಿದೆ. ಈ ಹೊಸ ವೆರಿಫಿಕೇಶನ್‌ ಫೀಚರ್ಸ್‌ನಿಂದಾಗಿ ವಾಟ್ಸ್​ಆ್ಯಪ್​​​ ಬಳಕೆದಾರರ ಖಾತೆಗಳಿಗೆ ಅನಧಿಕೃತ ಪ್ರವೇಶವನ್ನು ತಡೆಯಲು ಸಾಧ್ಯವಾಗಲಿದೆ.

ಇನ್ನು ವಾಟ್ಸ್​ಆ್ಯಪ್​ನಲ್ಲಿ ನೀವು ಮೆಸೇಜ್ ಒಂದನ್ನು ಡಿಲೀಟ್ ಮಾಡಿದರೆ ಅದನ್ನು ಅನ್​ಡು ಮಾಡುವ ಆಯ್ಕೆ ನಿಮಗೆ ಸಿಗಲಿದೆ. ಹೆಚ್ಚಿನ ಬಾರಿ ಬಳಕೆದಾರರು ಮೆಸೇಜ್ ಡಿಲೀಟ್ ಮಾಡಲು ಹೊರಟಾಗ ಡಿಲೀಟ್ ಫಾರ್ ಎವರಿವರ್ ಬದಲು ಡಿಲೀಟ್ ಫಾರ್ ಮಿ ಒತ್ತಿ ಬಿಡುತ್ತಾರೆ. ವಾಟ್ಸ್​ಆ್ಯಪ್​ನ ಈ ಹೊಸ ಅನ್​ಡು ಬಟನ್ ಇದಕ್ಕೆ ಸಹಕಾರಿ ಆಗಲಿದೆ. ಸದ್ಯದಲ್ಲೇ ಈ ಆಯ್ಕೆ ಎಲ್ಲ ಬಳಕೆದಾರರಿಗೆ ಸಿಗಲಿದೆಯಂತೆ. ವಾಟ್ಸ್​ಆ್ಯಪ್​ ಬೇಟಾ ವರ್ಷನ್​ನಲ್ಲಿರುವ ಈ ಆಯ್ಕೆ ಬಗ್ಗೆ ಸ್ಕ್ರೀನ್ ಶಾಟ್ ಒಂದಿದ್ದು, ಇದರ ಪ್ರಕಾರ ನೀವು ಡಿಲೀಟ್ ಫಾರ್ ಮಿ ಆಯ್ಕೆಯನ್ನು ಒತ್ತಿದ ತಕ್ಷಣ ಮೇಲಿನ ಭಾಗದಲ್ಲಿ ಈ ಮೆಸೇಜ್ ಅನ್ನು ಅನ್​ಡು ಮಾಡಬೇಕೆ ಎಂಬ ಪಾಪ್​-ಅಪ್ ಆಯ್ಕೆ ಕಾಣಲಿದೆ. ಈಗಾಗಲೇ ಟೆಲಿಗ್ರಾಮ್​ನಲ್ಲಿ ಈ ಅಪ್ಡೇಟ್ ನೀಡಲಾಗಿದೆ.

ಅಂತೆಯೆ ವಾಟ್ಸ್​​ಆ್ಯಪ್‌ನ ಬೀಟಾ ಆವೃತ್ತಿಯಲ್ಲಿ ಎಡಿಟ್ ಬಟನನ್ನು ಪರೀಕ್ಷಿಸುತ್ತಿದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಸದ್ಯ ಮುಂಬರುವ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ. ಎಲ್ಲಾ ವಾಟ್ಸ್​ಆ್ಯಪ್​​ ಸಂಬಂಧಿತ ಬೆಳವಣಿಗೆಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ Wabetainfo ಈ ವೈಶಿಷ್ಟ್ಯವನ್ನು ಗುರುತಿಸಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:36 pm, Mon, 6 June 22

Follow Us
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು