Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಬಹುನಿರೀಕ್ಷಿತ ಮಿಸ್ಡ್ ಕಾಲ್ ಅಲರ್ಟ್‌ ಫೀಚರ್: ಏನಿದರ ವಿಶೇಷತೆ?, ಇಲ್ಲಿದೆ ಮಾಹಿತಿ

WhatsApp New Features: ವಾಟ್ಸ್​ಆ್ಯಪ್ ಮಿಸ್ಡ್ ಕಾಲ್ ಅಲರ್ಟ್‌ ಎಂಬ ಹೊಸ ಫೀಚರ್ಸ್‌ ಬಿಡುಗಡೆ ಮಾಡುವ ಕುರಿತು ಮಾಹಿತಿ ಹಂಚಿಕೊಂಡಿದೆ. ಈ ಆಯ್ಕೆಯ ಮೂಲಕ ನಿಮ್ಮ ಸ್ಮಾರ್ಟ್​ಫೋನ್‌ ಎಲ್ಲಾದರು 'ಡೋಂಟ್ ಡಿಸ್ಟರ್ಬ್‌ ಮೋಡ್‌'ನಲ್ಲಿ ಇರಿಸಿದ್ದಾಗ ಯಾರಾದರು ನಿಮ್ಮ ವಾಟ್ಸ್​ಆ್ಯಪ್​ಗೆ ಕರೆ ಮಾಡಿದರೆ ಇದು ಸಹಾಯ ಮಾಡಲಿದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ಬಹುನಿರೀಕ್ಷಿತ ಮಿಸ್ಡ್ ಕಾಲ್ ಅಲರ್ಟ್‌ ಫೀಚರ್: ಏನಿದರ ವಿಶೇಷತೆ?, ಇಲ್ಲಿದೆ ಮಾಹಿತಿ
whatsapp new features
Follow us
TV9 Web
| Updated By: Vinay Bhat

Updated on: Nov 16, 2022 | 6:42 AM

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಈ ವರ್ಷ ಸಾಕಷ್ಟು ಬೆಳವಣಿಗೆ ಕಂಡಿದೆ. ಅತಿ ಹೆಚ್ಚು ನೂತನ ಫೀಚರ್​ಗಳನ್ನು 2022 ರಲ್ಲಿ ಬಿಡುಗಡೆ ಮಾಡಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​​ಆ್ಯಪ್ (WhatsApp) ಬಳಕೆದಾರರ ಸಂಖ್ಯೆ 2 ಬಿಲಿಯನ್ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಕಳೆದ ವಾರವಷ್ಟೆ ಕಮ್ಯೂನಿಟಿದ ಆಯ್ಕೆಯನ್ನು ನೀಡಿದ್ದ ವಾಟ್ಸ್​ಆ್ಯಪ್​ನಲ್ಲಿ ಇನ್ನೂ ಅನೇಕ ಫೀಚರ್​ಗಳು ಬರುವುದರಲ್ಲಿದೆ. ಕೆಲವೊಂದು ಅಪ್ಡೇಟ್​ಗಳು ಬೀಟಾ (Beta) ವರ್ಷನ್​ನಲ್ಲಿ ಲಭ್ಯವಾಗುತ್ತಿದೆ. ಹೀಗಿರುವಾಗ ಮಿಸ್ಡ್ ಕಾಲ್ ಅಲರ್ಟ್‌’ ಎಂಬ ಹೊಸ ಫೀಚರ್ಸ್‌ ಬಿಡುಗಡೆ ಮಾಡುವ ಕುರಿತು ಮಾಹಿತಿ ಹಂಚಿಕೊಂಡಿದೆ.

ಈ ಆಯ್ಕೆಯ ಮೂಲಕ ನಿಮ್ಮ ಸ್ಮಾರ್ಟ್​ಫೋನ್‌ ಎಲ್ಲಾದರು ‘ಡೋಂಟ್ ಡಿಸ್ಟರ್ಬ್‌ ಮೋಡ್‌’ನಲ್ಲಿ ಇರಿಸಿದ್ದಾಗ ಯಾರಾದರು ನಿಮ್ಮ ವಾಟ್ಸ್​ಆ್ಯಪ್​ಗೆ ಕರೆ ಮಾಡಿದರೆ ಇದು ಸಹಾಯ ಮಾಡಲಿದೆ. ಅಂದರೆ ನೀವು ಯಾವುದೇ ಕರೆಯನ್ನು ಮಿಸ್‌ ಮಾಡಿಕೊಂಡಿದ್ದರೆ ಅದರ ಮಾಹಿತಿ ಲಭ್ಯವಾಗಲಿದೆ. ವಾಟ್ಸ್​ಆ್ಯಪ್​ ಇದೀಗ ಈ ಫೀಚರ್ಸ್‌ ಹೊರತರಲು ಬಹುತೇಕ ಸಿದ್ಧವಾಗಿದೆ. ಹಾಗೆಯೇ ಇತ್ತೀಚಿನ ಬೀಟಾ ಆವೃತ್ತಿ 2.22.24.7 ಯಲ್ಲಿ ಈ ಫೀಚರ್ಸ್‌ ಲಭ್ಯವಾಗಲಿದೆ. ಜೊತೆಗೆ ಕೆಲವು ಬೀಟಾ ವಾಟ್ಸ್​ಆ್ಯಪ್ ಬಳಕೆದಾರರಿಗೆ ಈ ಫೀಚರ್ಸ್‌ ಅನ್ನು ಈಗಾಗಲೇ ಪರಿಚಯಿಸಲಾಗಿದೆ ಎಂದು ತಿಳಿದುಬಂದಿದೆ.

ಕಂಪ್ಯಾನಿಯನ್‌ ಮೋಡ್‌ ಆಯ್ಕೆ:

ಇದನ್ನೂ ಓದಿ
Image
VLC Media Player: ಭಾರತದಲ್ಲಿ ವಿಎಲ್​ಸಿ ಮೀಡಿಯಾ ಪ್ಲೇಯರ್ ನಿಷೇಧ ವಾಪಸ್‌ ಪಡೆದ ಸರ್ಕಾರ
Image
ಆಂಡ್ರಾಯ್ಡ್​ನಲ್ಲಿ ಸುಲಭವಾಗಿ ಲಾಕ್ ಹ್ಯಾಕ್ ಮಾಡಬಹುದು: ಈ ವಿಡಿಯೋ ನೋಡಿದ್ರೆ ಬೆಚ್ಚಿ ಬೀಳ್ತೀರಾ
Image
Lava Blaze 5G: ಭಾರತದ ಅತಿ ಅಗ್ಗದ 5ಜಿ ಸ್ಮಾರ್ಟ್​ಫೋನ್ ಲಾವಾ ಬ್ಲೇಜ್‌ ಇಂದಿನಿಂದ ಖರೀಗೆ ಲಭ್ಯ
Image
Cyber Crime: ಸೈಬರ್ ಕ್ರೈಮ್ ಜಾಲಕ್ಕೆ ಬಿದ್ದು ಹಣ ಕಳೆದುಕೊಂಡರೆ ತಕ್ಷಣ ಏನು ಮಾಡಬೇಕು?: ಇಲ್ಲಿದೆ ಫುಲ್ ಡಿಟೇಲ್ಸ್

ವಾಟ್ಸ್​ಆ್ಯಪ್​ನ ಈ ಹೊಸ ಕಂಪ್ಯಾನಿಯನ್ ಮೋಡ್ ಎಂಬ ಫೀಚರ್ಸ್‌ ಮೂಲಕ ಬಳಕೆದಾರರು ಏಕಕಾಲದಲ್ಲಿ ಎರಡು ಅಥವಾ ಹೆಚ್ಚಿನ ಡಿವೈಸ್‌ಗಳಲ್ಲಿ ವಾಟ್ಸ್​ಆ್ಯಪ್​​ ಬಳಸಬಹುದು. ಅಂದರೆ ನಿಮ್ಮ ವಾಟ್ಸ್​ಆ್ಯಪ್​​ ಆಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಬಳಸಬಹುದು. ಇದು ಬಾರ್‌ಕೋಡ್‌ ಸ್ಕ್ಯಾನ್‌ ಮೂಲಕ ಕಾರ್ಯನಿರ್ವಹಿಸಲಿದೆ. ಒಂದೇ ಸಮಯದಲ್ಲಿ ನಾಲ್ಕು ಡಿವೈಸ್‌ಗಳಲ್ಲಿ ಅಕೌಂಟ್‌ ಲಿಂಕ್‌ ಮಾಡಿದರೆ ಲಿಂಕ್ ಮಾಡಲಾದ ಎಲ್ಲಾ ಫೋನ್‌ಗಳಲ್ಲಿಯೂ ಚಾಟ್‌ಗಳು ಮತ್ತು ಡೇಟಾವನ್ನು ಬಳಕೆದಾರ ಸ್ವೀಕರಿಸುತ್ತಾನೆ.

ಕಂಪ್ಯಾನಿಯನ್ ಮೋಡ್ ಅನ್ನು ಆಂಡ್ರಾಯ್ಡ್‌ ಡಿವೈಸ್‌ಗಳಲ್ಲಿ v2.22.23.18 ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗುತ್ತಿದೆ. ಈ ಆಯ್ಕೆ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಯನ್‌ ಮೂಲಕ ಕಾರ್ಯನಿರ್ವಹಿಸಲಿದೆ. ಸದ್ಯ ಈ ಹೊಸ ಆಂಡ್ರಾಯ್ಡ್‌ಗಾಗಿ ಬೀಟಾ ಬಿಲ್ಡ್‌ನಲ್ಲಿ ಮಾತ್ರ ಲಭ್ಯವಿದೆ. ಶೀಘ್ರದಲ್ಲೇ ಐಒಎಸ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಪರೀಕ್ಷಿಸಲ್ಪಡುವ ನಿರೀಕ್ಷೆಯಿದೆ. ಇದು ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಕಮ್ಯೂನಿಟಿ ಫೀಚರ್:

ವಾಟ್ಸ್​ಆ್ಯಪ್ ಇತ್ತೀಚೆಗಷ್ಟೆ ತನ್ನ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ವಾಟ್ಸ್​ಆ್ಯಪ್​ ಕಮ್ಯೂನಿಟಿಗಳು ಜನರಿಗೆ ಕೆಲಸ ಮಾಡುವ ರಚನೆಯೊಂದಿಗೆ ಪ್ರತ್ಯೇಕ ಗುಂಪುಗಳನ್ನು ಒಂದೇ ಸೂರಿನಡಿಯಲ್ಲಿ ತರಲು ಅನುವು ಮಾಡಿಕೊಡುತ್ತದೆ.

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!