AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?

ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು? ಎಂಬುದರ ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿ ಓದಿ.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?
ಸಂಗ್ರಹ ಚಿತ್ರ
TV9 Web
| Edited By: |

Updated on: Oct 13, 2021 | 12:22 PM

Share

ಭಾರತದಲ್ಲಿ ವಾಟ್ಸ್ ಆಪ್​ಅನ್ನು ರಾತ್ರಿರಿಂದ ಬೆಳಗಿನಜಾವದವರೆಗೆ ನಿಷೇಧಿಸಲಾಗುತ್ತದೆ ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದೆ ಎಂಬ ವೈರಲ್ ಸಂದೇಶವೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ರಾತ್ರಿ 11:30 ರಿಂದ ಬೆಳಿಗ್ಗೆ 6ರವೆರೆಗೆ ವಾಟ್ಸ್ ಆಪ್ ಮುಚ್ಚಲಾಗುವುದು ಈ ಸಂದೇಶವನ್ನು ಪಾರ್ವರ್ಡ್ ಮಾಡದಿದ್ದಲ್ಲಿ ಅವರ ವಾಟ್ಸ್ ಆಪ್ ಖಾತೆಯನ್ನೇ ಮುಚ್ಚಲಾಗುವುದು ಎಂಬ ಸಂದೇಶವೊಂದು ಹರಿದಾಡುತ್ತಿದೆ. ಇದು ನಕಲಿ ಮತ್ತು ಬಳಕೆದಾರರನ್ನು ದಾರಿ ತಪ್ಪಿಸಲು ಈ ರೀತಿ ಮಾಡಲಾಗುತ್ತಿದೆ ಎಂದು ಪ್ರೆಸ್ ಇನ್​ಫಾರ್ಮೇಶನ್​ ಬ್ಯರೋ (ಪಿಐಬಿ) ಹೇಳಿದೆ.

ನಕಲಿ ಸಂದೇಶವನ್ನು ವಜಾಗೊಳಿಸಲು, ಪಿಐಬಿ ಸತ್ಯ ಪರಿಶೀಲನೆಗೆ ಮುಂದಾಗಿದೆ. ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶ ನಕಲಿ. ಈ ರೀತಿ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಪಿಬಿಐ ಸ್ಪಷ್ಟನೆ ನೀಡಿದೆ. ಈ ರೀತಿಯಾದ ಸುಳ್ಳು ಮತ್ತು ಆಧಾರ ರಹಿತ ಮಾಹಿತಿಗಳನ್ನು ನಂಬದಂತೆ ಜನರಿಗೆ ಪಿಬಿಐ ಫ್ಯಾಕ್ಟ್ ಚೆಕ್ ಕೇಳಿಕೊಂಡಿದೆ.

ಪಿಬಿಐ ಫ್ಯಾಕ್ಟ್​ ಚೆಕ್​ ಟ್ವೀಟ್​;

ಇತ್ತೀಚೆಗೆ ವಾಟ್ಸ್ ಆಪ್, ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​ಗಳು ಗಂಟೆಗಳ ಕಾಲ ಸ್ಥಗಿತಗೊಂಡಿದ್ದವು. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ಇಂತಹ ಸುಳ್ಳು ಸಂದೇಶಗಳು ಹರಿದಾಡುತ್ತಿವೆ. ಡೌನ್ ಡಿಟೆಕ್ಟರ್ ಪ್ರಕಾರ, ಈ ಸಮಸ್ಯೆಗಳು ಅಕ್ಟೋಬರ್ 4ರಂದು ರಾತ್ರಿ 11:30ರ ದುಮಾರಿಗೆ ಎದುರಾದವು. ಇದು ಜಗತ್ತಿನಾದ್ಯಂತ ಬಳಕೆದಾರರ ಮೇಲೆ ಪರಿಣಾಮ ಬೀರಿತು.

ಇದನ್ನೂ ಓದಿ:

WhatsApp Tricks: ಇದೀಗ ಟೈಪ್ ಮಾಡದೇ ವಾಟ್ಸ್​ಆ್ಯಪ್​ನಲ್ಲಿ ಟೆಕ್ಸ್ಟ್​​​ ಮೆಸೇಜ್ ಕಳುಹಿಸಿ: ಇಲ್ಲಿದೆ ಟ್ರಿಕ್

WhatsApp ಯಾರ ಕಣ್ಣಿಗೂ ಕಾಣಿಸದಂತೆ ವಾಟ್ಸ್​​ಆಪ್ ಚಾಟ್ ಬಚ್ಚಿಡುವುದು ಹೇಗೆ? ಇಲ್ಲಿದೆ ಸುಲಭದ ಉಪಾಯ

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು