AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?

ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು? ಎಂಬುದರ ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿ ಓದಿ.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?
ಸಂಗ್ರಹ ಚಿತ್ರ
TV9 Web
| Edited By: |

Updated on: Oct 13, 2021 | 12:22 PM

Share

ಭಾರತದಲ್ಲಿ ವಾಟ್ಸ್ ಆಪ್​ಅನ್ನು ರಾತ್ರಿರಿಂದ ಬೆಳಗಿನಜಾವದವರೆಗೆ ನಿಷೇಧಿಸಲಾಗುತ್ತದೆ ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದೆ ಎಂಬ ವೈರಲ್ ಸಂದೇಶವೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ರಾತ್ರಿ 11:30 ರಿಂದ ಬೆಳಿಗ್ಗೆ 6ರವೆರೆಗೆ ವಾಟ್ಸ್ ಆಪ್ ಮುಚ್ಚಲಾಗುವುದು ಈ ಸಂದೇಶವನ್ನು ಪಾರ್ವರ್ಡ್ ಮಾಡದಿದ್ದಲ್ಲಿ ಅವರ ವಾಟ್ಸ್ ಆಪ್ ಖಾತೆಯನ್ನೇ ಮುಚ್ಚಲಾಗುವುದು ಎಂಬ ಸಂದೇಶವೊಂದು ಹರಿದಾಡುತ್ತಿದೆ. ಇದು ನಕಲಿ ಮತ್ತು ಬಳಕೆದಾರರನ್ನು ದಾರಿ ತಪ್ಪಿಸಲು ಈ ರೀತಿ ಮಾಡಲಾಗುತ್ತಿದೆ ಎಂದು ಪ್ರೆಸ್ ಇನ್​ಫಾರ್ಮೇಶನ್​ ಬ್ಯರೋ (ಪಿಐಬಿ) ಹೇಳಿದೆ.

ನಕಲಿ ಸಂದೇಶವನ್ನು ವಜಾಗೊಳಿಸಲು, ಪಿಐಬಿ ಸತ್ಯ ಪರಿಶೀಲನೆಗೆ ಮುಂದಾಗಿದೆ. ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶ ನಕಲಿ. ಈ ರೀತಿ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಪಿಬಿಐ ಸ್ಪಷ್ಟನೆ ನೀಡಿದೆ. ಈ ರೀತಿಯಾದ ಸುಳ್ಳು ಮತ್ತು ಆಧಾರ ರಹಿತ ಮಾಹಿತಿಗಳನ್ನು ನಂಬದಂತೆ ಜನರಿಗೆ ಪಿಬಿಐ ಫ್ಯಾಕ್ಟ್ ಚೆಕ್ ಕೇಳಿಕೊಂಡಿದೆ.

ಪಿಬಿಐ ಫ್ಯಾಕ್ಟ್​ ಚೆಕ್​ ಟ್ವೀಟ್​;

ಇತ್ತೀಚೆಗೆ ವಾಟ್ಸ್ ಆಪ್, ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​ಗಳು ಗಂಟೆಗಳ ಕಾಲ ಸ್ಥಗಿತಗೊಂಡಿದ್ದವು. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ಇಂತಹ ಸುಳ್ಳು ಸಂದೇಶಗಳು ಹರಿದಾಡುತ್ತಿವೆ. ಡೌನ್ ಡಿಟೆಕ್ಟರ್ ಪ್ರಕಾರ, ಈ ಸಮಸ್ಯೆಗಳು ಅಕ್ಟೋಬರ್ 4ರಂದು ರಾತ್ರಿ 11:30ರ ದುಮಾರಿಗೆ ಎದುರಾದವು. ಇದು ಜಗತ್ತಿನಾದ್ಯಂತ ಬಳಕೆದಾರರ ಮೇಲೆ ಪರಿಣಾಮ ಬೀರಿತು.

ಇದನ್ನೂ ಓದಿ:

WhatsApp Tricks: ಇದೀಗ ಟೈಪ್ ಮಾಡದೇ ವಾಟ್ಸ್​ಆ್ಯಪ್​ನಲ್ಲಿ ಟೆಕ್ಸ್ಟ್​​​ ಮೆಸೇಜ್ ಕಳುಹಿಸಿ: ಇಲ್ಲಿದೆ ಟ್ರಿಕ್

WhatsApp ಯಾರ ಕಣ್ಣಿಗೂ ಕಾಣಿಸದಂತೆ ವಾಟ್ಸ್​​ಆಪ್ ಚಾಟ್ ಬಚ್ಚಿಡುವುದು ಹೇಗೆ? ಇಲ್ಲಿದೆ ಸುಲಭದ ಉಪಾಯ

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ