AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?

ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು? ಎಂಬುದರ ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿ ಓದಿ.

Fact Check: ಸರ್ಕಾರಿ ಆದೇಶದಂತೆ ಭಾರತದಲ್ಲಿ ರಾತ್ರಿ 11:30ರಿಂದ ಬೆಳಿಗ್ಗೆ 6ರವರೆಗೆ ವಾಟ್ಸ್​ಆಪ್​ ನಿಷೇಧ! ಈ ವೈರಲ್ ಸಂದೇಶದ ಸತ್ಯಾಸತ್ಯತೆಗಳೇನು?
ಸಂಗ್ರಹ ಚಿತ್ರ
TV9 Web
| Edited By: |

Updated on: Oct 13, 2021 | 12:22 PM

Share

ಭಾರತದಲ್ಲಿ ವಾಟ್ಸ್ ಆಪ್​ಅನ್ನು ರಾತ್ರಿರಿಂದ ಬೆಳಗಿನಜಾವದವರೆಗೆ ನಿಷೇಧಿಸಲಾಗುತ್ತದೆ ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದೆ ಎಂಬ ವೈರಲ್ ಸಂದೇಶವೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ರಾತ್ರಿ 11:30 ರಿಂದ ಬೆಳಿಗ್ಗೆ 6ರವೆರೆಗೆ ವಾಟ್ಸ್ ಆಪ್ ಮುಚ್ಚಲಾಗುವುದು ಈ ಸಂದೇಶವನ್ನು ಪಾರ್ವರ್ಡ್ ಮಾಡದಿದ್ದಲ್ಲಿ ಅವರ ವಾಟ್ಸ್ ಆಪ್ ಖಾತೆಯನ್ನೇ ಮುಚ್ಚಲಾಗುವುದು ಎಂಬ ಸಂದೇಶವೊಂದು ಹರಿದಾಡುತ್ತಿದೆ. ಇದು ನಕಲಿ ಮತ್ತು ಬಳಕೆದಾರರನ್ನು ದಾರಿ ತಪ್ಪಿಸಲು ಈ ರೀತಿ ಮಾಡಲಾಗುತ್ತಿದೆ ಎಂದು ಪ್ರೆಸ್ ಇನ್​ಫಾರ್ಮೇಶನ್​ ಬ್ಯರೋ (ಪಿಐಬಿ) ಹೇಳಿದೆ.

ನಕಲಿ ಸಂದೇಶವನ್ನು ವಜಾಗೊಳಿಸಲು, ಪಿಐಬಿ ಸತ್ಯ ಪರಿಶೀಲನೆಗೆ ಮುಂದಾಗಿದೆ. ವಾಟ್ಸ್ ಆಪ್ಅನ್ನು ರಾತ್ರಿ 11:30 ರಿಂದ ಬೆಳಿಗ್ಗೆ 6ರವರೆಗೆ ಮುಚ್ಚಲಾಗುವುದು ಎಂಬ ವೈರಲ್ ಸಂದೇಶ ನಕಲಿ. ಈ ರೀತಿ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಪಿಬಿಐ ಸ್ಪಷ್ಟನೆ ನೀಡಿದೆ. ಈ ರೀತಿಯಾದ ಸುಳ್ಳು ಮತ್ತು ಆಧಾರ ರಹಿತ ಮಾಹಿತಿಗಳನ್ನು ನಂಬದಂತೆ ಜನರಿಗೆ ಪಿಬಿಐ ಫ್ಯಾಕ್ಟ್ ಚೆಕ್ ಕೇಳಿಕೊಂಡಿದೆ.

ಪಿಬಿಐ ಫ್ಯಾಕ್ಟ್​ ಚೆಕ್​ ಟ್ವೀಟ್​;

ಇತ್ತೀಚೆಗೆ ವಾಟ್ಸ್ ಆಪ್, ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​ಗಳು ಗಂಟೆಗಳ ಕಾಲ ಸ್ಥಗಿತಗೊಂಡಿದ್ದವು. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ಇಂತಹ ಸುಳ್ಳು ಸಂದೇಶಗಳು ಹರಿದಾಡುತ್ತಿವೆ. ಡೌನ್ ಡಿಟೆಕ್ಟರ್ ಪ್ರಕಾರ, ಈ ಸಮಸ್ಯೆಗಳು ಅಕ್ಟೋಬರ್ 4ರಂದು ರಾತ್ರಿ 11:30ರ ದುಮಾರಿಗೆ ಎದುರಾದವು. ಇದು ಜಗತ್ತಿನಾದ್ಯಂತ ಬಳಕೆದಾರರ ಮೇಲೆ ಪರಿಣಾಮ ಬೀರಿತು.

ಇದನ್ನೂ ಓದಿ:

WhatsApp Tricks: ಇದೀಗ ಟೈಪ್ ಮಾಡದೇ ವಾಟ್ಸ್​ಆ್ಯಪ್​ನಲ್ಲಿ ಟೆಕ್ಸ್ಟ್​​​ ಮೆಸೇಜ್ ಕಳುಹಿಸಿ: ಇಲ್ಲಿದೆ ಟ್ರಿಕ್

WhatsApp ಯಾರ ಕಣ್ಣಿಗೂ ಕಾಣಿಸದಂತೆ ವಾಟ್ಸ್​​ಆಪ್ ಚಾಟ್ ಬಚ್ಚಿಡುವುದು ಹೇಗೆ? ಇಲ್ಲಿದೆ ಸುಲಭದ ಉಪಾಯ

Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್