Redmi 13C: ಭಾರತದಲ್ಲಿ ಈ ವರ್ಷದ ಕೊನೆಯ ಫೋನ್ ರಿಲೀಸ್ ಮಾಡಲು ಮುಂದಾದ ಶವೋಮಿ: ಯಾವುದು ನೋಡಿ

Redmi 13C India Launch Date: ರೆಡ್ಮಿಯ ಹೊಸ ಬಜೆಟ್ ಸ್ಮಾರ್ಟ್​ಫೋನ್ ರೆಡ್ಮಿ 13C ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ. ಇದು ಮೀಡಿಯಾಟೆಕ್ ಹಿಲಿಯೊ G85 ಚಿಪ್‌ಸೆಟ್‌ನೊಂದಿಗೆ ಬರುವ ನಿರೀಕ್ಷೆ ಇದೆ. ಇದರ 4GB RAM + 128GB ಸ್ಟೋರೇಜ್ ಮಾಡೆಲ್‌ಗೆ ಸುಮಾರು ರೂ. 10,100 ಇರಬಹುದು.

Redmi 13C: ಭಾರತದಲ್ಲಿ ಈ ವರ್ಷದ ಕೊನೆಯ ಫೋನ್ ರಿಲೀಸ್ ಮಾಡಲು ಮುಂದಾದ ಶವೋಮಿ: ಯಾವುದು ನೋಡಿ
Redmi 13C
Follow us
|

Updated on: Nov 26, 2023 | 2:51 PM

ಈಗೀಗ ಶವೋಮಿ (Xiaomi) ಕಂಪನಿಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವುದು ತೀರ ಅಪರೂಪ. ಎರಡು ಮೂರು ತಿಂಗಳಿಗಷ್ಟೆ ಒಂದು ಫೋನನ್ನು ಪರಿಚಯಿಸುತ್ತಿದೆ. ಹೀಗಿರುವಾಗ ಇದೀಗ ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್​ನ ಅಡಿಯಲ್ಲಿ ಭಾರತದಲ್ಲಿ ಈ ವರ್ಷದ ಕೊನೆಯ ಫೋನ್ ಅನಾವರಣ ಮಾಡಲು ಸಜ್ಜಾಗಿದೆ. ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬಜೆಟ್ ಬೆಲೆಯ ರೆಡ್ಮಿ 13C ರಿಲೀಸ್ ಮಾಡಲಿದೆ ಎಂದು ಹೇಳಲಾಗಿದೆ. ಇದು ರೆಡ್ಮಿ 12C ಯ ಉತ್ತರಾಧಿಕಾರಿಯಾಗಿದೆ. ಈ ಫೋನಿನ ಬೆಲೆ, ಫೀಚರ್ಸ್ ಏನಿರಬಹುದು ಎಂಬುದನ್ನು ನೋಡೋಣ.

ರೆಡ್ಮಿ 13C ಭಾರತೀಯ ರೂಪಾಂತರ

  • ರೆಡ್ಮಿಯ ಹೊಸ ಬಜೆಟ್ ಸ್ಮಾರ್ಟ್​ಫೋನ್, ಮೀಡಿಯಾಟೆಕ್ ಹಿಲಿಯೊ G85 ಚಿಪ್‌ಸೆಟ್‌ನೊಂದಿಗೆ ಬರುವ ನಿರೀಕ್ಷೆ ಇದೆ. ಈ ಸಾಧನದ ಯಾವ ಬಣ್ಣ ಮತ್ತು ಶೇಖರಣಾ ರೂಪಾಂತರಗಳಲ್ಲಿ ಭಾರತಕ್ಕೆ ಬರುತ್ತವೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ.
  • ರೆಡ್ಮಿ 13C ಸ್ಮಾರ್ಟ್​ಫೋನ್ ಆಂಡ್ರಾಯ್ಡ್ 13 ಆಧಾರಿತ MIUI 14 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 90Hz ರಿಫ್ರೆಶ್ ದರದೊಂದಿಗೆ 6.74-ಇಂಚಿನ HD+ (1,080×2,460 ಪಿಕ್ಸೆಲ್‌ಗಳು) ಡಿಸ್‌ಪ್ಲೇಯನ್ನು ಹೊಂದಿದೆ.
  • ಕ್ಯಾಮೆರಾ ವಿಚಾರಕ್ಕೆ ಬಂದರೆ, ರೆಡ್ಮಿ 13C ಟ್ರಿಪಲ್ ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯನ್ನು ಹೊಂದಿದೆ. ಇದು ಎರಡು 2-ಮೆಗಾಪಿಕ್ಸೆಲ್ ಶೂಟರ್‌ಗಳ ಜೊತೆಗೆ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಒಳಗೊಂಡಿದೆ.
  • ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗ 5 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ರೆಡ್ಮಿ ಫೋನ್ 5,000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.
  • ಮೂಲಗಳ ಪ್ರಕಾರ ರೆಡ್ಮಿ 13C ಸ್ಮಾರ್ಟ್​ಫೋನ್ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಳ್ಳಬಹುದು. ಇದರ 4GB RAM + 128GB ಸ್ಟೋರೇಜ್ ಮಾಡೆಲ್‌ಗೆ ಸುಮಾರು ರೂ. 10,100 ಇರಬಹುದು.
  • 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ ಸುಮಾರು ರೂ. 11,000, 8GB RAM + 256GB ಆಯ್ಕೆಗೆ ಸುಮಾರು ರೂ. 12,500 ಇರುವ ಸಾಧ್ಯತೆ ಇದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ