AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Redmi 12C: ಶವೋಮಿಯಿಂದ ಅತಿ ಕಡಿಮೆ ಬೆಲೆಗೆ ರೆಡ್ಮಿ 12C ಸ್ಮಾರ್ಟ್‌ಫೋನ್‌ ಬಿಡುಗಡೆ: ಎಷ್ಟು ರೂ. ಗೊತ್ತೇ?

ಹೆಚ್ಚಾಗಿ ಬಜೆಟ್ ಬೆಲೆಗೆ ರೆಡ್ಮಿ ಫೋನನ್ನು ರಿಲೀಸ್ ಮಾಡುವ ಶವೋಮಿ ಇದೀಗ ಹೊಸ ರೆಡ್ಮಿ 12ಸಿ (Redmi 12C) ಎಂಬ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದೆ.

Redmi 12C: ಶವೋಮಿಯಿಂದ ಅತಿ ಕಡಿಮೆ ಬೆಲೆಗೆ ರೆಡ್ಮಿ 12C ಸ್ಮಾರ್ಟ್‌ಫೋನ್‌ ಬಿಡುಗಡೆ: ಎಷ್ಟು ರೂ. ಗೊತ್ತೇ?
Redmi 12C
Follow us
Vinay Bhat
|

Updated on:Mar 11, 2023 | 11:17 AM

ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಕಂಪನಿ ತನ್ನ ರೆಡ್ಮಿ ಬ್ರ್ಯಾಂಡ್​ನಡಿಯಲ್ಲಿ ಹೊಸ ಸ್ಮಾರ್ಟ್​ಫೋನ್​ಗಳನ್ನು ಘೋಷಣೆ ಮಾಡುತ್ತಿದ್ದು ಅನೇಕ ಮೊಬೈಲ್​ಗಳು ಬಿಡುಗಡೆಗೆ ತಯಾರಾಗಿ ನಿಂತಿದೆ. ಹೆಚ್ಚಾಗಿ ಬಜೆಟ್ ಬೆಲೆಗೆ ರೆಡ್ಮಿ ಫೋನನ್ನು ರಿಲೀಸ್ ಮಾಡುವ ಶವೋಮಿ ಇದೀಗ ಹೊಸ ರೆಡ್ಮಿ 12ಸಿ (Redmi 12C) ಎಂಬ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದೆ. ಹೀಗಿದ್ದರೂ ಅತ್ಯುತ್ತಮ ಬ್ಯಾಟರಿ, ಪ್ರೊಸೆಸರ್, ಕ್ಯಾಮೆರಾದಿಂದ ಆವೃತ್ತವಾಗಿದೆ. ಗ್ಲೋಬಲ್‌ ವೇರಿಯೆಂಟ್‌ ಆಯ್ಕೆಯು ಮೂಲಕ ಜಾಗತಿಕ ಮಾರುಕಟ್ಟೆಯಲ್ಲಿ ಲಾಂಚ್‌ ಆರುವ ಈ ಫೋನಿನ (Phone) ಬೆಲೆ ಎಷ್ಟು?, ಏನಿದೆ ಫೀಚರ್ಸ್ ಎಂಬುದನ್ನು ನೋಡೋಣ.

  • ನೂತನ ರೆಡ್ಮಿ 12C ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಇಂಡೋನೇಷ್ಯಾದಲ್ಲಿ ಬಿಡುಗಡೆ ಆಗಿದೆ. ಅಲ್ಲಿ ಇದರ 4GB RAM + 128GB ಇಂಟರ್‌ ಸ್ಟೋರೇಜ್ ವೇರಿಯಂಟ್‌ ಆಯ್ಕೆಗೆ IDR 1,599,000 ನಿಗದಿ ಮಾಡಲಾಗಿದೆ. ಅದೇ ಭಾರತದಲ್ಲಿ ಇದರ ಬೆಲೆ ಅಂದಾಜು 8,500ರೂ. ಇರಬಹುದು.
  • ಈ ಸ್ಮಾರ್ಟ್‌ಫೋನ್‌ ಶಾಡೋ ಬ್ಲಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಈ ತಿಂಗಳ ಅಂತ್ಯದ ಹೊತ್ತಿಗೆ ರೆಡ್ಮಿ 12C ಭಾರತದಲ್ಲೂ ಅನಾವರಣಗೊಳ್ಳುವ ನಿರೀಕ್ಷೆಯಿದೆ.
  • ಇದನ್ನೂ ಓದಿ
    Image
    Mobile Data: ಅತಿ ಕಡಿಮೆ ಬೆಲೆಗೆ ಇಂಟರ್ನೆಟ್ ಸೇವೆ ನೀಡುತ್ತಿರುವ ದೇಶ ಯಾವುದು ಗೊತ್ತೇ?
    Image
    iQOO Z7 5G: ಬಹುನಿರೀಕ್ಷಿತ ಐಕ್ಯೂ Z7 5G ಆಗಮನಕ್ಕೆ ದಿನಾಂಕ ಫಿಕ್ಸ್: ಏನಿದರ ವಿಶೇಷತೆ ನೋಡಿ
    Image
    OnePlus TV 65 Q2 Pro: ₹99,999 ಬೆಲೆಯ ಒನ್​ಪ್ಲಸ್ ಸ್ಮಾರ್ಟ್ ಟಿವಿ ಬಿಡುಗಡೆ
    Image
    FASTag Balance Check: ನಿಮ್ಮ ಫಾಸ್ಟ್​ಟ್ಯಾಗ್​ನಲ್ಲಿ ಎಷ್ಟು ಹಣವಿದೆ ಎಂದು ನೋಡುವುದು ಹೇಗೆ?: ಇಲ್ಲಿದೆ ನೋಡಿ
  • ಇದು 1650 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.71 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಒಳಗೊಂಡಿದೆ.
  • ಬೆಲೆಗೆ ತಕ್ಕಂತೆ ಮಿಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 12 ಆಧಾರಿತ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  • ವಿಶೇಷ ಎಂದರೆ ಇದು ಎರಡು ವರ್ಷಗಳ ಆಂಡ್ರಾಯ್ಡ್‌ ಅಪ್ಡೇಟ್ಸ್‌ ಮತ್ತು ಮೂರು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ ಅನ್ನು ಪಡೆದಿದೆ. ಹಾಗೆಯೇ 4GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.
  • ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಿಂದ ಕೂಡಿದೆ.
  • 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಅಳವಡಿಸಲಾಗಿದೆ. ರಿಯರ್‌ ಕ್ಯಾಮೆರಾ ಮೂಲಕ ಪ್ರತಿ ಸೆಕೆಂಡಿಗೆ 30 ಫ್ರೇಮ್‌ಗಳಲ್ಲಿ (fps) 1080p ವರೆಗಿನ ವಿಡಿಯೋ ರೆಕಾರ್ಡ್ ಮಾಡಬಹುದು ಎಂದು ಕಂಪನಿ ಹೇಳಿದೆ.
  • ರೆಡ್ಮಿ 12C ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಬೆಂಬಲಿಸುತ್ತದೆ.
  • ಕನೆಕ್ಟಿವಿಟಿ ಆಯ್ಕೆಗಳಲ್ಲಿ AI ಕ್ರಿಯೇಟ್ ಅನ್‌ಲಾಕ್, ಡ್ಯುಯಲ್ ಸಿಮ್ ಬೆಂಬಲ, ವೈ-ಫೈ, ಬ್ಲೂಟೂತ್ 5.1, ಎಫ್‌ಎಂ ರೇಡಿಯೋ ಮತ್ತು 3.5 ಎಂಎಂ ಆಡಿಯೊ ಜಾಕ್ ಅನ್ನು ಬೆಂಬಲಿಸಲಿದೆ. 5ಜಿ ಬೆಂಬಲ ಪಡೆದುಕೊಂಡಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 am, Sat, 11 March 23

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್