Redmi 12: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಬಜೆಟ್ ಬೆಲೆಯ ರೆಡ್ಮಿ 12 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ?

ಜಾಗತಿಕ ಮಾರುಕಟ್ಟೆಯಲ್ಲಿ ರೆಡ್ಮಿ 12 (Redmi 12) ಫೋನ್‌ ಲಾಂಚ್‌ ಆಗಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.

Redmi 12: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಬಜೆಟ್ ಬೆಲೆಯ ರೆಡ್ಮಿ 12 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ?
Redmi 12
Follow us
|

Updated on: Jun 16, 2023 | 1:31 PM

ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಸಂಸ್ಥೆ ತನ್ನ ರೆಡ್ಮಿ ಬ್ರ್ಯಾಂಡ್​ನ ಅಡಿಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಮೊನ್ನೆಯಷ್ಟೆ ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ರೆಡ್ಮಿ A2 ಎಂಬ ಮೊಬೈಲ್ ಅನಾವರಣ ಮಾಡಿದ್ದ ಕಂಪನಿ ಇದೀಗ ಮತ್ತೊಂದು ಹೊಸ ಸ್ಮಾರ್ಟ್​ಫೋನ್ (Smartphone) ಅನಾವರಣಗೊಳಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ರೆಡ್ಮಿ 12 (Redmi 12) ಫೋನ್‌ ಲಾಂಚ್‌ ಆಗಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ರೆಡ್ಮಿ 12 ಫೋನ್ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 4GB RAM + 128GB ಮಾದರಿಗೆ USD 149. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 12,210ರೂ. ಎನ್ನಬಹುದು. ಹಾಗೆಯೇ ಈ ಫೋನ್ 8GB RAM + 128GB ಸ್ಟೋರೇಜ್ ಸಾಮರ್ಥ್ಯದಲ್ಲೂ ಲಭ್ಯವಿದೆ. ಆದರೆ, ಇದರ ಬೆಲೆ ಬಹಿರಂಗಗೊಂಡಿಲ್ಲ. ಇದು ಮಿಡ್‌ನೈಟ್ ಬ್ಲ್ಯಾಕ್, ಸ್ಕೈ ಬ್ಲೂ ಮತ್ತು ಪೋಲಾರ್ ಸಿಲ್ವರ್ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ. ಸದ್ಯದಲ್ಲೇ ರೆಡ್ಮಿ 12 ಫೋನ್ ಭಾರತಕ್ಕೂ ಕಾಲಿಡಲಿದೆ.

ಇದನ್ನೂ ಓದಿ
Image
Samsung Galaxy F13: ಬೆಸ್ಟ್ ಆಫರ್ ಪ್ರೈಸ್​ಗೆ ಸೇಲ್ ಆಗುತ್ತಿದೆ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌
Image
Infinix Note 30 VIP: ಇನ್ಫಿನಿಕ್ಸ್ ನೋಟ್‌ 30 VIP 5G ಸ್ಮಾರ್ಟ್‌ಫೋನ್ ಬೆಲೆ ಎಷ್ಟು
Image
Reliance JioTag: ಏರ್​ಟ್ಯಾಗ್​ಗೆ ಸೆಡ್ಡು ಹೊಡೆಯಲು ಬಂತು ರಿಲಯನ್ಸ್ ಜಿಯೋಟ್ಯಾಗ್
Image
Apple iOS 17: ಹೊಸ ಅಪ್​ಡೇಟ್ ಹಳೆಯ ಐಫೋನ್​ಗೆ ದೊರೆಯುವುದಿಲ್ಲ!

Infinix Note 30 5G: ಭಾರತದಲ್ಲಿಂದು 108MP ಕ್ಯಾಮೆರಾದ ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಬಿಡುಗಡೆ

ಫೀಚರ್ಸ್ ಏನಿದೆ?:

ಈ ಫೋನ್ 1080×2400 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.79 ಇಂಚಿನ FHD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. 90Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಬೆಲೆಗೆ ತಕ್ಕಂತೆ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 12nm ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಇದು ಡ್ಯುಯಲ್ 2GHz ಕಾರ್ಟೆಕ್ಸ್-A75 +ಹೆಕ್ಸಾ 2GHz 6xಕಾರ್ಟೆಕ್ಸ್-A55 ಸಿಪಿಯುಗಳನ್ನು ಹೊಂದಿದೆ. ಜೊತೆಗೆ ಎಆರ್‌ಎಮ್‌ ಮಾಲಿ G52 2EEMC2 ಜಿಪಿಯು ಅಳವಡಿಸಲಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ರೆಡ್ಮಿ 12 ಫೋನ್ ಟ್ರಿಪಲ್‌ ರಿಯರ್ ಕ್ಯಾಮೆರಾ ಆಯ್ಕೆ ಹೊಂದಿದೆ. ಇದರಲ್ಲಿ f/1.8 ದ್ಯುತಿರಂಧ್ರದೊಂದಿಗೆ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಅಂತೆಯೆ f/2.2 ದ್ಯುತಿರಂಧ್ರದೊಂದಿಗೆ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಕ್ಯಾಮೆರಾ, 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಕ್ಯಾಮೆರಾ ಇದೆ. ಜೊತೆಗೆ ಎಲ್‌ಇಡಿ ಫ್ಲ್ಯಾಶ್‌ ಲೈಟ್‌ ಆಯ್ಕೆ ನೀಡಲಾಗಿದೆ. ಮುಂಭಾಗ ವಿಡಿಯೋ ಕರೆ ಮತ್ತು ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಈ ಫೋನ್​ನಲ್ಲಿ ದೀರ್ಘ ಸಮಯ ಬಾಳಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದ್ದು, ಇದು 18W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ನೀಡಲಿದೆ. ಜೊತೆಗೆ ಹೈಬ್ರಿಡ್ ಡ್ಯುಯಲ್ ಸಿಮ್ ಆಯ್ಕೆ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯ, ಧೂಳು ಮತ್ತು ಸ್ಪ್ಲಾಶ್ ನಿರೋಧಕಕ್ಕಾಗಿ IP53 ರೇಟಿಂಗ್‌ ಹೊಂದಿದ್ದು, 3.5 ಎಂಎಂ ಆಡಿಯೊ ಜಾಕ್, ಬ್ಲೂಟೂತ್ 5.1, ಯುಎಸ್‌ಬಿ ಟೈಪ್-ಸಿ ಸೇರಿದಂತೆ ಇತ್ತೀಚಿನ ಎಲ್ಲ ಕನೆಕ್ಟಿಟಿವಿ ಆಯ್ಕೆ ಸೌಲಭ್ಯವಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್