AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Youtube Down: ಯುಟ್ಯೂಬ್​ನಲ್ಲಿ ಸರಿಯಾಗಿ ಪ್ಲೇ ಆಗದ ವಿಡಿಯೊಗಳು, ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ತೋಡಿಕೊಂಡ ಬಳಕೆದಾರರು

‘ವಿಡಿಯೊಗಳು ಸರಿಯಾಗಿ ಪ್ಲೇ ಆಗುತ್ತಿಲ್ಲ’ ಎಂದು ನೂರಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

Youtube Down: ಯುಟ್ಯೂಬ್​ನಲ್ಲಿ ಸರಿಯಾಗಿ ಪ್ಲೇ ಆಗದ ವಿಡಿಯೊಗಳು, ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ತೋಡಿಕೊಂಡ ಬಳಕೆದಾರರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 17, 2022 | 11:22 AM

Share

ಜನಪ್ರಿಯ ವಿಡಿಯೊ ವೇದಿಕೆ ಯುಟ್ಯೂಬ್​ನ ಆ್ಯಪ್ ಮತ್ತು ವೆಬ್​ಸೈಟ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಳಕೆದಾರರು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ. ‘ವಿಡಿಯೊಗಳು ಸರಿಯಾಗಿ ಪ್ಲೇ ಆಗುತ್ತಿಲ್ಲ’ ಎಂದು ನೂರಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಯಾವುದೇ ಹುಡುಕು ಪದ (Keyword) ನಮೂದಿಸಿದಾಗ ಯುಟ್ಯೂಬ್ ಅದಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಮೊಗೆದು ಕೊಡುತ್ತದೆ. ಇದು ಯುಟ್ಯೂಬ್​ ಕಾರ್ಯನಿರ್ವಹಣೆಯ ಮೂಲ ವೈಖರಿ. ಆದರೆ ಈ ಕೆಲಸವೂ ಇದೀಗ ಸಮರ್ಪಕ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಬಳಕೆದಾರರು ದೂರಿದ್ದಾರೆ.

ಈ ಕ್ಷಣಕ್ಕೆ ಸಮಸ್ಯೆ ಎಷ್ಟರಮಟ್ಟಿಗೆ ಗಂಭೀರವಾದುದು ಎಂದು ಸ್ಪಷ್ಟಪಟ್ಟಿಲ್ಲ. ಅಮೆರಿಕ ಬಳಕೆದಾರರೇ ಹೆಚ್ಚಿನ ಸಂಖ್ಯೆಯಲ್ಲಿ ಸಮಸ್ಯೆ ವರದಿ ಮಾಡಿದ್ದಾರೆ. ಆ್ಯಪ್ ಮತ್ತು ವೆಬ್​ಸೇವೆಗಳಲ್ಲಿ ಸಮಸ್ಯೆಯುಂಟಾದಾಗ ದಾಖಲಿಸುವ ಡೌನ್​ಡಿಟೆಕ್ಟರ್ ಜಾಲತಾಣವು ಯುಟ್ಯೂಬ್​ನಲ್ಲಿ ಸಮಸ್ಯೆಯಾಗಿರುವುದನ್ನು ವರದಿ ಮಾಡಿದೆ. ಇಂದು ಮುಂಜಾನೆಯಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಯುಟ್ಯೂಬ್​ನಲ್ಲಿ ಸಮಸ್ಯೆಯಾಗಿರುವುದನ್ನು ಹೇಳಿಕೊಂಡಿದ್ದಾರೆ. ಈವರೆಗೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ಎಂದು ಡೌನ್​ಡಿಟೆಕ್ಟರ್ ತಿಳಿಸಿದೆ.

ಡೌನ್​ಡಿಟೆಕ್ಟರ್​ನ ಅಧಿಕೃತ ಟ್ವಿಟರ್ ಅಕೌಂಟ್​ ಈ ಕುರಿತು ಟ್ವೀಟ್ ಮಾಡಿದ್ದು, ‘ಜಗತ್ತಿನ ಹಲವೆಡೆ ಯುಟ್ಯೂಬ್ ಬಳಕೆ ಪ್ರಮಾಣ ಏಕಾಏಕಿ ಕಡಿಮೆಯಾಗಿದೆ’ ಎಂದು ಹೇಳಿದೆ.

Published On - 11:22 am, Wed, 17 August 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ