AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Youtube Down: ಯುಟ್ಯೂಬ್​ನಲ್ಲಿ ಸರಿಯಾಗಿ ಪ್ಲೇ ಆಗದ ವಿಡಿಯೊಗಳು, ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ತೋಡಿಕೊಂಡ ಬಳಕೆದಾರರು

‘ವಿಡಿಯೊಗಳು ಸರಿಯಾಗಿ ಪ್ಲೇ ಆಗುತ್ತಿಲ್ಲ’ ಎಂದು ನೂರಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

Youtube Down: ಯುಟ್ಯೂಬ್​ನಲ್ಲಿ ಸರಿಯಾಗಿ ಪ್ಲೇ ಆಗದ ವಿಡಿಯೊಗಳು, ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ತೋಡಿಕೊಂಡ ಬಳಕೆದಾರರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 17, 2022 | 11:22 AM

Share

ಜನಪ್ರಿಯ ವಿಡಿಯೊ ವೇದಿಕೆ ಯುಟ್ಯೂಬ್​ನ ಆ್ಯಪ್ ಮತ್ತು ವೆಬ್​ಸೈಟ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಳಕೆದಾರರು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ. ‘ವಿಡಿಯೊಗಳು ಸರಿಯಾಗಿ ಪ್ಲೇ ಆಗುತ್ತಿಲ್ಲ’ ಎಂದು ನೂರಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಯಾವುದೇ ಹುಡುಕು ಪದ (Keyword) ನಮೂದಿಸಿದಾಗ ಯುಟ್ಯೂಬ್ ಅದಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಮೊಗೆದು ಕೊಡುತ್ತದೆ. ಇದು ಯುಟ್ಯೂಬ್​ ಕಾರ್ಯನಿರ್ವಹಣೆಯ ಮೂಲ ವೈಖರಿ. ಆದರೆ ಈ ಕೆಲಸವೂ ಇದೀಗ ಸಮರ್ಪಕ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಬಳಕೆದಾರರು ದೂರಿದ್ದಾರೆ.

ಈ ಕ್ಷಣಕ್ಕೆ ಸಮಸ್ಯೆ ಎಷ್ಟರಮಟ್ಟಿಗೆ ಗಂಭೀರವಾದುದು ಎಂದು ಸ್ಪಷ್ಟಪಟ್ಟಿಲ್ಲ. ಅಮೆರಿಕ ಬಳಕೆದಾರರೇ ಹೆಚ್ಚಿನ ಸಂಖ್ಯೆಯಲ್ಲಿ ಸಮಸ್ಯೆ ವರದಿ ಮಾಡಿದ್ದಾರೆ. ಆ್ಯಪ್ ಮತ್ತು ವೆಬ್​ಸೇವೆಗಳಲ್ಲಿ ಸಮಸ್ಯೆಯುಂಟಾದಾಗ ದಾಖಲಿಸುವ ಡೌನ್​ಡಿಟೆಕ್ಟರ್ ಜಾಲತಾಣವು ಯುಟ್ಯೂಬ್​ನಲ್ಲಿ ಸಮಸ್ಯೆಯಾಗಿರುವುದನ್ನು ವರದಿ ಮಾಡಿದೆ. ಇಂದು ಮುಂಜಾನೆಯಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಯುಟ್ಯೂಬ್​ನಲ್ಲಿ ಸಮಸ್ಯೆಯಾಗಿರುವುದನ್ನು ಹೇಳಿಕೊಂಡಿದ್ದಾರೆ. ಈವರೆಗೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ಎಂದು ಡೌನ್​ಡಿಟೆಕ್ಟರ್ ತಿಳಿಸಿದೆ.

ಡೌನ್​ಡಿಟೆಕ್ಟರ್​ನ ಅಧಿಕೃತ ಟ್ವಿಟರ್ ಅಕೌಂಟ್​ ಈ ಕುರಿತು ಟ್ವೀಟ್ ಮಾಡಿದ್ದು, ‘ಜಗತ್ತಿನ ಹಲವೆಡೆ ಯುಟ್ಯೂಬ್ ಬಳಕೆ ಪ್ರಮಾಣ ಏಕಾಏಕಿ ಕಡಿಮೆಯಾಗಿದೆ’ ಎಂದು ಹೇಳಿದೆ.

Published On - 11:22 am, Wed, 17 August 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ