Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC

2nd PUC

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಎರಡು ಹಂತಗಳು ಜೀವನದ ಮಹತ್ವದ ಘಟ್ಟಗಳಾಗಿವೆ. ಶಾಲೆಯಿಂದ ಕಾಲೇಜು ಮೆಟ್ಟಿಲು ಏರಲು ಮೊದಲಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಇದರಂತೆ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್​ ವ್ಯಾಸಂಗಕ್ಕಾಗಿ​ ದ್ವಿತಿಯ ಪಿಯುಸಿ ಪಾಸಾಗಲೇಬೇಕು. ಈ ಎರಡು ತರಗತಿಗಳಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಒಳ್ಳೆಯ ಮಾರ್ಕ್ಸ್ ಪಡೆದರೆ ಅವರ ಮುಂದಿನ ಜೀವನ ಚೆನ್ನಾಗಿರುತ್ತದೆ. ಹೇಗೆ 10ನೇ ತರಗತಿ ಪರೀಕ್ಷೆಗಳು ಬಿಗಿ ಬಂದೋಬಸ್ತ್​ನಲ್ಲಿ ನಡೆಯುತ್ತವೆಯೇ ಹಾಗೇ ದ್ವಿತಿಯ ಪಿಯುಸಿ ಪರೀಕ್ಷೆಗಳು ಸಹ ನಡೆಸಲಾಗುತ್ತದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಅಂದರೆ ಮಾರ್ಚ್​, ಏಪ್ರಿಲ್ ತಿಂಗಳಲ್ಲಿ ಪಿಯು ಬೋರ್ಡ್​ ಈ ಪರೀಕ್ಷೆಯನ್ನು ನಡೆಸುತ್ತದೆ. ಮೊದಲಿಗೆ ಪೂರ್ವ ಸಿದ್ಧತಾ ಪರೀಕ್ಷೆಗಳು ಆಯಾ ಶಾಲೆಗಳಲ್ಲಿ ನಡೆಯುತ್ತವೆ. ಬಳಿಕ ಶಿಕ್ಷಣ ಇಲಾಖೆ ಪ್ರಕಟಿಸಿದ ವೇಳಾಪಟ್ಟಿಯಂತೆ ಅಂತಿಮ ಪರೀಕ್ಷೆಗಳು ನಡೆಯುತ್ತವೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಲ್ಲಿ ಪರೀಕ್ಷೆಗಳು ನಡೆಯುತ್ತವೆ. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣದ ಭವಿಷ್ಯ ನಿಂತಿರುತ್ತದೆ.

ಇನ್ನೂ ಹೆಚ್ಚು ಓದಿ

ಹಾಸನ: ದ್ವಿತೀಯ ಪಿಯುಸಿಯಲ್ಲಿ ಶೇ 79 ಅಂಕ ಬಂದಿದ್ರೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು 18 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಎಸ್‌ಎಸ್‌ಎಲ್‌ಸಿಯಲ್ಲಿ 98% ಅಂಕ ಪಡೆದಿದ್ದ ವಿದ್ಯಾರ್ಥಿ, ಪಿಯುನಲ್ಲಿ 79% ಅಂಕ ಪಡೆದುಕೊಂಡಿದ್ದ. ಇದೇ ಆಘಾತದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ: ಕರ್ನಾಟಕದಲ್ಲಿ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ

Karnataka 2nd PUC Results 2025: ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಅಲ್ಲಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗುತ್ತಿವೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಅನುತ್ತೀರ್ಣರಾದ ಅಥವಾ ನಿರೀಕ್ಷಿತ ಅಂಕ ಪಡೆಯದ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಶಿಕ್ಷಣ ಸಚಿವರು ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆಗೆ ಉಚಿತ ಅವಕಾಶ ನೀಡುವ ಭರವಸೆ ನೀಡಿದ ಹೊರತಾಗಿಯೂ ಈ ದುರಂತ ಸಂಭವಿಸಿದೆ.

Karnataka 2nd PUC Exam-2 Time Table: ಫೇಲ್ ಆಗಿದ್ರೆ ಚಿಂತೆ ಬೇಡ, ದ್ವಿತೀಯ ಪಿಯು ಪರೀಕ್ಷೆ-2 ವೇಳಾಪಟ್ಟಿ ಪ್ರಕಟ

Karnataka Second PUC Exam-2 Date: 2024-25ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1 ಫಲಿತಾಂಶ ಇಂದು(ಏಪ್ರಿಲ್ 08) ಪ್ರಕಟವಾಗಿದೆ. ಈಗ ಇದರ ಬೆನ್ನಲ್ಲೇ ಫೇಲ್ ಆಗಿರುವ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಅವಕಾಶ ನೀಡುವ ಪರೀಕ್ಷೆ 2 ವೇಳಾಪಟ್ಟಿ ಬಿಡುಗಡೆ ಮಾಡಿದೆ. ಜತೆಗೆ ವಿದ್ಯಾರ್ಥಿಗಳು ಇಂದಿನಿಂದಲೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವೇಳಾಪಟ್ಟಿ ಈ ಕೆಳಗಿನಂತಿದೆ.

2nd PUC Result 2025; ಐದನೇ ರ‍್ಯಾಂಕ್ ಪಡೆದು ಗಾರೆ ಕೆಲಸ ಮಾಡುವ ಅಪ್ಪನನ್ನು ಮಹಲಿನ ಮೇಲೆ ಕೂರಿಸಿದ ಹುಬಳ್ಳಿ ಹುಡುಗಿ ನಾಗವೇಣಿ

ನಾಗವೇಣಿ ರಾಯಚೂರು ಒಟ್ಟು 600 ಅಂಕಗಳಲ್ಲಿ 593 ಅಂಕ ಪಡೆದಿದ್ದಾಳೆ. ಉಳಿದೇಳು ಮಾರ್ಕ್ಸ್ ಹೇಗೆ ತಪ್ಪಿದವೋ? ಅತ್ಯಂತ ಪ್ರತಿಭಾವಂತೆಯಾಗಿರುವ ನಾಗವೇಣಿ ಕಠಿಣ ಪರಿಶ್ರಮಿಯೂ ಹೌದು. ರ‍್ಯಾಂಕ್ ಪಡೆಯುವವರು ಸಾಮಾನ್ಯವಾಗಿ ಕೋಚಿಂಗ್ ಮತ್ತು ಟ್ಯೂಷನ್ ಕ್ಲಾಸ್​ಗಳಿಗೆ ಹೋಗಿರುತ್ತಾರೆ. ಆದರೆ ತಂದೆಯ ಸಂಪಾದನೆಯಲ್ಲಿ ನಾಗವೇಣಿಗೆ ಅದನ್ನೆಲ್ಲ ಅಫೋರ್ಡ್ ಮಾಡಿರಲಾಗದು. ಆಕೆಯ ಏಕಾಗ್ರತೆ ಮತ್ತು ಪರಿಶ್ರಮ ಬೇರೆಯವರಿಗೆ ಮಾದರಿ.

ಸಿಇಟಿ ಪರೀಕ್ಷೆ ಎದುರಲ್ಲಿ ಪಿಯು ಫಲಿತಾಂಶ – ಖಾಸಗಿ ಶಿಕ್ಷಣ ಲಾಬಿಗೆ ಮಣಿದ ಸರಕಾರ?

ಈಗಲೇ ಪಿಯು ಪರೀಕ್ಷೆ ಫಲಿತಾಂಶವನ್ನು ಘೋಷಣೆ ಮಾಡುವುದರಲ್ಲಿ ತಪ್ಪಿಲ್ಲ ಎಂದು ಮೇಲ್ನೋಟಕ್ಕೆ ಎನ್ನಿಸಿದರೂ, ಇದರ ಹಿಂದಿನ ಕುಟಿಲ ನೀತಿಯ ಅನಾವರಣ ಆದಾಗ, ಪಾಲಕರಿಗಷ್ಟೇ ಅಲ್ಲ ಸಾರ್ವಜನಿಕರಿಗೂ ಕೂಡ ಶಾಕ್ ಆಗುವುದರಲ್ಲಿ ಸಂಶಯವಿಲ್ಲ. ಹಾಗಾದರೆ ಏನದು? ಈ ನಡೆಯ ಹಿಂದಿನ ಹಕೀಕತ್ತೇನು? ಸರ್ಕಾರ ಖಾಸಗಿ ಶಿಕ್ಷಣ ಲಾಬಿಗೆ ಮಣಿಯಿತೇ?

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ರಾಜ್ಯಕ್ಕೆ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು? ಮುಂದಿನ ಗುರಿ ಬಿಚ್ಚಿಟ್ಟ ಟಾಪರ್​

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 600ಕ್ಕೆ 599 ಅಂಕ ಪಡೆಯುವ ಮೂಲಕ ಅಮೂಲ್ಯ ಕಾಮತ್ ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ. ಇನ್ನು ಪರೀಕ್ಷೆಯ ತಯಾರಿ ಹೇಗಿತ್ತು? ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

2nd PUC Result 2025; ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಶುಲ್ಕ ತೆರಬೇಕಿಲ್ಲ: ಮಧು ಬಂಗಾರಪ್ಪ

2nd PUC Result 2025; ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಇವತ್ತೇ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ ಮತ್ತು ನಾಳೆಯಿಂದಲೇ ವಿಶೇಷ ತರಗತಿಗಳು ಆರಂಭಗೊಳ್ಳಲಿವೆ ಎಂದು ಸಚಿವ ಹೇಳಿದರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ಜಾಸ್ತಿಯಿರುವುದರಿಂದ ಬೆಳಗ್ಗೆ ಇಲ್ಲವೇ ಸಾಯಂಕಾಲ ಹೊತ್ತಲ್ಲಿ ಸ್ಪೆಷಲ್ ಕ್ಲಾಸ್​ಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು.

ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಲಾರಿ ಡ್ರೈವರ್​ನ ಪುತ್ರಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾಳೆ. ವಿಜಯನಗರ ಜಿಲ್ಲೆಯ ಸಂಜನಾ ಬಾಯಿ ಕಲಾ ವಿಭಾಗದಲ್ಲಿ 600 ಅಂಕಗಳಿಗೆ 597 ಅಂಕ ಪಡೆದ ಟಾಪರ್ ಆಗಿದ್ದಾಳೆ. ಇನ್ನು ಈ ಸಂಜನಾ ಲಾಡಿ ಡ್ರೈವರ್​​ ಪುತ್ರಿ ಎನ್ನುವುದು ವಿಶೇಷ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ಬಾಯಿ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನಲ್ಲಿ ಓದುತ್ತಿದ್ದಳು.

2nd PUC Results 2025 Toppers: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಯಾರು ಟಾಪರ್ಸ್? ಇಲ್ಲಿದೆ ವಿವರ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಟಾಪರ್: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ದೊರೆತಿದ್ದು, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಹಾಗಾದರೆ, ಈ ಬಾರಿ ಟಾಪ್ ರ್ಯಾಂಕ್ ಗಳಿಸಿದವರು ಯಾರು? ಎರಡನೇ ಹಾಗೂ ಮೂರನೇ ರ್ಯಾಂಕ್ ಯಾರಿಗೆ? ವಿವರಗಳು ಇಲ್ಲಿವೆ.

2nd PUC Result 2025; ಪಾಸಾದವರಲ್ಲಿ ಶೇಕಡ 70-80 ವಿದ್ಯಾರ್ಥಿಗಳು ಶೇಕಡ 50ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ: ಮಧು ಬಂಗಾರಪ್ಪ

ರಾಜ್ಯದಲ್ಲಿ 2ನೇ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ಶೇಕಡ 73.45 ರಷ್ಟು ಪಾಸಾಗಿದ್ದಾರೆ, ಗಮನಾರ್ಹ ಸಂಗತಿಯೆಂದರೆ 2nd PUC Result 2025; ಪಾಸಾದವರಲ್ಲಿ ಶೇಕಡ 70-80ರಷ್ಟು ವಿದ್ಯಾರ್ಥಿಗಳು ಶೇಕಡ 50ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಅನುದಾನಿತ ಮತ್ತು ಸರ್ಕಾರೀ ಕಾಲೇಜುಗಳ ಫಲಿತಾಂಶವನ್ನು ವಿಶ್ಲೇಷಣೆ ಮಾಡಿ ಸರಕಾರೀ ಕಾಲೇಜುಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲು ತಮ್ಮ ಇಲಾಖೆ ಪ್ರಯತ್ನಿಸುವುದಾಗಿ ಸಚಿವ ಹೇಳಿದರು.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ