Plane Crash
ಗುಜರಾತ್ ರಾಜ್ಯದ ಅಹಮದಾಬಾದ್ನ ಮೇಘನಿನಗರದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ 242 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಟೇಕಾಫ್ ಆದ 5 ನಿಮಿಷಗಳಲ್ಲೇ ಏರ್ ಇಂಡಿಯಾದ AI 171 ವಿಮಾನ ಅಪಘಾತಕ್ಕೀಡಾಗಿದೆ. ಈ ವಿಮಾನ ಅಹಮದಾಬಾದ್ನಿಂದ ಲಂಡನ್ಗೆ ಹೋಗುತ್ತಿತ್ತು. ಅಹಮದಾಬಾದ್ನ ಮೇಘನಿನಗರದಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು. ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ನಡೆದ AI171 ವಿಮಾನದ ಅಪಘಾತಕ್ಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ನೀಡಲು ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಕಾರ್ಯಾಚರಣಾ ನಿಯಂತ್ರಣ ಕೊಠಡಿಯನ್ನು ಸಕ್ರಿಯಗೊಳಿಸಲಾಗಿದೆ. ಅದಕ್ಕಾಗಿ 011-24610843, 9650391859 ದೂರವಾಣಿ ಸಂಖ್ಯೆಯನ್ನು ತೆರೆಯಲಾಗಿದೆ.
ಇನ್ನೂ ಹೆಚ್ಚು ಓದಿAircraft Crash:ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕ ಹಾಗೂ ಗುಜರಾತ್ ಮೂಲದ ಇಬ್ಬರು ದುರ್ಮರಣ
ಕಾನ್ಪುರದ ಗಂಗಾ ಬ್ಯಾರೇಜ್ ಸಮೀಪದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ನಾಲ್ಕು ಆಸನಗಳ ಲಘು ತರಬೇತಿ ವಿಮಾನವೊಂದು ಪತನಗೊಂಡಿದ್ದು, ವಿಮಾನದಲ್ಲಿದ್ದ ಪೈಲಟ್ ಮತ್ತು ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸ್ ಆಯುಕ್ತ ರಘುಬೀರ್ ಲಾಲ್ ನೀಡಿರುವ ಮಾಹಿತಿ ಪ್ರಕಾರ, ಮುಂಜಾನೆ ಸುಮಾರು 11.50 ರ ವೇಳೆಗೆ ಈ ಭೀಕರ ಅವಘಡ ಸಂಭವಿಸಿದೆ. ಮೃತರನ್ನು ಕರ್ನಾಟಕ ಮತ್ತು ಗುಜರಾತ್ ಮೂಲದವರು ಎಂದು ಪ್ರಾಥಮಿಕವಾಗಿ ಗುರುತಿಸಲಾಗಿದೆ.
- Nayana Rajeev
- Updated on: Aug 27, 2026
- 1:09 pm
Plane Crash: ಅಲಾಸ್ಕಾದಲ್ಲಿ 8 ಜನರಿದ್ದ ಪ್ರಯಾಣಿಕರ ವಿಮಾನ ಪತನ
ಪಶ್ಚಿಮ ಅಲಾಸ್ಕಾದ ಹಿಮಭರಿತ ಪ್ರದೇಶದಲ್ಲಿ ಎಂಟು ಜನರಿದ್ದ ಚಾರ್ಟರ್ ವಿಮಾನ ಪತನಗೊಂಡಿದೆ. ಕೇಪ್ ನ್ಯೂವೆನ್ಹ್ಯಾಮ್ ಬಳಿ ನಡೆದ ಈ ದುರಂತದಲ್ಲಿ ಇಬ್ಬರು ಪೈಲಟ್ಗಳು ಮತ್ತು ಆರು ಪ್ರಯಾಣಿಕರಿದ್ದರು. ಅಲಾಸ್ಕಾ ರಕ್ಷಣಾ ಸಮನ್ವಯ ಕೇಂದ್ರ ಹಾಗೂ ಯುಎಸ್ ಕೋಸ್ಟ್ ಗಾರ್ಡ್ ನೆರವಿನೊಂದಿಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರತಿಕೂಲ ಹವಾಮಾನ ಮತ್ತು ದೂರದ ಪ್ರದೇಶದಿಂದಾಗಿ ಬದುಕುಳಿದವರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. FAA ಮತ್ತು NTSB ತನಿಖೆ ಆರಂಭಿಸಿವೆ.
- Nayana Rajeev
- Updated on: Aug 21, 2026
- 11:58 am
Plane Crash: ಪೆರುವಿನ ನಾಜ್ಕಾ ಲೈನ್ಸ್ ಬಳಿ ಪ್ರವಾಸಿ ವಿಮಾನ ಪತನ: 11 ವಿದೇಶಿಯರು ಸೇರಿ ಎಲ್ಲಾ 13 ಮಂದಿ ದಾರುಣ ಸಾವು
ಪೆರುವಿನ ಯುನೆಸ್ಕೋ ತಾಣ 'ನಾಜ್ಕಾ ಲೈನ್ಸ್' ವೀಕ್ಷಣೆಗೆ ತೆರಳುತ್ತಿದ್ದ ಪ್ರವಾಸಿ ವಿಮಾನ ಪತನಗೊಂಡಿದೆ. ಈ ಭೀಕರ ಅಪಘಾತದಲ್ಲಿ 11 ವಿದೇಶಿ ಪ್ರವಾಸಿಗರು ಮತ್ತು ಇಬ್ಬರು ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 13 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸಾರಿಗೆ ಸಚಿವಾಲಯ ಈ ದುರಂತವನ್ನು ದೃಢಪಡಿಸಿದ್ದು, ಘಟನೆಗೆ ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯ ಕಾರಣವೇ ಎಂದು ತನಿಖೆ ನಡೆಯುತ್ತಿದೆ.
- Nayana Rajeev
- Updated on: Aug 2, 2026
- 7:32 am
ಏರ್ ಇಂಡಿಯಾ ಅಪಘಾತ: ಬ್ಲ್ಯಾಕ್ ಬಾಕ್ಸ್ ಆಡಿಯೋ ಬಹಿರಂಗಪಡಿಸಲು ಸಾಧ್ಯವಿಲ್ಲ, ಸುಪ್ರೀಂಗೆ ತನಿಖಾ ಸಂಸ್ಥೆಯ ಉತ್ತರ
ಏರ್ ಇಂಡಿಯಾ ಅಪಘಾತದ ಕಾಕ್ಪಿಟ್ ವಾಯ್ಸ್ ರೆಕಾರ್ಡರ್ (CVR) ಆಡಿಯೋ ಸಾರ್ವಜನಿಕ ಬಿಡುಗಡೆಗೆ ಸಾಧ್ಯವಿಲ್ಲ ಎಂದು AAIB ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಭಾರತೀಯ ಹಾಗೂ ಅಂತಾರಾಷ್ಟ್ರೀಯ ವಾಯುಯಾನ ಕಾನೂನುಗಳು ಇಂತಹ ಸೂಕ್ಷ್ಮ ಮಾಹಿತಿಯ ಗೌಪ್ಯತೆಯನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸುತ್ತವೆ. ಪೈಲಟ್ಗಳ ಗೌಪ್ಯತೆ, ನಿಷ್ಪಕ್ಷಪಾತ ತನಿಖೆ ಹಾಗೂ ವಾಯುಯಾನ ಸುರಕ್ಷತೆಯ ದೃಷ್ಟಿಯಿಂದ CVR ವಿವರಗಳನ್ನು ತನಿಖಾಧಿಕಾರಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ.
- Nayana Rajeev
- Updated on: Jul 15, 2026
- 2:35 pm
Video: ರಷ್ಯಾ ಬಾಂಬರ್ ವಿಮಾನ ಪತನ: ನಾಲ್ವರು ಸಿಬ್ಬಂದಿ ಪವಾಡಸದೃಶ ರೀತಿಯಲ್ಲಿ ಪಾರು
ರಷ್ಯಾದ ಸೈಬೀರಿಯಾ ಪ್ರಾಂತ್ಯದ ಇರ್ಕುಟ್ಸ್ಕ್ ಪ್ರದೇಶದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ರಷ್ಯಾದ ವಾಯುಸೇನೆಗೆ ಸೇರಿದ ಬೃಹತ್ 'Tu-22M3' ಕಾರ್ಯತಂತ್ರದ ಬಾಂಬರ್ ವಿಮಾನ ಪತನ(Plane Crash)ಗೊಂಡಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಗಳು ಸಮಯಪ್ರಜ್ಞೆ ಮೆರೆದು ಸುರಕ್ಷಿತವಾಗಿ ಹೊರಜಿಗಿದಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತಕ್ಕೀಡಾದ ವಿಮಾನವು ತರಬೇತಿ ಹಾರಾಟದಲ್ಲಿದ್ದ ಕಾರಣ ಯಾವುದೇ ಯುದ್ಧ ಸಾಮಗ್ರಿ ಅಥವಾ ಬಾಂಬ್ಗಳನ್ನು ಹೊತ್ತೊಯ್ದಿರಲಿಲ್ಲ. ವಿಮಾನವು ಕಾಮೆಂಕಾ ಗ್ರಾಮದ ಬಳಿಯ ಅಂಗಾರ ನದಿಯ ಅರಣ್ಯ ಪ್ರದೇಶದಲ್ಲಿ ಬಿದ್ದಿರುವುದರಿಂದ ನೆಲದ ಮೇಲಿನ ಸಾರ್ವಜನಿಕ ಆಸ್ತಿಗೆ ಯಾವುದೇ ಹಾನಿಯಾಗಿಲ್ಲ.
- Nayana Rajeev
- Updated on: Jun 16, 2026
- 8:11 am
Colombia Plane Crash: ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ, 30ಕ್ಕೂ ಅಧಿಕ ಮಂದಿ ಸಾವು
125 ಜನರನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯಾದ ವಾಯುಪಡೆಯ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡು ಕನಿಷ್ಠ ಮೂವತ್ತನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಕೊಲಂಬಿಯಾದ ಪುಟುಮಾಯೊ ಇಲಾಖೆಯ ಗವರ್ನರ್ ತಿಳಿಸಿದ್ದಾರೆ.ಕೊಲಂಬಿಯಾದ ವಾಯುಪಡೆಯ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕವಾದ ಈ ಅಪಘಾತವು ಲಾಕ್ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ -130 ಸಾರಿಗೆ ವಿಮಾನವು ಪೆರುವಿನ ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಸಂಭವಿಸಿದೆ ಎಂದು ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ಎಕ್ಸ್ನಲ್ಲಿ ತಿಳಿಸಿದ್ದಾರೆ.
- Nayana Rajeev
- Updated on: Mar 24, 2026
- 8:20 am
Video: ಇರಾಕ್ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್ನೊಂದಿಗಿನ ಯುದ್ಧಕ್ಕೆ ಸಂಬಂಧಿಸಿದ ಕಾರ್ಯಾಚರಣೆಗಳ ಸಮಯದಲ್ಲಿ ಪಶ್ಚಿಮ ಇರಾಕ್ನಲ್ಲಿ ಯುಎಸ್ ವಾಯುಪಡೆಯ ವೈಮಾನಿಕ ಇಂಧನ ತುಂಬುವ ವಿಮಾನವು ಅಪಘಾತಕ್ಕೀಡಾಗಿದೆ ಎಂದು ಯುಎಸ್ ಮಿಲಿಟರಿ ತಿಳಿಸಿದೆ, ರಕ್ಷಣಾ ತಂಡಗಳು ಪ್ರದೇಶವನ್ನು ಶೋಧಿಸುತ್ತಿವೆ.ಒಂದು ವಿಮಾನ ಪಶ್ಚಿಮ ಇರಾಕ್ನಲ್ಲಿ ಅಪಘಾತಕ್ಕೀಡಾಗಿದ್ದರೆ, ಇನ್ನೊಂದು ವಿಮಾನ ಸುರಕ್ಷಿತವಾಗಿ ಇಳಿಯಿತು.ಈ ಅಪಘಾತವು ಯುದ್ಧ ಕಾರ್ಯಾಚರಣೆಯಿಂದ ಉಂಟಾಗಿಲ್ಲ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.
- Nayana Rajeev
- Updated on: Mar 13, 2026
- 8:23 am
ಅಜಿತ್ ಪವಾರ್ ಇದ್ದ ವಿಮಾನ ಪತನಗೊಳ್ಳುವ ಮುನ್ನ ನಡೆದಿದ್ದೇನು?
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ರನ್ವೇನಲ್ಲಿ ವಿಮಾನ ಇಳಿಯುವಾಗ ನಡೆದ ಈ ದುರಂತದಲ್ಲಿ ಅಜಿತ್ ಸೇರಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಈ ಆಘಾತಕಾರಿ ಘಟನೆ ರಾಜ್ಯದಲ್ಲಿ ತಲ್ಲಣ ಮೂಡಿಸಿದೆ.
- Nayana Rajeev
- Updated on: Jan 28, 2026
- 12:25 pm
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ: ವಾಯು ದುರಂತಗಳಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ರಾಜಕಾರಣಿಗಳು ಯಾರ್ಯಾರು?
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಭಾರತದಲ್ಲಿ ವಾಯು ದುರಂತಗಳಲ್ಲಿ ಪ್ರಾಣ ಕಳೆದುಕೊಂಡ ರಾಜಕಾರಣಿಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ವೈ.ಎಸ್.ಆರ್, ದೋರ್ಜಿ ಖಂಡು, ಓಂ ಪ್ರಕಾಶ್ ಜಿಂದಾಲ್, ಮಾಧವರಾವ್ ಸಿಂಧಿಯಾ, ಸಂಜಯ್ ಗಾಂಧಿ ಸೇರಿದಂತೆ ಹಲವು ಪ್ರಮುಖ ನಾಯಕರು ಇಂತಹ ದುರಂತಗಳಿಗೆ ಬಲಿಯಾಗಿದ್ದಾರೆ. ಅವರ ರಾಜಕೀಯ ಪ್ರಯಾಣ ಇಂತಹ ದುರ್ಘಟನೆಗಳಿಂದ ಕೊನೆಗೊಂಡಿದೆ.
- Nayana Rajeev
- Updated on: Jan 28, 2026
- 10:59 am
ಏರ್ ಇಂಡಿಯಾ ಅಪಘಾತ, ನಿಮ್ಮ ಮಗನದ್ದು ತಪ್ಪು ಎಂದರೆ ಭಾರತದಲ್ಲಿ ಯಾರೂ ನಂಬುವುದಿಲ್ಲ, ಪೈಲಟ್ ತಂದೆಗೆ ಸುಪ್ರೀಂ ಸಾಂತ್ವನ
ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ನಿಮ್ಮ ಮಗ ಕಾರಣ ಎಂದು ಭಾರತದಲ್ಲಿ ಯಾರೂ ನಂಬುವುದಿಲ್ಲ ಎಂದು ಪೈಲಟ್ ತಂದೆಗೆ ಸುಪ್ರೀಂಕೋರ್ಟ್ ಸಾಂತ್ವನ ಹೇಳಿದೆ. ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಲಟ್ನ ತಂದೆ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶಕ (ಡಿಜಿಸಿಎ) ಅವರಿಂದ ಉತ್ತರ ಕೇಳಿದ್ದು, ಅಪಘಾತದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿದೆ.
- Nayana Rajeev
- Updated on: Nov 7, 2025
- 12:46 pm
Video: ಅಮೆರಿಕದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸರಕು ವಿಮಾನ ಪತನ, ಮೂವರು ಸಾವು
ಅಮೆರಿಕದ ಕೆಂಟುಕಿಯಲ್ಲಿ ಬಹುದೊಡ್ಡ ವಿಮಾನ ಅಪಘಾತ ಸಂಭವಿಸಿದೆ. ಆಗಷ್ಟೇ ಟೇಕ್ ಆಫ್ ಆಗಿದ್ದ ಸರಕು ವಿಮಾನ ಪತನಗೊಂಡಿದ್ದು, ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮುಹಮ್ಮದ್ ಅಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.ವಿಮಾನದಲ್ಲಿ ಮೂವರು ಜನರಿದ್ದರು, ಹೊನೊಲುಲುಗೆ ತೆರಳುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ. ಅಪಘಾತವು ಸ್ಫೋಟ ಮತ್ತು ಬೆಂಕಿಯನ್ನು ಉಂಟುಮಾಡಿತ್ತು.
- Nayana Rajeev
- Updated on: Nov 5, 2025
- 7:34 am
ಏರ್ ಇಂಡಿಯಾ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿಯ ಸ್ಥಿತಿ ಏನಾಗಿದೆ ಗೊತ್ತೇ?
ಅಹಮದಾಬಾದಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದ ವ್ಯಕ್ತಿಯ ಪರಿಸ್ಥಿತಿ ಯಾರಿಗೂ ಬೇಡ. ತಾನೊಬ್ಬನೇ ಬದುಕಿದ್ದೇನೆ ಎಂದು ಖುಷಿ ಪಡಬೇಕೆ, ತನ್ನೊಂದಿಗೆ ಇದ್ದವರೆಲ್ಲಾ ಕಣ್ಮುಂದೆಯೇ ಹೋದರಲ್ಲಾ ಎಂದು ಮರುಕ ಪಡಬೇಕೆ ಇದೆರಡರ ನಡುವಿನ ಗೊಂದಲದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ ವಿಶ್ವಾಸ್ ಕುಮಾರ್ ರಮೇಶ್.
- Nayana Rajeev
- Updated on: Nov 4, 2025
- 7:22 am