Akshaya Tritiya

Akshaya Tritiya

ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಅಂದರೆ ಈ ವರ್ಷ ಮೇ.10 ಶುಕ್ರವಾರದಂದು ಅಕ್ಷಯ ತೃತೀಯ ಆಚರಣೆ ಮಾಡಲಾಗುತ್ತದೆ. ಧಾರ್ಮಿಕ ಮತ್ತು ಪೌರಾಣಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯ ದಿನದಂದು, ಮದುವೆ, ನಿಶ್ಚಿತಾರ್ಥ, ಗೃಹಪ್ರವೇಶ ಸೇರಿದಂತೆ ಎಲ್ಲಾ ರೀತಿಯ ಶುಭ ಕಾರ್ಯಗಳನ್ನು ಯಾವುದೇ ಶುಭ ಸಮಯವಿಲ್ಲದೆ ಮಾಡಬಹುದು. ಸತ್ಯಯುಗ ಮತ್ತು ತ್ರೇತಾಯುಗವು ಅಕ್ಷಯ ತೃತೀಯದಿಂದ ಪ್ರಾರಂಭವಾಯಿತು ಎಂದು ನಂಬಲಾಗಿದೆ. ದ್ವಾಪರಯುಗವು ಈ ದಿನದಂದು ಕೊನೆಗೊಂಡಿತು, ಅದರ ನಂತರ ಕಲಿಯುಗವು ಅಕ್ಷಯ ತೃತೀಯದಿಂದ ಪ್ರಾರಂಭವಾಯಿತು ಎಂಬ ನಂಬಿಕೆ ಇದೆ. ಹಾಗಾಗಿ ಅಕ್ಷಯ ತೃತೀಯ ಬಗ್ಗೆ ವಿಶೇಷತೆಗಳೇನು, ಇದರ ಹಿಂದೆ ಇರುವ ಇತಿಹಾಸ ಏನು ಎಂಬ ಸ್ಟೋರಿಗಳು ಇಲ್ಲಿದೆ.

ಇನ್ನೂ ಹೆಚ್ಚು ಓದಿ

ಚಿನ್ನದ ಬೆಲೆ ಹೆಚ್ಚಾದರೂ ಆಭರಣಗಳಿಗೆ ಕಡಿಮೆ ಆಗಿಲ್ಲ ಬೇಡಿಕೆ; 10ರಿಂದ 20 ಗ್ರಾಂ ಚಿನ್ನದ ಒಡವೆಗಳು ಹೆಚ್ಚು ಸೇಲ್; ಐದು ಗ್ರಾಮ್​ವೊಳಗಿನ ಜ್ಯೂವೆಲರಿ ಕೇಳೋರಿಲ್ಲ

Gold sales in India: ಈ ವರ್ಷದ ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಚಿನ್ನಕ್ಕೆ ಬೇಡಿಕೆ 136.6 ಟನ್​ನಷ್ಟಾಗಿದೆ. ಇದು ಹಿಂದಿನ ಕ್ವಾರ್ಟರ್​ಗಿಂತ ಹೆಚ್ಚಾಗಿದೆ. ಚಿನ್ನದ ಬೆಲೆ ಸತತವಾಗಿ ಹೆಚ್ಚುತ್ತಿದ್ದರೂ ಅದಕ್ಕಿರುವ ಡಿಮ್ಯಾಂಡ್ ಕೂಡ ಹೆಚ್ಚಿರುವುದು ಗಮನಾರ್ಹ. ಅಕ್ಷಯ ತೃತೀಯ ದಿನದಂದು ಒಡವೆ ಜೊತೆಗೆ ಗೋಲ್ಡ್ ಕಾಯಿನ್ ಇತ್ಯಾದಿ ಖರೀದಿಯೂ ಹೆಚ್ಚಾಗಿದೆ. ಬೆಲೆ ಏರಿಕೆಯಿಂದಾಗಿ ಜನರು 5 ಗ್ರಾಮ್​ವೊಳಗಿನ ತೂಕದ ಚಿನ್ನವನ್ನು ಹೆಚ್ಚು ಖರೀದಿಸಬಹುದು ಎಂಬ ಲೆಕ್ಕಾಚಾರ ಉಲ್ಟಾ ಹೊಡೆದಿದ್ದು, 10ರಿಂದ 20 ಗ್ರಾಮ್ ತೂಕದ ಒಡವೆಗಳ ಮಾರಾಟ ಹೆಚ್ಚಾಗಿದೆಯಂತೆ.

ಗೃಹ ಲಕ್ಷ್ಮಿ ಹಣದಿಂದ ಅಕ್ಷಯ ತೃತೀಯದಂದು ಬಂಗಾರ ಕೊಳ್ಳಲು ಮುಗಿಬಿದ್ದ ಮಹಿಳೆಯರು

ಅಕ್ಷಯ ತೃತಿಯ ದಿನ ಚಿನ್ನ ಬೆಳ್ಳಿ ಬಂಗಾರ ಕೊಂಡರೆ ಶ್ರೇಷ್ಠ ಎನ್ನುವ ನಂಬಿಕೆ ಹಿನ್ನಲೆ ಇಂದು ಅಕ್ಷಯ ತೃತಿಯ ಅಂತ ಮಹಿಳೆಯರು ಚಿಕ್ಕಬಳ್ಳಾಫುರದಲ್ಲಿ ಬಂಗಾರ ಕೊಳ್ಳಲು ಮುಗಿಬಿದ್ದ ದೃಶ್ಯಗಳು ಕಂಡು ಬಂತು. ನಗರದ ಗಂಗಮ್ಮ ಗುಡಿ ಗೋಲ್ಡ್ ಬಜಾರ್ ನಲ್ಲಿರುವ ಬಂಗಾರದ ಅಂಗಡಿಗಳಲ್ಲಿ ಜನ ಜಂಗುಳಿಯಾಗಿತ್ತು. ಗೃಹ ಲಕ್ಷ್ಮಿ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆಯರು, ಕೂಡಿಟ್ಟ ಹಣದಿಂದ ಬಂಗಾರ ಖರೀದಿ ಮಾಡಿದ್ದಾರೆ.

ಅಕ್ಷಯ ತೃತೀಯ: ಬೆಂಗಳೂರಿನ ಆಭರಣದಂಗಡಿಗಳಲ್ಲಿ ಜನರ ನೂಕುನುಗ್ಗಲು; ರಾಮನ ನಾಣ್ಯ ಟ್ರೆಂಡಿಂಗ್​ನಲ್ಲಿ

Bengaluru and Akshaya Tritiya: ಮೇ 10 ಅಕ್ಷಯ ತೃತೀಯ ದಿನವಾದ ಇಂದು ಬೆಂಗಳೂರಿನ ಆಭರಣ ಅಂಗಡಿಗಳ ಬಳಿ ಬೆಳಗ್ಗೆಯಿಂದಲೇ ಜನರು ಸೇರತೊಡಗಿದ್ದಾರೆ. ಚಿನ್ನದ ನಾಣ್ಯದ ಜೊತೆಗೆ ಈ ಬಾರಿ ಚಿನ್ನದ ಒಡವೆ ಖರೀದಿಗೆ ಬೇಡಿಕೆ ಹೆಚ್ಚಿದೆ. ಕಡಿಮೆ ಬಜೆಟ್ ಹೊಂದಿರುವವರು ಬೆಳ್ಳಿ ಖರೀದಿಸುತ್ತಿದ್ದಾರೆ. ವಜ್ರಾಭರಣ ಮತ್ತು ಪ್ಲಾಟಿನಂ ಆಭರಣಗಳೂ ಇವತ್ತು ಹೆಚ್ಚು ಮಾರಾಟ ಕಾಣುತ್ತವೆ.

ಅಕ್ಷಯ ತೃತೀಯ ದಿನದಂದು ಚಿನ್ನವಲ್ಲದೇ ಈ ನಾಲ್ಕು ವಸ್ತುಗಳೂ ಕೂಡ ಶುಭಕರ; ಸಾಧ್ಯವಾದರೆ ಇವತ್ತೇ ಖರೀದಿಸಿ

Good to buy these items on Akshaya Tritiya day: ಅಕ್ಷಯ ತೃತೀಯ ದಿನದಂದು ಚಿನ್ನವನ್ನು ಖರೀದಿಸಿದರೆ ಸಂಪತ್ತು ತುಂಬಿ ಬರುತ್ತದೆ ಎಂಬ ನಂಬಿಕೆ ಹಿಂದೂ ಧಾರ್ಮಿಕರಲ್ಲಿ ಇದೆ. ಹಾಗೆಯೇ, ಒಂದು ವರ್ಷದಲ್ಲಿ ಇರುವ ಅತ್ಯಂತ ಶುಭ ದಿನಗಳಲ್ಲಿ ಅಕ್ಷಯ ತೃತೀಯ ಪ್ರಧಾನವಾದುದು. ಇಂದು ಹೊಸ ಬಿಸಿನೆಸ್ ಅಥವಾ ಕೆಲಸ ಆರಂಭಿಸುವುದು ಶುಭಕರ ಎಂದು ಹೇಳಲಾಗುತ್ತದೆ. ಚಿನ್ನ ಮಾತ್ರವಲ್ಲದೇ ಇನ್ನೂ ನಾಲ್ಕು ವಸ್ತುಗಳನ್ನು ಶುಭವೆಂದು ಪರಿಗಣಿಸಲಾಗಿದೆ. ಚಿನ್ನ ಸೇರಿ ಈ ಐದು ವಸ್ತುಗಳನ್ನು ಅಕ್ಷಯ ತೃತೀಯ ದಿನದಂದು ಖರೀದಿಸುವುದು ಒಳ್ಳೆಯದು.

ಭೌತಿಕ ಚಿನ್ನವಾ, ಬಾಂಡ್​ಗಳಾ? ಅಕ್ಷಯ ತೃತೀಯ ದಿನದಂದು ಬಂಗಾರದಂಥ ತೀರ್ಮಾನ ಕೈಗೊಳ್ಳಿ

Gold investments in Akshaya Tritiya: ಅಕ್ಷಯ ತೃತೀಯ ಈ ವರ್ಷ ಮೇ 10ರಂದು ಬಂದಿದೆ. ಕಳೆದ ವರ್ಷ ಏಪ್ರಿಲ್ 22ರಂದು ಇತ್ತು. ಆಗ ಚಿನ್ನದ ಬೆಲೆ 61,300 ರೂ ಇತ್ತು. ಈಗ ಅದು 72,000 ರೂ ದಾಟಿದೆ. ಒಂದು ವರ್ಷದಲ್ಲಿ ಹೆಚ್ಚೂಕಡಿಮೆ ಶೇ. 20ರಷ್ಟು ಬೆಲೆ ಹೆಚ್ಚಳವಾಗಿದೆ. ಹೀಗಾಗಿ, ಚಿನ್ನ ಯಾವತ್ತಿದ್ದರೂ ಅದನ್ನು ಖರೀದಿಸಿದರ ಕೈ ಬಿಡುವುದಿಲ್ಲ. ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸಿದರೆ ಸಂಪತ್ತು ಸಮೃದ್ಧಿ ತುಂಬಿ ತುಳುಕುತ್ತದೆ ಎನ್ನುವ ನಂಬಿಕೆಯೂ ಇದೆ. ಹೇರಳ ಸಂಪತ್ತು ಆಗಮಿಸದೇ ಹೋದರೂ ಒಳ್ಳೆಯ ಲಾಭವನ್ನಂತೂ ಚಿನ್ನ ನಿಮಗೆ ತಂದುಕೊಡುತ್ತದೆ.

Akshaya Tritiya 2024 : ಅಕ್ಷಯ ತೃತೀಯದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭ ಹಾರೈಸಿ ಸಂಭ್ರಮಿಸಿ

ಅಕ್ಷಯ ತೃತೀಯದಂದು ಯಾವುದೇ ಕೆಲಸ ಕಾರ್ಯಗಳಿಗೆ ಕೈ ಹಾಕಿದರೆ, ಅದರ ಫಲವು ಶುಭದಾಯಕವಾಗಿರುತ್ತದೆ ಎನ್ನುವ ನಂಬಿಕೆಯಿದೆ. ಈ ಬಾರಿ ಅಕ್ಷಯ ತೃತೀಯ ಹಬ್ಬವು ಮೇ 10 ಕ್ಕೆ ಬಂದಿದ್ದು, ಈ ಶುಭ ದಿನದಂದು ಹೆಚ್ಚಿನವರು ಚಿನ್ನ ಹಾಗೂ ಬೆಳ್ಳಿಯನ್ನು ಖರೀದಿಗೆ ಮುಂದಾಗುತ್ತಾರೆ. ಅದಲ್ಲದೇ, ಹಬ್ಬವನ್ನು ನಿಮ್ಮ ಆತ್ಮೀಯರಿಗೆ, ಸ್ನೇಹಿತರಿಗೆ ಹಾಗೂ ಕುಟುಂಬಸ್ಥರಿಗೆ ಈ ರೀತಿ ಶುಭಾಶಯಗಳನ್ನು ಕೋರಿ ಅಕ್ಷಯ ತೃತೀಯವನ್ನು ಸಂಭ್ರಮಿಸಬಹುದು.

Akshaya Tritiya for Marriage: ಅಕ್ಷಯ ತೃತೀಯ ದಿನವು ಮದುವೆಗೆ ಮಂಗಳಕರವೆಂದು ಪರಿಗಣಿಸಲಾಗುತ್ತೆ ಏಕೆ? ಇಲ್ಲಿದೆ ಮಾಹಿತಿ

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಮಹತ್ವವಿದೆ. ಕೆಲವರು ಪೂಜೆಯ ದೃಷ್ಟಿಯಿಂದ ಇದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಿದರೆ, ಇನ್ನು ಕೆಲವರು ಶುಭ ಕಾರ್ಯಗಳನ್ನು ಮಾಡಲು ಈ ದಿನಕ್ಕಾಗಿ ಕಾಯುತ್ತಾರೆ. ಈ ದಿನದಂದು ಚಿನ್ನ ಮತ್ತು ಇತರ ಆಭರಣಗಳನ್ನು ಖರೀದಿಸುವುದು ಲಕ್ಷ್ಮಿ ದೇವಿಯನ್ನು ಮೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ.

Gold Silver Price on 10th May: ಒಂದು ವರ್ಷದಲ್ಲಿ ಚಿನ್ನದ ಬೆಲೆ ಶೇ. 20ರಷ್ಟು ಹೆಚ್ಚಳ; ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ

Bullion Market 2024 May 10th: ಕಳೆದ ವರ್ಷದ ಅಕ್ಷಯ ತೃತೀಯಕ್ಕೆ ಹೋಲಿಸಿದರೆ ಈ ಬಾರಿ ಶೇ. 20ರಷ್ಟು ಚಿನ್ನದ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 85.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,520 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Akshaya Tritiya 2024: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು?

Akshaya Tritiya Festival 2024: ಧರ್ಮ ಮತ್ತು ಚಿನ್ನದ ಖರೀದಿಗೆ ಕೊಂಡಿ ಬೆಸೆದಿರುವ ಏಕೈಕ ದೇಶ ಭಾರತ. ಚಿನ್ನ ಅಮೂಲ್ಯವಾದ ಲೋಹವಾಗಿದ್ದು, ಇದನ್ನು ವಿವಿಧ ಧಾರ್ಮಿಕ ಅಂಶಗಳಲ್ಲಿ ಬಳಸಲಾಗುತ್ತದೆ. ಆದರೆ ಚಿನ್ನವನ್ನು ಖರೀದಿಸಲು ಅಕ್ಷಯ ತೃತೀಯ ಸರಿಯಾದ ಸಮಯ ಎಂದು ಏಕೆ ಪರಿಗಣಿಸಲಾಗುತ್ತದೆ? ಎಂಬುದಕ್ಕೆ ಕೆಲವು ಜನಪ್ರಿಯ ಕಾರಣಗಳು ಇಲ್ಲಿವೆ.

Akshaya Tritiya 2024: ಅಕ್ಷಯ ತೃತೀಯದ ಮೊದಲು ಈ ವಸ್ತುಗಳನ್ನು ಮನೆಯಿಂದ ತೆಗೆದುಹಾಕಿ

ವಾಸ್ತು ದೋಷಗಳಿಗೆ ಕಾರಣವಾಗುವ ಕೆಲವು ವಸ್ತುಗಳನ್ನು ನಿಮ್ಮ ಮನೆಯಲ್ಲಿ ಇರಿಸಿದ್ದರೆ, ಅಕ್ಷಯ ತೃತೀಯದ ಮೊದಲು ಈ ವಸ್ತುಗಳನ್ನು ಮನೆಯಿಂದ ಬಿಸಾಡಿ. ಇದರಿಂದ, ನಿಮ್ಮ ಮನೆಯಲ್ಲಿ ಸಂತೋಷ, ಸಂಪತ್ತು, ಸಮೃದ್ಧಿ ಎಲ್ಲವೂ ಇರುತ್ತದೆ ಜೊತೆಗೆ ನೀವು ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಿಲ್ಲ. ಇಲ್ಲವಾದಲ್ಲಿ ಇವು ವಾಸ್ತು ದೋಷಕ್ಕೆ ಕಾರಣವಾಗುತ್ತದೆ.

‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು