AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun

Allu Arjun

ನಿರ್ಮಾಪಕ ಅಲ್ಲು ಅರವಿಂದ್ ಪುತ್ರ, ತೆಲುಗು ಚಿತ್ರರಂಗದ ಹಿರಿಯ ನಟ ಅಲ್ಲು ರಾಮಲಿಂಗಯ್ಯ ಅವರ ಮೊಮ್ಮಗ ಅಲ್ಲು ಅರ್ಜುನ್ ಜನಿಸಿದ್ದು ಏಪ್ರಿಲ್ 8, 1982. ಕೇವಲ ಮೂರು ವರ್ಷದ ಮಗುವಿದ್ದಾಗಲೇ ಸಿನಿಮಾಗಳಲ್ಲಿ ಕಾಣಿಸಿಕೊಂಡ ಅಲ್ಲು ಅರ್ಜುನ್, ಕಮಲ್ ಹಾಸನ್​ರ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಸ್ವಾತಿ ಮುತ್ಯಂ’ನಲ್ಲಿಯೂ ಬಾಲನಟನಾಗಿ ನಟಿಸಿದ್ದರು. ಚಿರಂಜೀವಿಯ ‘ಡ್ಯಾಡಿ’ ಸಿನಿಮಾದಲ್ಲಿನ ಸಣ್ಣ ಪಾತ್ರ ಅಲ್ಲು ಅರ್ಜುನ್​ಗೆ ಗುರುತು ತಂದುಕೊಟ್ಟಿತು. ಬಳಿಕ ‘ಗಂಗೋತ್ರಿ’ ಸಿನಿಮಾ ಮೂಲಕ ನಾಯಕ ನಟನಾದರು. ಆದರೆ ಅವರಿಗೆ ಭಾರಿ ದೊಡ್ಡ ಹಿಟ್ ನೀಡಿ, ನಾಯಕನಾಗಿ ನೆಲೆ ನಿಲ್ಲುವಂತೆ ಮಾಡಿದ್ದು ‘ಆರ್ಯ’ ಸಿನಿಮಾ. ಈವರೆಗೆ 20 ಸಿನಿಮಾಗಳಲ್ಲಿ ನಾಯಕನಾಗಿ ಅಲ್ಲು ಅರ್ಜುನ್ ನಟಿಸಿದ್ದಾರೆ.

ಇನ್ನೂ ಹೆಚ್ಚು ಓದಿ

ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ಅಲ್ಲು ಅರ್ಜುನ್ ಎಷ್ಟನೇ ಆರೋಪಿ?

ಪುಷ್ಪ 2 ಸಿನಿಮಾ ಪ್ರದರ್ಶನದ ವೇಳೆ ಹೈದರಾಬಾದ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಂದು ವರ್ಷದ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಅಲ್ಲು ಅರ್ಜುನ್ ಅವರನ್ನು A11 ಆರೋಪಿ ಎಂದು ಹೆಸರಿಸಲಾಗಿದೆ. ಸಂಧ್ಯಾ ಥಿಯೇಟರ್ ಮ್ಯಾನೇಜ್‌ಮೆಂಟ್ ಪ್ರಮುಖ ಆರೋಪಿಯಾಗಿದೆ. ಈ ದುರ್ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟು, ಅವರ ಮಗ ಗಾಯಗೊಂಡಿದ್ದರು. ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ.

ಮೂರು ವರ್ಷ, ಐದು ದೊಡ್ಡ ಸಿನಿಮಾ; ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಹಬ್ಬ

ಪುಷ್ಪ ಚಿತ್ರದ ಯಶಸ್ಸಿನ ನಂತರ ಜಾಗತಿಕ ಮನ್ನಣೆ ಗಳಿಸಿದ ಅಲ್ಲು ಅರ್ಜುನ್, ತಮ್ಮ ಮುಂದಿನ ಮೂರು ವರ್ಷಗಳ ಐದು ದೊಡ್ಡ ಯೋಜನೆಗಳನ್ನು ಎಚ್ಚರಿಕೆಯಿಂದ ಯೋಜಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಈ ಚಿತ್ರಗಳು ಪ್ಯಾನ್-ವರ್ಲ್ಡ್ ಮಟ್ಟದಲ್ಲಿ ದಕ್ಷಿಣ ಚಿತ್ರರಂಗದ ಶಕ್ತಿಯನ್ನು ತೋರಿಸಲಿವೆ. ಅಟ್ಲೀ, ಸಂದೀಪ್ ರೆಡ್ಡಿ ವಂಗಾ, ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರಗಳು ಮತ್ತು ಬಹುನಿರೀಕ್ಷಿತ 'ಪುಷ್ಪ 3' ಈ ಸಾಲಿನಲ್ಲಿ ಸೇರಿವೆ, ಬನ್ನಿ ಅಭಿಮಾನಿಗಳಿಗೆ ಭಾರಿ ಮನರಂಜನೆ ನೀಡಲಿವೆ.

‘ಧುರಂಧರ್’ ಚಿತ್ರವನ್ನು ಹಾಡಿ ಹೊಗಳಿದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ಇತ್ತೀಚೆಗೆ 'ಧುರಂಧರ್' ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ಡಿಸೆಂಬರ್ 5ರಂದು ತೆರೆಕಂಡು ದೇಶಾದ್ಯಂತ 239 ಕೋಟಿ ರೂಪಾಯಿ ಗಳಿಸಿದೆ. ಅಲ್ಲು ಅರ್ಜುನ್, ರಣವೀರ್ ಸಿಂಗ್, ಅಕ್ಷಯ್ ಖನ್ನಾ ಸೇರಿದಂತೆ ಇಡೀ ತಾರಾಗಣ ಹಾಗೂ ನಿರ್ದೇಶಕ ಆದಿತ್ಯ ಧರ್ ಅವರ ಅದ್ಭುತ ಕೆಲಸವನ್ನು ಶ್ಲಾಘಿಸಿದ್ದಾರೆ.

ಮತ್ತೆ ರಿಲೀಸ್​ಗೆ ರೆಡಿ ಆದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’; ಕಾರಣ ಏನು?

ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾ ಮುಂದಿನ ವರ್ಷ ಜನವರಿ 16ರಂದು ಜಪಾನ್‌ನಲ್ಲಿ ತೆರೆ ಕಾಣಲು ಸಜ್ಜಾಗಿದೆ. ‘ಪುಷ್ಪ’ ಚಿತ್ರದ ಯಶಸ್ಸು ಮತ್ತು ಭಾರತೀಯ ಸಿನಿಮಾಗಳಿಗೆ ಜಪಾನ್‌ನಲ್ಲಿರುವ ಬೇಡಿಕೆಯೇ ಇದಕ್ಕೆ ಕಾರಣ. ಈ ಹಿಂದೆ ‘ಬಾಹುಬಲಿ’, ‘ಕೆಜಿಎಫ್ 2’, ‘ಆರ್​ಆರ್​ಆರ್’ ಹಾಗೂ 'ಪುಷ್ಪ' ಚಿತ್ರಗಳು ಅಲ್ಲಿ ಮೆಚ್ಚುಗೆ ಗಳಿಸಿದ್ದವು. ಚಿತ್ರದ ಕಥೆಗೂ ಜಪಾನ್ ಲಿಂಕ್ ಇರುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಕುತೂಹಲ ಮೂಡಿದೆ.

‘ಕಾಂತಾರ ನೋಡಿ ಮೈಮರೆತೆ’; ರಿಷಬ್ ಚಿತ್ರ ಹೊಗಳಿದ ಅಲ್ಲು ಅರ್ಜುನ್

ಚಿತ್ರಮಂದಿರಗಳಲ್ಲಿ ರಿಲೀಸ್ ಆದ ಸಿನಿಮಾಗಳನ್ನು ವೀಕ್ಷಿಸಿ ಸೋಶಿಯಲ್ ಮೀಡಿಯಾದಲ್ಲಿ ಆ ಬಗ್ಗೆ ಅಲ್ಲು ಅರ್ಜುನ್ ವಿಮರ್ಶೆ ತಿಳಿಸಿದ ಅನೇಕ ಉದಾಹರಣೆ ಇದೆ. ಈಗ ಅಲ್ಲು ಅರ್ಜುನ್ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರ ನೋಡಿ ಮೈಮರೆತಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಲು ಅವರು ಮರೆತಿಲ್ಲ.

ಅಲ್ಲು ಅರ್ಜುನ್ ಮನೆಯಲ್ಲಿ ವಿವಾಹ ಸಂಭ್ರಮ; ಅಲ್ಲು ಸಿರೀಶ್ ಮದುವೆ ಫಿಕ್ಸ್

ನಟ ಅಲ್ಲು ಸಿರೀಶ್ ಶೀಘ್ರದಲ್ಲೇ ನಯನಿಕಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. ಅಜ್ಜ ಅಲ್ಲು ರಾಮಲಿಂಗಯ್ಯ ಅವರ ಜನ್ಮ ವಾರ್ಷಿಕೋತ್ಸವದಂದು ಈ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಹೈದರಾಬಾದ್ ಮೂಲದ ಉದ್ಯಮಿಯೊಬ್ಬರ ಮಗಳಾದ ನಯನಿಕಾ ಜೊತೆ ಸಿರೀಶ್ ಮದುವೆಯಾಗಲಿದ್ದು, ಅಭಿಮಾನಿಗಳು ಹಾಗೂ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

SIIMA 2025 Telugu: ಅಲ್ಲು ಅರ್ಜುನ್ ಅತ್ಯುತ್ತಮ ನಟ, ರಶ್ಮಿಕಾ ಮಂದಣ್ಣ ಅತ್ಯುತ್ತಮ ನಟಿ

ಸೈಮಾ ಅವಾರ್ಡ್ಸ್ 2025 ಅದ್ದೂರಿಯಾಗಿ ದುಬೈನಲ್ಲಿ ನಡೆದಿದೆ. ಈ ಬಾರಿ ತೆಲುಗು ಹಾಗೂ ಕನ್ನಡದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮೊದಲು ಹಮ್ಮಿಕೊಳ್ಳಲಾಗಿತ್ತು. 2024ನೇ ಸಾಲಿನ ಸಿನಿಮಾಗಳಿಗೆ ಅವಾರ್ಡ್ ಸಿಕ್ಕಿದೆ. ಇಂದು (ಸೆಪ್ಟೆಂಬರ್ 6) ತಮಿಳು ಹಾಗೂ ಮಲಯಾಳಂ ಭಾಷೆಯ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ.

ಅಲ್ಲು ಅರ್ಜುನ್ ಮುದ್ದಿನ ಅಜ್ಜಿ ಕನಕರತ್ನಂ ನಿಧನ; ಮೈಸೂರಲ್ಲಿ ಶೂಟ್ ಬಿಟ್ಟು ತೆರಳಿದ ರಾಮ್ ಚರಣ್  

ಅಲ್ಲು ಅರ್ಜುನ್ ಅವರ ಅಜ್ಜಿ ಅಲ್ಲು ಕನಕರತ್ನಂ ಅವರು ಆಗಸ್ಟ್ 30 ರಂದು 94 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸಿನಿಮಾ ಶೂಟಿಂಗ್‌ನಿಂದ ಮುಂಬೈನಲ್ಲಿದ್ದ ಅಲ್ಲು ಅರ್ಜುನ್ ಅಜ್ಜಿಯ ಸಾವಿನ ಸುದ್ದಿ ಕೇಳಿ ಹೈದರಾಬಾದ್‌ಗೆ ತೆರಳುತ್ತಿದ್ದಾರೆ.

ಕನ್ನಡದ ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಿದ ಅಲ್ಲು ಅರ್ಜುನ್? ಚಿತ್ರಕ್ಕೆ ಖಡಕ್ ಟೈಟಲ್

ಪ್ರಶಾಂತ್ ನೀಲ್ ಅವರು ತೆಲುಗು ಚಿತ್ರರಂಗದಲ್ಲಿ ತಮ್ಮ ಹೆಸರನ್ನು ಮುದ್ರಿಸಿಕೊಂಡಿದ್ದಾರೆ. ಅವರು ಜೂನಿಯರ್ ಎನ್‌ಟಿಆರ್ ಜೊತೆ ಒಂದು ಚಿತ್ರವನ್ನು ಮಾಡುತ್ತಿದ್ದಾರೆ. ಹೀಗಿರುವಾಗಲೇ ಅಲ್ಲು ಅರ್ಜುನ್ ಜೊತೆಗೆ ಅವರು ಹೊಸ ಚಿತ್ರ ಒಂದನ್ನು ಮಾಡುತ್ತಿದ್ದಾರೆ. ಈ ಬಗ್ಗೆ ವದಂತಿಗಳು ಹಬ್ಬಿವೆ. ಈ ಹೊಸ ಚಿತ್ರಕ್ಕೆ ‘ರಾವಣಂ’ ಎಂಬ ಶೀರ್ಷಿಕೆ ಇಡಲಾಗಿದೆ ಎನ್ನಲಾಗಿದೆ.

‘ಫಾದರ್ಸ್​ ಡೇ’ ದಿನ ಅಲ್ಲು ಅರ್ಜುನ್​ಗೆ ಮಕ್ಕಳಿಂದ ಸರ್​ಪ್ರೈಸ್​; ಭಾವುಕರಾದ ನಟ

ಅಲ್ಲು ಅರ್ಜುನ್ ಅವರ ಮಕ್ಕಳಾದ ಅಯಾನ್ ಮತ್ತು ಅರ್ಹ, ತಮ್ಮ ತಂದೆಗೆ ಫಾದರ್ಸ್ ಡೇ ಹಬ್ಬದಂದು ಚಾಕೊಲೇಟ್ ಕೇಕ್‌ನಿಂದ ಸರ್‌ಪ್ರೈಸ್ ನೀಡಿದ್ದಾರೆ. ಅಲ್ಲು ಅರ್ಜುನ್ ಈ ವಿಚಾರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡು ಮಕ್ಕಳಿಗೆ ಧನ್ಯವಾದ ಹೇಳಿದ್ದಾರೆ ಮತ್ತು ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದೂ ಹೇಳಿದ್ದಾರೆ. ಅಲ್ಲು ಅರ್ಜುನ್ 'AA22 X A6' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಈ ಕಾರಣಕ್ಕಾಗಿ ಮಕ್ಕಳಿಂದ ದೂರವಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈನಲ್ಲಿ ಅಲ್ಲು ಅರ್ಜುನ್ ಹೊಸ ಸಿನಿಮಾಗೆ ಮುಹೂರ್ತ; ಶೂಟಿಂಗ್ ಆರಂಭ

ಅಲ್ಲು ಅರ್ಜುನ್ ಅವರು ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ. ನಿರ್ದೇಶಕ ಅಟ್ಲಿ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಬಳಿಕ ಫೋಟೋಶೂಟ್ ಕೂಡ ನಡೆದಿದೆ. ಸ್ವಲ್ಪ ದಿನಗಳ ನಂತರ ದೀಪಿಕಾ ಪಡುಕೋಣೆ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಅಲ್ಲು ಅರ್ಜುನ್-ಅಟ್ಲಿ ಚಿತ್ರಕ್ಕೆ ದೀಪಿಕಾ ಎಂಟ್ರಿ ಅಧಿಕೃತ; ಪ್ರೋಮೋ ರಿಲೀಸ್

Deepika Padukone: ಅಲ್ಲು ಅರ್ಜುನ್ ಮತ್ತು ಅಟ್ಲಿ ಅವರ ಮುಂಬರುವ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿಯಾಗಿ ಸೇರ್ಪಡೆಯಾಗಿದ್ದಾರೆ. ಈ ಚಿತ್ರದ ಪ್ರೋಮೋ ಇತ್ತೀಚೆಗೆ ಬಿಡುಗಡೆಯಾಗಿದೆ. ದೀಪಿಕಾ ಅವರು ದಿನಕ್ಕೆ 8 ಗಂಟೆಗಳ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಮತ್ತು ಅದಕ್ಕೆ ತಕ್ಕಂತೆ ಸಂಭಾವನೆ ಪಡೆಯುತ್ತಿದ್ದಾರೆ. ಅಲ್ಲು ಅರ್ಜುನ್ ಮತ್ತು ದೀಪಿಕಾ ಅವರ ಮೊದಲ ಚಿತ್ರ ಇದಾಗಿದೆ.