Allu Arjun

Allu Arjun

ನಿರ್ಮಾಪಕ ಅಲ್ಲು ಅರವಿಂದ್ ಪುತ್ರ, ತೆಲುಗು ಚಿತ್ರರಂಗದ ಹಿರಿಯ ನಟ ಅಲ್ಲು ರಾಮಲಿಂಗಯ್ಯ ಅವರ ಮೊಮ್ಮಗ ಅಲ್ಲು ಅರ್ಜುನ್ ಜನಿಸಿದ್ದು ಏಪ್ರಿಲ್ 8, 1982. ಕೇವಲ ಮೂರು ವರ್ಷದ ಮಗುವಿದ್ದಾಗಲೇ ಸಿನಿಮಾಗಳಲ್ಲಿ ಕಾಣಿಸಿಕೊಂಡ ಅಲ್ಲು ಅರ್ಜುನ್, ಕಮಲ್ ಹಾಸನ್​ರ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಸ್ವಾತಿ ಮುತ್ಯಂ’ನಲ್ಲಿಯೂ ಬಾಲನಟನಾಗಿ ನಟಿಸಿದ್ದರು. ಚಿರಂಜೀವಿಯ ‘ಡ್ಯಾಡಿ’ ಸಿನಿಮಾದಲ್ಲಿನ ಸಣ್ಣ ಪಾತ್ರ ಅಲ್ಲು ಅರ್ಜುನ್​ಗೆ ಗುರುತು ತಂದುಕೊಟ್ಟಿತು. ಬಳಿಕ ‘ಗಂಗೋತ್ರಿ’ ಸಿನಿಮಾ ಮೂಲಕ ನಾಯಕ ನಟನಾದರು. ಆದರೆ ಅವರಿಗೆ ಭಾರಿ ದೊಡ್ಡ ಹಿಟ್ ನೀಡಿ, ನಾಯಕನಾಗಿ ನೆಲೆ ನಿಲ್ಲುವಂತೆ ಮಾಡಿದ್ದು ‘ಆರ್ಯ’ ಸಿನಿಮಾ. ಈವರೆಗೆ 20 ಸಿನಿಮಾಗಳಲ್ಲಿ ನಾಯಕನಾಗಿ ಅಲ್ಲು ಅರ್ಜುನ್ ನಟಿಸಿದ್ದಾರೆ.

ಇನ್ನೂ ಹೆಚ್ಚು ಓದಿ

‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ

‘ಆರ್​ಆರ್​ಆರ್​’ ಬಳಿಕ ಡೈರೆಕ್ಟರ್​ ರಾಜಮೌಳಿ ಅವರು ಹೊಸ ಸಿನಿಮಾದ ಶೂಟಿಂಗ್​ ಇನ್ನೂ ಶುರು ಮಾಡಿಲ್ಲ. ಸದ್ಯಕ್ಕೆ ಕೊಂಚ ಬಿಡುವಿನಲ್ಲಿರುವ ಅವರು ‘ಪುಷ್ಪ 2’ ಸಿನಿಮಾದ ಚಿತ್ರೀಕರಣದ ಸೆಟ್​ಗೆ ಹೋಗಿದ್ದಾರೆ. ತಮ್ಮ ಸಿನಿಮಾದ ಸೆಟ್​ಗೆ ರಾಜಮೌಳಿ ಬಂದಿದ್ದಕ್ಕೆ ನಿರ್ದೇಶಕ ಸುಕುಮಾರ್​ ಅವರು ಸಂಭ್ರಮಿಸಿದ್ದಾರೆ. ಆ ಕ್ಷಣದ ಫೋಟೋ ವೈರಲ್​ ಆಗಿದೆ.

ಅಲ್ಲು ಅರ್ಜುನ್-ರಶ್ಮಿಕಾ ರೀತಿ ಡ್ರೆಸ್ ಮಾಡಿಕೊಂಡು ರಸ್ತೆಯಲ್ಲಿ ಮಕ್ಕಳ ಡ್ಯಾನ್ಸ್

ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ಅವರು ಈ ವಿಡಿಯೋ ನೋಡಿದರೆ ಖಂಡಿತವಾಗಿಯೂ ಖುಷಿಪಡುತ್ತಾರೆ. ಅಲ್ಲದೇ ಅವರು ಪ್ರತಿಕ್ರಿಯೆ ಕೂಡ ನೀಡುತ್ತಾರೆ. ಅಷ್ಟರಮಟ್ಟಿಗೆ ಈ ಮಕ್ಕಳ ಡ್ಯಾನ್ಸ್​ ಮುದ್ದಾಗಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ‘ಸೂಸೇಕಿ..’ ಹಾಡಿನ ಹಿಂದಿ ವರ್ಷನ್​ಗೆ ಮಕ್ಕಳಿಬ್ಬರು ಸಖತ್​ ಆಗಿ ಡ್ಯಾನ್ಸ್​ ಮಾಡಿದ ವಿಡಿಯೋ ವೈರಲ್​ ಆಗುತ್ತಿದೆ.

‘ಪ್ರತಿ ಸಿನಿಮಾದಲ್ಲೂ ಆ ಸಂತ್ರಸ್ತೆಗೆ ಅವಕಾಶ ಕೊಡ್ತೀನಿ’; ಜಾನಿ ಮಾಸ್ಟರ್ ವಿರುದ್ಧ ತಿರುಗಿಬಿದ್ದ ಅಲ್ಲು ಅರ್ಜುನ್

ರಾಷ್ಟ್ರ ಪ್ರಶಸ್ತಿ ವಿಜೇತ ಕೊರಿಯೋಗ್ರಾಫರ್ ಶೇಖ್ ಜಾನಿ ಬಾಷಾ ಅವರ ಪರಿಚಯ ಅನೇಕರಿಗೆ ಇದೆ. ಅವರು ಜಾನಿ ಮಾಸ್ಟರ್ ಎಂದೇ ಫೇಮಸ್. ಈಗ ಅವರ ವಿರುದ್ಧ ಸೈಬೆರಾಬಾದ್ ಪೊಲೀಸರು ಅತ್ಯಾಚಾರ ಆರೋಪದಡಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈಗ ಅಲ್ಲು ಅರ್ಜುನ್ ಅವರು ಸಂತ್ರಸ್ತೆಯ ಸಹಾಯಕ್ಕೆ ನಿಂತಿದ್ದಾರೆ.

ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ ರೀತಿಯಲ್ಲಿ ಗಣಪನ ಮೂರ್ತಿ ಕೂರಿಸಿದ ಅಭಿಮಾನಿಗಳು

‘ಪುಷ್ಪ 2’ ಸಿನಿಮಾ ಎಷ್ಟು ಹೈಪ್​ ಸೃಷ್ಟಿ ಮಾಡಿದೆ ಎಂಬುದಕ್ಕೆ ಇದೇ ಸಾಕ್ಷಿ. ಗಣೇಶ ಚತುರ್ಥಿ ಆಚರಣೆಯಲ್ಲೂ ಅಭಿಮಾನಿಗಳು ಈ ಸಿನಿಮಾದ ಥೀಮ್​ ಬಳಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ಅಲ್ಲು ಅರ್ಜುನ್​ ಅವರ ಗೆಟಪ್​ ರೀತಿಯಲ್ಲಿ ಗಣಪನ ಮೂರ್ತಿ ಕೂರಿಸಿ ಪೂಜೆ ಮಾಡಲಾಗಿದೆ. ಈ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

‘ಪ್ರಭಾಸ್​ ಮುಂದೆ ಹೃತಿಕ್​ ರೋಷನ್​ ಏನೇನೂ ಅಲ್ಲ’: ವೈರಲ್​ ವಿಡಿಯೋದಲ್ಲಿ ಅಲ್ಲು ಅರ್ಜುನ್​ ಹೇಳಿಕೆ

ಪ್ರಭಾಸ್​ ಅವರು ‘ಕಲ್ಕಿ 2898 ಎಡಿ’ ಸಿನಿಮಾದಿಂದ ದೊಡ್ಡ ಗೆಲುವು ಪಡೆದಿದ್ದಾರೆ. ಆದರೆ ಅದನ್ನು ಬಾಲಿವುಡ್​ನ ಕೆಲವರು ಸಹಿಸಿಕೊಂಡಂತಿಲ್ಲ. ಈಗ ದಕ್ಷಿಣ ಭಾರತದ ಚಿತ್ರರಂಗ ಮತ್ತು ಬಾಲಿವುಡ್​ ನಡುವೆ ಯಾವುದು ಗ್ರೇಟ್​ ಎಂಬ ಕುರಿತು ಸಿನಿಪ್ರಿಯರು ಚರ್ಚೆ ನಡೆಸಿದ್ದಾರೆ. ಕೆಲವು ಹಳೇ ವಿಡಿಯೋವನ್ನು ಎಳೆದು ತಂದು ವೈರಲ್​ ಮಾಡಲಾಗಿದೆ.

‘ಬೇರೆಯದೇ ರೀತಿಯಲ್ಲಿ ಸಿನಿಮಾ ಬರ್ತಿದೆ’; ಸುಕುಮಾರ್ ಎದುರೇ ಘೋಷಿಸಿದ ಅಲ್ಲು ಅರ್ಜುನ್

‘ಪುಷ್ಪ’ ಚಿತ್ರದ ಮೊದಲ ಭಾಗವು ಅಭಿಮಾನಿಗಳನ್ನು ಸಾಕಷ್ಟು ರಂಜಿಸಿತು. ಈಗ ಚಿತ್ರದ ಎರಡನೇ ಭಾಗದ ಶೂಟಿಂಗ್ ನಡೆಯುತ್ತಿದೆ. ಅಭಿಮಾನಿಗಳು ಕೂಡ ‘ಪುಷ್ಪ 2′ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಈಗ ಸಿನಿಮಾ ಬಗ್ಗೆ ಅಲ್ಲು ಅರ್ಜುನ್ ಅವರು ಹೊಸ ಅಪ್​ಡೇಟ್ ಕೊಟ್ಟಿದ್ದಾರೆ.

ಒಂದೇ ದಿನ ರಿಲೀಸ್ ಆಗಲಿವೆ ರಶ್ಮಿಕಾ ಮಂದಣ್ಣ ನಟನೆಯ 2 ಬಹುನಿರೀಕ್ಷಿತ ಸಿನಿಮಾಗಳು

ರಶ್ಮಿಕಾ ಮಂದಣ್ಣ ಅವರು ನಟಿಸಿರುವ ಬಾಲಿವುಡ್​ನ ‘ಛಾವ’ ಸಿನಿಮಾ ಡಿಸೆಂಬರ್​ 6ರಂದು ರಿಲೀಸ್​ ಆಗಲಿದೆ. ಅದೇ ದಿನ ‘ಪುಷ್ಪ 2’ ಸಿನಿಮಾ ಕೂಡ ತೆರೆಕಾಣಲಿದೆ ಎಂಬುದು ವಿಶೇಷ. ಈ ಎರಡೂ ಸಿನಿಮಾಗಳು ಬೇರೆ ಬೇರೆ ಕಾರಣದಿಂದ ನಿರೀಕ್ಷೆ ಸೃಷ್ಟಿ ಮಾಡಿವೆ. ‘ಛಾವ’ ಸಿನಿಮಾದ ಟೀಸರ್​ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ವಿಕ್ಕಿ ಕೌಶಲ್​ ಹೀರೋ.

ಒಂದು ಕೈಯಲ್ಲಿ ಕೊಡಲಿ, ಇನ್ನೊಂದು ಕೈಯಲ್ಲಿ ಗನ್; ಫಹಾದ್​ ಫಾಸಿಲ್​ ಜನ್ಮದಿನಕ್ಕೆ ‘ಪುಷ್ಪ 2’ ಪೋಸ್ಟರ್​

ಪ್ಯಾನ್​ ಇಂಡಿಯಾ ಸ್ಟಾರ್​ ಫಹಾದ್​ ಫಾಸಿಲ್ ಅವರಿಗೆ ಈಗ 42 ವರ್ಷ ವಯಸ್ಸು. ಆ.8ರಂದು ಅವರಿಗೆ ಜನ್ಮದಿನದ ಸಂಭ್ರಮ. ಈ ಪ್ರಯುಕ್ತ ‘ಪುಷ್ಪ 2’, ‘ವೆಟ್ಟಯ್ಯನ್’ ಮುಂತಾದ ಸಿನಿಮಾ ತಂಡಗಳಿಂದ ಬರ್ತ್​ಡೇ ಪೋಸ್ಟರ್​ ಅನಾವರಣ ಆಗಿದೆ. ‘ಪುಷ್ಪ 2’ ಚಿತ್ರದಲ್ಲಿ ಬನ್ವರ್​ ಸಿಂಗ್​ ಶೆಕಾವತ್​ ಎಂಬ ಪಾತ್ರವನ್ನು ಫಹಾದ್​ ಫಾಸಿಲ್​ ಮಾಡುತ್ತಿದ್ದಾರೆ.

ವಯನಾಡು ಭೂಕುಸಿತ: ಸಂತ್ರಸ್ತರಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ ಅಲ್ಲು ಅರ್ಜುನ್​

‘ವಯನಾಡು ಭೂಕುಸಿತದ ವಿಷಯ ತಿಳಿದು ಬಹಳ ನೋವಾಯಿತು. ಕೇರಳ ನನಗೆ ಬಹಳ ಪ್ರೀತಿ ನೀಡಿದೆ. ಭೂಕುಸಿತದ ಸಂತ್ರಸ್ತರ ಪುನರ್ ವಸತಿಗಾಗಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ನನ್ನ ಕೈಲಾದ ಸಹಾಯ ಮಾಡುತ್ತಿದ್ದೇನೆ. ನಿಮ್ಮೆಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ.

‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಬನ್ನಿ ವಾಸು ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ