Allu Arjun
ನಿರ್ಮಾಪಕ ಅಲ್ಲು ಅರವಿಂದ್ ಪುತ್ರ, ತೆಲುಗು ಚಿತ್ರರಂಗದ ಹಿರಿಯ ನಟ ಅಲ್ಲು ರಾಮಲಿಂಗಯ್ಯ ಅವರ ಮೊಮ್ಮಗ ಅಲ್ಲು ಅರ್ಜುನ್ ಜನಿಸಿದ್ದು ಏಪ್ರಿಲ್ 8, 1982. ಕೇವಲ ಮೂರು ವರ್ಷದ ಮಗುವಿದ್ದಾಗಲೇ ಸಿನಿಮಾಗಳಲ್ಲಿ ಕಾಣಿಸಿಕೊಂಡ ಅಲ್ಲು ಅರ್ಜುನ್, ಕಮಲ್ ಹಾಸನ್ರ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಸ್ವಾತಿ ಮುತ್ಯಂ’ನಲ್ಲಿಯೂ ಬಾಲನಟನಾಗಿ ನಟಿಸಿದ್ದರು. ಚಿರಂಜೀವಿಯ ‘ಡ್ಯಾಡಿ’ ಸಿನಿಮಾದಲ್ಲಿನ ಸಣ್ಣ ಪಾತ್ರ ಅಲ್ಲು ಅರ್ಜುನ್ಗೆ ಗುರುತು ತಂದುಕೊಟ್ಟಿತು. ಬಳಿಕ ‘ಗಂಗೋತ್ರಿ’ ಸಿನಿಮಾ ಮೂಲಕ ನಾಯಕ ನಟನಾದರು. ಆದರೆ ಅವರಿಗೆ ಭಾರಿ ದೊಡ್ಡ ಹಿಟ್ ನೀಡಿ, ನಾಯಕನಾಗಿ ನೆಲೆ ನಿಲ್ಲುವಂತೆ ಮಾಡಿದ್ದು ‘ಆರ್ಯ’ ಸಿನಿಮಾ. ಈವರೆಗೆ 20 ಸಿನಿಮಾಗಳಲ್ಲಿ ನಾಯಕನಾಗಿ ಅಲ್ಲು ಅರ್ಜುನ್ ನಟಿಸಿದ್ದಾರೆ.
ಮತ್ತೆ ರಿಲೀಸ್ಗೆ ರೆಡಿ ಆದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’; ಕಾರಣ ಏನು?
ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾ ಮುಂದಿನ ವರ್ಷ ಜನವರಿ 16ರಂದು ಜಪಾನ್ನಲ್ಲಿ ತೆರೆ ಕಾಣಲು ಸಜ್ಜಾಗಿದೆ. ‘ಪುಷ್ಪ’ ಚಿತ್ರದ ಯಶಸ್ಸು ಮತ್ತು ಭಾರತೀಯ ಸಿನಿಮಾಗಳಿಗೆ ಜಪಾನ್ನಲ್ಲಿರುವ ಬೇಡಿಕೆಯೇ ಇದಕ್ಕೆ ಕಾರಣ. ಈ ಹಿಂದೆ ‘ಬಾಹುಬಲಿ’, ‘ಕೆಜಿಎಫ್ 2’, ‘ಆರ್ಆರ್ಆರ್’ ಹಾಗೂ 'ಪುಷ್ಪ' ಚಿತ್ರಗಳು ಅಲ್ಲಿ ಮೆಚ್ಚುಗೆ ಗಳಿಸಿದ್ದವು. ಚಿತ್ರದ ಕಥೆಗೂ ಜಪಾನ್ ಲಿಂಕ್ ಇರುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಕುತೂಹಲ ಮೂಡಿದೆ.
- Shreelaxmi H
- Updated on: Dec 4, 2025
- 8:59 am
‘ಕಾಂತಾರ ನೋಡಿ ಮೈಮರೆತೆ’; ರಿಷಬ್ ಚಿತ್ರ ಹೊಗಳಿದ ಅಲ್ಲು ಅರ್ಜುನ್
ಚಿತ್ರಮಂದಿರಗಳಲ್ಲಿ ರಿಲೀಸ್ ಆದ ಸಿನಿಮಾಗಳನ್ನು ವೀಕ್ಷಿಸಿ ಸೋಶಿಯಲ್ ಮೀಡಿಯಾದಲ್ಲಿ ಆ ಬಗ್ಗೆ ಅಲ್ಲು ಅರ್ಜುನ್ ವಿಮರ್ಶೆ ತಿಳಿಸಿದ ಅನೇಕ ಉದಾಹರಣೆ ಇದೆ. ಈಗ ಅಲ್ಲು ಅರ್ಜುನ್ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರ ನೋಡಿ ಮೈಮರೆತಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಲು ಅವರು ಮರೆತಿಲ್ಲ.
- Rajesh Duggumane
- Updated on: Oct 24, 2025
- 1:38 pm
ಅಲ್ಲು ಅರ್ಜುನ್ ಮನೆಯಲ್ಲಿ ವಿವಾಹ ಸಂಭ್ರಮ; ಅಲ್ಲು ಸಿರೀಶ್ ಮದುವೆ ಫಿಕ್ಸ್
ನಟ ಅಲ್ಲು ಸಿರೀಶ್ ಶೀಘ್ರದಲ್ಲೇ ನಯನಿಕಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. ಅಜ್ಜ ಅಲ್ಲು ರಾಮಲಿಂಗಯ್ಯ ಅವರ ಜನ್ಮ ವಾರ್ಷಿಕೋತ್ಸವದಂದು ಈ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಹೈದರಾಬಾದ್ ಮೂಲದ ಉದ್ಯಮಿಯೊಬ್ಬರ ಮಗಳಾದ ನಯನಿಕಾ ಜೊತೆ ಸಿರೀಶ್ ಮದುವೆಯಾಗಲಿದ್ದು, ಅಭಿಮಾನಿಗಳು ಹಾಗೂ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
- Shreelaxmi H
- Updated on: Oct 2, 2025
- 11:05 am
SIIMA 2025 Telugu: ಅಲ್ಲು ಅರ್ಜುನ್ ಅತ್ಯುತ್ತಮ ನಟ, ರಶ್ಮಿಕಾ ಮಂದಣ್ಣ ಅತ್ಯುತ್ತಮ ನಟಿ
ಸೈಮಾ ಅವಾರ್ಡ್ಸ್ 2025 ಅದ್ದೂರಿಯಾಗಿ ದುಬೈನಲ್ಲಿ ನಡೆದಿದೆ. ಈ ಬಾರಿ ತೆಲುಗು ಹಾಗೂ ಕನ್ನಡದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮೊದಲು ಹಮ್ಮಿಕೊಳ್ಳಲಾಗಿತ್ತು. 2024ನೇ ಸಾಲಿನ ಸಿನಿಮಾಗಳಿಗೆ ಅವಾರ್ಡ್ ಸಿಕ್ಕಿದೆ. ಇಂದು (ಸೆಪ್ಟೆಂಬರ್ 6) ತಮಿಳು ಹಾಗೂ ಮಲಯಾಳಂ ಭಾಷೆಯ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ.
- Rajesh Duggumane
- Updated on: Sep 6, 2025
- 8:13 am
ಅಲ್ಲು ಅರ್ಜುನ್ ಮುದ್ದಿನ ಅಜ್ಜಿ ಕನಕರತ್ನಂ ನಿಧನ; ಮೈಸೂರಲ್ಲಿ ಶೂಟ್ ಬಿಟ್ಟು ತೆರಳಿದ ರಾಮ್ ಚರಣ್
ಅಲ್ಲು ಅರ್ಜುನ್ ಅವರ ಅಜ್ಜಿ ಅಲ್ಲು ಕನಕರತ್ನಂ ಅವರು ಆಗಸ್ಟ್ 30 ರಂದು 94 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸಿನಿಮಾ ಶೂಟಿಂಗ್ನಿಂದ ಮುಂಬೈನಲ್ಲಿದ್ದ ಅಲ್ಲು ಅರ್ಜುನ್ ಅಜ್ಜಿಯ ಸಾವಿನ ಸುದ್ದಿ ಕೇಳಿ ಹೈದರಾಬಾದ್ಗೆ ತೆರಳುತ್ತಿದ್ದಾರೆ.
- Rajesh Duggumane
- Updated on: Aug 30, 2025
- 12:52 pm
ಕನ್ನಡದ ಪ್ರಶಾಂತ್ ನೀಲ್ ಜೊತೆ ಕೈ ಜೋಡಿಸಿದ ಅಲ್ಲು ಅರ್ಜುನ್? ಚಿತ್ರಕ್ಕೆ ಖಡಕ್ ಟೈಟಲ್
ಪ್ರಶಾಂತ್ ನೀಲ್ ಅವರು ತೆಲುಗು ಚಿತ್ರರಂಗದಲ್ಲಿ ತಮ್ಮ ಹೆಸರನ್ನು ಮುದ್ರಿಸಿಕೊಂಡಿದ್ದಾರೆ. ಅವರು ಜೂನಿಯರ್ ಎನ್ಟಿಆರ್ ಜೊತೆ ಒಂದು ಚಿತ್ರವನ್ನು ಮಾಡುತ್ತಿದ್ದಾರೆ. ಹೀಗಿರುವಾಗಲೇ ಅಲ್ಲು ಅರ್ಜುನ್ ಜೊತೆಗೆ ಅವರು ಹೊಸ ಚಿತ್ರ ಒಂದನ್ನು ಮಾಡುತ್ತಿದ್ದಾರೆ. ಈ ಬಗ್ಗೆ ವದಂತಿಗಳು ಹಬ್ಬಿವೆ. ಈ ಹೊಸ ಚಿತ್ರಕ್ಕೆ ‘ರಾವಣಂ’ ಎಂಬ ಶೀರ್ಷಿಕೆ ಇಡಲಾಗಿದೆ ಎನ್ನಲಾಗಿದೆ.
- Rajesh Duggumane
- Updated on: Jun 25, 2025
- 6:59 am
‘ಫಾದರ್ಸ್ ಡೇ’ ದಿನ ಅಲ್ಲು ಅರ್ಜುನ್ಗೆ ಮಕ್ಕಳಿಂದ ಸರ್ಪ್ರೈಸ್; ಭಾವುಕರಾದ ನಟ
ಅಲ್ಲು ಅರ್ಜುನ್ ಅವರ ಮಕ್ಕಳಾದ ಅಯಾನ್ ಮತ್ತು ಅರ್ಹ, ತಮ್ಮ ತಂದೆಗೆ ಫಾದರ್ಸ್ ಡೇ ಹಬ್ಬದಂದು ಚಾಕೊಲೇಟ್ ಕೇಕ್ನಿಂದ ಸರ್ಪ್ರೈಸ್ ನೀಡಿದ್ದಾರೆ. ಅಲ್ಲು ಅರ್ಜುನ್ ಈ ವಿಚಾರವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡು ಮಕ್ಕಳಿಗೆ ಧನ್ಯವಾದ ಹೇಳಿದ್ದಾರೆ ಮತ್ತು ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದೂ ಹೇಳಿದ್ದಾರೆ. ಅಲ್ಲು ಅರ್ಜುನ್ 'AA22 X A6' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಈ ಕಾರಣಕ್ಕಾಗಿ ಮಕ್ಕಳಿಂದ ದೂರವಿದ್ದಾರೆ ಎಂದು ತಿಳಿದುಬಂದಿದೆ.
- Shreelaxmi H
- Updated on: Jun 15, 2025
- 2:18 pm
ಮುಂಬೈನಲ್ಲಿ ಅಲ್ಲು ಅರ್ಜುನ್ ಹೊಸ ಸಿನಿಮಾಗೆ ಮುಹೂರ್ತ; ಶೂಟಿಂಗ್ ಆರಂಭ
ಅಲ್ಲು ಅರ್ಜುನ್ ಅವರು ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ. ನಿರ್ದೇಶಕ ಅಟ್ಲಿ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಬಳಿಕ ಫೋಟೋಶೂಟ್ ಕೂಡ ನಡೆದಿದೆ. ಸ್ವಲ್ಪ ದಿನಗಳ ನಂತರ ದೀಪಿಕಾ ಪಡುಕೋಣೆ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..
- Madan Kumar
- Updated on: Jun 11, 2025
- 11:10 pm
ಅಲ್ಲು ಅರ್ಜುನ್-ಅಟ್ಲಿ ಚಿತ್ರಕ್ಕೆ ದೀಪಿಕಾ ಎಂಟ್ರಿ ಅಧಿಕೃತ; ಪ್ರೋಮೋ ರಿಲೀಸ್
Deepika Padukone: ಅಲ್ಲು ಅರ್ಜುನ್ ಮತ್ತು ಅಟ್ಲಿ ಅವರ ಮುಂಬರುವ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿಯಾಗಿ ಸೇರ್ಪಡೆಯಾಗಿದ್ದಾರೆ. ಈ ಚಿತ್ರದ ಪ್ರೋಮೋ ಇತ್ತೀಚೆಗೆ ಬಿಡುಗಡೆಯಾಗಿದೆ. ದೀಪಿಕಾ ಅವರು ದಿನಕ್ಕೆ 8 ಗಂಟೆಗಳ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಮತ್ತು ಅದಕ್ಕೆ ತಕ್ಕಂತೆ ಸಂಭಾವನೆ ಪಡೆಯುತ್ತಿದ್ದಾರೆ. ಅಲ್ಲು ಅರ್ಜುನ್ ಮತ್ತು ದೀಪಿಕಾ ಅವರ ಮೊದಲ ಚಿತ್ರ ಇದಾಗಿದೆ.
- Shreelaxmi H
- Updated on: Jun 17, 2025
- 9:59 am
Gaddar Awards: ‘ಪುಷ್ಪ 2’ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್
ಈ ಮೊದಲು ‘ಪುಷ್ಪ’ ಸಿನಿಮಾದ ನಟನೆಗೆ ಅಲ್ಲು ಅರ್ಜುನ್ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಈಗ ‘ಪುಷ್ಪ 2’ ಸಿನಿಮಾದಲ್ಲಿನ ಅಭಿನಯಕ್ಕೆ ಅವರು ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ತೆಲಂಗಾಣ ಸರ್ಕಾರ ಈ ಪ್ರಶಸ್ತಿ ನೀಡಿದ್ದಕ್ಕೆ ಅವರು ಧನ್ಯವಾದ ತಿಳಿಸಿದ್ದಾರೆ. ‘ಗದ್ದರ್ ಸಿನಿಮಾ ಪ್ರಶಸ್ತಿ’ ವಿವರ ಇಲ್ಲಿದೆ..
- Madan Kumar
- Updated on: May 29, 2025
- 6:34 pm