Allu Arjun
ನಿರ್ಮಾಪಕ ಅಲ್ಲು ಅರವಿಂದ್ ಪುತ್ರ, ತೆಲುಗು ಚಿತ್ರರಂಗದ ಹಿರಿಯ ನಟ ಅಲ್ಲು ರಾಮಲಿಂಗಯ್ಯ ಅವರ ಮೊಮ್ಮಗ ಅಲ್ಲು ಅರ್ಜುನ್ ಜನಿಸಿದ್ದು ಏಪ್ರಿಲ್ 8, 1982. ಕೇವಲ ಮೂರು ವರ್ಷದ ಮಗುವಿದ್ದಾಗಲೇ ಸಿನಿಮಾಗಳಲ್ಲಿ ಕಾಣಿಸಿಕೊಂಡ ಅಲ್ಲು ಅರ್ಜುನ್, ಕಮಲ್ ಹಾಸನ್ರ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಸ್ವಾತಿ ಮುತ್ಯಂ’ನಲ್ಲಿಯೂ ಬಾಲನಟನಾಗಿ ನಟಿಸಿದ್ದರು. ಚಿರಂಜೀವಿಯ ‘ಡ್ಯಾಡಿ’ ಸಿನಿಮಾದಲ್ಲಿನ ಸಣ್ಣ ಪಾತ್ರ ಅಲ್ಲು ಅರ್ಜುನ್ಗೆ ಗುರುತು ತಂದುಕೊಟ್ಟಿತು. ಬಳಿಕ ‘ಗಂಗೋತ್ರಿ’ ಸಿನಿಮಾ ಮೂಲಕ ನಾಯಕ ನಟನಾದರು. ಆದರೆ ಅವರಿಗೆ ಭಾರಿ ದೊಡ್ಡ ಹಿಟ್ ನೀಡಿ, ನಾಯಕನಾಗಿ ನೆಲೆ ನಿಲ್ಲುವಂತೆ ಮಾಡಿದ್ದು ‘ಆರ್ಯ’ ಸಿನಿಮಾ. ಈವರೆಗೆ 20 ಸಿನಿಮಾಗಳಲ್ಲಿ ನಾಯಕನಾಗಿ ಅಲ್ಲು ಅರ್ಜುನ್ ನಟಿಸಿದ್ದಾರೆ.
ಇನ್ನೂ ಹೆಚ್ಚು ಓದಿಅಲ್ಲು ಅರ್ಜುನ್ ಲಕ್ಕಿ ತಿಂಗಳಲ್ಲೇ ಬರಲಿದೆ ‘ರಾಕಾ’? ಈ ಡೇಟ್ ಮೇಲೆ ಕಣ್ಣು
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಅಟ್ಲಿ ಕಾಂಬಿನೇಷನ್ನ ಬೃಹತ್ ಸಿನಿಮಾ 'ರಾಕಾ' 2027ರ ಡಿಸೆಂಬರ್ 31ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ. 'ಪುಷ್ಪ' ಸರಣಿಯಂತೆ ಡಿಸೆಂಬರ್ ತಿಂಗಳ ಲಕ್ಕಿ ಸೆಂಟಿಮೆಂಟ್ ಆಧಾರದ ಮೇಲೆ ಹೊಸ ವರ್ಷದ ಕೊಡುಗೆಯಾಗಿ ಈ ಚಿತ್ರವನ್ನು ತರಲು ಅಲ್ಲು ಅರ್ಜುನ್ ಪ್ಲಾನ್ ಮಾಡಿದ್ದಾರೆ.
- Rajesh Duggumane
- Updated on: Sep 4, 2026
- 10:50 am
‘ರಾಕಾ’ ಚಿತ್ರಕ್ಕಾಗಿ ದೊಡ್ಡ ಚಾಲೆಂಜ್ ಸ್ವೀಕರಿಸಿದ ಅಲ್ಲು ಅರ್ಜುನ್
ಅಟ್ಲೀ ನಿರ್ದೇಶನದ ‘ರಾಕಾ’ ಸಿನಿಮಾದಲ್ಲಿ ಅಲ್ಲು ಅರ್ಜುನ್ ತ್ರಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಮೆರ್ಸಲ್ ಶೈಲಿಯ ಕಥಾಹಂದರ ಹೊಂದಿರುವ ಈ ಫ್ಯಾಂಟಸಿ ಆಕ್ಷನ್ ಚಿತ್ರವು ಎರಡು ಕಾಲಘಟ್ಟಗಳಲ್ಲಿ ಸಾಗಲಿದೆ. ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಈ ಸಿನಿಮಾ, ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಲು ಸಂಪೂರ್ಣವಾಗಿ ಸಜ್ಜಾಗಿದೆ.
- Shreelaxmi H
- Updated on: Aug 29, 2026
- 7:50 am
ಫೋರ್ಬ್ಸ್ ಇಂಡಿಯಾ ‘ಶೋಸ್ಟಾಪರ್ಸ್ 2026’ ಕವರ್ ಪೇಜ್ನಲ್ಲಿ ಮಿಂಚಿದ ಅಲ್ಲು ಅರ್ಜುನ್
ಪುಷ್ಪ ಸಿನಿಮಾಗಳ ಯಶಸ್ಸಿನ ನಂತರ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಫೋರ್ಬ್ಸ್ ಇಂಡಿಯಾ 'ಶೋಸ್ಟಾಪರ್ಸ್ 2026' ಮುಖಪುಟದಲ್ಲಿ ಮಿಂಚಿದ್ದಾರೆ. ಪ್ರಾದೇಶಿಕ ಗಡಿ ದಾಟಿ ಜಾಗತಿಕ ಮಟ್ಟದಲ್ಲಿ ಬೆಳೆದಿರುವ ಅಲ್ಲು ಅರ್ಜುನ್, ಇದೀಗ ನಿರ್ದೇಶಕ ಅಟ್ಲಿ ಜೊತೆಗಿನ ಬಹುನಿರೀಕ್ಷಿತ 'ರಾಕಾ' ಬಿಗ್ ಬಜೆಟ್ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.
- Shreelaxmi H
- Updated on: Aug 28, 2026
- 11:54 am
ಅಲ್ಲು ಅರ್ಜುನ್ ಸಿನಿಮಾನಲ್ಲಿ ನಟಿಸಲಿರುವ ಹಾಲಿವುಡ್ ಸೂಪರ್ ಸ್ಟಾರ್
Allu Arjun movie: ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳನ್ನು ತಲುಪಿವೆ. ಈಗ ಹಾಲಿವುಡ್ ಸೆಲೆಬ್ರಿಟಿಗಳು ಸಹ ಭಾರತದ ಸಿನಿಮಾಗಳಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಲು ಮುಂದಾಗುತ್ತಿದ್ದಾರೆ. ಈಗಾಗಲೇ ವಿಜಯ್ ದೇವರಕೊಂಡ ಸಿನಿಮಾನಲ್ಲಿ ‘ದಿ ಮಮ್ಮಿ’ ಖ್ಯಾತಿಯ ಅರ್ನಾಲ್ಡ್ ವೋಸ್ಲೋ ನಟಿಸುತ್ತಿದ್ದಾರೆ. ತಮಿಳಿನ ಧನುಶ್ ನಟನೆಯ ‘ಜಗಮೇ ತಂದಿರಮ್’ನಲ್ಲಿ ಜೇಮ್ಸ್ ಕಾಸ್ಮೊ ನಟಿಸಿದ್ದರು. ಇದೀಗ ಅವರಿಗೂ ದೊಡ್ಡ ಸ್ಟಾರ್ ಒಬ್ಬರು ಅಲ್ಲು ಅರ್ಜುನ್ ಜೊತೆಗೆ ನಟಿಸಲಿದ್ದಾರೆ.
- Manjunatha C
- Updated on: Aug 19, 2026
- 7:45 pm
‘ಡಿಸಿ’ ಸಿನಿಮಾಗೆ ಅಲ್ಲು ಅರ್ಜುನ್, ಮಹೇಶ್ ಬಾಬು ಮೆಚ್ಚುಗೆ: ಹೆಚ್ಚಾಯಿತು ಕ್ರೇಜ್
ಸ್ಟಾರ್ ಡೈರೆಕ್ಟರ್ ಲೋಕೇಶ್ ಕನಗರಾಜ್ ಅವರು ಹೀರೋ ಆಗಿ ನಟಿಸಿರುವ ‘ಡಿಸಿ’ ಸಿನಿಮಾ ಎಲ್ಲ ಕಡೆಗಳಲ್ಲಿ ಧೂಳೆಬ್ಬಿಸುತ್ತಿದೆ. ತಮಿಳು ಹಾಗೂ ತೆಲುಗು ಮಾರುಕಟ್ಟೆಯಲ್ಲಿ ಈ ಚಿತ್ರವು ಉತ್ತಮ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಹೀರೋಗಳು ಈ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ.
- Madan Kumar
- Updated on: Aug 17, 2026
- 10:09 pm
‘ಟ್ರೋಲ್ ಸಂಸ್ಕೃತಿಗೆ ಗುಡ್ಬೈ ಹೇಳಿ’; ಅಭಿಮಾನಿಗಳಿಗೆ ಅಲ್ಲು ಅರ್ಜುನ್ ಖಡಕ್ ಸಂದೇಶ
ಹೈದರಾಬಾದ್ನಲ್ಲಿ ನಡೆದ ಅಭಿಮಾನಿ ಸಂಘದ ಸಭೆಯಲ್ಲಿ ನಟ ಅಲ್ಲು ಅರ್ಜುನ್ ಪಾಲ್ಗೊಂಡು ಮಹತ್ವದ ಕಿವಿಮಾತು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇತರರನ್ನು ಟ್ರೋಲ್ ಮಾಡಿ ಸಮಯ, ಹಣ ಹಾಗೂ ಶಕ್ತಿ ಹಾಳು ಮಾಡಿಕೊಳ್ಳಬೇಡಿ. ಆ ನೆಗೆಟಿವ್ ಎನರ್ಜಿಯನ್ನು ನಿಮ್ಮ ಸ್ವಂತ ಬೆಳವಣಿಗೆಗೆ ಬಳಸಿ ಎಂದು ಕರೆ ನೀಡುವ ಮೂಲಕ ಬನ್ನಿ ಗಮನ ಸೆಳೆದಿದ್ದಾರೆ.
- Rajesh Duggumane
- Updated on: Jul 29, 2026
- 7:27 am
ಅಭಿಮಾನಿಗಳಿಗೆ ಆಪತ್ಬಾಂಧವನಾದ ಅಲ್ಲು ಅರ್ಜುನ್; 900 ಫ್ಯಾನ್ಸ್ಗೆ ಇನ್ಶೂರೆನ್ಸ್
ಸ್ಟಾರ್ ನಟ ಅಲ್ಲು ಅರ್ಜುನ್ ಹೈದರಾಬಾದ್ನಲ್ಲಿ ಅಭಿಮಾನಿ ಸಂಘದ ಸದಸ್ಯರನ್ನು ಭೇಟಿಯಾಗಿದ್ದಾರೆ. ಆರು ಗಂಟೆಗಳ ಕಾಲ ನಿಂತೇ ಫೋಟೋ ನೀಡಿದ ನಟ, ಅಭಿಮಾನಿಗಳಿಗೆ ಉಚಿತ ಅಪಘಾತ ವಿಮೆ ಘೋಷಿಸಿದ್ದಾರೆ. ರಾಜ್ಯ ಸಮಿತಿ ಸದಸ್ಯರಿಗೆ 5 ಲಕ್ಷ ಹಾಗೂ ಜಿಲ್ಲಾ ಸದಸ್ಯರಿಗೆ 3 ಲಕ್ಷ ರೂಪಾಯಿ ವಿಮೆ ಸಿಗಲಿದ್ದು, ಇದು ದೇಶದಲ್ಲೇ ಮೊದಲ ಪ್ರಯತ್ನವಾಗಿದೆ.
- Rajesh Duggumane
- Updated on: Jul 29, 2026
- 6:55 am
ಮತ್ತೆ ಒಂದಾಗಲಿದ್ದಾರೆ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ; ಶೀಘ್ರವೇ ಮುಂಬೈನಲ್ಲಿ ‘ರಾಕಾ’ ಶೂಟಿಂಗ್ ಆರಂಭ
ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ 'ರಾಕಾ' ಚಿತ್ರದಲ್ಲಿ ಮತ್ತೆ ಒಂದಾಗುತ್ತಿದ್ದಾರೆ. ಅಟ್ಲಿ ನಿರ್ದೇಶನದ ಈ 700 ಕೋಟಿ ಬೃಹತ್ ಬಜೆಟ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್, ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 2027ರಲ್ಲಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
- Rajesh Duggumane
- Updated on: Jun 27, 2026
- 12:35 pm
ವಿಡಿಯೋ ಕಾಲ್ ಮಾಡಿ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಅಲ್ಲು ಅರ್ಜುನ್
ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತೊಮ್ಮೆ ತಮ್ಮ ದೊಡ್ಡ ಗುಣದ ಮೂಲಕ ಸುದ್ದಿಯಾಗಿದ್ದಾರೆ. ಮಾರಕ ಕಾಯಿಲೆಯಿಂದ ಬಳಲುತ್ತಿರುವ ಶ್ರದ್ಧಾ ಎಂಬ ಪುಟ್ಟ ಬಾಲಕಿ ಮತ್ತು ತನ್ನ ಆರಾಧ್ಯ ದೈವ ಅಲ್ಲು ಅರ್ಜುನ್ನನ್ನು ಭೇಟಿಯಾಗಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಳು. ಈ ವಿಷಯ ತಿಳಿಯುತ್ತಿದ್ದಂತೆ ಬಿಡುವು ಮಾಡಿಕೊಂಡ ನಟ, ಆಕೆಗೆ ವಿಡಿಯೋ ಕಾಲ್ ಮಾಡಿ ಸರ್ಪ್ರೈಸ್ ನೀಡಿದ್ದಾರೆ. ವಿಡಿಯೋ ಕಾಲ್ನಲ್ಲಿ ಶ್ರದ್ಧಾ ಜೊತೆ ‘ಪುಷ್ಪ’ ಚಿತ್ರದ ಫೇಮಸ್ ಡೈಲಾಗ್ ಹೊಡೆದು ಖುಷಿಪಡಿಸಿದ ಅಲ್ಲು ಅರ್ಜುನ್, ಆಕೆಯನ್ನು ಹೈದರಾಬಾದ್ಗೆ ಆಹ್ವಾನಿಸಿದ್ದಾರೆ.
- Shreelaxmi H
- Updated on: Jun 20, 2026
- 11:22 am
ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಸಿನಿಮಾದ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
ಧನುಷ್ ಅವರ ಹೊಸ ಸಿನಿಮಾಗೆ ‘ಓಂ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೀಸರ್ ನೋಡಿದವರಿಗೆ ‘ಪುಷ್ಪ’ ಸಿನಿಮಾ ನೆನಪಾಗಿದೆ. ಈ ಹೋಲಿಕೆಗಳ ಬಗ್ಗೆ ಚಿತ್ರದ ನಿರ್ದೇಶಕ ರಾಜ್ಕುಮಾರ್ ಪೆರಿಯಸಾಮಿ ಪ್ರತಿಕ್ರಿಯಿಸಿದ್ದಾರೆ. ಅಕ್ಟೋಬರ್ 16ರಂದು ಅದ್ಧೂರಿಯಾಗಿ ‘ಓಂ’ ಸಿನಿಮಾ ಬಿಡುಗಡೆ ಆಗಲಿದೆ.
- Madan Kumar
- Updated on: Jun 19, 2026
- 11:02 pm
‘ಪುಷ್ಪ 2’ ಸಂತ್ರಸ್ತನ ಭೇಟಿ ಮಾಡಿದ ಅಲ್ಲು ಕುಟುಂಬ; ಹಲವು ಭರವಸೆ
ಪುಷ್ಪ 2 ಪ್ರೀಮಿಯರ್ನಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಗಾಯಗೊಂಡ ಶ್ರೀತೇಜ್ನ ಮನೆಗೆ ಅಲ್ಲು ಅರ್ಜುನ್ ಕುಟುಂಬ ಭೇಟಿ ನೀಡಿದೆ. ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಹಾಗೂ ತಂದೆ ಅಲ್ಲು ಅರವಿಂದ್ ಬಾಲಕನ ಆರೋಗ್ಯ ವಿಚಾರಿಸಿ, ಚಿಕಿತ್ಸೆ, ಶಿಕ್ಷಣಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ. ಶ್ರೀತೇಜ್ಗೆ 2 ಕೋಟಿ ರೂಪಾಯಿ ಠೇವಣಿ ಇಡಲಾಗಿದ್ದು, ತಿಂಗಳಿಗೆ ₹1.5 ಲಕ್ಷ ಬಡ್ಡಿ ಸಿಗಲಿದೆ. ಅಲ್ಲು ಅರವಿಂದ್ ಶ್ರೀತೇಜ್ನ ತಂಗಿಯ ವಿದ್ಯಾಭ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ.
- Rajesh Duggumane
- Updated on: May 7, 2026
- 3:15 pm
ಪ್ರೆಗ್ನೆಂಟ್ ಎಂಬ ಕಾರಣಕ್ಕೆ ದೀಪಿಕಾ ಪಡುಕೋಣೆ ಪಾತ್ರಕ್ಕೆ ಕತ್ತರಿ? ‘ರಾಕಾ’ ಚಿತ್ರತಂಡದ ಸ್ಪಷ್ಟನೆ
ನಟಿ ದೀಪಿಕಾ ಪಡುಕೋಣೆ ಪ್ರೆಗ್ನೆಂಟ್ ಎಂಬ ಸುದ್ದಿ ಇತ್ತೀಚೆಗೆ ಹೊರಬಿತ್ತು. 2ನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಅವರು ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಅಭಿನಯಿಸುತ್ತಿರುವ ‘ರಾಕಾ’ ಸಿನಿಮಾದ ಬಗ್ಗೆ ಒಂದಷ್ಟು ಗಾಸಿಪ್ ಜೋರಾಗಿದೆ. ಅವುಗಳ ಬಗ್ಗೆ ಚಿತ್ರತಂಡ ಪ್ರತಿಕ್ರಿಯಿಸಿದೆ.
- Madan Kumar
- Updated on: Apr 23, 2026
- 3:14 pm