AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun

Allu Arjun

ನಿರ್ಮಾಪಕ ಅಲ್ಲು ಅರವಿಂದ್ ಪುತ್ರ, ತೆಲುಗು ಚಿತ್ರರಂಗದ ಹಿರಿಯ ನಟ ಅಲ್ಲು ರಾಮಲಿಂಗಯ್ಯ ಅವರ ಮೊಮ್ಮಗ ಅಲ್ಲು ಅರ್ಜುನ್ ಜನಿಸಿದ್ದು ಏಪ್ರಿಲ್ 8, 1982. ಕೇವಲ ಮೂರು ವರ್ಷದ ಮಗುವಿದ್ದಾಗಲೇ ಸಿನಿಮಾಗಳಲ್ಲಿ ಕಾಣಿಸಿಕೊಂಡ ಅಲ್ಲು ಅರ್ಜುನ್, ಕಮಲ್ ಹಾಸನ್​ರ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಸ್ವಾತಿ ಮುತ್ಯಂ’ನಲ್ಲಿಯೂ ಬಾಲನಟನಾಗಿ ನಟಿಸಿದ್ದರು. ಚಿರಂಜೀವಿಯ ‘ಡ್ಯಾಡಿ’ ಸಿನಿಮಾದಲ್ಲಿನ ಸಣ್ಣ ಪಾತ್ರ ಅಲ್ಲು ಅರ್ಜುನ್​ಗೆ ಗುರುತು ತಂದುಕೊಟ್ಟಿತು. ಬಳಿಕ ‘ಗಂಗೋತ್ರಿ’ ಸಿನಿಮಾ ಮೂಲಕ ನಾಯಕ ನಟನಾದರು. ಆದರೆ ಅವರಿಗೆ ಭಾರಿ ದೊಡ್ಡ ಹಿಟ್ ನೀಡಿ, ನಾಯಕನಾಗಿ ನೆಲೆ ನಿಲ್ಲುವಂತೆ ಮಾಡಿದ್ದು ‘ಆರ್ಯ’ ಸಿನಿಮಾ. ಈವರೆಗೆ 20 ಸಿನಿಮಾಗಳಲ್ಲಿ ನಾಯಕನಾಗಿ ಅಲ್ಲು ಅರ್ಜುನ್ ನಟಿಸಿದ್ದಾರೆ.

ಇನ್ನೂ ಹೆಚ್ಚು ಓದಿ

‘ಪುಷ್ಪ 2’ ಸಂತ್ರಸ್ತನ ಭೇಟಿ ಮಾಡಿದ ಅಲ್ಲು ಕುಟುಂಬ; ಹಲವು ಭರವಸೆ

ಪುಷ್ಪ 2 ಪ್ರೀಮಿಯರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಗಾಯಗೊಂಡ ಶ್ರೀತೇಜ್‌ನ ಮನೆಗೆ ಅಲ್ಲು ಅರ್ಜುನ್ ಕುಟುಂಬ ಭೇಟಿ ನೀಡಿದೆ. ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಹಾಗೂ ತಂದೆ ಅಲ್ಲು ಅರವಿಂದ್ ಬಾಲಕನ ಆರೋಗ್ಯ ವಿಚಾರಿಸಿ, ಚಿಕಿತ್ಸೆ, ಶಿಕ್ಷಣಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ. ಶ್ರೀತೇಜ್‌ಗೆ 2 ಕೋಟಿ ರೂಪಾಯಿ ಠೇವಣಿ ಇಡಲಾಗಿದ್ದು, ತಿಂಗಳಿಗೆ ₹1.5 ಲಕ್ಷ ಬಡ್ಡಿ ಸಿಗಲಿದೆ. ಅಲ್ಲು ಅರವಿಂದ್ ಶ್ರೀತೇಜ್‌ನ ತಂಗಿಯ ವಿದ್ಯಾಭ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ.

ಪ್ರೆಗ್ನೆಂಟ್ ಎಂಬ ಕಾರಣಕ್ಕೆ ದೀಪಿಕಾ ಪಡುಕೋಣೆ ಪಾತ್ರಕ್ಕೆ ಕತ್ತರಿ? ‘ರಾಕಾ’ ಚಿತ್ರತಂಡದ ಸ್ಪಷ್ಟನೆ

ನಟಿ ದೀಪಿಕಾ ಪಡುಕೋಣೆ ಪ್ರೆಗ್ನೆಂಟ್ ಎಂಬ ಸುದ್ದಿ ಇತ್ತೀಚೆಗೆ ಹೊರಬಿತ್ತು. 2ನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಅವರು ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಅಭಿನಯಿಸುತ್ತಿರುವ ‘ರಾಕಾ’ ಸಿನಿಮಾದ ಬಗ್ಗೆ ಒಂದಷ್ಟು ಗಾಸಿಪ್ ಜೋರಾಗಿದೆ. ಅವುಗಳ ಬಗ್ಗೆ ಚಿತ್ರತಂಡ ಪ್ರತಿಕ್ರಿಯಿಸಿದೆ.

100 ಕೋಟಿ ರೂ. ಸುರಿದು ಹೊಸ ಮನೆ ನಿರ್ಮಿಸುತ್ತಿದ್ದಾರೆ ಅಲ್ಲು ಅರ್ಜುನ್; ಹೇಗಿರಲಿದೆ ನಿವಾಸ?

ಅಲ್ಲು ಅರ್ಜುನ್ ಜುಬ್ಲಿ ಹಿಲ್ಸ್‌ನಲ್ಲಿ 80-100 ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಹೊಸ ಮನೆ ನಿರ್ಮಿಸುತ್ತಿದ್ದಾರೆ. 4,000 ಸ್ಕ್ವೇರ್ ಯಾರ್ಡ್ ಜಾಗದಲ್ಲಿ ಮನೆ, ಗಾರ್ಡನ್, ಸ್ವಿಮ್ಮಿಂಗ್ ಪೂಲ್ ಇರಲಿದೆ. ಇದು ಅವರ ಕನಸಿನ ಮನೆ. ಸದ್ಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಚಿರಂಜೀವಿ ಅವರ ಮನೆಯ ಪಕ್ಕದಲ್ಲೇ ಈ ಅದ್ದೂರಿ ನಿವಾಸ ತಲೆ ಎತ್ತುತ್ತಿದೆ.

ಅಲ್ಲು ಅರ್ಜುನ್ ‘ರಾಕಾ’ ಲುಕ್ ಸಿದ್ಧಪಡಿಸಲು ಪ್ರತಿ ದಿನ 4 ಗಂಟೆ ಮೇಕಪ್

ಅಲ್ಲು ಅರ್ಜುನ್ ನಟನೆಯ ‘ರಾಕಾ’ ಚಿತ್ರವು ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದೆ. ಇದರಲ್ಲಿ ಅಲ್ಲು ಅರ್ಜುನ್ ಅವರ ಗೆಟಪ್ ಭಿನ್ನವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದು ಟ್ರೆಂಡ್ ಆಗಿದೆ. ಡಿಫರೆಂಟ್ ಆಗಿರುವ ಈ ಗೆಟಪ್ ಸಲುವಾಗಿ ಅಲ್ಲು ಅರ್ಜುನ್ ಅವರಿಗೆ ಪ್ರತಿದಿನ ಗಂಟೆಗಟ್ಟಲೆ ಮೇಕಪ್ ಮಾಡಲಾಗಿದೆ.

ಜೂನಿಯರ್ ಎನ್​ಟಿಆರ್​ ಅಥವಾ ಅಲ್ಲು ಅರ್ಜುನ್? ಜನ್ಮದಿನಕ್ಕೆ ಸಿಗಲಿದೆ ಕ್ಲ್ಯಾರಿಟಿ

ಮೇ 20ರಂದು ಜೂನಿಯರ್ ಎನ್ಟಿಆರ್ ಬರ್ತ್ಡೇ. ಅಂದು ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಬಗ್ಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ಅಂದು ಟೀಸರ್ ಕೂಡ ನಿರೀಕ್ಷಿಸಬಹುದು. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದರು. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಇನ್ನೂ ಒಂದು ಘೋಷಣೆಗಾಗಿ ಅಭಿಮಾನಿಗಳು ಕಾದಿದ್ದಾರೆ.

ಅಲ್ಲು ಅರ್ಜುನ್ ಸಿನಿಮಾ ‘ರಾಕಾ’ ಟೈಟಲ್ ಅರ್ಥವೇನು? ಶುರುವಾಗಿದೆ ಚರ್ಚೆ

ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾ ‘ರಾಕಾ’ ಶೀರ್ಷಿಕೆ ಈಗ ಅನಾವರಣಗೊಂಡಿದೆ. ‘ಪುಷ್ಪ 2’ ನಂತರ ಅಟ್ಲೀ ನಿರ್ದೇಶನದ ಈ 800 ಕೋಟಿ ರೂ. ಬಜೆಟ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿದ್ದಾರೆ. ಸನ್ ಪಿಕ್ಚರ್ಸ್ ನಿರ್ಮಿಸುತ್ತಿರುವ ‘ರಾಕಾ’ ಶೀರ್ಷಿಕೆಯು ನಿಜವಾದ ಅರ್ಥದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆದಿದೆ.

ಅಲ್ಲು ಅರ್ಜುನ್ ಮನೆ ಎದುರು ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರ ಲಾಠಿ ಏಟು

‘ಪುಷ್ಪ 2’ ಸಿನಿಮಾದ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರಿಗೆ ಹುಟ್ಟುಹಬ್ಬದ ವಿಶ್ ಮಾಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಮನೆ ಎದುರು ಜಮಾಯಿಸಿದ್ದಾರೆ. ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಲಾಠಿ ಬೀಸಬೇಕಾಯಿತು. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಅಲ್ಲು ಅರ್ಜುನ್ ಬೆಳೆಯಲು ಈ ಎಲ್ಲಾ ವ್ಯಕ್ತಿಗಳು ಕಾರಣ

ನಟ ಅಲ್ಲು ಅರ್ಜುನ್ 'ಪುಷ್ಪ 2' ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಮಾತ್ರವಲ್ಲ, ವಿಶ್ವ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಅಲ್ಲು ಅರವಿಂದ್ ಮತ್ತು ಅಲ್ಲು ರಾಮಲಿಂಗಯ್ಯ ಅವರಂತಹ ಸಿನಿಮಾ ಹಿನ್ನೆಲೆ ಹೊಂದಿದ್ದರೂ, ತಮ್ಮ ವಿನಮ್ರತೆ ಮತ್ತು ಎಲ್ಲರ ಬೆಂಬಲದಿಂದ ಈ ಮಟ್ಟಕ್ಕೆ ಬೆಳೆದಿದ್ದಾರೆ. ನಿರ್ದೇಶಕ ಅಟ್ಲಿ ಜೊತೆಗಿನ ಮುಂದಿನ ಬಹುನಿರೀಕ್ಷಿತ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿದ್ದು, ಶೀಘ್ರದಲ್ಲೇ ಟೈಟಲ್ ಅನೌನ್ಸ್ ಆಗಲಿದೆ.

ತುಂಬಾನೇ ಶ್ರೀಮಂತ ಅಲ್ಲು ಅರ್ಜುನ್; ಅವರ ಬಳಿ ಇರೋ ದುಬಾರಿ ವಸ್ತುಗಳಿವು

Happy Birthday Allu Arjun: ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಜನ್ಮದಿನದ ವಿಶೇಷ: ಅವರ ಅಚ್ಚರಿ ಮೂಡಿಸುವ ಸಂಪತ್ತು, ಆಸ್ತಿ ವಿವರಗಳನ್ನು ತಿಳಿಯಿರಿ. 600 ಕೋಟಿ ರೂ. ಆಸ್ತಿ ಹೊಂದಿರುವ ಅವರು, 100 ಕೋಟಿ ರೂ. ಬಂಗಲೆ, 7 ಕೋಟಿ ರೂ. ಮೌಲ್ಯದ ಕ್ಯಾರಾವ್ಯಾನ್ ಮತ್ತು ಐಷಾರಾಮಿ ಕಾರುಗಳ ಒಡೆಯರು. ಅನ್ನಪೂರ್ಣ ಸ್ಟುಡಿಯೋಸ್, ಆಹಾ ಒಟಿಟಿ ಸೇರಿದಂತೆ ಹಲವು ಉದ್ಯಮಗಳಲ್ಲಿ ಪಾಲುದಾರಿಕೆ ಹೊಂದಿದ್ದಾರೆ.

ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸಿಗಲಿದೆ ಸರ್ಪ್ರೈಸ್? ಹೊಸ ಸಿನಿಮಾ ಟೈಟಲ್ ಮೇಲೆ ಕಣ್ಣು

ಅಟ್ಲಿ ಮತ್ತು ಅರ್ಜುನ್ ಅರ್ಜುನ್ ಜೋಡಿಯ ಸಿನಿಮಾದ ಟೈಟಲ್ ಏನೆಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಈ ಸಿನಿಮಾವನ್ನು AA22xA6 ಎಂದು ಕರೆಯಲಾಗುತ್ತಿದೆ. ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಶೀರ್ಷಿಕೆ ಘೋಷಣೆ ಆಗಲಿದೆ ಎಂದು ಅರ್ಜುನ್ ಅರ್ಜುನ್ ಫ್ಯಾನ್ಸ್ ನಿರೀಕ್ಷಿಸಿದ್ದಾರೆ.

ಐಟಂ ಸಾಂಗ್ ಮಾಡಲು ಒಪ್ಪಿಕೊಂಡ ಮೃಣಾಲ್ ಠಾಕೂರ್; ಅಭಿಮಾನಿಗಳಿಗೆ ಹಬ್ಬ

‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ಅವರು ಐಟಂ ಸಾಂಗ್ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಮ್ ಚರಣ್, ಅಲ್ಲು ಅರ್ಜುನ್ ಮುಂತಾದ ಸ್ಟಾರ್ ನಟರ ಸಿನಿಮಾಗಳಲ್ಲಿ ಡ್ಯಾನ್ಸ್ ಮಾಡಲು ಮೃಣಾಲ್ ಒಪ್ಪಿದ್ದಾರೆ. ತಮ್ಮ ಗ್ಲಾಮರ್ ಮೂಲಕ ಮೃಣಾಲ್ ಅವರು ಈ ಹಾಡುಗಳಿಗೆ ಕಳೆ ತುಂಬುತ್ತಾರೆ ಎಂಬುದು ಅಭಿಮಾನಿಗಳ ನಂಬಿಕೆ.

ಅಲ್ಲು ಅರ್ಜುನ್ ವ್ಯಕ್ತಿತ್ವ ಎಂಥದ್ದು? ವಿವರಿಸಿದ ಮ್ಯಾನೇಜರ್

ಅಲ್ಲು ಅರ್ಜುನ್ ಭೇಟಿ ನಿಯಮಗಳ ಬಗ್ಗೆ ಬ್ರಾಂಡ್ ಸ್ಟ್ರಾಟಜಿಸ್ಟ್ ಕಾವೇರಿ ಬರುವಾ ಹೇಳಿಕೆಗಳು ಸಂಚಲನ ಮೂಡಿಸಿದ್ದವು. ಆದರೆ, ಅಲ್ಲು ಅರ್ಜುನ್ ಮ್ಯಾನೇಜರ್ ಶರತ್ಚಂದ್ರ ನಾಯ್ಡು ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಅಲ್ಲು ಅರ್ಜುನ್ ಅವರನ್ನು ಭೇಟಿಯಾಗಲು ಯಾವುದೇ ಕಠಿಣ ಪ್ರೋಟೋಕಾಲ್‌ಗಳಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ