AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun

Allu Arjun

ನಿರ್ಮಾಪಕ ಅಲ್ಲು ಅರವಿಂದ್ ಪುತ್ರ, ತೆಲುಗು ಚಿತ್ರರಂಗದ ಹಿರಿಯ ನಟ ಅಲ್ಲು ರಾಮಲಿಂಗಯ್ಯ ಅವರ ಮೊಮ್ಮಗ ಅಲ್ಲು ಅರ್ಜುನ್ ಜನಿಸಿದ್ದು ಏಪ್ರಿಲ್ 8, 1982. ಕೇವಲ ಮೂರು ವರ್ಷದ ಮಗುವಿದ್ದಾಗಲೇ ಸಿನಿಮಾಗಳಲ್ಲಿ ಕಾಣಿಸಿಕೊಂಡ ಅಲ್ಲು ಅರ್ಜುನ್, ಕಮಲ್ ಹಾಸನ್​ರ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಸ್ವಾತಿ ಮುತ್ಯಂ’ನಲ್ಲಿಯೂ ಬಾಲನಟನಾಗಿ ನಟಿಸಿದ್ದರು. ಚಿರಂಜೀವಿಯ ‘ಡ್ಯಾಡಿ’ ಸಿನಿಮಾದಲ್ಲಿನ ಸಣ್ಣ ಪಾತ್ರ ಅಲ್ಲು ಅರ್ಜುನ್​ಗೆ ಗುರುತು ತಂದುಕೊಟ್ಟಿತು. ಬಳಿಕ ‘ಗಂಗೋತ್ರಿ’ ಸಿನಿಮಾ ಮೂಲಕ ನಾಯಕ ನಟನಾದರು. ಆದರೆ ಅವರಿಗೆ ಭಾರಿ ದೊಡ್ಡ ಹಿಟ್ ನೀಡಿ, ನಾಯಕನಾಗಿ ನೆಲೆ ನಿಲ್ಲುವಂತೆ ಮಾಡಿದ್ದು ‘ಆರ್ಯ’ ಸಿನಿಮಾ. ಈವರೆಗೆ 20 ಸಿನಿಮಾಗಳಲ್ಲಿ ನಾಯಕನಾಗಿ ಅಲ್ಲು ಅರ್ಜುನ್ ನಟಿಸಿದ್ದಾರೆ.

ಇನ್ನೂ ಹೆಚ್ಚು ಓದಿ

‘ಫಾದರ್ಸ್​ ಡೇ’ ದಿನ ಅಲ್ಲು ಅರ್ಜುನ್​ಗೆ ಮಕ್ಕಳಿಂದ ಸರ್​ಪ್ರೈಸ್​; ಭಾವುಕರಾದ ನಟ

ಅಲ್ಲು ಅರ್ಜುನ್ ಅವರ ಮಕ್ಕಳಾದ ಅಯಾನ್ ಮತ್ತು ಅರ್ಹ, ತಮ್ಮ ತಂದೆಗೆ ಫಾದರ್ಸ್ ಡೇ ಹಬ್ಬದಂದು ಚಾಕೊಲೇಟ್ ಕೇಕ್‌ನಿಂದ ಸರ್‌ಪ್ರೈಸ್ ನೀಡಿದ್ದಾರೆ. ಅಲ್ಲು ಅರ್ಜುನ್ ಈ ವಿಚಾರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡು ಮಕ್ಕಳಿಗೆ ಧನ್ಯವಾದ ಹೇಳಿದ್ದಾರೆ ಮತ್ತು ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದೂ ಹೇಳಿದ್ದಾರೆ. ಅಲ್ಲು ಅರ್ಜುನ್ 'AA22 X A6' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಈ ಕಾರಣಕ್ಕಾಗಿ ಮಕ್ಕಳಿಂದ ದೂರವಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈನಲ್ಲಿ ಅಲ್ಲು ಅರ್ಜುನ್ ಹೊಸ ಸಿನಿಮಾಗೆ ಮುಹೂರ್ತ; ಶೂಟಿಂಗ್ ಆರಂಭ

ಅಲ್ಲು ಅರ್ಜುನ್ ಅವರು ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ. ನಿರ್ದೇಶಕ ಅಟ್ಲಿ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಬಳಿಕ ಫೋಟೋಶೂಟ್ ಕೂಡ ನಡೆದಿದೆ. ಸ್ವಲ್ಪ ದಿನಗಳ ನಂತರ ದೀಪಿಕಾ ಪಡುಕೋಣೆ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಅಲ್ಲು ಅರ್ಜುನ್-ಅಟ್ಲಿ ಚಿತ್ರಕ್ಕೆ ದೀಪಿಕಾ ಎಂಟ್ರಿ ಅಧಿಕೃತ; ಪ್ರೋಮೋ ರಿಲೀಸ್

Deepika Padukone: ಅಲ್ಲು ಅರ್ಜುನ್ ಮತ್ತು ಅಟ್ಲಿ ಅವರ ಮುಂಬರುವ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿಯಾಗಿ ಸೇರ್ಪಡೆಯಾಗಿದ್ದಾರೆ. ಈ ಚಿತ್ರದ ಪ್ರೋಮೋ ಇತ್ತೀಚೆಗೆ ಬಿಡುಗಡೆಯಾಗಿದೆ. ದೀಪಿಕಾ ಅವರು ದಿನಕ್ಕೆ 8 ಗಂಟೆಗಳ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಮತ್ತು ಅದಕ್ಕೆ ತಕ್ಕಂತೆ ಸಂಭಾವನೆ ಪಡೆಯುತ್ತಿದ್ದಾರೆ. ಅಲ್ಲು ಅರ್ಜುನ್ ಮತ್ತು ದೀಪಿಕಾ ಅವರ ಮೊದಲ ಚಿತ್ರ ಇದಾಗಿದೆ.

Gaddar Awards: ‘ಪುಷ್ಪ 2’ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್

ಈ ಮೊದಲು ‘ಪುಷ್ಪ’ ಸಿನಿಮಾದ ನಟನೆಗೆ ಅಲ್ಲು ಅರ್ಜುನ್ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಈಗ ‘ಪುಷ್ಪ 2’ ಸಿನಿಮಾದಲ್ಲಿನ ಅಭಿನಯಕ್ಕೆ ಅವರು ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ತೆಲಂಗಾಣ ಸರ್ಕಾರ ಈ ಪ್ರಶಸ್ತಿ ನೀಡಿದ್ದಕ್ಕೆ ಅವರು ಧನ್ಯವಾದ ತಿಳಿಸಿದ್ದಾರೆ. ‘ಗದ್ದರ್ ಸಿನಿಮಾ ಪ್ರಶಸ್ತಿ’ ವಿವರ ಇಲ್ಲಿದೆ..

‘ಆರ್ಯ 3’ ಟೈಟಲ್ ನೋಂದಣಿ ಮಾಡಿಸಿದ ದಿಲ್ ರಾಜು; ಥ್ರಿಲ್ ಆದ ಅಲ್ಲು ಅರ್ಜುನ್ ಫ್ಯಾನ್ಸ್

ದಿಲ್ ರಾಜು ಅವರು 'ಆರ್ಯ 3' ಚಿತ್ರದ ಟೈಟಲ್​ನ ತೆಲುಗು ಚಿತ್ರರಂಗದಲ್ಲಿ ದಾಖಲಿಸಿದ್ದಾರೆ. ಆದರೆ, ಅಲ್ಲು ಅರ್ಜುನ್ ಮತ್ತು ಸುಕುಮಾರ್ ಈ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಾರಾ ಎಂಬುದು ಖಚಿತವಾಗಿಲ್ಲ. ಅಲ್ಲು ಅರ್ಜುನ್ ಅವರು ಇತರ ಚಿತ್ರಗಳಲ್ಲಿ ಬ್ಯುಸಿ ಇರುವುದರಿಂದ, 'ಆರ್ಯ 3' ಚಿತ್ರದ ಭವಿಷ್ಯ ಇನ್ನೂ ನಿಶ್ಚಿತವಾಗಿಲ್ಲ.

500 ಜನರ ಎದುರು ನಡುಗುತ್ತಾ ನಿಂತಿದ್ದ ಸಮಂತಾ ರುತ್ ಪ್ರಭು; ಕಾರಣ ಏನು?

ತಾವು ಹಾಟ್ ಆಗಿ ಕಾಣಬಹುದು ಎಂದು ಸಮಂತಾ ರುತ್ ಪ್ರಭು ಅಂದುಕೊಂಡಿರಲಿಲ್ಲ. ಹಾಗಾಗಿ ಅವರಿಗೆ ಶೂಟಿಂಗ್ ದಿನ ನರ್ವಸ್ ಆಗಿತ್ತು. ಆ ಘಟನೆಯನ್ನು ಈಗ ಅವರು ನೆನಪಿಸಿಕೊಂಡಿದ್ದಾರೆ. ‘ಉ ಅಂಟಾವಾ ಮಾವ..’ ಹಾಡಿನ ಶೂಟಿಂಗ್ ದಿನ ಏನಾಗಿತ್ತು ಎಂಬುದನ್ನು ಅವರು ಮೆಲುಕು ಹಾಕಿದ್ದಾರೆ.

ಅಟ್ಲಿ ಸಿನಿಮಾಕ್ಕೆ ಅಲ್ಲು ಅರ್ಜುನ್ ಕಠಿಣ ತಯಾರಿ, ಫಿಸಿಕಲ್ ಜೊತೆ ಮೆಂಟಲ್ ತರಬೇತಿ

Allu Arjun-Atlee: ನಟ ಅಲ್ಲು ಅರ್ಜುನ್ ‘ಪುಷ್ಪ 2’ ಬಳಿಕ ತ್ರಿವಿಕ್ರಮ್ ಬದಲಿಗೆ ಅಟ್ಲಿ ಜೊತೆಗೆ ಸಿನಿಮಾ ಮಾಡುತ್ತಿದ್ದಾರೆ. ಭಾರಿ ಬಜೆಟ್​ನ ಈ ಸಿನಿಮಾಕ್ಕಾಗಿ ತಯಾರಿಯನ್ನು ಅಲ್ಲು ಅರ್ಜುನ್ ಈಗಾಗಲೇ ಆರಂಭಿಸಿದ್ದಾರೆ. ವಿದೇಶಿ ಫಿಟ್​ನೆಸ್ ಕೋಚ್ ಅನ್ನು ಪಡೆದುಕೊಂಡಿರುವ ಅಲ್ಲು ಅರ್ಜುನ್, ದೈಹಿಕ ತರಬೇತಿ ಜೊತೆಗೆ ಮಾನಸಿಕ ತರಬೇತಿಯನ್ನು ಸಹ ಪಡೆಯುತ್ತಿದ್ದಾರೆ.

ಅಲ್ಲು ಅರ್ಜುನ್ ಬಗ್ಗೆ ಸಿಕ್ತು ಬಿಗ್ ಅಪ್​ಡೇಟ್; ಈ ಬಾರಿ ಅಭಿಮಾನಿಗಳಿಗೆ ನಿಜಕ್ಕೂ ಹಬ್ಬ

ಅಲ್ಲು ಅರ್ಜುನ್ ಅವರಿಗೆ ಪ್ರಖ್ಯಾತ ಫಿಟ್ನೆಸ್ ಟ್ರೇನರ್ ಲಾಯ್ಡ್ ಸ್ಟೀವನ್ಸ್ ಅವರು ವರ್ಕೌಟ್ ಮಾಡಿಸುತ್ತಿದ್ದಾರೆ. ಅವರಿಬ್ಬರು ಜೊತೆಯಾಗಿರುವ ಫೋಟೋ ವೈರಲ್ ಆಗಿದೆ. ಅಟ್ಲಿ ಜೊತೆಗಿನ ಹೊಸ ಸಿನಿಮಾಗಾಗಿ ಅಲ್ಲು ಅರ್ಜುನ್ ಅವರು ಬಾಡಿ ಟ್ರಾನ್ಸ್​ಫಾರ್ಮೇಷನ್​ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲು ಮಹೇಶ್ ಬಾಬು, ಜೂನಿಯರ್ ಎನ್​ಟಿಆರ್ ಮುಂತಾದವರಿಗೆ ಲಾಯ್ಡ್ ಸ್ಟೀವನ್ಸ್ ಟ್ರೇನಿಂಗ್ ನೀಡಿದ್ದರು.

20 ವರ್ಷಗಳ ಹಿಂದೆ ನಟಿ ಮಾಡಿದ ಕುಹಕದ ಮಾತಿನಿಂದ ಸಿಕ್ಸ್ ಪ್ಯಾಕ್​ ಮಾಡಿದ್ದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು 20 ವರ್ಷಗಳ ಹಿಂದೆ ನಟಿಯೊಬ್ಬರ ಕುಹಕದ ಮಾತಿನಿಂದ ಪ್ರೇರಣೆ ಪಡೆದು ಸಿಕ್ಸ್ ಪ್ಯಾಕ್ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ದಕ್ಷಿಣ ಭಾರತದ ನಟರಲ್ಲಿ ಮೊದಲು ಸಿಕ್ಸ್ ಪ್ಯಾಕ್ ತೋರಿಸಿದವರು ತಾವೇ ಎಂದು ಅವರು ಹೇಳಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಅವರು ಇತ್ತೀಚೆಗೆ ವರ್ಲ್ಡ್ ಆಡಿಯೋ ವಿಶ್ಯುವಲ್ ಎಂಟರ್ಟೈನ್ಮೆಂಟ್ ಸಮ್ಮೇಳನದಲ್ಲಿ ಮಾತನಾಡಿದ್ದಾರೆ.

‘ನಮಗೆ ಈಗ ವೇದಿಕೆ ಸಿಕ್ಕಿದೆ’; ವೇವ್ಸ್ ಬಗ್ಗೆ ಅಲ್ಲು ಅರ್ಜುನ್ ಮಾತು

ವರ್ಲ್ಡ್ ಆಡಿಯೋ ವಿಶ್ಯುವಲ್ಸ್ ಎಂಟರ್ಟೈನ್ಮೆಂಟ್ ಸಮ್ಮೇಳನ ವೇವ್ಸ್ 2025ರಲ್ಲಿ ಭಾಗವಹಿಸಿದ ಅಲ್ಲು ಅರ್ಜುನ್, ಭಾರತೀಯ ಸಿನಿಮಾಕ್ಕೆ ಹೊಸ ವೇದಿಕೆ ಸೃಷ್ಟಿಯಾಗಿದೆ ಎಂದು ಹೇಳಿದರು. ಅವರ ಹೊಸ ಚಿತ್ರದ ಬಗ್ಗೆಯೂ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿ ಮತ್ತು ಅಂತರರಾಷ್ಟ್ರೀಯ ತಂತ್ರಜ್ಞಾನದ ಸಮ್ಮಿಲನವನ್ನು ಪ್ರತಿಬಿಂಬಿಸುವ ಚಿತ್ರ ಇದಾಗಿದೆ ಎಂದರು.

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್