Amit Shah

Amit Shah

ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್‌ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್‌ ಷಾ, ಮೂಲತಃ ಗುಜರಾತ್‌ನವರು. ಅಹಮದಾಬಾದ್‌ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್‌ ಷಾ. ಗುಜರಾತ್‌ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್‌ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್‌ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್‌ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್‌ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.

ಇನ್ನೂ ಹೆಚ್ಚು ಓದಿ

ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಬೀದರ್ ಬಂದ್: ಶಾಲೆಗಳಿಗೆ ರಜೆ ಘೋಷಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರುದ್ಧದ ಹೇಳಿಕೆಗೆ ಬೀದರ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ವಿವಿಧ ದಲಿತ ಸಂಘಟನೆಗಳು ನಾಳೆ ಬೀದರ್ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬೀದರ್ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಡಿಡಿಪಿಐ ಎಸ್.ಎಲ್. ಪ್ರಸನ್ನ ಕುಮಾರ್ ಅವರು ರಜೆ ಆದೇಶ ಹೊರಡಿಸಿದ್ದಾರೆ.

ರಾಜಕೀಯ ತಿರುವು ಪಡೆದುಕೊಂಡ ನಾಳಿನ ಹುಬ್ಬಳ್ಳಿ-ಧಾರವಾಡ ಬಂದ್: ಪೊಲೀಸ್ ಅಲರ್ಟ್

ಅಮಿತ್ ಶಾ ಅವರ ಅಂಬೇಡ್ಕರ್ ವಿರೋಧಿ ಹೇಳಿಕೆಯನ್ನು ಖಂಡಿಸಿ, ದಲಿತ ಸಂಘಟನೆಗಳು ನಾಳೆ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ಬಿಜೆಪಿ ವಿರೋಧ ವ್ಯಕ್ತವಾಗಿದ್ದು, ರಾಜಕೀಯ ತಿರುವು ಪಡೆದುಕೊಂಡಿದೆ. ಹೀಗಾಗಿ ಪೊಲೀಸರು ಅಲರ್ಟ್ ಆಗಿದ್ದಾರೆ. ಹೋಟೆಲ್ ಮಾಲೀಕರ ಸಂಘ ಬಂದ್‌ಗೆ ಬೆಂಬಲ ನೀಡಿಲ್ಲ.

ಬಂದ್​..ಬಂದ್.. ಸಾರ್ವಜನಿಕರು ಮಂಗಳವಾರ ಮೈಸೂರು ಪ್ರವಾಸ ಮುಂದೂಡುವುದು ಬೆಸ್ಟ್..!

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಧಿಆಧಿರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ನಾಳೆ( ಜನವರಿ 7) ರಂದು ಮೈಸೂರು ಬಂದ್‌ಗೆ ಕರೆ ನೀಡಲಾಗಿದೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿ ಬಂದ್​ಗೆ ಕರೆ ನೀಡಲಾಗಿದ್ದು, ಈ ಬಂದ್​ಗೆ ಕಾಂಗ್ರೆಸ್​ ಸೇರಿದಂತೆ ವಿವಿಧ ಸಂಘಟನೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ಇದರಿಂದ ಅರಮನೆನಗರಿ ಸಂಪೂರ್ಣ ಸ್ತಬ್ಧವಾಗುವುದು ಗ್ಯಾರಂಟಿ. ಹೀಗಾಗಿ ಮೈಸೂರು ಪ್ರವಾಸ ಕೈಬಿಡುವುದು ಒಳ್ಳೆಯದು.

ಮಾರ್ಚ್ 2026ರೊಳಗೆ ಭಾರತದಿಂದ ನಕ್ಸಲಿಸಂ ನಿರ್ಮೂಲನೆ; ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿ ಬಳಿಕ ಅಮಿತ್ ಶಾ ಭರವಸೆ

ಛತ್ತೀಸ್‌ಗಢದಲ್ಲಿ ಇಂದು ನಡೆದ ನಕ್ಸಲ್ ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಕ್ಸಲರ ದಾಳಿಯಿಂದ ಹುತಾತ್ಮರಾದ ವೀರ ಸೈನಿಕರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಅಸಾಧ್ಯ. ಆದರೆ, ನಮ್ಮ ಸೈನಿಕರ ಸಾವಿಗೆ ನ್ಯಾಯ ಕೊಡಿಸುತ್ತೇವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ವಾಸ್ತವಿಕ ಸಂಗತಿಗಳನ್ನು ವರಿಷ್ಠರಿಗೆ ವಿವರಿಸಲು ದೆಹಲಿ ಹೋಗಿದ್ದೆ, ಚಾಡಿ ಹೇಳಲಲ್ಲ: ಬಿವೈ ವಿಜಯೇಂದ್ರ

ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ನಡೆಸುತ್ತಿದ್ದ ಹೋರಾಟವನ್ನು ನಿಲ್ಲಿಸುವಂತೆ ತಾನೇ ಹೇಳಿದ್ದು, ದೆಹಲಿಯ ವರಿಷ್ಠರಲ್ಲ ಎಂದು ವಿಜಯೇಂದ್ರ ಹೇಳುತ್ತಾರೆ. ಕೇಂದ್ರದ ಸಂಸದೀಯ ಮಂಡಳಿಗೆ ಹೋರಾಟದ ವರದಿಯನ್ನು ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ನೀಡಲಾಯಿತು ಎಂದು ಹೇಳುವ ಅವರು ಹೋರಾಟದ ರೂವಾರಿಯಾಗಿದ್ದ ಬಸನಗೌಡ ಯತ್ನಾಳ್ ಹೆಸರನ್ನೇ ಉಲ್ಲೇಖಿಸುವುದಿಲ್ಲ.

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಬಿ.ವೈ. ವಿಜಯೇಂದ್ರ; ಕರ್ನಾಟಕದ ರಾಜಕೀಯದ ಬಗ್ಗೆ ಚರ್ಚೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಮಿತ್ ಶಾ ನಿವಾಸದಲ್ಲಿ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಮಿತ್ ಶಾ ಅವರನ್ನು ಭೇಟಿ ಮಾಡಿದ ವೇಳೆ ವಿಜಯೇಂದ್ರ ವಚನಗಳ ಹಿಂದಿ ಭಾಷಾಂತರದ ಪುಸ್ತಕ ನೀಡಿದ್ದಾರೆ. ಕರ್ನಾಟಕದಲ್ಲಿ ಭಿನ್ನಮತಕ್ಕೆ‌ ಬ್ರೇಕ್ ಹಾಕುವಂತೆ ಅಮಿತ್ ಶಾ ಅವರಿಗೆ ವಿಜಯೇಂದ್ರ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕರೆ ಕೊಟ್ಟಿದ್ದ ವಿಜಯಪುರ ಬಂದ್ ಮುಂದೂಡಿಕೆ: ಕಾರಣ ಇಲ್ಲಿದೆ

ಅಮಿತ್ ಶಾ ಅವರು ಬಿ.ಆರ್. ಅಂಬೇಡ್ಕರ್ ವಿರುದ್ಧದ ಹೇಳಿಕೆಯನ್ನು ಖಂಡಿಸಿ ವಿಜಯಪುರ ಕರೆ ನೀಡಲಾಗಿದ್ದ ಬಂದ್ ಅನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಮುಂದೂಡಲಾಗಿದೆ. ವಿವಿಧ ದಲಿತ ಮತ್ತು ಅಹಿಂದ ಸಂಘಟನೆಗಳು ಈ ಬಗ್ಗೆ ಮಾಹಿತಿ ನೀಡಿವೆ. ಡಿಸೆಂಬರ್ 30 ರಂದು ಬಂದ್​​ಗೆ ಕರೆ ನೀಡಲಾಗಿದೆ.

ಬೆಳಗಾವಿಯಲ್ಲಿ ನಡೆದ CWC ಸಭೆಯಲ್ಲಿ 2 ಪ್ರಮುಖ ನಿರ್ಣಯ ಕೈಗೊಂಡ ಕಾಂಗ್ರೆಸ್…!

ಇಂದಿಗೆ 100 ವರ್ಷ.. 1924 ಡಿಸೆಂಬರ್ 26, ಮಧ್ಯಾಹ್ನ 3 ಗಂಟೆ. ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಭಾರತದ ಹೊಸ ದಾರಿಗೆ ನಾಂದಿಯಾಗಿತ್ತು. ಆ ಅಧಿವೇಶನ ಸ್ವಾತಂತ್ರ ಹೋರಾಟಕ್ಕೆ ಸ್ಪಷ್ಟ ದಿಕ್ಕಾಗಿತ್ತು. ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಬಳಸಿದ ಚರಕಾಸ್ತ್ರಕ್ಕೆ ಶಕ್ತಿ ತುಂಬಿತ್ತು. ನಾಡಿನ ಏಕೀಕರಣದ ಹೋರಾಟಕ್ಕೆ ಅಧಿಕೃತ ಚಾಲನೆ ಸಿಕ್ಕಿತ್ತು. ಸ್ವಾತಂತ್ರ ಹೋರಾಟದ ವಿಸ್ತಾರಕ್ಕೆ ಹಾದಿಯಾಗಿತ್ತು. ಇದೀಗ ಆ ಕಾಂಗ್ರೆಸ್​ ಆಧಿವೇಶಕ್ಕೆ 100 ವರ್ಷ ತುಂಬಿದ್ದು, ಇದರ ಸ್ಮರಣಾರ್ಥವಾಗಿ ಬೆಳಗಾವಿಯಲ್ಲಿ ಇಂದಿನಿಂದ 2 ದಿನ ಶತಮಾನೋತ್ಸವ ನಡೆಯುತ್ತಿದ್ದು, ಮೊದಲ ದಿನವಾದ ಇಂದು(ಡಿಸೆಂಬರ್ 26) ಸಿಡಬ್ಲ್ಯುಸಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ.

ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್: ಬಸ್​ಗಳಿಲ್ಲದೆ ​​ನಿಲ್ದಾಣ ಖಾಲಿ

ಅಂಬೇಡ್ಕರ್ ವಿರುದ್ದ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ಉಳಿಸಿ ಸಂಘಟನೆ ಹಾಗೂ ದಲಿತ ಸಂಘಟನೆಗಳು ಕರೆ ನೀಡಿರುವ ಕಲಬುರಗಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ‌ ಮಾಡಲಾಗಿದೆ. ನಗರದ ಪರಿಸ್ಥಿತಿ ಹೇಗಿದೆ ಎಂಬ ವಿಡಿಯೋ ಇಲ್ಲಿದೆ.

ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕಲಬುರಗಿ ಬಂದ್​ಗೆ ಕರೆ: ಶಾಲಾ, ಕಾಲೇಜುಗಳಿಗೆ ರಜೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರೋಧಿ ಹೇಳಿಕೆಯಿಂದ ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿವಿಧ ದಲಿತ ಸಂಘಟನೆಗಳಿಂದ ನಾಳೆ ಕಲಬುರಗಿ ಬಂದ್‌ಗೆ ಕರೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಇನ್ನು ಕಾಂಗ್ರೆಸ್ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದೆ.