Amit Shah
ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್ ಷಾ, ಮೂಲತಃ ಗುಜರಾತ್ನವರು. ಅಹಮದಾಬಾದ್ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್ ಷಾ. ಗುಜರಾತ್ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.
ಕುಟುಂಬದೊಂದಿಗೆ ಗಾಳಿಪಟ ಹಾರಿಸಿದ ಗೃಹ ಸಚಿವ ಅಮಿತ್ ಶಾ
ಗುಜರಾತ್ನಲ್ಲಿ ಉತ್ತರಾಯಣ ಆಚರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬದೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬ ಮತ್ತು ನರನ್ಪುರ ಪ್ರದೇಶದ ನಿವಾಸಿಗಳೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಉತ್ತರ ಭಾರತದಲ್ಲಿ ಸಂಕ್ರಾಂತಿಯ ವೇಳೆ ಗಾಳಿಪಟ ಹಾರಿಸುವುದು ಸಂಪ್ರದಾಯವಾಗಿದೆ. ಹಾಗೇ, ಇಂದು ಬೆಳಗ್ಗೆ ಅಮಿತ್ ಶಾ ಜಮಾಲ್ಪುರ ಪ್ರದೇಶದ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
- Sushma Chakre
- Updated on: Jan 14, 2026
- 10:14 pm
ಅಮಿತ್ ಶಾ, ಮೋದಿಯನ್ನು ಮಹಾಭಾರತದ ದುಶ್ಯಾಸನ, ದುರ್ಯೋಧನನಿಗೆ ಹೋಲಿಸಿದ ಸಿಎಂ ಮಮತಾ ಬ್ಯಾನರ್ಜಿ
ನಿನ್ನೆ ಕೊಲ್ಕತ್ತಾಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂದು ಅಮಿತ್ ಶಾ ಆರೋಪಿಸಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದಕರು ಇದ್ದರೆ ನೀವೇ ಪಹಲ್ಗಾಮ್ ದಾಳಿ ನಡೆಸಿದ್ದೀರಾ? ಎಂದು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.
- Sushma Chakre
- Updated on: Dec 30, 2025
- 5:09 pm
ಇನ್ನೊಮ್ಮೆ ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ
ಇನ್ನೂ 5 ವರ್ಷಗಳ ಕಾಲ ಬಿಜೆಪಿಗೆ ಮತ ನೀಡಿ ಗೆಲ್ಲಿಸಿದರೆ ಅಸ್ಸಾಂನೊಳಗೆ ಬರುವ ಪ್ರತಿಯೊಬ್ಬ ನುಸುಳುಕೋರರನ್ನು ನಾವು ಹೊರಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. "ಇನ್ನೂ 5 ವರ್ಷಗಳ ಕಾಲ ಬಿಜೆಪಿಗೆ ಮತ ನೀಡಿ, ನಾವು ಅಸ್ಸಾಂನಿಂದ ಮಾತ್ರವಲ್ಲದೆ ಇಡೀ ದೇಶದಿಂದಲೇ ಅಕ್ರಮ ನುಸುಳುವವರನ್ನು ಓಡಿಸುತ್ತೇವೆ. ನುಸುಳುಕೋರರು ಅತಿಕ್ರಮಿಸಿದ ಪ್ರತಿಯೊಂದು ಭೂಮಿಯನ್ನು ನಾವು ಮುಕ್ತಗೊಳಿಸುತ್ತೇವೆ" ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
- Sushma Chakre
- Updated on: Dec 29, 2025
- 9:21 pm
ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಭದ್ರತಾ ಪಡೆಗಳು ಶಿಕ್ಷಿಸಿದವು. ಆಪರೇಷನ್ ಮಹಾದೇವ್ ಮೂಲಕ ಅದನ್ನು ನಡೆಸಿದವರನ್ನು ತಟಸ್ಥಗೊಳಿಸಿದವು. ಇದು ಭಯೋತ್ಪಾದನೆಗೆ ಭಾರತ ನೀಡಿದ ನಿರ್ಣಾಯಕ ಪ್ರತಿಕ್ರಿಯೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.
- Sushma Chakre
- Updated on: Dec 26, 2025
- 11:03 pm
ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ
ಕೇಂದ್ರ ಸರ್ಕಾರ ಹಾಗೂ ಕರ್ನಾಟಕದ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಟೀಕಿಸಿದ್ದಾರೆ. ಅಸಮರ್ಥರನ್ನು ಅಸಮರ್ಥ ಎನ್ನದೆ ಜಗದೇಕವೀರ ಎನ್ನಬೇಕೆ? ಎಂದು ಲೇವಡಿಯನ್ನೂ ಮಾಡಿದ್ದಾರೆ. ಬಾಂಗ್ಲಾ ವಲಸಿಗರ ಬಗ್ಗೆ ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುತ್ತಿರುವುದಕ್ಕೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Sushma Chakre
- Updated on: Dec 20, 2025
- 8:49 pm
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್: ಅಮಿತ್ ಶಾ ಮುಂದೇನಾಯ್ತು? ಎಳೆ ಎಳೆಯಾಗಿ ಬಿಚ್ಚಿಟ್ಟ ಯತ್ನಾಳ್
ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ನಿಯಂತ್ರಣಕ್ಕೆ ಸಿಗದಂತೆ ಭುಗಿಲೆದ್ದಿರುವ ಸಿಎಂ ಕುರ್ಚಿ ಕಿತ್ತಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಧಿವೇಶನಕ್ಕೂ ಮುನ್ನ ಹೈಕಮಾಂಡ್ ಏನೋ ತೇಪೆ ಹಾಕಿತ್ತು. ಆದ್ರೆ ಅಧಿವೇಶನ ನಡೆಯುತ್ತಿರುವಾಗಲೇ ಪಟ್ಟದ ಫೈಟ್ ಜ್ವಾಲಾಮುಖ ಸ್ಫೋಟಿಸಿದೆ. ಈ ಬೆಳವಣಿಗೆಗಳ ನಡುವೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ್ (Basangowda Patil Yatnal) ಸ್ಫೋಟಕ ತಿರುವು ಕೊಟ್ಟಿದ್ದಾರೆ.
- Ramesh B Jawalagera
- Updated on: Dec 12, 2025
- 3:56 pm
ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ; ಅಮಿತ್ ಶಾ ವಾಗ್ದಾಳಿ
ಲೋಕಸಭಾ ಅಧಿವೇಶನದಲ್ಲಿ ಮತ್ತೊಮ್ಮೆ ಎಸ್ಐಆರ್ ಕುರಿತು ಚರ್ಚೆ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಗೃಹ ಸಚಿವ ಅಮಿತ್ ಶಾ ನಡುವೆ ಈ ಚರ್ಚೆ ಕಾವೇರಿದ್ದು, ಈ ವೇಳೆ ಅಮಿತ್ ಶಾ ಕಾಂಗ್ರೆಸ್ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಗೂ ಮತಗಳ್ಳತನಕ್ಕೂ ನಂಟಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ಇಬ್ಬರೂ ನಾಯಕರ ನಡುವೆ ತೀವ್ರ ಚರ್ಚೆ ಏರ್ಪಟ್ಟಿತು.
- Sushma Chakre
- Updated on: Dec 10, 2025
- 7:16 pm
ಕಾಂಗ್ರೆಸ್ ವಂದೇ ಮಾತರಂ ಅನ್ನು ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ; ರಾಜ್ಯಸಭೆಯಲ್ಲಿ ಅಮಿತ್ ಶಾ ಟೀಕೆ
ಒಂದುವೇಳೆ, ವಂದೇ ಮಾತರಂ ಗೀತೆಯನ್ನು ಓಲೈಕೆಗಾಗಿ ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮತ್ತೊಮ್ಮೆ ರಾಜ್ಯಸಭೆಯಲ್ಲಿ ನೆಹರೂ, ಇಂದಿರಾ ಗಾಂಧಿಯನ್ನು ಅಮಿತ್ ಶಾ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎನ್ಡಿಎ ಸರ್ಕಾರ ವಂದೇ ಮಾತರಂ ಕುರಿತು ಸಂಸದೀಯ ಚರ್ಚೆಯನ್ನು ಪ್ರಸ್ತಾಪಿಸಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪಕ್ಕೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 9, 2025
- 6:22 pm
ಅಧಿಕಾರ ಹಂಚಿಕೆ ಜಟಾಪಟಿ ಮಧ್ಯೆ ಅಮಿತ್ ಶಾ ಭೇಟಿಯಾದ ರಾಜಣ್ಣ ಪುತ್ರ ರಾಜೇಂದ್ರ
ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇಂಟರ್ನ್ಯಾಷನಲ್ ಕೋ ಆಪರೇಟಿವ್ ಚುನಾವಣೆ ಇದೆ. ಆ ಸಂಬಂಧ ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ. ಅಧ್ಯಕ್ಷರನ್ನ ನೋಡಿ ವಾಪಸ್ ಹೋಗುತ್ತಿದ್ದೇನೆ ರಾಜಕೀಯ ಏನಿಲ್ಲ ಎಂದು ಅವರು ಹೇಳಿದ್ದಾರೆ. ವಿಡಿಯೋ ನೋಡಿ.
- Mahesha E
- Updated on: Nov 22, 2025
- 2:52 pm
ಒಳನುಸುಳುವಿಕೆ ನಿಲ್ಲಿಸುವುದು ಅತ್ಯಗತ್ಯ; SIR ಬಗ್ಗೆ ಅಮಿತ್ ಶಾ ಹೇಳಿಕೆ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಸ್ಐಆರ್ ಸ್ಥಗಿತಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ. SIR ಭಾರತದ ಪ್ರಜಾಪ್ರಭುತ್ವವನ್ನು ಸುರಕ್ಷಿತಗೊಳಿಸುವ ಮತ್ತು ಶುದ್ಧೀಕರಿಸುವ ಗುರಿಯನ್ನು ಹೊಂದಿರುವ ಪ್ರಕ್ರಿಯೆಯಾಗಿದೆ ಎಂದು ಅವರು ಹೇಳಿದ್ದಾರೆ. ಚುನಾವಣಾ ಆಯೋಗ ನಡೆಸುವ ಮತದಾರರ ಪಟ್ಟಿ ಪರಿಶೀಲನಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬೆಂಬಲಿಸುವಂತೆ ಅಮಿತ್ ಶಾ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
- Sushma Chakre
- Updated on: Nov 21, 2025
- 3:46 pm
ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲೇ ಅಡಗಿದ್ದರೂ ಬಿಡುವುದಿಲ್ಲ; ಅಮಿತ್ ಶಾ ಎಚ್ಚರಿಕೆ
ದೆಹಲಿ ಕಾರು ಸ್ಫೋಟದ ಅಪರಾಧಿಗಳನ್ನು ಶಿಕ್ಷಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದ ಆಳದಲ್ಲಿದ್ದರೂ ಅವರನ್ನು ಬೇಟೆಯಾಡುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ದೆಹಲಿಯ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ಬಲಿಪಶುಗಳು ಸಾವನ್ನಪ್ಪಿದ ನಂತರ ನವೆಂಬರ್ 10ರಂದು ನಡೆದ ಕಾರು ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
- Sushma Chakre
- Updated on: Nov 17, 2025
- 10:42 pm
ದೇಶದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗೆ ಆಯ್ಕೆಯಾದ ರಾಯಚೂರಿನ ಕವಿತಾಳ ಠಾಣೆ
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ, ಕೇಂದ್ರ ಗೃಹ ಸಚಿವಾಲಯದ 2025ರ ಅತ್ಯುತ್ತಮ ಠಾಣೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕರ್ನಾಟಕದಿಂದ ಆಯ್ಕೆಯಾದ ಏಕೈಕ ಠಾಣೆ ಇದಾಗಿದ್ದು, ಹಲವು ಮಾನದಂಡಗಳ ಆಧಾರದ ಮೇಲೆ ಇದು ದೇಶದ ಟಾಪ್ ಮೂರು ಠಾಣೆಗಳಲ್ಲಿ ಒಂದಾಗಿದೆ. ಈ ಮೂರು ಠಾಣೆಗಳಿಗೆ ನವೆಂಬರ್ 28ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
- Bhemesh Poojar
- Updated on: Nov 17, 2025
- 12:59 pm