Amit Shah

Amit Shah

ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್‌ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್‌ ಷಾ, ಮೂಲತಃ ಗುಜರಾತ್‌ನವರು. ಅಹಮದಾಬಾದ್‌ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್‌ ಷಾ. ಗುಜರಾತ್‌ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್‌ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್‌ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್‌ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್‌ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.

ಇನ್ನೂ ಹೆಚ್ಚು ಓದಿ

ಕಾಂಗ್ರೆಸ್​ ಹಾಗೂ ಪಾಕಿಸ್ತಾನ ಎರಡರ ಅಜೆಂಡವೂ ಒಂದೇ: ಅಮಿತ್ ಶಾ

ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಗೆ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ಮತ್ತು ಪಾಕಿಸ್ತಾನದ ಉದ್ದೇಶಗಳು ಮತ್ತು ಕಾರ್ಯಸೂಚಿ ಒಂದೇ ಆಗಿವೆ ಎಂದು ಅವರು ಹೇಳಿದರು.

100 days of Modi 3.0: 60 ವರ್ಷಗಳ ನಂತರ ಮೊದಲ ಬಾರಿಗೆ ದೇಶದಲ್ಲಿ ರಾಜಕೀಯ ಸ್ಥಿರತೆ ಕಾಣುತ್ತಿದ್ದೇವೆ: ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಮಿತ್ರ ಪಕ್ಷಗಳ ಸಹಕಾರದಿಂದ ಮೂರನೇ ಅವಧಿಗೆ ಸರ್ಕಾರವನ್ನು ರಚಿಸಿ ಇದೀಗ 100 ದಿನಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಈ 100 ದಿನಗಳಲ್ಲಿ ಸರ್ಕಾರವು ಏನೇನು ಜನಪರ ಕೆಲಸ ಮಾಡಿದೆ ಎನ್ನುವ ಕುರಿತು ಗೃಹ ಸಚಿವ ಅಮಿತ್ ಶಾ ಇಂದು ಪತ್ರಿಕಾಗೋಷ್ಠಿ ನಡೆಸಿದರು.

ಅಂಡಮಾನ್ ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್​ಗೆ ಶ್ರೀ ವಿಜಯ ಪುರಂ ಎಂದು ಮರುನಾಮಕರಣ

ಅಂಡಮಾನ್ ಮತ್ತು ನಿಕೋಬಾರ್ ರಾಜಧಾನಿಯಾದ ಪೋರ್ಟ್​ಬ್ಲೇರ್ ಅನ್ನು ಇನ್ನುಮುಂದೆ ಶ್ರೀವಿಜಯಪುರಂ ಎಂದು ಕರೆಯಲಾಗುವುದು. ಕೇಂದ್ರ ಸರ್ಕಾರ ಪೋರ್ಟ್​ಬ್ಲೇರ್​ಗೆ ಇಂದು ಮರುನಾಮಕರಣ ಮಾಡಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರ ವಿರೋಧಿ ಹೇಳಿಕೆ ನೀಡುವುದು ರಾಹುಲ್​ ಗಾಂಧಿಗೆ ಅಭ್ಯಾಸವಾಗಿಬಿಟ್ಟಿದೆ: ಅಮಿತ್ ಶಾ

ಸಂಸದ ರಾಹುಲ್​ ಗಾಂಧಿಗೆ ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು ಅಭ್ಯಾಸವಾಗಿಬಿಟ್ಟಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್​ ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಹುಲ್ ಗಾಂಧಿಗೆ ದೇಶದ ಜನರ ಭಾವನೆಗಳಿಗೆ ಧಕ್ಕೆ ತರುವುದೇ ಕೆಲಸ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಾಯತ್ತತೆಯನ್ನು ಎಂದಿಗೂ ಪುನಃಸ್ಥಾಪಿಸಲಾಗುವುದಿಲ್ಲ: ಅಮಿತ್ ಶಾ

ಯಾವುದೇ ಶಕ್ತಿಯು (ಜಮ್ಮು ಮತ್ತು ಕಾಶ್ಮೀರದಲ್ಲಿ) ಸ್ವಾಯತ್ತತೆಯ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ ನೀಡುವುದಾಗಿ ಹೇಳುತ್ತಿದ್ದಾರೆ. ನಾನು ಅಬ್ದುಲ್ಲಾ ಸಾಹಬ್ ಮತ್ತು ರಾಹುಲ್ ಬಾಬಾರನ್ನು ಕೇಳಲು ಬಯಸುತ್ತೇನೆ, ನೀವು ಅದನ್ನು ಹೇಗೆ ಹಿಂದಿರುಗಿಸುತ್ತೀರಿ, ಹೇಳಿ? ಎಂದು ಅಮಿತ್ ಶಾ ಕೇಳಿದ್ದಾರೆ.

ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಸದಸ್ಯತ್ವ ಅಭಿಯಾನವನ್ನು ಇಂದಿನಿಂದ ಪ್ರಾರಂಭಿಸಿದೆ. ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸದಸ್ಯರನ್ನಾಗಿ ಸೇರಿಸಿಕೊಳ್ಳುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಇದರ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಸಹಿ ಹಾಕಿದ್ದಾರೆ.

ನಿಮ್ಮ ನಿರ್ಧಾರದಿಂದ ನಮ್ಮ ರಾಜ್ಯಕ್ಕೆ ಒಳಿತಾಗಲಿದೆ: ಶಾಗೆ ನಾರಾಯಣಸ್ವಾಮಿ ಬರೆದ ಪತ್ರದಲ್ಲೇನಿದೆ?

ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಆ್ಯಪ್​ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಈ ಆನ್‌ಲೈನ್ ಆಟಗಳಿಗೆ ವ್ಯಸನದ ನಂತರದ ಪರಿಣಾಮಗಳಿಂದ ಕುಟುಂಬಗಳು ಬೀದಿಗೆ ಬಂದಿವೆ. ಹೀಗಾಗಿ ಇವುಗಳನ್ನು ನಿಷೇಧಿಸುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದಿದ್ದಾರೆ.

ಬಸನಗೌಡ ಯತ್ನಾಳ್ ವಿರುದ್ಧ ವರಿಷ್ಠರಿಗೆ ದೂರು ಸಲ್ಲಿಸಲು ನಾನು ದೆಹಲಿಗೆ ಬಂದಿಲ್ಲ: ಬಿವೈ ವಿಜಯೇಂದ್ರ

ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟ ಭಾರೀ ಯಶ ಕಂಡಿದೆ ಮತ್ತು ಅದರ ಪರಿಣಾಮವಾಗೇ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಬಿ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದು ಎಂದು ಹೇಳಿದ ವಿಜಯೇಂದ್ರ ಮುಂದಿನ ಕೆಲ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದರು.

Ladakh: ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ರಚನೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳನ್ನು ರಚಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಘೋಷಿಸಿದ್ದಾರೆ. ಲಡಾಖ್‌ನ ಜನರಿಗೆ ಹೇರಳವಾದ ಅವಕಾಶಗಳನ್ನು ಸೃಷ್ಟಿಸಲು ಮೋದಿ ಸರ್ಕಾರ ಬದ್ಧವಾಗಿದೆ ಎಂದು ಅಮಿತ್ ಶಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಗುಜರಾತ್‌ನಲ್ಲಿ ಸಿಎಎ ಅಡಿಯಲ್ಲಿ 188 ಪಾಕಿಸ್ತಾನಿ ಹಿಂದೂಗಳಿಗೆ ಭಾರತೀಯ ಪೌರತ್ವವನ್ನು ನೀಡಲು ಅಮಿತ್ ಶಾ ಒಪ್ಪಿಗೆ

2014ರ ಡಿಸೆಂಬರ್ 31ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡಲು CAA ಅನ್ನು ಡಿಸೆಂಬರ್ 2019ರಲ್ಲಿ ಜಾರಿಗೊಳಿಸಲಾಗಿದೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್