Amit Shah
ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್ ಷಾ, ಮೂಲತಃ ಗುಜರಾತ್ನವರು. ಅಹಮದಾಬಾದ್ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್ ಷಾ. ಗುಜರಾತ್ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.
I4C ಮತ್ತು RBIH ಮಧ್ಯೆ ಒಪ್ಪಂದ; ಭಾರತೀಯರಿಗೆ ಅತ್ಯಾಧುನಿಕ ಸೈಬರ್ ರಕ್ಷಾ ಕವಚ: ಅಮಿತ್ ಶಾ ಘೋಷಣೆ
India's AI Cybercrime Shield: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ, I4C ಮತ್ತು RBIH ಸೈಬರ್ ಅಪರಾಧ ತಡೆಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ಕೃತಕ ಬುದ್ಧಿಮತ್ತೆ (AI) ಬಳಸಿ, ವಿಶೇಷವಾಗಿ 'ಮ್ಯೂಲ್ ಅಕೌಂಟ್ಸ್' ಮೂಲಕ ನಡೆಯುವ ವಂಚನೆಗಳನ್ನು ತಕ್ಷಣ ಪತ್ತೆ ಹಚ್ಚಿ ನಿರ್ಮೂಲನೆ ಮಾಡುವುದು ಇದರ ಉದ್ದೇಶ. ಇದು ಭಾರತದಲ್ಲಿ ಡಿಜಿಟಲ್ ವಹಿವಾಟುಗಳನ್ನು ಸುರಕ್ಷಿತಗೊಳಿಸಿ, ನಾಗರಿಕರಿಗೆ ಸೈಬರ್ ಲೋಕದಲ್ಲಿ ಭದ್ರತೆ ಒದಗಿಸುವ ಹೊಸ ತಲೆಮಾರಿನ ಹೆಜ್ಜೆಯಾಗಿದೆ.
- Vijaya Sarathy SN
- Updated on: May 12, 2026
- 7:53 pm
ಅಭಿಮಾನೋತ್ಸವದಲ್ಲಿ ಯಡಿಯೂರಪ್ಪ ಭಾವುಕ ಭಾಷಣ: ಸಾರ್ವಜನಿಕ ಸೇವೆಯ ಪಯಣ ಮೆಲುಕು ಹಾಕಿದ ಮಾಜಿ ಸಿಎಂ
ಚಿತ್ರದುರ್ಗದಲ್ಲಿ ನಡೆದ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ 50 ವರ್ಷಗಳ ಸಾರ್ವಜನಿಕ ಸೇವೆಯ ಪಯಣವನ್ನು ನೆನಪಿಸಿಕೊಂಡು ಕರುನಾಡಿನ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ರೈತರು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ತಮ್ಮ ಕೊಡುಗೆಗಳನ್ನು ಸ್ಮರಿಸಿದ ಅವರು, ಈ ದಿನವು ಒಬ್ಬ ವ್ಯಕ್ತಿಯ ಆಚರಣೆಯಲ್ಲ. ಬದಲಿಗೆ ಐದು ದಶಕಗಳ ಸಹಬಾಳ್ವೆಯ ಆಚರಣೆ ಎಂದು ಬಣ್ಣಿಸಿದರು.
- Basavaraj Mudnur
- Updated on: May 9, 2026
- 7:47 pm
ಚಿತ್ರದುರ್ಗದಲ್ಲಿ ಅದ್ಧೂರಿ ಬಿಎಸ್ವೈ ಅಭಿಮಾನೋತ್ಸವ: ಯಡಿಯೂರಪ್ಪರ 50 ವರ್ಷಗಳ ರಾಜಕೀಯ ಪಯಣ ಕೊಂಡಾಡಿದ ಅಮಿತ್ ಶಾ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ 50 ವರ್ಷಗಳ ರಾಜಕೀಯ ಜೀವನ ಪೂರ್ಣ ಹಿನ್ನೆಲೆ ಚಿತ್ರದುರ್ಗದಲ್ಲಿ ಇಂದು ಬಿಎಸ್ ಯಡಿಯೂರಪ್ಪ ಅಭಿಮಾನೋತ್ಸವ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಯಡಿಯೂರಪ್ಪರನ್ನು ಹಾಡಿ ಹೊಗಳಿದರು. ಇನ್ನು ರಾಜ್ಯ ರಾಜಕೀಯ ನಾಯಕರು ಕೂಡ ಭಾಗವಹಿಸಿದ್ದರು.
- Basavaraj Mudnur
- Updated on: May 9, 2026
- 7:32 pm
Suvendu Adhikari: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ; ನಾಳೆಯೇ ಪ್ರಮಾಣವಚನ
ಬಿಜೆಪಿಯಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆಬಿದ್ದಿದೆ. ಬಹುತೇಕರು ನಿರೀಕ್ಷಿಸಿದಂತೆ ಸುವೇಂದು ಅಧಿಕಾರಿಯವರನ್ನು ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯನ್ನಾಗಿ ಘೋಷಿಸಲಾಗಿದೆ. ಈ ಬಗ್ಗೆ ಕೇಂದ್ರ ಅಮಿತ್ ಶಾ ಅಧಿಕೃತ ಘೋಷಣೆ ಮಾಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
- Sushma Chakre
- Updated on: May 8, 2026
- 5:32 pm
ಬಂಗಾಳ ಮುಂದಿನ ಸಿಎಂ ಸುವೇಂದು ಅಧಿಕಾರಿ? ಅಗ್ನಿಮಿತ್ರಾ, ನಿಸಿತ್ ಉಪಮುಖ್ಯಮಂತ್ರಿಗಳು?
West Bengal govt formation, Suvendu Adhikari frontrunner for CM: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ಇಂದು ಶುಕ್ರವಾರ ನಡೆಯುತ್ತಿದೆ. ವರದಿಗಳ ಪ್ರಕಾರ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ. ಇಬ್ಬರು ಡಿಸಿಎಂಗಳಿರಬಹುದು ಎನ್ನಲಾಗಿದೆ. ಅಗ್ನಿಮಿತ್ರಾ ಪೌಲ್, ನಿಸಿತ್ ಪ್ರಾಮಾಣಿಕ್ ಮೊದಲಾದವರ ಹೆಸರು ಡಿಸಿಎಂ ಸ್ಥಾನಕ್ಕೆ ಕೇಳಿಬರುತ್ತಿದೆ.
- Vijaya Sarathy SN
- Updated on: May 8, 2026
- 2:17 pm
ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿ ಅರಳಿದ ಕಮಲ; ಬಿಜೆಪಿಯ ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ
West Bengal Elections Results : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ನಿಖರವಾದ ಅಂಕಿ-ಅಂಶಗಳು ಸಿಗದೇ ಇದ್ದರೂ ಮತ ಎಣಿಕೆ ಮುಗಿಯುತ್ತಾ ಬಂದಿರುವುದರಿಂದ ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರಕ್ಕೇರುವುದು ಖಚಿತವಾಗಿದೆ. ಇದೇ ಮೊದಲ ಬಾರಿ ಬಂಗಾಳದಲ್ಲಿ ಸರ್ಕಾರ ರಚಿಸುತ್ತಿರುವ ಬಿಜೆಪಿ ಈಗಾಗಲೇ 234 ಕ್ಷೇತ್ರಗಳ ಪೈಕಿ 203 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಆದ 148 ಸ್ಥಾನಗಳನ್ನು ದಾಟಿರುವುದರಿಂದ ಯಾರ ಮುಂದೆಯೂ ಕೈ ಚಾಚದೆ ಆರಾಮಾಗಿ ಬಿಜೆಪಿ ಸರ್ಕಾರ ರಚಿಸಲಿದೆ.
- Sushma Chakre
- Updated on: May 4, 2026
- 6:59 pm
ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ
ಕೋಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಸೃಷ್ಟಿಯಾಗುತ್ತಿದೆ. 34 ವರ್ಷಗಳ ಎಡಪಂಥೀಯ ಆಡಳಿತವನ್ನು ಅಂತ್ಯಗೊಳಿಸಿದ್ದ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಈಗ ಬ್ರೇಕ್ ಬೀಳುತ್ತಿದೆ. ‘ಮಾಂ, ಮಾತೃಭೂಮಿ, ಔರ್ ಲೋಗ್’ ಎನ್ನುತ್ತಾ ಅಧಿಕಾರಕ್ಕೇರಿದ್ದ ತೃಣಮೂಲ ಕಾಂಗ್ರೆಸ್ (TMC) ವಿರುದ್ಧ ಈಗ ‘ಪರಿಬೊರ್ತನ್ (ಪರಿವರ್ತನೆ)’ ಗಾಳಿ ಬೀಸಿದ್ದು, ಬಿಜೆಪಿ ಮೊದಲ ಬಾರಿಗೆ ಬಂಗಾಳದ ಗದ್ದುಗೆ ಏರುವತ್ತ ದಾಪುಗಾಲು ಹಾಕಿದೆ.
- Ganapathi Sharma
- Updated on: May 4, 2026
- 3:11 pm
West Bengal Election Results: ಮಧ್ಯಾಹ್ನದೊಳಗೆ ದೀದಿ ಟಾಟಾ ಬೈ-ಬೈ ಹೇಳ್ತಾರೆ; ಚುನಾವಣೆಗೂ ಮೊದಲೇ ಭವಿಷ್ಯ ನುಡಿದಿದ್ದರು ಅಮಿತ್ ಶಾ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕನಸಿನಲ್ಲೂ ಊಹಿಸಿರದಷ್ಟು ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 15 ವರ್ಷಗಳ ಕಾಲ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಪಶ್ಚಿಮ ಬಂಗಾಳ ಇದೀಗ ಬಿಜೆಪಿಯ ತೆಕ್ಕೆಗೆ ಬೀಳುವುದು ಖಚಿತವಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಧಾನಸಭಾ ಚುನಾವಣೆಗೂ ಮುನ್ನವೇ ಭವಿಷ್ಯ ನುಡಿದಿದ್ದರು. ಮಧ್ಯಾಹ್ನ 1 ಗಂಟೆಯೊಳಗೆ ಮಮತಾ ಬ್ಯಾನರ್ಜಿ ಟಾಟಾ, ಬೈ-ಬೈ ಹೇಳಿ ಹೊರಡುತ್ತಾರೆ, ಫಲಿತಾಂಶ ಪ್ರಕಟವಾಗುವವರೆಗೂ ಕಾಯುವ ಅಗತ್ಯವೂ ಇಲ್ಲ ಎಂದು ಹೇಳಿದ್ದ ಅಮಿತ್ ಶಾ ಅವರ ಹಳೆಯ ವಿಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ.
- Sushma Chakre
- Updated on: May 4, 2026
- 3:07 pm
‘ಬೇವಕೂಫ್ ಮತ್ ಬನಾಓ, ಲಂಚದ ರಾಣಿ’! ಬಂಗಾಳದ ರಣಕಣದಲ್ಲಿ ಮೋದಿ, ಶಾ, ದೀದಿ ನಡುವೆ ನಡೆದಿದ್ದ ವಾಕ್ಸಮರದ ಹಿನ್ನೋಟ
ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರವು ಮೋದಿ-ಶಾ ಅವರ ‘ಚಾಣಕ್ಯ ತಂತ್ರ’ ಮತ್ತು ಮಮತಾ ಬ್ಯಾನರ್ಜಿಯವರ ‘ಪ್ರತಿಹೋರಾಟ’ಕ್ಕೆ ಸಾಕ್ಷಿಯಾಗಿತ್ತು. ‘ಬೇವಕೂಫ್ ಮತ್ ಬನಾಓ’ ಮತ್ತು ‘ಲಂಚದ ರಾಣಿ’ಯಂತಹ ಕಟು ಟೀಕೆಗಳ ಮೂಲಕ ನಡೆದ ಈ ಹೈವೋಲ್ಟೇಜ್ ಪ್ರಚಾರವು ಬಂಗಾಳದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ವೈಯಕ್ತಿಕ ದಾಳಿಗಳ ಚುನಾವಣೆಯಾಗಿ ದಾಖಲಾಗಿದೆ. ಅಂತಿಮವಾಗಿ ಕಮಲ ಪಡೆ ಗದ್ದುಗೆಗೇರುವುದು ಖಚಿತವಾಗಿದೆ.
- Ganapathi Sharma
- Updated on: May 4, 2026
- 1:19 pm
ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ
ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯ ಜಮಾಲ್ಪುರ್ ಎಂಬ ಹಳ್ಳಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಈ ವೇಳೆ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ತರಾಟೆಗೆ ತೆಗೆದುಕೊಂಡರು. ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಹಲವಾರು ಅಪರಾಧಗಳಿಗೆ ಮಮತಾ ಬ್ಯಾನರ್ಜಿ ಸರ್ಕಾರವೇ ಕಾರಣ. ಜನರು ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಆ ಅಪರಾಧಗಳನ್ನು ತಡೆಯುವುದಾಗಿ ಪ್ರತಿಜ್ಞೆ ಮಾಡಿದರು.
- Sushma Chakre
- Updated on: Apr 25, 2026
- 7:59 pm
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ ಪ್ರತಿಕ್ರಿಯೆ
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಟಿಎಂಸಿ ಮೇಲೆ ತಮ್ಮ ವಾಗ್ದಾಳಿಯನ್ನು ಚುರುಕುಗೊಳಿಸಿದ್ದಾರೆ. ಭಾರತದ ಚುನಾವಣಾ ಆಯೋಗವು 152 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಹೆಚ್ಚಿನ ಮತದಾನವನ್ನು ತೋರಿಸುವ ಡೇಟಾವನ್ನು ಬಿಡುಗಡೆ ಮಾಡಿದ ಕೆಲವೇ ಕ್ಷಣಗಳಲ್ಲಿ ಅವರ ಹೇಳಿಕೆಗಳು ಬಂದವು.
- Sushma Chakre
- Updated on: Apr 23, 2026
- 9:56 pm
ಪ್ರತಿ ಚುನಾವಣೆಯಲ್ಲೂ ಮಹಿಳೆಯರ ಕೋಪ ಎದುರಿಸಬೇಕಾಗುತ್ತದೆ; ವಿರೋಧ ಪಕ್ಷಗಳಿಗೆ ಅಮಿತ್ ಶಾ ಎಚ್ಚರಿಕೆ
ಮಹಿಳಾ ಮೀಸಲಾತಿ ಮಸೂದೆಗೆ ವಿಪಕ್ಷಗಳು ವಿರೋಧಿಸಿವೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಪಕ್ಷಗಳು ಸೇರಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಸೋಲಿಸಿವೆ. ವಿಪಕ್ಷಗಳು ಅದನ್ನು ಸಂಭ್ರಮಿಸಿದ್ದನ್ನು ನೋಡಿ ಬೇಸರವಾಗಿದೆ. ಕಾಂಗ್ರೆಸ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನೂ ಅಲ್ಲ ಎಂದು ವಿಪಕ್ಷಗಳ ವಿರುದ್ಧ ಎಕ್ಸ್ ಖಾತೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ.
- Sushma Chakre
- Updated on: Apr 17, 2026
- 10:10 pm