AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah

Amit Shah

ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್‌ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್‌ ಷಾ, ಮೂಲತಃ ಗುಜರಾತ್‌ನವರು. ಅಹಮದಾಬಾದ್‌ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್‌ ಷಾ. ಗುಜರಾತ್‌ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್‌ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್‌ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್‌ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್‌ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.

ಇನ್ನೂ ಹೆಚ್ಚು ಓದಿ

ರಾಜಕೀಯ ಬಿಟ್ಟು ವೇದ, ಉಪನಿಷತ್ ಅಧ್ಯಯನ ಮಾಡುವೆ; ನಿವೃತ್ತಿ ಪ್ಲಾನ್ ಬಿಚ್ಚಿಟ್ಟ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ನಿವೃತ್ತಿ ಪ್ಲಾನ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಉಳಿದ ಜೀವನವನ್ನು ವೇದಗಳು, ಉಪನಿಷತ್ತುಗಳ ಅಧ್ಯಯನ ಮತ್ತು ನೈಸರ್ಗಿಕ ಕೃಷಿಗೆ ಮೀಸಲಿಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ಸಹಕಾರ ಸಚಿವಾಲಯವು ಪ್ರಧಾನಿ ಮೋದಿ ಅವರ 'ಸಹಕಾರದ ಮೂಲಕ ಸಮೃದ್ಧಿ' ಎಂಬ ದೃಷ್ಟಿಕೋನಕ್ಕೆ ಅನುಗುಣವಾಗಿ ರೈತರನ್ನು ಸಬಲೀಕರಣಗೊಳಿಸುವ ಮೂಲಕ ಗ್ರಾಮೀಣ ಆರ್ಥಿಕತೆಯ ಜೊತೆಗೆ ದೇಶದ ಆರ್ಥಿಕತೆಯನ್ನು ಬಲಪಡಿಸುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಅಣ್ಣಾಮಲೈಗೆ ತಮಿಳುನಾಡಿನ ಜೊತೆ ರಾಷ್ಟ್ರೀಯ ಹುದ್ದೆ ನೀಡುತ್ತೇವೆ; ಅಮಿತ್ ಶಾ

ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡಿನ ಜವಾಬ್ದಾರಿಯ ಜೊತೆಗೆ ರಾಷ್ಟ್ರೀಯ ಮಟ್ಟದ ಹುದ್ದೆಯನ್ನೂ ನೀಡುತ್ತೇವೆ. ತಮಿಳುನಾಡಿನಲ್ಲಿಯೂ ಅವರ ಕೆಲಸ ಮುಂದುವರಿಯುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಮುಖ್ಯಸ್ಥ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವುದರ ಜೊತೆಗೆ ರಾಷ್ಟ್ರೀಯ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಹಿರಂಗಪಡಿಸಿದ್ದಾರೆ.

ಭಾರತ ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲ; ಅಮಿತ್ ಶಾ

ಕಾಂಗ್ರೆಸ್‌ ಸರ್ಕಾರ ಘೋಷಿಸಿದ್ದ ತುರ್ತು ಪರಿಸ್ಥಿತಿಯ 50ನೇ ವಾರ್ಷಿಕೋತ್ಸವದ ಮುನ್ನಾದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ದೇಶದ ಜನರು "ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲ" ಎಂದು ಹೇಳಿದರು. ಕಾಂಗ್ರೆಸ್ ಜೊತೆ ಕೈಜೋಡಿಸಿರುವ ಡಿಎಂಕೆ, ಸಮಾಜವಾದಿ ನಾಯಕರು ಮತ್ತು ಇತರ ಪಕ್ಷಗಳನ್ನು ಕೂಡ ತರಾಟೆಗೆ ತೆಗೆದುಕೊಂಡ ಅಮಿತ್ ಶಾ, ತುರ್ತು ಪರಿಸ್ಥಿತಿ ಹೇರುವ ಮೂಲಕ "ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದ" ಪಕ್ಷದ ಜೊತೆ ಅವರು ಸೇರಿಕೊಂಡಿದ್ದಾರೆ ಎಂದು ಹೇಳಿದರು.

ಅಮಿತ್ ಶಾ ಭೇಟಿ ಬಳಿಕ ಯಡಿಯೂರಪ್ಪ, ವಿಜಯೇಂದ್ರ ಚಟುವಟಿಕೆಗಳಲ್ಲಿ ಬದಲಾವಣೆ! ಕಾರಣ ಇಲ್ಲಿದೆ

ಇನ್ನು ಮುಂದೆ ಪ್ರತಿದಿನ ಬಿಜೆಪಿ ರಾಜ್ಯ ಕಚೇರಿಗೆ ಬರುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶನಿವಾರ ಕೂಡ ಜಗನ್ನಾಥ ಭವನಕ್ಕೆ ಬಂದು ಹೋಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌ ಚಟುವಟಿಕೆಗಳಲ್ಲಿ ಬದಲಾವಣೆ ಕಾಣಿಸಿಕೊಂಡಿದೆ.

ಬೆಂಗಳೂರಿಗೆ ಬಂದ ಅಮಿತ್ ಶಾ: ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆಯಲ್ಲಿ ಭಾಗಿ

ಬೆಂಗಳೂರು ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್​ ಹೋಟೆಲ್​ಗೆ ಆಗಮಿಸಿದ್ದು ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸ್ವಾಗತಿಸಿದರು. ಇಂದು ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಲ್ಲಿ ಶಾ ಭಾಗವಹಿಸಲಿದ್ದಾರೆ. ಆ ಬಳಿಕ ರಾಜ್ಯ ನಾಯಕರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆ ಪಡಬೇಕಾಗುತ್ತದೆ; ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ಅವರು ರೂಪಿಸಿರುವ "ಪಂಚ ಪ್ರಾಣ"ವನ್ನು ವಿವರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಮೋದಿ ರೂಪಿಸಿದ 5 ಪ್ರತಿಜ್ಞೆಗಳು ದೇಶದ 130 ಕೋಟಿ ಜನರ ಸಂಕಲ್ಪವಾಗಿದೆ ಎಂದು ಹೇಳಿದರು. ಸ್ಥಳೀಯ ಭಾರತೀಯ ಭಾಷೆಗಳು ದೇಶದ ಗುರುತಿನ ಕೇಂದ್ರವಾಗಿವೆ. ವಿದೇಶಿ ಭಾಷೆಗಳಿಗಿಂತ ಭಾರತೀಯ ಭಾಷೆಗಳು ಆದ್ಯತೆಯನ್ನು ಪಡೆಯಬೇಕು. ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ ಎಂದು ಭಾಷಾ ಚರ್ಚೆಯ ನಡುವೆ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.

ಜೂನ್​​ 19ರಂದು ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ

ಗುರುವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಆ ಮೂಲಕ ಜೂನ್ 20 ರಂದು ಬೆಂಗಳೂರಿನ ಬಿಜಿಎಸ್ ಮೆಡಿಕಲ್ ಕಾಲೇಜು ಕ್ಯಾಂಪಸ್​ನಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅಂದು ಮಧ್ಯಾಹ್ನ ದೆಹಲಿಗೆ ವಾಪಸ್ ತೆರಳಲಿದ್ದಾರೆ. ​

Caste Census: ಭಾರತದಲ್ಲಿ ಜನಗಣತಿ ಜೊತೆ ಜಾತಿಗಣತಿಯೂ ನಡೆಯಲಿದೆ; ಅಮಿತ್ ಶಾ

2027ರಲ್ಲಿ ಪ್ರಾರಂಭವಾಗಲಿರುವ ಜಾತಿ ಜನಗಣತಿಗೆ ಕೇಂದ್ರ ಸರ್ಕಾರ ಇಂದು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಇದು ಭಾರತದ 16ನೇ ಜನಗಣತಿಯಾಗಲಿದೆ. ಲಡಾಖ್‌ನಂತಹ ಹಿಮಭರಿತ ಪ್ರದೇಶಗಳಲ್ಲಿ ಜನಗಣತಿ ಪ್ರಕ್ರಿಯೆಗಳು ಅಕ್ಟೋಬರ್ 1, 2026ರಂದು ಪ್ರಾರಂಭವಾಗಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ದೇಶದ ಉಳಿದ ಭಾಗಗಳಲ್ಲಿ ಮಾರ್ಚ್ 1, 2027ರಂದು ಪ್ರಾರಂಭವಾಗಲಿದೆ.

ದೇಶದ 16ನೇ ಜನಗಣತಿಗೆ ಇಂದು ಗೆಜೆಟ್ ನೋಟಿಫಿಕೇಶನ್, ಅಧಿಕಾರಿಗಳೊಂದಿಗೆ ಅಮಿತ್ ಶಾ ಚರ್ಚೆ

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರು, ಉಡುಪಿ ಮತ್ತು ಇತರ ಕರಾವಳಿ ಹಾಗೂ ಮಲೆನಾಡ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾಡಳಿತಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿವೆ. ಈ ಜಿಲ್ಲೆಗಳಲ್ಲಿ ಬೆಳಗಿನಿಂದಲೇ ಮಳೆ ಸುರಿಯಲಾರಂಭಿಸಿದೆ.

Air India Plane Crash: ಡಿಎನ್​ಎ ಪರೀಕ್ಷೆ ಬಳಿಕ ಸಾವಿನ ಸಂಖ್ಯೆ ಘೋಷಣೆ; ಏರ್ ಇಂಡಿಯಾ ಅಪಘಾತದ ಬಗ್ಗೆ ಅಮಿತ್ ಶಾ ಹೇಳಿಕೆ

Amit Shah: ಏರ್ ಇಂಡಿಯಾ ವಿಮಾನ ಪತನವಾದ ಸುದ್ದಿ ತಿಳಿಯುತ್ತಿದ್ದಂತೆ ದೆಹಲಿಯಿಂದ ಅಹಮದಾಬಾದ್​ಗೆ ತೆರಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಮಾನ ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ. ವಿಮಾನ ದುರಂತದಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುದರ ಖಚಿತ ಮಾಹಿತಿ ಡಿಎನ್ಎ ಪರೀಕ್ಷೆಯ ಬಳಿಕವೇ ಗೊತ್ತಾಗಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು