Amit Shah
ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್ ಷಾ, ಮೂಲತಃ ಗುಜರಾತ್ನವರು. ಅಹಮದಾಬಾದ್ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್ ಷಾ. ಗುಜರಾತ್ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.
ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ರಚಿಸಿದ ನಂತರ ಒಳನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿರುವ ಸೀಮಾಂಚಲ್ ಪ್ರದೇಶದ ಭಾಗವಾಗಿರುವ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ.
- Sushma Chakre
- Updated on: Feb 26, 2026
- 3:25 pm
ಅಸ್ಸಾಂನಲ್ಲಿ 6,839 ಕೋಟಿ ರೂ. ವೆಚ್ಚದ 2ನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ನಾಳೆ ಅಮಿತ್ ಶಾ ಚಾಲನೆ
ಗಡಿ ಗ್ರಾಮಗಳ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ವಿವಿಪಿಯ ಎರಡನೇ ಹಂತವು 2028-29ರ ಆರ್ಥಿಕ ವರ್ಷದವರೆಗೆ 6,839 ಕೋಟಿ ರೂ.ಗಳ ವೆಚ್ಚದೊಂದಿಗೆ ಕೇಂದ್ರದಿಂದ ಅನುದಾನಿತ ಯೋಜನೆಯಾಗಲಿದೆ. ಕೇಂದ್ರ ಸಚಿವ ಅಮಿತ್ ಶಾ ಅಸ್ಸಾಂನ ಕ್ಯಾಚರ್ನಲ್ಲಿರುವ ನಾಥನ್ಪುರದಿಂದ ನಾಳೆ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದಾರೆ. ವಿವಿಪಿ ಕಾರ್ಯಕ್ರಮವನ್ನು ಫೆಬ್ರವರಿ 15, 2023ರಂದು ಕೇಂದ್ರ ಸರ್ಕಾರ ಅನುಮೋದಿಸಿತು.
- Sushma Chakre
- Updated on: Feb 19, 2026
- 4:55 pm
ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಇಂದು ಬೆಳಗ್ಗೆ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ಸಾಧ್ಯತೆ ಇದೆ. ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನ ಮುಂಬೈನಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ವಿಮಾನ ಅಪಘಾತ ಸಂಭವಿಸಿತ್ತು.
- Sushma Chakre
- Updated on: Jan 28, 2026
- 8:24 pm
ಕುಟುಂಬದೊಂದಿಗೆ ಗಾಳಿಪಟ ಹಾರಿಸಿದ ಗೃಹ ಸಚಿವ ಅಮಿತ್ ಶಾ
ಗುಜರಾತ್ನಲ್ಲಿ ಉತ್ತರಾಯಣ ಆಚರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬದೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬ ಮತ್ತು ನರನ್ಪುರ ಪ್ರದೇಶದ ನಿವಾಸಿಗಳೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಉತ್ತರ ಭಾರತದಲ್ಲಿ ಸಂಕ್ರಾಂತಿಯ ವೇಳೆ ಗಾಳಿಪಟ ಹಾರಿಸುವುದು ಸಂಪ್ರದಾಯವಾಗಿದೆ. ಹಾಗೇ, ಇಂದು ಬೆಳಗ್ಗೆ ಅಮಿತ್ ಶಾ ಜಮಾಲ್ಪುರ ಪ್ರದೇಶದ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
- Sushma Chakre
- Updated on: Jan 14, 2026
- 10:14 pm
ಅಮಿತ್ ಶಾ, ಮೋದಿಯನ್ನು ಮಹಾಭಾರತದ ದುಶ್ಯಾಸನ, ದುರ್ಯೋಧನನಿಗೆ ಹೋಲಿಸಿದ ಸಿಎಂ ಮಮತಾ ಬ್ಯಾನರ್ಜಿ
ನಿನ್ನೆ ಕೊಲ್ಕತ್ತಾಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂದು ಅಮಿತ್ ಶಾ ಆರೋಪಿಸಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದಕರು ಇದ್ದರೆ ನೀವೇ ಪಹಲ್ಗಾಮ್ ದಾಳಿ ನಡೆಸಿದ್ದೀರಾ? ಎಂದು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.
- Sushma Chakre
- Updated on: Dec 30, 2025
- 5:09 pm
ಇನ್ನೊಮ್ಮೆ ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ
ಇನ್ನೂ 5 ವರ್ಷಗಳ ಕಾಲ ಬಿಜೆಪಿಗೆ ಮತ ನೀಡಿ ಗೆಲ್ಲಿಸಿದರೆ ಅಸ್ಸಾಂನೊಳಗೆ ಬರುವ ಪ್ರತಿಯೊಬ್ಬ ನುಸುಳುಕೋರರನ್ನು ನಾವು ಹೊರಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. "ಇನ್ನೂ 5 ವರ್ಷಗಳ ಕಾಲ ಬಿಜೆಪಿಗೆ ಮತ ನೀಡಿ, ನಾವು ಅಸ್ಸಾಂನಿಂದ ಮಾತ್ರವಲ್ಲದೆ ಇಡೀ ದೇಶದಿಂದಲೇ ಅಕ್ರಮ ನುಸುಳುವವರನ್ನು ಓಡಿಸುತ್ತೇವೆ. ನುಸುಳುಕೋರರು ಅತಿಕ್ರಮಿಸಿದ ಪ್ರತಿಯೊಂದು ಭೂಮಿಯನ್ನು ನಾವು ಮುಕ್ತಗೊಳಿಸುತ್ತೇವೆ" ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
- Sushma Chakre
- Updated on: Dec 29, 2025
- 9:21 pm
ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಭದ್ರತಾ ಪಡೆಗಳು ಶಿಕ್ಷಿಸಿದವು. ಆಪರೇಷನ್ ಮಹಾದೇವ್ ಮೂಲಕ ಅದನ್ನು ನಡೆಸಿದವರನ್ನು ತಟಸ್ಥಗೊಳಿಸಿದವು. ಇದು ಭಯೋತ್ಪಾದನೆಗೆ ಭಾರತ ನೀಡಿದ ನಿರ್ಣಾಯಕ ಪ್ರತಿಕ್ರಿಯೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.
- Sushma Chakre
- Updated on: Dec 26, 2025
- 11:03 pm
ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ
ಕೇಂದ್ರ ಸರ್ಕಾರ ಹಾಗೂ ಕರ್ನಾಟಕದ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಟೀಕಿಸಿದ್ದಾರೆ. ಅಸಮರ್ಥರನ್ನು ಅಸಮರ್ಥ ಎನ್ನದೆ ಜಗದೇಕವೀರ ಎನ್ನಬೇಕೆ? ಎಂದು ಲೇವಡಿಯನ್ನೂ ಮಾಡಿದ್ದಾರೆ. ಬಾಂಗ್ಲಾ ವಲಸಿಗರ ಬಗ್ಗೆ ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುತ್ತಿರುವುದಕ್ಕೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Sushma Chakre
- Updated on: Dec 20, 2025
- 8:49 pm
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್: ಅಮಿತ್ ಶಾ ಮುಂದೇನಾಯ್ತು? ಎಳೆ ಎಳೆಯಾಗಿ ಬಿಚ್ಚಿಟ್ಟ ಯತ್ನಾಳ್
ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ನಿಯಂತ್ರಣಕ್ಕೆ ಸಿಗದಂತೆ ಭುಗಿಲೆದ್ದಿರುವ ಸಿಎಂ ಕುರ್ಚಿ ಕಿತ್ತಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಧಿವೇಶನಕ್ಕೂ ಮುನ್ನ ಹೈಕಮಾಂಡ್ ಏನೋ ತೇಪೆ ಹಾಕಿತ್ತು. ಆದ್ರೆ ಅಧಿವೇಶನ ನಡೆಯುತ್ತಿರುವಾಗಲೇ ಪಟ್ಟದ ಫೈಟ್ ಜ್ವಾಲಾಮುಖ ಸ್ಫೋಟಿಸಿದೆ. ಈ ಬೆಳವಣಿಗೆಗಳ ನಡುವೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ್ (Basangowda Patil Yatnal) ಸ್ಫೋಟಕ ತಿರುವು ಕೊಟ್ಟಿದ್ದಾರೆ.
- Ramesh B Jawalagera
- Updated on: Dec 12, 2025
- 3:56 pm
ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ; ಅಮಿತ್ ಶಾ ವಾಗ್ದಾಳಿ
ಲೋಕಸಭಾ ಅಧಿವೇಶನದಲ್ಲಿ ಮತ್ತೊಮ್ಮೆ ಎಸ್ಐಆರ್ ಕುರಿತು ಚರ್ಚೆ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಗೃಹ ಸಚಿವ ಅಮಿತ್ ಶಾ ನಡುವೆ ಈ ಚರ್ಚೆ ಕಾವೇರಿದ್ದು, ಈ ವೇಳೆ ಅಮಿತ್ ಶಾ ಕಾಂಗ್ರೆಸ್ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಗೂ ಮತಗಳ್ಳತನಕ್ಕೂ ನಂಟಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ಇಬ್ಬರೂ ನಾಯಕರ ನಡುವೆ ತೀವ್ರ ಚರ್ಚೆ ಏರ್ಪಟ್ಟಿತು.
- Sushma Chakre
- Updated on: Dec 10, 2025
- 7:16 pm
ಕಾಂಗ್ರೆಸ್ ವಂದೇ ಮಾತರಂ ಅನ್ನು ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ; ರಾಜ್ಯಸಭೆಯಲ್ಲಿ ಅಮಿತ್ ಶಾ ಟೀಕೆ
ಒಂದುವೇಳೆ, ವಂದೇ ಮಾತರಂ ಗೀತೆಯನ್ನು ಓಲೈಕೆಗಾಗಿ ಮೊಟಕುಗೊಳಿಸದಿದ್ದರೆ ಭಾರತ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮತ್ತೊಮ್ಮೆ ರಾಜ್ಯಸಭೆಯಲ್ಲಿ ನೆಹರೂ, ಇಂದಿರಾ ಗಾಂಧಿಯನ್ನು ಅಮಿತ್ ಶಾ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎನ್ಡಿಎ ಸರ್ಕಾರ ವಂದೇ ಮಾತರಂ ಕುರಿತು ಸಂಸದೀಯ ಚರ್ಚೆಯನ್ನು ಪ್ರಸ್ತಾಪಿಸಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪಕ್ಕೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 9, 2025
- 6:22 pm
ಅಧಿಕಾರ ಹಂಚಿಕೆ ಜಟಾಪಟಿ ಮಧ್ಯೆ ಅಮಿತ್ ಶಾ ಭೇಟಿಯಾದ ರಾಜಣ್ಣ ಪುತ್ರ ರಾಜೇಂದ್ರ
ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇಂಟರ್ನ್ಯಾಷನಲ್ ಕೋ ಆಪರೇಟಿವ್ ಚುನಾವಣೆ ಇದೆ. ಆ ಸಂಬಂಧ ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ. ಅಧ್ಯಕ್ಷರನ್ನ ನೋಡಿ ವಾಪಸ್ ಹೋಗುತ್ತಿದ್ದೇನೆ ರಾಜಕೀಯ ಏನಿಲ್ಲ ಎಂದು ಅವರು ಹೇಳಿದ್ದಾರೆ. ವಿಡಿಯೋ ನೋಡಿ.
- Mahesha E
- Updated on: Nov 22, 2025
- 2:52 pm