AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah

Amit Shah

ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್‌ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್‌ ಷಾ, ಮೂಲತಃ ಗುಜರಾತ್‌ನವರು. ಅಹಮದಾಬಾದ್‌ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್‌ ಷಾ. ಗುಜರಾತ್‌ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್‌ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್‌ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್‌ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್‌ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.

ಇನ್ನೂ ಹೆಚ್ಚು ಓದಿ

ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಪ್ರತಿಪಕ್ಷಗಳ ಮನವಿ ಪರಿಗಣಿಸಲು ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ

ರಾಜ್ಯಸಭಾ ಸದನದಲ್ಲಿ ಪ್ರತಿಪಕ್ಷಗಳ ಸದಸ್ಯರು 'ಅಮಿತ್ ಶಾ, ಸದನ್ ಮೇ ಆವೋ' (ಅಮಿತ್ ಶಾ, ಸದನಕ್ಕೆ ಬನ್ನಿ) ಎಂದು ಘೋಷಣೆಗಳನ್ನು ಕೂಗುತ್ತಿದ್ದಾಗ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಉದ್ದೇಶಿಸಿ ಮಾತನಾಡಿದ ಸಭಾಪತಿಗಳು, "ಗೃಹ ಸಚಿವರು ಸದನಕ್ಕೆ ಬರಬೇಕೆಂಬ ಮನವಿಯನ್ನು ಪರಿಗಣಿಸುವಂತೆ ನಾನು ನಿಮಗೆ ವಿನಂತಿಸುತ್ತೇನೆ. ಸಂಸದೀಯ ವ್ಯವಹಾರಗಳ ಸಚಿವರಾಗಿ, ನೀವು ವಿರೋಧ ಪಕ್ಷಗಳ ಭಾವನೆಗಳನ್ನು ಗೃಹ ಸಚಿವರಿಗೆ ತಲುಪಿಸಬೇಕು" ಎಂದು ಹೇಳಿದರು.

ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಮದುವೆ ಬಗ್ಗೆ ಭಾರೀ ಚರ್ಚೆ; ಭಾವೀ ಸೊಸೆ ಕುರಿತು ತಾಯಿ ಹೇಳಿದ್ದೇನು?

ದೆಹಲಿಯಲ್ಲಿ ನೀಟ್ ಪ್ರಶ್ನೆಪತ್ರಿಕೆ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ ಬಳಿಕ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹೆಚ್ಚಾಗಿದೆ. ಅಭಿಜೀತ್ ಮದುವೆ ಬಗ್ಗೆಯೂ ಚರ್ಚೆಗಳು ನಡೆಯುತ್ತಿದ್ದು, ತಮ್ಮ ಸೊಸೆಯಾಗಿ ಬರುವವಳು ವರದಕ್ಷಿಣೆಯಾಗಿ ಏನು ತರಬೇಕು ಎಂಬುದರ ಬಗ್ಗೆ ಅವರ ತಾಯಿ ಮಾತನಾಡಿದ್ದಾರೆ. ಹಾಗೇ, ಅಭಿಜೀತ್ ಅಮಿತ್ ಶಾ ಹಾಗೂ ದೆಹಲಿ ಪೊಲೀಸರ ಬಗ್ಗೆಯೂ ಆಕ್ರೋಶದ ಹೇಳಿಕೆಗಳನ್ನು ನೀಡಿದ್ದಾರೆ.

‘ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಅಮಿತ್ ಶಾ ಆದೇಶ’; ರಾಹುಲ್ ಗಾಂಧಿ ಆರೋಪಕ್ಕೆ ರಣರಂಗವಾದ ಸಂಸತ್

ಜುಲೈ 20ರ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಇಂದು ಸಂಸತ್​ ಅಧಿವೇಶನದಲ್ಲಿ ವಾಗ್ದಾಳಿ ನಡೆಸಿದರು. ಅಮಿತ್ ಶಾ ಅವರೇ ವಿದ್ಯಾರ್ಥಿಗಳ ಮೇಲಿನ ದಾಳಿಗೆ ಆದೇಶ ನೀಡಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, "ವಿದ್ಯಾರ್ಥಿಗಳ ಮೇಲಿನ ಹಲ್ಲೆಯ ಕುರಿತು ಸಂಸತ್ತನ್ನು ಎದುರಿಸುವ ಮತ್ತು ಮಾತನಾಡುವ ಧೈರ್ಯ ಈಗ ಗೃಹ ಸಚಿವರಿಗೆ ಇಲ್ಲ" ಎಂದು ಲೇವಡಿ ಮಾಡಿದರು. ಅಮಿತ್ ಶಾ ಕುರಿತ ರಾಹುಲ್ ಗಾಂಧಿ ಅವರ ಹೇಳಿಕೆಗೆ ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು.

ನೀಟ್ ಪತ್ರಿಕೆ ಸೋರಿಕೆ : ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಮುಖ್ಯ ಎಂದ ಅಮಿತ್ ಶಾ, ಭವಿಷ್ಯದಲ್ಲಿ ಪರೀಕ್ಷಾ ಅಕ್ರಮ ತಡೆಯಲು ಕಠಿಣ ಸುಧಾರಣೆ ತರುವ ಭರವಸೆ ನೀಡಿದ್ದಾರೆ. ಸರ್ಕಾರದ ಈ ಕ್ರಮಗಳ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿದ್ದು, ಪರೀಕ್ಷಾ ಪಾರದರ್ಶಕತೆಗೆ ಆದ್ಯತೆ ನೀಡಲಾಗಿದೆ.

‘ಅಕ್ರಮ ವಲಸಿಗರಿಗೆ ಮಣೆ, ಭದ್ರತೆಗೆ ಧಕ್ಕೆ’: ಕರ್ನಾಟಕ ಶಾಶ್ವತ ನಿವಾಸಿ ಪ್ರಮಾಣ ಪತ್ರಕ್ಕೆ ತಡೆನೀಡಲು ಅಮಿತ್ ಶಾಗೆ ಶೋಭಾ ಪತ್ರ

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾಶ್ವತ ವಸತಿ ಪ್ರಮಾಣಪತ್ರ (PRC)’ ನಿಯಮಾವಳಿಗಳು ಸಂವಿಧಾನ ವಿರೋಧಿ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಿವೆ ಎಂದು ಆರೋಪಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಈ ನಿಯಮಾವಳಿಗಳ ಅನುಷ್ಠಾನ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಿ, ಇದಕ್ಕೆ ತಡೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಗೃಹ ಸಚಿವ ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು ನವದೆಹಲಿಯಲ್ಲಿ ನಡೆದ 'ಗಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ-2026' ರ ನೇತೃತ್ವ ವಹಿಸಿ, ಭಾರತದ ಭೂ ಗಡಿಯುದ್ದಕ್ಕೂ ಇರುವ ಸುಮಾರು 119 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸೂಕ್ಷ್ಮ ಗಡಿ ಪ್ರದೇಶಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುವ ಮೂಲಕ ಮತ್ತು ಕಾನೂನು ಜಾರಿಯನ್ನು ಸುಧಾರಿಸುವ ಕ್ರಮಗಳನ್ನು ಗುರುತಿಸುವ ಮೂಲಕ ದೇಶದ ಗಡಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಸಭೆಯಲ್ಲಿ ಅಮಿತ್ ಶಾ ಸೂಚಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಜನಸಂಖ್ಯಾ ಬದಲಾವಣೆಗಳ ಉನ್ನತ ಮಟ್ಟದ ಸಮಿತಿ ಸದಸ್ಯರು

ಜನಸಂಖ್ಯಾ ಬದಲಾವಣೆಗಳ ಉನ್ನತ ಮಟ್ಟದ ಸಮಿತಿಯು ರೂಪಿಸಿರುವ ಕಾರ್ಯತಂತ್ರವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಿತಿಗೆ ಸಾಧ್ಯವಿರುವ ಎಲ್ಲಾ ನೆರವನ್ನು ನೀಡುವಂತೆ ಗೃಹ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದರು. ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳ ವಾಸ್ತವಿಕ ವಿವರಗಳನ್ನು ನೇರವಾಗಿ ಪಡೆದುಕೊಳ್ಳಲು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡುವ ತನ್ನ ನಿರ್ಧಾರಗಳ ಕುರಿತು ಉನ್ನತ ಮಟ್ಟದ ಸಮಿತಿಯು ಗೃಹ ಸಚಿವರಿಗೆ ಮಾಹಿತಿ ನೀಡಿತು. ಉನ್ನತ ಮಟ್ಟದ ಸಮಿತಿಯು ತನ್ನ ಶಿಫಾರಸುಗಳನ್ನು ಆದಷ್ಟು ಬೇಗ ನೀಡುವಂತೆ ಗೃಹ ಸಚಿವ ಅಮಿತ್ ಶಾ ಸೂಚಿಸಿದರು.

ಡ್ರಗ್ಸ್ ಮುಕ್ತ ಭಾರತಕ್ಕೆ ಮಾಸ್ಟರ್ ಪ್ಲಾನ್; 3 ವರ್ಷದ ‘ವಿಷನ್ ಡಾಕ್ಯುಮೆಂಟ್ ಬಿಡುಗಡೆ ಮಾಡಿದ ಅಮಿತ್ ಶಾ

ಮಾದಕ ದ್ರವ್ಯಗಳ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲು ಅಮಿತ್ ಶಾ ವಿಷನ್ ಡಾಕ್ಯುಮೆಂಟ್ ಅನಾವರಣಗೊಳಿಸಿದ್ದಾರೆ. 6,000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಿಲೇವಾರಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಾದಕ ದ್ರವ್ಯಗಳ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ಕರೆ ನೀಡಿದ್ದಾರೆ. ಮಾದಕ ದ್ರವ್ಯದ ಪಿಡುಗು ರಾಷ್ಟ್ರೀಯ ಭದ್ರತೆ, ಸಾಮಾಜಿಕ ಸ್ಥಿರತೆ, ಆರ್ಥಿಕ ಹಿತಾಸಕ್ತಿಗಳು ಹಾಗೂ ಯುವ ಪೀಳಿಗೆ ಮತ್ತು ದೇಶದ ಭವಿಷ್ಯಕ್ಕೆ ದೊಡ್ಡ ಆಪತ್ತನ್ನು ತಂದೊಡ್ಡಿದೆ ಎಂದು ಅವರು ಹೇಳಿದ್ದಾರೆ. ಈ ಯುದ್ಧವನ್ನು ಗೆಲ್ಲಲು ಆಧ್ಯಾತ್ಮಿಕ ನಾಯಕರು, ಯುವಕರು ಮತ್ತು ತಾಯಂದಿರು ಒಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಈಗ ಉಳಿದಿರುವುದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಾತ್ರ; ಉದ್ಧವ್ ಠಾಕ್ರೆಗೆ ಅಮಿತ್ ಶಾ ಟಾಂಗ್

ಮಹಾರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಕುತೂಹಲಕಾರಿ ಬೆಳವಣಿಗೆಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣದ 9 ಲೋಕಸಭಾ ಸಂಸದರಲ್ಲಿ 6 ಮಂದಿ ದೆಹಲಿಯಲ್ಲಿ ನಡೆದ ಸಂಸದೀಯ ಸಭೆಗೆ ಗೈರುಹಾಜರಾಗಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರತ್ಯೇಕ ಗುಂಪು ರಚಿಸಲು ಅನುಮತಿ ಕೋರಿ ಪತ್ರ ಸಲ್ಲಿಸಿದ ಬೆನ್ನಲ್ಲೇ ಅಮಿತ್ ಶಾ ಅವರಿಂದ ಈ ಹೇಳಿಕೆ ಬಂದಿದೆ.

ಅಮರನಾಥ ಯಾತ್ರೆ ಭದ್ರತೆ ಪರಿಶೀಲನೆ; ಯಾತ್ರಾರ್ಥಿಗಳಿಗೆ ಹೆಚ್ಚಿನ ರಕ್ಷಣೆ ನೀಡಲು ಅಮಿತ್ ಶಾ ಆದೇಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಬರುವ ಅಮರನಾಥ ಯಾತ್ರೆಯ ಭದ್ರತಾ ವ್ಯವಸ್ಥೆಯ ಕುರಿತು ನವದೆಹಲಿಯಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಭಾಗವಹಿಸಿದ್ದರು. ಯಾತ್ರಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಭದ್ರತೆಯನ್ನು ಒದಗಿಸುವಂತೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಈ ಪ್ರಮುಖ ಸಭೆಯ ಸಂಪೂರ್ಣ ವಿವರಗಳು ಇಲ್ಲಿವೆ...

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೂರು ದಿನದ ನವದೆಹಲಿ ಪ್ರವಾಸ ಮುಗಿಸಿ ಇದೀಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ನೀತಿ ಆಯೋಗದ ಸಭೆ ಸಂಬಂಧ ದೆಹಲಿಗೆ ತೆರಳಿದ್ದ ಡಿಕೆಶಿ, ಪ್ರಧಾನಿ ನರೇಂದ್ರ ಮೋದಿಯಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಮಾಡಿದ್ದಾರೆ. ಇಂದು(ಜೂನ್ 12) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿ 9 ಬೇಡಿಕೆಗಳನ್ನಿಟ್ಟಿದ್ದಾರೆ. ಯಾವುವು ಆ ಒಂಭತ್ತು ಬೇಡಿಕೆಗಳು ಎನ್ನುವ ಪಟ್ಟಿ ಈ ಕೆಳಗಿನಂತಿದೆ.

Karnataka News Highlights: 3 ದಿನದ ದಿಲ್ಲಿ ಪ್ರವಾಸ ಮುಗಿಸಿ ಬೆಂಗಳೂನತ್ತ ಮುಖ ಮಾಡಿದ ಡಿಕೆ ಶಿವಕುಮಾರ್

Karnataka News Highlights: ದೆಹಲಿ ಪ್ರವಾಸದಲ್ಲಿರುವ ಸಿಎಂ ಡಿ.ಕೆ. ಶಿವಕುಮಾರ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರಪತಿಯವರನ್ನು ಭೇಟಿಯಾಗಲಿದ್ದಾರೆ. ಇನ್ನೊಂದೆಡೆ ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆಯ ಲಾಬಿ ತೀವ್ರಗೊಂಡಿದೆ. ಮತ್ತೊಂದೆಡೆ, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಇಂದು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದಿನ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್​​ ಇಲ್ಲಿವೆ.