
Amit Shah
ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್ ಷಾ, ಮೂಲತಃ ಗುಜರಾತ್ನವರು. ಅಹಮದಾಬಾದ್ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್ ಷಾ. ಗುಜರಾತ್ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.
ಪಾಕಿಸ್ತಾನಕ್ಕೆ ಕಳಿಸುವ ಬದಲು ಭಾರತದಲ್ಲೇ ಗುಂಡಿಕ್ಕಿ ಸಾಯಿಸಿಬಿಡಿ: ಭಾರತದಲ್ಲಿರುವ ಪಾಕಿಸ್ತಾನೀ ಹಿಂದೂಗಳು
ಠಾಕೂರ್ ಶೀತಲ್ ದಾಸ್ ರಾಮೋಜಿಯ ಕುಟುಂಬ 2018ರಿಂದ ಭಾರತದಲ್ಲಿ ವಾಸವಾಗಿದೆ ಮತ್ತು ವಾಪಸ್ಸು ಹೋಗಲು ಸುತಾರಾಂ ತಯಾರಿಲ್ಲ. ನಮ್ಮನ್ನು ವಾಪಸ್ಸು ಕಳಿಸುವ ಬದಲು ಇಲ್ಲೇ ಗುಂಡಿಟ್ಟು ಸಾಯಿಸಿ, ಅಲ್ಲಿಗೆ ಹೋದರೆ ಹೇಗೂ ಸಾಯುತ್ತೇವೆ , ಅದರ ಬದಲು ಭಾರತದಲ್ಲಿ ಸತ್ತ ನೆಮ್ಮದಿಯ ಭಾವದೊಂದಿಗಾದರೂ ಸಾಯುತ್ತೇವೆ ಎಂದು ರಾಮೋಜಿ ಹೇಳುತ್ತಾರೆ.
- Arun Belly
- Updated on: Apr 28, 2025
- 1:08 pm
ಭಾರತದಿಂದ ಪಾಕಿಸ್ತಾನಿಯರ ವೀಸಾ ರದ್ದು; ಪಾಕ್ ಪ್ರಜೆಗಳನ್ನು ಗುರುತಿಸಲು ಎಲ್ಲಾ ರಾಜ್ಯಗಳ ಸಿಎಂಗಳಿಗೆ ಅಮಿತ್ ಶಾ ಸೂಚನೆ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಮ್ಮ ರಾಜ್ಯಗಳಲ್ಲಿ ವಾಸಿಸುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸುವಂತೆ ನಿರ್ದೇಶನ ನೀಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಲಾಗಿದೆ. ಭಾರತಕ್ಕೆ ಪಾಕ್ ಪ್ರಜೆಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
- Sushma Chakre
- Updated on: Apr 25, 2025
- 3:18 pm
ಪಹಲ್ಗಾಮ್ ದಾಳಿಗೆ ಪ್ರತೀಕಾರ; ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಕ್ರಮಕ್ಕೆ ಭಾರತ ಚಿಂತನೆ
ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಉಗ್ರರ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದಾರೆ. ಈಗಾಗಲೇ ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ಸಚಿವರು, ಜಮ್ಮು ಕಾಶ್ಮೀರದ ಸಿಎಂ, ಲೆಫ್ಟಿನೆಂಟ್ ಗವರ್ನರ್, ಸಂಸದರು, ಸೇನಾಪಡೆಗಳ ಮುಖ್ಯಸ್ಥರು ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮುಂಬೈನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತದಲ್ಲಿ ನಡೆದ ಅತಿ ದೊಡ್ಡ ಗುಂಡಿನ ದಾಳಿ ಇದಾಗಿದೆ. ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದ್ದು, ಪ್ರತೀಕಾರದ ಬಗ್ಗೆಯೂ ಚಿಂತನೆ ನಡೆಸಿದೆ.
- Harish GR
- Updated on: Apr 23, 2025
- 6:57 pm
ಭಾರತ ಭಯೋತ್ಪಾದನೆ ಮುಂದೆ ಮಣಿಯುವುದಿಲ್ಲ; ಪಹಲ್ಗಾಮ್ ದಾಳಿಯ ಸಂತ್ರಸ್ತರ ಭೇಟಿ ಬಳಿಕ ಅಮಿತ್ ಶಾ
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಉಗ್ರರ ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿರುವ ಬೈಸರನ್ ಕಣಿವೆಗೆ ಭೇಟಿ ನೀಡುತ್ತಿದ್ದ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 26 ಜನರ ಮೃತದೇಹಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪುಷ್ಪಗುಚ್ಛ ಅರ್ಪಿಸಿದರು. ನಿನ್ನೆ ಈ ದಾಳಿಯ ವೇಳೆ ಅಲ್ಲಿದ್ದವರನ್ನು ಭೇಟಿಯಾದ ಅಮಿತ್ ಶಾ, ಈ ಹೇಯ ಕೃತ್ಯ ಮಾಡಿದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
- Sushma Chakre
- Updated on: Apr 23, 2025
- 3:16 pm
ಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ ಪಾಕ್ ಸೇನೆಗೆ ಶುರುವಾಯ್ತು ನಡುಕ: ಉಪಗ್ರಹ ಚಿತ್ರಗಳಿಂದ ಬಹಿರಂಗವಾಯ್ತು ಗಡಿಯಾಚೆಗಿನ ರಹಸ್ಯ
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಪಾಕಿಸ್ತಾನದಲ್ಲಿ ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಬಹುದೆಂಬ ಭಯದ ವಾತಾವರಣ ವ್ಯಕ್ತವಾಗಿದೆಯಂತೆ. ಹೀಗಾಗಿ ವಾಯುನೆಲೆಗಳಲ್ಲಿ ಭದ್ರತೆ ಹೆಚ್ಚಸುತ್ತಿರುವ ಪಾಕ್ ಸೇನೆ, ಭಯೋತ್ಪಾದಕರ ಅಡಗುದಾಣಗಳನ್ನು ಬದಲಾಯಿಸಲು ಮುಂದಾಗಿರುವುದು ಉಪಗ್ರಹ ಚಿತ್ರಗಳಿಂದ ತಿಳಿದುಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
- Ganapathi Sharma
- Updated on: Apr 23, 2025
- 12:37 pm
Pahalgam Terror Attack: ಉಗ್ರರ ದಾಳಿ ಬೆನ್ನಲ್ಲೇ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಇಂದು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನ ಪ್ರಮುಖ ಪ್ರವಾಸಿ ತಾಣದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ, ಹಲವಾರು ಜನರನ್ನು ಕೊಂದಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದಾರೆ. ಪ್ರವಾಸಿಗರ ಮೇಲೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಶ್ರೀನಗರಕ್ಕೆ ತೆರಳಿದ್ದಾರೆ. ಶ್ರೀನಗರಕ್ಕೆ ಬಂದಿಳಿದ ತಕ್ಷಣ ಶಾ ಉನ್ನತ ಮಟ್ಟದ ಭದ್ರತಾ ಪರಿಶೀಲನೆ ನಡೆಸಲಿದ್ದಾರೆ. ಗಾಯಾಳುಗಳನ್ನು ಭೇಟಿ ಮಾಡಲು ಅವರು ನಾಳೆ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ.
- Sushma Chakre
- Updated on: Apr 22, 2025
- 8:46 pm
Pahalgam Attack: ಪಹಲ್ಗಾಮ್ನಲ್ಲಿ ದಾಳಿ ನಡೆಸಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ; ಅಮಿತ್ ಶಾ ಖಡಕ್ ಎಚ್ಚರಿಕೆ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇಂದು ಸಂಜೆ ಉಗ್ರರ ದಾಳಿ ನಡೆದಿದೆ. ಈ ಘಟನೆಯಲ್ಲಿ 12 ಪ್ರವಾಸಿಗರಿಗೆ ಗಾಯಗಳಾಗಿದ್ದು, ಕರ್ನಾಟಕದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಎಂಬುವವರು ಮೃತಪಟ್ಟಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯ ಬಗ್ಗೆ ಜಮ್ಮು ಕಾಶ್ಮೀರ ಸರ್ಕಾರ ಮಾತ್ರವಲ್ಲದೆ ಕೇಂದ್ರ ಸರ್ಕಾರವೂ ಕಠಿಣ ಕ್ರಮಕ್ಕೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾದಿಂದಲೇ ಈ ಬಗ್ಗೆ ಮಾಹಿತಿ ಪಡೆದಿದ್ದು, ತುರ್ತು ಕ್ರಮಕ್ಕೆ ಆದೇಶಿಸಿದ್ದಾರೆ.
- Sushma Chakre
- Updated on: Apr 22, 2025
- 6:28 pm
ಅಣ್ಣಾಮಲೈಗೆ ಬಿಜೆಪಿಯ ರಾಷ್ಟ್ರ ರಾಜಕಾರಣದಲ್ಲಿ ಸ್ಥಾನ? ಅಮಿತ್ ಶಾ ಸುಳಿವು
ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನದಿಂದ ಕೆಳಗಿಳಿದಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ, ಅಣ್ಣಾಮಲೈಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಮಟ್ಟದ ಪಾತ್ರ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ. ಇಂದು ಚೆನ್ನೈನಲ್ಲಿ ಮಾತನಾಡಿದ ಅಮಿತ್ ಶಾ ಈ ಬಗ್ಗೆ ಸುಳಿವು ನೀಡಿದ್ದಾರೆ.
- Sushma Chakre
- Updated on: Apr 11, 2025
- 10:04 pm
ತಮಿಳುನಾಡಿನಲ್ಲಿ ಮತ್ತೆ ಬಿಜೆಪಿ-ಎಐಎಡಿಎಂಕೆ ಮೈತ್ರಿ; ಎಡಪ್ಪಾಡಿ ಪಳನಿಸ್ವಾಮಿ ಸಿಎಂ ಅಭ್ಯರ್ಥಿ
2026ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಘೋಷಿಸಿದೆ. ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಈಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
- Sushma Chakre
- Updated on: Apr 11, 2025
- 6:06 pm
ಛತ್ತೀಸ್ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಾ ದಂತೇಶ್ವರಿಗೆ ಪೂಜೆ ನೆರವೇರಿಸಿದ್ದಾರೆ. ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ಅವರ ಸಂಪುಟ ಸಹೋದ್ಯೋಗಿಯೊಂದಿಗೆ ಶಾ ಶನಿವಾರ ಮಾರಕ ಮಾವೋವಾದಿ ಹಿಂಸಾಚಾರಕ್ಕೆ ಕುಖ್ಯಾತಿ ಪಡೆದಿದ್ದ ಜಿಲ್ಲೆಗೆ ಒಂದು ದಿನದ ಭೇಟಿಗಾಗಿ ದಾಂತೇಶ್ವರಿಗೆ ತಲುಪಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಚೈತ್ರ ನವರಾತ್ರಿಯ ಶುಭ ಸಂದರ್ಭದಲ್ಲಿ ಪೂಜೆ ಸಲ್ಲಿಸಿದರು. 14ನೇ ಶತಮಾನದಲ್ಲಿ ನಿರ್ಮಿಸಲಾದ ಈ ದಾಂತೇಶ್ವರಿ ದೇವಸ್ಥಾನವು ದಾಂತೇಶ್ವರಿ ದೇವಿಗೆ ಸಮರ್ಪಿತವಾಗಿದೆ ಮತ್ತು ಇದು ಭಾರತದಾದ್ಯಂತ ಹರಡಿರುವ ದೈವಿಕ ಸ್ತ್ರೀ ಶಕ್ತಿಯಾದ 52 ಶಕ್ತಿ ಪೀಠಗಳಲ್ಲಿ ಒಂದಾಗಿದೆ.
- Sushma Chakre
- Updated on: Apr 5, 2025
- 4:55 pm