Amit Shah
ಭಾರತದ ಇತ್ತೀಚಿನ ರಾಜಕೀಯದಲ್ಲಿ ಅಮಿತ್ ಷಾ ಅತ್ಯಂತ ಪ್ರಭಾವಿ ಹಾಗೂ ಚುರುಕಿನ ವ್ಯಕ್ತಿ. ಭಾರತ ಸರ್ಕಾರದ ಗೃಹ ಹಾಗೂ ಸಹಕಾರ ಸಚಿವರಾಗಿರುವ ಅಮಿತ್ ಷಾ, ಮೂಲತಃ ಗುಜರಾತ್ನವರು. ಅಹಮದಾಬಾದ್ ರಾಜಕಾರಣದಿಂದ ದೆಹಲಿ ರಾಜಕೀಯದವರೆಗೂ ನರೇಂದ್ರ ಮೋದಿ ಜತೆಗೆ ಪ್ರತಿ ಹಂತದಲ್ಲಿ ನಿಂತವರು ಅಮಿತ್ ಷಾ. ಗುಜರಾತ್ನಲ್ಲಿ ಮೋದಿ ಮುಖ್ಯಮಂತ್ರಿ ಆಗುವಾಗಲೂ ಷಾ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2014ರಲ್ಲಿ ಉತ್ತರ ಪ್ರದೇಶ ಲೋಕಸಭಾ ಚುನಾವಣೆಯ ಉಸ್ತುವಾರಿ ತೆಗೆದುಕೊಂಡ ಅಮಿತ್ ಷಾ, ತಾವೇಕೆ ರಾಜಕೀಯ ಚಾಣಾಕ್ಷ ಹಾಗೂ ಚಾಣಾಕ್ಯ ಎನ್ನುವುದನ್ನು ಫಲಿತಾಂಶದ ಮೂಲಕ ಸಾಬೀತು ಮಾಡಿದರು. ಇದರ ಪರಿಣಾಮವಾಗಿಯೇ ಮೋದಿ ಪ್ರಧಾನಿಯಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವೂ ದೊರೆಯಿತು. 2019ರ ಲೋಕಸಭಾ ಚುನಾವಣೆಯ ಗೆಲುವಿನ ಬಳಿಕ ಅಧ್ಯಕ್ಷ ಸ್ಥಾನವನ್ನು ತೊರೆದ ಅಮಿತ್ ಷಾ, ಕೇಂದ್ರ ಸರ್ಕಾರದಲ್ಲಿ ಸಚಿವರಾದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ಸಿಎಎ ಕಾಯ್ದೆ, ಐಪಿಸಿ, ಸಿಆರ್ಪಿಸಿಗೆ ಭಾರತೀಯ ರೂಪ ನೀಡುವಲ್ಲಿ ಅಮಿತ್ ಷಾ ಪಾತ್ರ ದೊಡ್ಡದಿದೆ. ಹಾಗೆಯೇ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿಯೂ ಷಾ ಪಾತ್ರ ದೊಡ್ಡದಿದೆ.
ಇನ್ನೂ ಹೆಚ್ಚು ಓದಿಭಾರತ-ಬಾಂಗ್ಲಾದೇಶ ಗಡಿ ಭದ್ರಪಡಿಸದೆ ಪಶ್ಚಿಮ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಸಿಲಿಗುರಿಯಲ್ಲಿರುವ ಶಸಸ್ತ್ರ ಸೀಮಾ ಬಲ್ (SSB) ಫ್ರಂಟಿಯರ್ ಪ್ರಧಾನ ಕಚೇರಿಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅಮಿತ್ ಶಾ, "ಬಿಎಸ್ಎಫ್ (BSF) ಮೂಲಕ ಗಡಿ ಬೇಲಿಗಳನ್ನು ನಿರ್ಮಿಸಲು ಭೂಮಿ ನೀಡುವಂತೆ ಮಮತಾ ಬ್ಯಾನರ್ಜಿ ಅವರಿಗೆ ನಾನು ಮಾಡಿದ ಮನವಿಗಳು ವ್ಯರ್ಥವಾದವು. ಗಡಿ ಭದ್ರತೆಯನ್ನು ಬಲಪಡಿಸಲು ನಾನು 2014ರಿಂದ 1,129 ಎಕರೆ ಜಮೀನು ನೀಡುವಂತೆ ಕೇಳುತ್ತಿದ್ದೆ. ರಾಜ್ಯದಲ್ಲಿ ಅಧಿಕಾರಿ ನೇತೃತ್ವದ ಸರ್ಕಾರ ರಚನೆಯಾದ ನಂತರವಷ್ಟೇ ನಮಗೆ ಆ ಜಮೀನು ಸಿಕ್ಕಿದೆ" ಎಂದು ತಿಳಿಸಿದ್ದಾರೆ.
- Sushma Chakre
- Updated on: Aug 21, 2026
- 10:47 pm
ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ಸರ್ಕಾರ ನಿರ್ಧಾರ; ಅಮಿತ್ ಶಾ ಘೋಷಣೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನ ನೂತನ ಪೀಠವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ನಿರ್ಧಾರವು ಲಡಾಖ್ನ ಸುದೂರ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರು ಕಾನೂನು ಸೇವೆಗಳನ್ನು ಪಡೆಯಲು ತಗುಲುತ್ತಿದ್ದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದ್ದು, ನ್ಯಾಯಾಂಗ ವ್ಯವಸ್ಥೆಯ ಪ್ರವೇಶವನ್ನು ಸುಲಭಗೊಳಿಸಲಿದೆ ಎಂದು ಅವರು ತಿಳಿಸಿದ್ದಾರೆ. ಲಡಾಖ್ನಂತಹ ಭೌಗೋಳಿಕವಾಗಿ ಸವಾಲಿನ ಹಾಗೂ ದುರ್ಗಮ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನ್ಯಾಯ ಸಮ್ಮತ ಸೇವೆಗಳು ಸುಲಭವಾಗಿ ದೊರೆಯುವಂತೆ ಮಾಡುವುದು ಕೇಂದ್ರ ಸರ್ಕಾರದ ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ.
- Sushma Chakre
- Updated on: Aug 20, 2026
- 8:58 pm
1937 ರಂತೆ ಇಂದಿಗೂ ಒಡೆದು ಆಳುವ ನೀತಿ: ವಂದೇ ಮಾತರಂ ಗೀತೆಗೆ ಕಾಂಗ್ರೆಸ್ ಅಪಮಾನ ಮಾಡಿದೆ ಎಂದ ಅಮಿತ್ ಶಾ
Vande Mataram: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದಿರುವ ಕಾಂಗ್ರೆಸ್ ನಿಲುವನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು 'ದೇಶವಿರೋಧಿ' ಹಾಗೂ ಕೇವಲ 'ಮತ ಬ್ಯಾಂಕ್ ರಾಜಕೀಯ' ಎಂದು ಆರೋಪಿಸಿದ್ದಾರೆ. 1937ರಲ್ಲಿದ್ದಂತೆ ಕಾಂಗ್ರೆಸ್ ಮತ್ತೊಮ್ಮೆ ದೇಶ ವಿಭಜನೆಗೆ ದಾರಿ ಮಾಡಿಕೊಡುತ್ತಿದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುತ್ತಿದೆ ಎಂದು ಶಾ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ನೇತೃತ್ವದ ಪಕ್ಷದ ನಿರ್ಧಾರವನ್ನು ಸಚಿವರು ಕಟುವಾಗಿ ಟೀಕಿಸಿದರು.
- Nayana Rajeev
- Updated on: Aug 20, 2026
- 12:49 pm
13,000 ಕೋಟಿ ಡ್ರಗ್ಸ್ ಪ್ರಕರಣದ ಕಿಂಗ್ಪಿನ್ ವೀರೇಂದ್ರ ಸಿಂಗ್ ಭಾರತಕ್ಕೆ ಹಸ್ತಾಂತರ
ಮಾದಕ ದ್ರವ್ಯಗಳ ಸಿಂಡಿಕೇಟ್ನ ಪ್ರಮುಖ ನಾಯಕ ವೀರೇಂದ್ರ ಬಸೋಯಾ ಅವರನ್ನು ದುಬೈನಿಂದ ಭಾರತಕ್ಕೆ ಮರಳಿ ಕರೆತರಲಾಯಿತು. ಅವರು ಆಗಮಿಸಿದ ಬಳಿಕ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೋದಿ ಸರ್ಕಾರವು ವಿದೇಶಗಳಲ್ಲಿ ಅಡಗಿರುವ ಮಾದಕವಸ್ತು ಕಳ್ಳಸಾಗಣೆದಾರರನ್ನು ನಿರಂತರವಾಗಿ ಪತ್ತೆಹಚ್ಚುತ್ತಿದೆ ಮತ್ತು ಕಠಿಣ ನಿಲುವನ್ನು ತೆಗೆದುಕೊಳ್ಳುತ್ತಿದೆ. ಮಾದಕ ದ್ರವ್ಯಗಳ ವಿರುದ್ಧದ ಶೂನ್ಯ ಸಹಿಷ್ಣುತೆ ನೀತಿಯಲ್ಲಿ ಹೊಸ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎನ್ಸಿಬಿ ಮಾದಕ ದ್ರವ್ಯಗಳ ಕಿಂಗ್ಪಿನ್ ಮತ್ತು ಪರಾರಿಯಾಗಿರುವ ವೀರೇಂದ್ರ ಸಿಂಗ್ ಬಸೋಯಾ ಅವರನ್ನು ಯುಎಇಯಿಂದ ಯಶಸ್ವಿಯಾಗಿ ಮರಳಿ ಕರೆತಂದಿದೆ.
- Sushma Chakre
- Updated on: Aug 14, 2026
- 4:40 pm
‘ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ’; ರಾಹುಲ್ ಗಾಂಧಿ ವ್ಯಂಗ್ಯ
ಅಮಿತ್ ಶಾ ಅವರ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷಗಳಿಗೆ ಗೃಹ ಸಚಿವರಿಂದ ಉಪದೇಶ ಅಥವಾ ಉಪನ್ಯಾಸ ಕೇಳುವ ಆಸಕ್ತಿಯಿಲ್ಲ. ಅದರ ಬದಲಿಗೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಉತ್ತರಗಳು ಬೇಕಾಗಿವೆ ಎಂದು ಹೇಳಿದ್ದಾರೆ. "ಅಮಿತ್ ಶಾ ಅವರು ನಮಗೆ ಉಪನ್ಯಾಸ ನೀಡುವುದರಲ್ಲಿ ವಿಪಕ್ಷಗಳಿಗೆ ಯಾವುದೇ ಆಸಕ್ತಿಯಿಲ್ಲ ಎಂಬುದನ್ನು ನಾವು ಸ್ಪಷ್ಟವಾಗಿ ಹೇಳುತ್ತಿದ್ದೇವೆ" ಎಂದು ರಾಹುಲ್ ಗಾಂಧಿ ತಿಳಿಸಿದರು.
- Sushma Chakre
- Updated on: Aug 12, 2026
- 4:49 pm
‘ನಾಳೆ ಮಧ್ಯಾಹ್ನ 3 ಗಂಟೆಯವರೆಗೂ ಚರ್ಚೆಗೆ ಸಿದ್ಧ’; ವಿಪಕ್ಷಗಳಿಗೆ ಗೃಹ ಸಚಿವ ಅಮಿತ್ ಶಾ ತಿರುಗೇಟು
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನ ಕಲಾಪದಲ್ಲಿ 24 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸುವುದಾಗಿ ವಿರೋಧ ಪಕ್ಷಗಳಿಗೆ ಆಫರ್ ನೀಡಿದ್ದು, ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಚರ್ಚೆಯಲ್ಲಿ ಭಾಗವಹಿಸಲು ಇಂದು ಮಧ್ಯಾಹ್ನ 3 ಗಂಟೆಯಿಂದ ಗುರುವಾರ ಮಧ್ಯಾಹ್ನ 3 ಗಂಟೆಯವರೆಗೆ ತಾವು ಸದನದಲ್ಲಿಯೇ ಉಪಸ್ಥಿತರಿರುವುದಾಗಿ ಅಮಿತ್ ಶಾ ಹೇಳಿದ್ದಾರೆ. ವಿಪಕ್ಷಗಳು ಎತ್ತುವ ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಲು ರಾತ್ರಿಯಿಡೀ ಚರ್ಚೆ ಮುಂದುವರಿಸಲು ತಾವು ಸಿದ್ಧರಾಗಿರುವುದಾಗಿ ಅವರು ತಿಳಿಸಿದರು. ಸಂಸತ್ತಿನಲ್ಲಿ ವಿವರವಾದ ಚರ್ಚೆಯಲ್ಲಿ ಭಾಗವಹಿಸಬೇಕೋ ಅಥವಾ ಕಲಾಪಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಬೇಕೋ ಎಂಬುದನ್ನು ವಿರೋಧ ಪಕ್ಷಗಳೇ ಈಗ ನಿರ್ಧರಿಸಬೇಕು ಎಂದು ಅಮಿತ್ ಶಾ ಹೇಳಿದರು.
- Sushma Chakre
- Updated on: Aug 12, 2026
- 3:18 pm
‘ಜಂತರ್ ಮಂತರ್ನಲ್ಲಿ ಯಾವ ಗುಂಡಿನ ದಾಳಿಯೂ ನಡೆದಿಲ್ಲ’; ರಾಹುಲ್ ಗಾಂಧಿಗೆ ಸಚಿವ ಜೆ.ಪಿ. ನಡ್ಡಾ ತಿರುಗೇಟು
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳಿಗೆ ಸೋಮವಾರ ತಿರುಗೇಟು ನೀಡಿರುವ ಕೇಂದ್ರ ಸಚಿವ ಜೆ.ಪಿ. ನಡ್ಡಾ, 'ಜಂತರ್ ಮಂತರ್ನಲ್ಲಿ ಯಾವುದೇ ಗುಂಡಿನ ದಾಳಿ ನಡೆದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. 'ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಸಾರ್ವಜನಿಕರನ್ನು ಹಾಗೂ ದೇಶವನ್ನು ದಾರಿ ತಪ್ಪಿಸುತ್ತಿದ್ದಾರೆ' ಎಂದು ಜೆ.ಪಿ ನಡ್ಡಾ ಆರೋಪಿಸಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ಗಳಿಂದ ದಾಳಿ ನಡೆಸಲು ಯಾರು ಆದೇಶ ನೀಡಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಹುಲ್ ಗಾಂಧಿ ಪ್ರಶ್ನಿಸಿದ ಬೆನ್ನಲ್ಲೇ ಜೆಪಿ ನಡ್ಡಾ ಈ ಪ್ರತಿಕ್ರಿಯೆ ನೀಡಿದ್ದಾರೆ.
- Sushma Chakre
- Updated on: Aug 10, 2026
- 9:39 pm
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿರುವಣ್ಣಾಮಲೈನಲ್ಲಿರುವ ಪ್ರಸಿದ್ಧ ಅರುಣಾಚಲೇಶ್ವರ ದೇವಸ್ಥಾನದಲ್ಲಿ ಶಿವನ ದರ್ಶನ ಪಡೆದರು. ದೇವಸ್ಥಾನಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರನ್ನು ದೇವಾಲಯ ಆಡಳಿತ ಮಂಡಳಿ ಸ್ವಾಗತಿಸಿತು. ನಂತರ ಅವರು ಅರುಣಾಚಲೇಶ್ವರ ಮತ್ತು ಉನ್ನಮುಲೈ ಅಮ್ಮನ್ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.
- Sushma Chakre
- Updated on: Aug 8, 2026
- 10:51 pm
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಪ್ರತಿಪಕ್ಷಗಳ ಮನವಿ ಪರಿಗಣಿಸಲು ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ರಾಜ್ಯಸಭಾ ಸದನದಲ್ಲಿ ಪ್ರತಿಪಕ್ಷಗಳ ಸದಸ್ಯರು 'ಅಮಿತ್ ಶಾ, ಸದನ್ ಮೇ ಆವೋ' (ಅಮಿತ್ ಶಾ, ಸದನಕ್ಕೆ ಬನ್ನಿ) ಎಂದು ಘೋಷಣೆಗಳನ್ನು ಕೂಗುತ್ತಿದ್ದಾಗ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಉದ್ದೇಶಿಸಿ ಮಾತನಾಡಿದ ಸಭಾಪತಿಗಳು, "ಗೃಹ ಸಚಿವರು ಸದನಕ್ಕೆ ಬರಬೇಕೆಂಬ ಮನವಿಯನ್ನು ಪರಿಗಣಿಸುವಂತೆ ನಾನು ನಿಮಗೆ ವಿನಂತಿಸುತ್ತೇನೆ. ಸಂಸದೀಯ ವ್ಯವಹಾರಗಳ ಸಚಿವರಾಗಿ, ನೀವು ವಿರೋಧ ಪಕ್ಷಗಳ ಭಾವನೆಗಳನ್ನು ಗೃಹ ಸಚಿವರಿಗೆ ತಲುಪಿಸಬೇಕು" ಎಂದು ಹೇಳಿದರು.
- Sushma Chakre
- Updated on: Aug 6, 2026
- 10:23 pm
ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಮದುವೆ ಬಗ್ಗೆ ಭಾರೀ ಚರ್ಚೆ; ಭಾವೀ ಸೊಸೆ ಕುರಿತು ತಾಯಿ ಹೇಳಿದ್ದೇನು?
ದೆಹಲಿಯಲ್ಲಿ ನೀಟ್ ಪ್ರಶ್ನೆಪತ್ರಿಕೆ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ ಬಳಿಕ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹೆಚ್ಚಾಗಿದೆ. ಅಭಿಜೀತ್ ಮದುವೆ ಬಗ್ಗೆಯೂ ಚರ್ಚೆಗಳು ನಡೆಯುತ್ತಿದ್ದು, ತಮ್ಮ ಸೊಸೆಯಾಗಿ ಬರುವವಳು ವರದಕ್ಷಿಣೆಯಾಗಿ ಏನು ತರಬೇಕು ಎಂಬುದರ ಬಗ್ಗೆ ಅವರ ತಾಯಿ ಮಾತನಾಡಿದ್ದಾರೆ. ಹಾಗೇ, ಅಭಿಜೀತ್ ಅಮಿತ್ ಶಾ ಹಾಗೂ ದೆಹಲಿ ಪೊಲೀಸರ ಬಗ್ಗೆಯೂ ಆಕ್ರೋಶದ ಹೇಳಿಕೆಗಳನ್ನು ನೀಡಿದ್ದಾರೆ.
- Sushma Chakre
- Updated on: Jul 30, 2026
- 3:41 pm
‘ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಅಮಿತ್ ಶಾ ಆದೇಶ’; ರಾಹುಲ್ ಗಾಂಧಿ ಆರೋಪಕ್ಕೆ ರಣರಂಗವಾದ ಸಂಸತ್
ಜುಲೈ 20ರ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಇಂದು ಸಂಸತ್ ಅಧಿವೇಶನದಲ್ಲಿ ವಾಗ್ದಾಳಿ ನಡೆಸಿದರು. ಅಮಿತ್ ಶಾ ಅವರೇ ವಿದ್ಯಾರ್ಥಿಗಳ ಮೇಲಿನ ದಾಳಿಗೆ ಆದೇಶ ನೀಡಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, "ವಿದ್ಯಾರ್ಥಿಗಳ ಮೇಲಿನ ಹಲ್ಲೆಯ ಕುರಿತು ಸಂಸತ್ತನ್ನು ಎದುರಿಸುವ ಮತ್ತು ಮಾತನಾಡುವ ಧೈರ್ಯ ಈಗ ಗೃಹ ಸಚಿವರಿಗೆ ಇಲ್ಲ" ಎಂದು ಲೇವಡಿ ಮಾಡಿದರು. ಅಮಿತ್ ಶಾ ಕುರಿತ ರಾಹುಲ್ ಗಾಂಧಿ ಅವರ ಹೇಳಿಕೆಗೆ ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು.
- Sushma Chakre
- Updated on: Jul 29, 2026
- 3:33 pm
ನೀಟ್ ಪತ್ರಿಕೆ ಸೋರಿಕೆ : ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಮುಖ್ಯ ಎಂದ ಅಮಿತ್ ಶಾ, ಭವಿಷ್ಯದಲ್ಲಿ ಪರೀಕ್ಷಾ ಅಕ್ರಮ ತಡೆಯಲು ಕಠಿಣ ಸುಧಾರಣೆ ತರುವ ಭರವಸೆ ನೀಡಿದ್ದಾರೆ. ಸರ್ಕಾರದ ಈ ಕ್ರಮಗಳ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿದ್ದು, ಪರೀಕ್ಷಾ ಪಾರದರ್ಶಕತೆಗೆ ಆದ್ಯತೆ ನೀಡಲಾಗಿದೆ.
- Nayana Rajeev
- Updated on: Jul 26, 2026
- 10:25 am